Homeಮುಖಪುಟತ್ರಿಪುರ: ಶಾಲಾ ಆವರಣದಲ್ಲಿ ರಾಜಕೀಯ ಕಾರ್ಯಕ್ರಮಗಳಿಗೆ ನಿಷೇಧ

ತ್ರಿಪುರ: ಶಾಲಾ ಆವರಣದಲ್ಲಿ ರಾಜಕೀಯ ಕಾರ್ಯಕ್ರಮಗಳಿಗೆ ನಿಷೇಧ

- Advertisement -
- Advertisement -

ಶಾಲಾ ಅವಧಿಯಲ್ಲಿ ಅಥವಾ ನಂತರದಲ್ಲಿ ಶಾಲಾ ಆವರಣದಲ್ಲಿ ಯಾವುದೇ ರೀತಿಯ ರಾಜಕೀಯ ರ್‍ಯಾಲಿಗಳನ್ನು ಹಾಗೂ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ ಎಂದು ತ್ರಿಪುರಾ ಸರ್ಕಾರ ಶನಿವಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

ಶಾಲಾ ಆವರಣದಲ್ಲಿ ರಾಜಕೀಯ ಕಾರ್ಯಕ್ರಮಗಳಿಗೆ ಅವಕಾಶ ನೀಡುತ್ತಿರುವ ಮುಖ್ಯೋಪಾಧ್ಯಾಯರ ವಿರುದ್ಧ ಕೆಲವು ದೂರುಗಳು ಬಂದ ನಂತರ ರಾಜ್ಯ ಶಿಕ್ಷಣ ಇಲಾಖೆ ಈ ಆದೇಶ ಹೊರಡಿಸಿದೆ.

ಶಾಲಾ ಆವರಣದಲ್ಲಿ ಇಂತಹ ಯಾವುದೇ ರಾಜಕೀಯ ಕಾರ್ಯಕ್ರಮಗಳನ್ನು ನಡೆಸಲು ನಿರಾಕ್ಷೇಪಣಾ ಪ್ರಮಾಣಪತ್ರ (ಎನ್ಒಸಿ)ವನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು ಎಂದು ಶಿಕ್ಷಣ ಇಲಾಖೆಯು ಆದೇಶಿಸಿದೆ.

“ಆಟದ ಮೈದಾನ ಸೇರಿದಂತೆ ಯಾವುದೇ ಶಾಲೆಗೆ ಸಂಬಂಧಿಸಿದ ಯಾವುದೇ ಸಂಪನ್ಮೂಲಗಳನ್ನು ರಾಜಕೀಯ ಕಾರ್ಯಕ್ರಮ ಹಾಗೂ ರ್‍ಯಾಲಿಗಳಿಗಾಗಿ ರಾಜಕೀಯ ಪಕ್ಷಗಳು ಬಳಸುವಂತಿಲ್ಲ. ರಜಾ ದಿನಗಳಲ್ಲಿ ಅಥವಾ ಶಾಲಾ ಸಮಯದ ನಂತರ ಇತರ ಕಾರ್ಯಕ್ರಮಗಳನ್ನು ಆಯೋಜಿಸಲು ಕೆಲವು ಮುಖ್ಯೋಪಾಧ್ಯಾಯರು/ಟಿಐಸಿಗಳು ಅವಕಾಶ ನೀಡುತ್ತಿದ್ದಾರೆ. ಇದು ನಿಯಮದ ಉಲ್ಲಂಘನೆಯಾಗಿದೆ” ಎಂದು ಇಲಾಖೆ ಹೇಳಿದೆ.

ಕೋವಿಡ್-19 ಲಾಕ್‌ಡೌನ್‌ ಕ್ರಮಗಳಿಂದಾಗಿ ಈಗಾಗಲೇ ತರಗತಿ ಬೋಧನೆಯ ಮೇಲೆ ತೀವ್ರ ಪರಿಣಾಮ ಬೀರಿರುವುದರಿಂದ ಶಾಲಾ ಸಮಯದಲ್ಲಿ ದೈಹಿಕ ತರಗತಿಗಳಲ್ಲಿನ ಅಧ್ಯಯನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತ್ರಿಪುರಾ ಸರ್ಕಾರ ಒತ್ತಿಹೇಳಿದೆ.

“ಶಿಕ್ಷಣ-ಕಲಿಕಾ ಚಟುವಟಿಕೆಗಳಿಗೆ ಅಡ್ಡಿಪಡಿಸುವ ಮತ್ತು ಇಲಾಖೆಯ ನಿಯಮಾವಳಿಗಳನ್ನು ಉಲ್ಲಂಘಿಸುವ ಇಂತಹ ಕಾರ್ಯಕ್ರಮಗಳಿಗೆ ಮುಖ್ಯೋಪಾಧ್ಯಾಯರು ಅವಕಾಶ ನೀಡುತ್ತಿರುವುದು ಸ್ವೀಕಾರಾರ್ಹವಲ್ಲ. ಈಗಾಗಲೇ ಮಾಡಿರುವ ಉಲ್ಲಂಘನೆಗಳಿಗಾಗಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಲ್ಲಾ ಮುಖ್ಯೋಪಾಧ್ಯಾಯರು/ಟಿಐಸಿಗಳಿಗೆ ತಿಳಿಸಬೇಕು ಎಂದೂ ಸರ್ಕಾರ ಹೇಳಿದೆ. ಈ ಮೂಲಕ, ಭವಿಷ್ಯದಲ್ಲಿ ನಿಯಮವನ್ನು ಉಲ್ಲಂಘಿಸುವವರಿಗೆ ಎಚ್ಚರಿಕೆ ನೀಡಬೇಕು” ಎಂದೂ ಆದೇಶದಲ್ಲಿ ಹೇಳಲಾಗಿದೆ.

“ಯಾವುದೇ ಸಂಸ್ಥೆಯು ಅನುಮತಿ ಪಡೆಯದೆ ಶಾಲೆಯ ಆವರಣದಲ್ಲಿ ಕಾರ್ಯಕ್ರಮ/ರ್‍ಯಾಲಿಗಳನ್ನು ನಡೆಸಲು ಯೋಜಿಸುತ್ತಿದ್ದರೆ, ಆ ಬಗ್ಗೆ HM/TIC ಅವರು ಶಾಲೆಗಳ ಇನ್ಸ್ಪೆಕ್ಟರ್/ಜಿಲ್ಲಾ ಶಿಕ್ಷಣಾಧಿಕಾರಿಗಳಿಗೆ ತಿಳಿಸಬೇಕು. ಅಂತಹ ಮಾಹಿತಿಯನ್ನು ಸ್ವೀಕರಿಸಿದ ನಂತರ, ಆ ಬಗ್ಗೆ ಶಿಕ್ಷಣಾಧಿಕಾರಿಗಳು ಸ್ಥಳೀಯ ಆಡಳಿತ ಮತ್ತು ಪೊಲೀಸ್ ಅಧಿಕಾರಿಗಳೊಂದಿಗೆ ತಕ್ಷಣವೇ ಕ್ರಮಕೈಗೊಳ್ಳಬೇಕು” ಎಂದು ಸರ್ಕಾರ ಹೇಳಿದೆ.

ದುರುದ್ದೇಶವೂ ಇರುವಂತಿದೆ: ಶಿವಸುಂದರ್‌

“ಬಿಜೆಪಿ ಸರ್ಕಾರ ಈ ಆದೇಶವನ್ನು ಸ್ವಾರ್ಥ ಹಿತಾಸಕ್ತಿಯಿಂದಲೂ ಮಾಡಿದಂತಿದೆ. ಯಾವುದೇ ರಾಜಕೀಯ ಪಕ್ಷಗಳಿಗೆ ಜನರನ್ನು ತಲುಪಲು, ಜನರನ್ನು ಸೇರಿಸಿ ಕಾರ್ಯಕ್ರಮಗಳನ್ನು ನಡೆಸಲು ಸುಲಭಕ್ಕೆ ಸಿಗುವ ಸ್ಥಳ ಎಂದರೆ ಶಾಲೆಗಳ ಆವರಣಗಳು. ಹೀಗಾಗಿ, ಬಿಜೆಪಿಗೆ ಈ ಆವರಣಗಳ ಹೊರತಾಗಿಯೂ ಜನರನ್ನು ತಲುಪಲು ವಾಟ್ಸಾಪ್, ಖಾಸಗೀ ಮೈದಾನಗಳು ಸೇರಿದಂತೆ ವಿವಿಧ ರೀತಿಯ ದಾರಿಗಳನ್ನು ಹುಡುಕಿಕೊಂಡಿದೆ” ಎಂದು ಸಾಮಾಜಿಕ ಕಾರ್ಯಕರ್ತ ಶಿವಸುಂದರ್ ಹೇಳಿದ್ದಾರೆ.

“ಶಾಲೆಗಳಲ್ಲಿ ಮಕ್ಕಳು ಆಗತಾನೇ ವಿಚಾರಗಳನ್ನು ಮೈಗೂಡಿಸಿಕೊಳ್ಳಲು ಆರಂಭಿಸಿರುತ್ತಾರೆ. ಬಿಜೆಪಿಯು ಶಿಕ್ಷಕರ ಮೂಲಕ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ತನ್ನ ಧೋರಣೆ, ಮತಾಂಧತೆಯ ವಾದವನ್ನು ತುಂಬುತ್ತಿದೆ. ಆದರೆ, ಬೇರೆ ಪಕ್ಷಗಳು ಈಗಲೂ ಸಾರ್ವಜನಿಕ ಮೈದಾನಗಳ ಮೇಲೆ ಅವಲಂಬಿತವಾಗಿವೆ. ಜನರನ್ನು ಹಾಗೂ ವಿದ್ಯಾರ್ಥಿಗಳನ್ನು ತಲುಪಲು ಬೇರಾವುದೇ ಮಾರ್ಗಗಳಿಲ್ಲ. ಅಂತಹ ಪಕ್ಷಗಳು ಜನರನ್ನು ತಲುಪದಂತೆ ತಡೆಯುವ ಹುನ್ನಾರದಿಂದ ಬಿಜೆಪಿ ಸರ್ಕಾರ ಈ ಆದೇಶವನ್ನು ಹೊರಡಿಸಿರುವಂತಿದೆ. ಶಾಲಾ ಆವರಣಗಳನ್ನು ರಾಜಕೀಯ ಕಾರ್ಯಕ್ರಮಕ್ಕಾಗಿ ಬಳಸಿಕೊಳ್ಳದಂತೆ ತಡೆಯುವುದು ಸರಿ, ಆದರೆ, ಅದಕ್ಕೆ ಪರ್ಯಾಯವಾಗಿ ಸುಲಭಕ್ಕೆ ಸಿಗುವಂತಹ ವ್ಯವಸ್ಥೆಯನ್ನು ಸರ್ಕಾರ ಮಾಡಬೇಕು. ಇಲ್ಲವಾದರೆ ಇದು ಮತ್ತಷ್ಟು ಆಕ್ಷೇಪಾರ್ಹವಾಗುತ್ತದೆ” ಎನ್ನುತ್ತಾರೆ ಶಿವಸುಂದರ್‌.


ಇದನ್ನೂ ಓದಿರಿ: ರಾಜಕೀಯದಲ್ಲಿ ಕುತೂಹಲ ಮೂಡಿಸಿದ ಪ್ರಶಾಂತ್ ಕಿಶೋರ್- ನಿತೀಶ್ ಕುಮಾರ್ ಭೇಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...