Homeಮುಖಪುಟತ್ರಿಪುರ: ಶಾಲಾ ಆವರಣದಲ್ಲಿ ರಾಜಕೀಯ ಕಾರ್ಯಕ್ರಮಗಳಿಗೆ ನಿಷೇಧ

ತ್ರಿಪುರ: ಶಾಲಾ ಆವರಣದಲ್ಲಿ ರಾಜಕೀಯ ಕಾರ್ಯಕ್ರಮಗಳಿಗೆ ನಿಷೇಧ

- Advertisement -
- Advertisement -

ಶಾಲಾ ಅವಧಿಯಲ್ಲಿ ಅಥವಾ ನಂತರದಲ್ಲಿ ಶಾಲಾ ಆವರಣದಲ್ಲಿ ಯಾವುದೇ ರೀತಿಯ ರಾಜಕೀಯ ರ್‍ಯಾಲಿಗಳನ್ನು ಹಾಗೂ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ ಎಂದು ತ್ರಿಪುರಾ ಸರ್ಕಾರ ಶನಿವಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

ಶಾಲಾ ಆವರಣದಲ್ಲಿ ರಾಜಕೀಯ ಕಾರ್ಯಕ್ರಮಗಳಿಗೆ ಅವಕಾಶ ನೀಡುತ್ತಿರುವ ಮುಖ್ಯೋಪಾಧ್ಯಾಯರ ವಿರುದ್ಧ ಕೆಲವು ದೂರುಗಳು ಬಂದ ನಂತರ ರಾಜ್ಯ ಶಿಕ್ಷಣ ಇಲಾಖೆ ಈ ಆದೇಶ ಹೊರಡಿಸಿದೆ.

ಶಾಲಾ ಆವರಣದಲ್ಲಿ ಇಂತಹ ಯಾವುದೇ ರಾಜಕೀಯ ಕಾರ್ಯಕ್ರಮಗಳನ್ನು ನಡೆಸಲು ನಿರಾಕ್ಷೇಪಣಾ ಪ್ರಮಾಣಪತ್ರ (ಎನ್ಒಸಿ)ವನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು ಎಂದು ಶಿಕ್ಷಣ ಇಲಾಖೆಯು ಆದೇಶಿಸಿದೆ.

“ಆಟದ ಮೈದಾನ ಸೇರಿದಂತೆ ಯಾವುದೇ ಶಾಲೆಗೆ ಸಂಬಂಧಿಸಿದ ಯಾವುದೇ ಸಂಪನ್ಮೂಲಗಳನ್ನು ರಾಜಕೀಯ ಕಾರ್ಯಕ್ರಮ ಹಾಗೂ ರ್‍ಯಾಲಿಗಳಿಗಾಗಿ ರಾಜಕೀಯ ಪಕ್ಷಗಳು ಬಳಸುವಂತಿಲ್ಲ. ರಜಾ ದಿನಗಳಲ್ಲಿ ಅಥವಾ ಶಾಲಾ ಸಮಯದ ನಂತರ ಇತರ ಕಾರ್ಯಕ್ರಮಗಳನ್ನು ಆಯೋಜಿಸಲು ಕೆಲವು ಮುಖ್ಯೋಪಾಧ್ಯಾಯರು/ಟಿಐಸಿಗಳು ಅವಕಾಶ ನೀಡುತ್ತಿದ್ದಾರೆ. ಇದು ನಿಯಮದ ಉಲ್ಲಂಘನೆಯಾಗಿದೆ” ಎಂದು ಇಲಾಖೆ ಹೇಳಿದೆ.

ಕೋವಿಡ್-19 ಲಾಕ್‌ಡೌನ್‌ ಕ್ರಮಗಳಿಂದಾಗಿ ಈಗಾಗಲೇ ತರಗತಿ ಬೋಧನೆಯ ಮೇಲೆ ತೀವ್ರ ಪರಿಣಾಮ ಬೀರಿರುವುದರಿಂದ ಶಾಲಾ ಸಮಯದಲ್ಲಿ ದೈಹಿಕ ತರಗತಿಗಳಲ್ಲಿನ ಅಧ್ಯಯನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತ್ರಿಪುರಾ ಸರ್ಕಾರ ಒತ್ತಿಹೇಳಿದೆ.

“ಶಿಕ್ಷಣ-ಕಲಿಕಾ ಚಟುವಟಿಕೆಗಳಿಗೆ ಅಡ್ಡಿಪಡಿಸುವ ಮತ್ತು ಇಲಾಖೆಯ ನಿಯಮಾವಳಿಗಳನ್ನು ಉಲ್ಲಂಘಿಸುವ ಇಂತಹ ಕಾರ್ಯಕ್ರಮಗಳಿಗೆ ಮುಖ್ಯೋಪಾಧ್ಯಾಯರು ಅವಕಾಶ ನೀಡುತ್ತಿರುವುದು ಸ್ವೀಕಾರಾರ್ಹವಲ್ಲ. ಈಗಾಗಲೇ ಮಾಡಿರುವ ಉಲ್ಲಂಘನೆಗಳಿಗಾಗಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಲ್ಲಾ ಮುಖ್ಯೋಪಾಧ್ಯಾಯರು/ಟಿಐಸಿಗಳಿಗೆ ತಿಳಿಸಬೇಕು ಎಂದೂ ಸರ್ಕಾರ ಹೇಳಿದೆ. ಈ ಮೂಲಕ, ಭವಿಷ್ಯದಲ್ಲಿ ನಿಯಮವನ್ನು ಉಲ್ಲಂಘಿಸುವವರಿಗೆ ಎಚ್ಚರಿಕೆ ನೀಡಬೇಕು” ಎಂದೂ ಆದೇಶದಲ್ಲಿ ಹೇಳಲಾಗಿದೆ.

“ಯಾವುದೇ ಸಂಸ್ಥೆಯು ಅನುಮತಿ ಪಡೆಯದೆ ಶಾಲೆಯ ಆವರಣದಲ್ಲಿ ಕಾರ್ಯಕ್ರಮ/ರ್‍ಯಾಲಿಗಳನ್ನು ನಡೆಸಲು ಯೋಜಿಸುತ್ತಿದ್ದರೆ, ಆ ಬಗ್ಗೆ HM/TIC ಅವರು ಶಾಲೆಗಳ ಇನ್ಸ್ಪೆಕ್ಟರ್/ಜಿಲ್ಲಾ ಶಿಕ್ಷಣಾಧಿಕಾರಿಗಳಿಗೆ ತಿಳಿಸಬೇಕು. ಅಂತಹ ಮಾಹಿತಿಯನ್ನು ಸ್ವೀಕರಿಸಿದ ನಂತರ, ಆ ಬಗ್ಗೆ ಶಿಕ್ಷಣಾಧಿಕಾರಿಗಳು ಸ್ಥಳೀಯ ಆಡಳಿತ ಮತ್ತು ಪೊಲೀಸ್ ಅಧಿಕಾರಿಗಳೊಂದಿಗೆ ತಕ್ಷಣವೇ ಕ್ರಮಕೈಗೊಳ್ಳಬೇಕು” ಎಂದು ಸರ್ಕಾರ ಹೇಳಿದೆ.

ದುರುದ್ದೇಶವೂ ಇರುವಂತಿದೆ: ಶಿವಸುಂದರ್‌

“ಬಿಜೆಪಿ ಸರ್ಕಾರ ಈ ಆದೇಶವನ್ನು ಸ್ವಾರ್ಥ ಹಿತಾಸಕ್ತಿಯಿಂದಲೂ ಮಾಡಿದಂತಿದೆ. ಯಾವುದೇ ರಾಜಕೀಯ ಪಕ್ಷಗಳಿಗೆ ಜನರನ್ನು ತಲುಪಲು, ಜನರನ್ನು ಸೇರಿಸಿ ಕಾರ್ಯಕ್ರಮಗಳನ್ನು ನಡೆಸಲು ಸುಲಭಕ್ಕೆ ಸಿಗುವ ಸ್ಥಳ ಎಂದರೆ ಶಾಲೆಗಳ ಆವರಣಗಳು. ಹೀಗಾಗಿ, ಬಿಜೆಪಿಗೆ ಈ ಆವರಣಗಳ ಹೊರತಾಗಿಯೂ ಜನರನ್ನು ತಲುಪಲು ವಾಟ್ಸಾಪ್, ಖಾಸಗೀ ಮೈದಾನಗಳು ಸೇರಿದಂತೆ ವಿವಿಧ ರೀತಿಯ ದಾರಿಗಳನ್ನು ಹುಡುಕಿಕೊಂಡಿದೆ” ಎಂದು ಸಾಮಾಜಿಕ ಕಾರ್ಯಕರ್ತ ಶಿವಸುಂದರ್ ಹೇಳಿದ್ದಾರೆ.

“ಶಾಲೆಗಳಲ್ಲಿ ಮಕ್ಕಳು ಆಗತಾನೇ ವಿಚಾರಗಳನ್ನು ಮೈಗೂಡಿಸಿಕೊಳ್ಳಲು ಆರಂಭಿಸಿರುತ್ತಾರೆ. ಬಿಜೆಪಿಯು ಶಿಕ್ಷಕರ ಮೂಲಕ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ತನ್ನ ಧೋರಣೆ, ಮತಾಂಧತೆಯ ವಾದವನ್ನು ತುಂಬುತ್ತಿದೆ. ಆದರೆ, ಬೇರೆ ಪಕ್ಷಗಳು ಈಗಲೂ ಸಾರ್ವಜನಿಕ ಮೈದಾನಗಳ ಮೇಲೆ ಅವಲಂಬಿತವಾಗಿವೆ. ಜನರನ್ನು ಹಾಗೂ ವಿದ್ಯಾರ್ಥಿಗಳನ್ನು ತಲುಪಲು ಬೇರಾವುದೇ ಮಾರ್ಗಗಳಿಲ್ಲ. ಅಂತಹ ಪಕ್ಷಗಳು ಜನರನ್ನು ತಲುಪದಂತೆ ತಡೆಯುವ ಹುನ್ನಾರದಿಂದ ಬಿಜೆಪಿ ಸರ್ಕಾರ ಈ ಆದೇಶವನ್ನು ಹೊರಡಿಸಿರುವಂತಿದೆ. ಶಾಲಾ ಆವರಣಗಳನ್ನು ರಾಜಕೀಯ ಕಾರ್ಯಕ್ರಮಕ್ಕಾಗಿ ಬಳಸಿಕೊಳ್ಳದಂತೆ ತಡೆಯುವುದು ಸರಿ, ಆದರೆ, ಅದಕ್ಕೆ ಪರ್ಯಾಯವಾಗಿ ಸುಲಭಕ್ಕೆ ಸಿಗುವಂತಹ ವ್ಯವಸ್ಥೆಯನ್ನು ಸರ್ಕಾರ ಮಾಡಬೇಕು. ಇಲ್ಲವಾದರೆ ಇದು ಮತ್ತಷ್ಟು ಆಕ್ಷೇಪಾರ್ಹವಾಗುತ್ತದೆ” ಎನ್ನುತ್ತಾರೆ ಶಿವಸುಂದರ್‌.


ಇದನ್ನೂ ಓದಿರಿ: ರಾಜಕೀಯದಲ್ಲಿ ಕುತೂಹಲ ಮೂಡಿಸಿದ ಪ್ರಶಾಂತ್ ಕಿಶೋರ್- ನಿತೀಶ್ ಕುಮಾರ್ ಭೇಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...