Homeಮುಖಪುಟತ್ರಿಪುರ: ಶಾಲಾ ಆವರಣದಲ್ಲಿ ರಾಜಕೀಯ ಕಾರ್ಯಕ್ರಮಗಳಿಗೆ ನಿಷೇಧ

ತ್ರಿಪುರ: ಶಾಲಾ ಆವರಣದಲ್ಲಿ ರಾಜಕೀಯ ಕಾರ್ಯಕ್ರಮಗಳಿಗೆ ನಿಷೇಧ

- Advertisement -
- Advertisement -

ಶಾಲಾ ಅವಧಿಯಲ್ಲಿ ಅಥವಾ ನಂತರದಲ್ಲಿ ಶಾಲಾ ಆವರಣದಲ್ಲಿ ಯಾವುದೇ ರೀತಿಯ ರಾಜಕೀಯ ರ್‍ಯಾಲಿಗಳನ್ನು ಹಾಗೂ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ ಎಂದು ತ್ರಿಪುರಾ ಸರ್ಕಾರ ಶನಿವಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

ಶಾಲಾ ಆವರಣದಲ್ಲಿ ರಾಜಕೀಯ ಕಾರ್ಯಕ್ರಮಗಳಿಗೆ ಅವಕಾಶ ನೀಡುತ್ತಿರುವ ಮುಖ್ಯೋಪಾಧ್ಯಾಯರ ವಿರುದ್ಧ ಕೆಲವು ದೂರುಗಳು ಬಂದ ನಂತರ ರಾಜ್ಯ ಶಿಕ್ಷಣ ಇಲಾಖೆ ಈ ಆದೇಶ ಹೊರಡಿಸಿದೆ.

ಶಾಲಾ ಆವರಣದಲ್ಲಿ ಇಂತಹ ಯಾವುದೇ ರಾಜಕೀಯ ಕಾರ್ಯಕ್ರಮಗಳನ್ನು ನಡೆಸಲು ನಿರಾಕ್ಷೇಪಣಾ ಪ್ರಮಾಣಪತ್ರ (ಎನ್ಒಸಿ)ವನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು ಎಂದು ಶಿಕ್ಷಣ ಇಲಾಖೆಯು ಆದೇಶಿಸಿದೆ.

“ಆಟದ ಮೈದಾನ ಸೇರಿದಂತೆ ಯಾವುದೇ ಶಾಲೆಗೆ ಸಂಬಂಧಿಸಿದ ಯಾವುದೇ ಸಂಪನ್ಮೂಲಗಳನ್ನು ರಾಜಕೀಯ ಕಾರ್ಯಕ್ರಮ ಹಾಗೂ ರ್‍ಯಾಲಿಗಳಿಗಾಗಿ ರಾಜಕೀಯ ಪಕ್ಷಗಳು ಬಳಸುವಂತಿಲ್ಲ. ರಜಾ ದಿನಗಳಲ್ಲಿ ಅಥವಾ ಶಾಲಾ ಸಮಯದ ನಂತರ ಇತರ ಕಾರ್ಯಕ್ರಮಗಳನ್ನು ಆಯೋಜಿಸಲು ಕೆಲವು ಮುಖ್ಯೋಪಾಧ್ಯಾಯರು/ಟಿಐಸಿಗಳು ಅವಕಾಶ ನೀಡುತ್ತಿದ್ದಾರೆ. ಇದು ನಿಯಮದ ಉಲ್ಲಂಘನೆಯಾಗಿದೆ” ಎಂದು ಇಲಾಖೆ ಹೇಳಿದೆ.

ಕೋವಿಡ್-19 ಲಾಕ್‌ಡೌನ್‌ ಕ್ರಮಗಳಿಂದಾಗಿ ಈಗಾಗಲೇ ತರಗತಿ ಬೋಧನೆಯ ಮೇಲೆ ತೀವ್ರ ಪರಿಣಾಮ ಬೀರಿರುವುದರಿಂದ ಶಾಲಾ ಸಮಯದಲ್ಲಿ ದೈಹಿಕ ತರಗತಿಗಳಲ್ಲಿನ ಅಧ್ಯಯನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತ್ರಿಪುರಾ ಸರ್ಕಾರ ಒತ್ತಿಹೇಳಿದೆ.

“ಶಿಕ್ಷಣ-ಕಲಿಕಾ ಚಟುವಟಿಕೆಗಳಿಗೆ ಅಡ್ಡಿಪಡಿಸುವ ಮತ್ತು ಇಲಾಖೆಯ ನಿಯಮಾವಳಿಗಳನ್ನು ಉಲ್ಲಂಘಿಸುವ ಇಂತಹ ಕಾರ್ಯಕ್ರಮಗಳಿಗೆ ಮುಖ್ಯೋಪಾಧ್ಯಾಯರು ಅವಕಾಶ ನೀಡುತ್ತಿರುವುದು ಸ್ವೀಕಾರಾರ್ಹವಲ್ಲ. ಈಗಾಗಲೇ ಮಾಡಿರುವ ಉಲ್ಲಂಘನೆಗಳಿಗಾಗಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಲ್ಲಾ ಮುಖ್ಯೋಪಾಧ್ಯಾಯರು/ಟಿಐಸಿಗಳಿಗೆ ತಿಳಿಸಬೇಕು ಎಂದೂ ಸರ್ಕಾರ ಹೇಳಿದೆ. ಈ ಮೂಲಕ, ಭವಿಷ್ಯದಲ್ಲಿ ನಿಯಮವನ್ನು ಉಲ್ಲಂಘಿಸುವವರಿಗೆ ಎಚ್ಚರಿಕೆ ನೀಡಬೇಕು” ಎಂದೂ ಆದೇಶದಲ್ಲಿ ಹೇಳಲಾಗಿದೆ.

“ಯಾವುದೇ ಸಂಸ್ಥೆಯು ಅನುಮತಿ ಪಡೆಯದೆ ಶಾಲೆಯ ಆವರಣದಲ್ಲಿ ಕಾರ್ಯಕ್ರಮ/ರ್‍ಯಾಲಿಗಳನ್ನು ನಡೆಸಲು ಯೋಜಿಸುತ್ತಿದ್ದರೆ, ಆ ಬಗ್ಗೆ HM/TIC ಅವರು ಶಾಲೆಗಳ ಇನ್ಸ್ಪೆಕ್ಟರ್/ಜಿಲ್ಲಾ ಶಿಕ್ಷಣಾಧಿಕಾರಿಗಳಿಗೆ ತಿಳಿಸಬೇಕು. ಅಂತಹ ಮಾಹಿತಿಯನ್ನು ಸ್ವೀಕರಿಸಿದ ನಂತರ, ಆ ಬಗ್ಗೆ ಶಿಕ್ಷಣಾಧಿಕಾರಿಗಳು ಸ್ಥಳೀಯ ಆಡಳಿತ ಮತ್ತು ಪೊಲೀಸ್ ಅಧಿಕಾರಿಗಳೊಂದಿಗೆ ತಕ್ಷಣವೇ ಕ್ರಮಕೈಗೊಳ್ಳಬೇಕು” ಎಂದು ಸರ್ಕಾರ ಹೇಳಿದೆ.

ದುರುದ್ದೇಶವೂ ಇರುವಂತಿದೆ: ಶಿವಸುಂದರ್‌

“ಬಿಜೆಪಿ ಸರ್ಕಾರ ಈ ಆದೇಶವನ್ನು ಸ್ವಾರ್ಥ ಹಿತಾಸಕ್ತಿಯಿಂದಲೂ ಮಾಡಿದಂತಿದೆ. ಯಾವುದೇ ರಾಜಕೀಯ ಪಕ್ಷಗಳಿಗೆ ಜನರನ್ನು ತಲುಪಲು, ಜನರನ್ನು ಸೇರಿಸಿ ಕಾರ್ಯಕ್ರಮಗಳನ್ನು ನಡೆಸಲು ಸುಲಭಕ್ಕೆ ಸಿಗುವ ಸ್ಥಳ ಎಂದರೆ ಶಾಲೆಗಳ ಆವರಣಗಳು. ಹೀಗಾಗಿ, ಬಿಜೆಪಿಗೆ ಈ ಆವರಣಗಳ ಹೊರತಾಗಿಯೂ ಜನರನ್ನು ತಲುಪಲು ವಾಟ್ಸಾಪ್, ಖಾಸಗೀ ಮೈದಾನಗಳು ಸೇರಿದಂತೆ ವಿವಿಧ ರೀತಿಯ ದಾರಿಗಳನ್ನು ಹುಡುಕಿಕೊಂಡಿದೆ” ಎಂದು ಸಾಮಾಜಿಕ ಕಾರ್ಯಕರ್ತ ಶಿವಸುಂದರ್ ಹೇಳಿದ್ದಾರೆ.

“ಶಾಲೆಗಳಲ್ಲಿ ಮಕ್ಕಳು ಆಗತಾನೇ ವಿಚಾರಗಳನ್ನು ಮೈಗೂಡಿಸಿಕೊಳ್ಳಲು ಆರಂಭಿಸಿರುತ್ತಾರೆ. ಬಿಜೆಪಿಯು ಶಿಕ್ಷಕರ ಮೂಲಕ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ತನ್ನ ಧೋರಣೆ, ಮತಾಂಧತೆಯ ವಾದವನ್ನು ತುಂಬುತ್ತಿದೆ. ಆದರೆ, ಬೇರೆ ಪಕ್ಷಗಳು ಈಗಲೂ ಸಾರ್ವಜನಿಕ ಮೈದಾನಗಳ ಮೇಲೆ ಅವಲಂಬಿತವಾಗಿವೆ. ಜನರನ್ನು ಹಾಗೂ ವಿದ್ಯಾರ್ಥಿಗಳನ್ನು ತಲುಪಲು ಬೇರಾವುದೇ ಮಾರ್ಗಗಳಿಲ್ಲ. ಅಂತಹ ಪಕ್ಷಗಳು ಜನರನ್ನು ತಲುಪದಂತೆ ತಡೆಯುವ ಹುನ್ನಾರದಿಂದ ಬಿಜೆಪಿ ಸರ್ಕಾರ ಈ ಆದೇಶವನ್ನು ಹೊರಡಿಸಿರುವಂತಿದೆ. ಶಾಲಾ ಆವರಣಗಳನ್ನು ರಾಜಕೀಯ ಕಾರ್ಯಕ್ರಮಕ್ಕಾಗಿ ಬಳಸಿಕೊಳ್ಳದಂತೆ ತಡೆಯುವುದು ಸರಿ, ಆದರೆ, ಅದಕ್ಕೆ ಪರ್ಯಾಯವಾಗಿ ಸುಲಭಕ್ಕೆ ಸಿಗುವಂತಹ ವ್ಯವಸ್ಥೆಯನ್ನು ಸರ್ಕಾರ ಮಾಡಬೇಕು. ಇಲ್ಲವಾದರೆ ಇದು ಮತ್ತಷ್ಟು ಆಕ್ಷೇಪಾರ್ಹವಾಗುತ್ತದೆ” ಎನ್ನುತ್ತಾರೆ ಶಿವಸುಂದರ್‌.


ಇದನ್ನೂ ಓದಿರಿ: ರಾಜಕೀಯದಲ್ಲಿ ಕುತೂಹಲ ಮೂಡಿಸಿದ ಪ್ರಶಾಂತ್ ಕಿಶೋರ್- ನಿತೀಶ್ ಕುಮಾರ್ ಭೇಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...