Homeಮುಖಪುಟತ್ರಿಪುರ: ಶಾಲಾ ಆವರಣದಲ್ಲಿ ರಾಜಕೀಯ ಕಾರ್ಯಕ್ರಮಗಳಿಗೆ ನಿಷೇಧ

ತ್ರಿಪುರ: ಶಾಲಾ ಆವರಣದಲ್ಲಿ ರಾಜಕೀಯ ಕಾರ್ಯಕ್ರಮಗಳಿಗೆ ನಿಷೇಧ

- Advertisement -
- Advertisement -

ಶಾಲಾ ಅವಧಿಯಲ್ಲಿ ಅಥವಾ ನಂತರದಲ್ಲಿ ಶಾಲಾ ಆವರಣದಲ್ಲಿ ಯಾವುದೇ ರೀತಿಯ ರಾಜಕೀಯ ರ್‍ಯಾಲಿಗಳನ್ನು ಹಾಗೂ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ ಎಂದು ತ್ರಿಪುರಾ ಸರ್ಕಾರ ಶನಿವಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

ಶಾಲಾ ಆವರಣದಲ್ಲಿ ರಾಜಕೀಯ ಕಾರ್ಯಕ್ರಮಗಳಿಗೆ ಅವಕಾಶ ನೀಡುತ್ತಿರುವ ಮುಖ್ಯೋಪಾಧ್ಯಾಯರ ವಿರುದ್ಧ ಕೆಲವು ದೂರುಗಳು ಬಂದ ನಂತರ ರಾಜ್ಯ ಶಿಕ್ಷಣ ಇಲಾಖೆ ಈ ಆದೇಶ ಹೊರಡಿಸಿದೆ.

ಶಾಲಾ ಆವರಣದಲ್ಲಿ ಇಂತಹ ಯಾವುದೇ ರಾಜಕೀಯ ಕಾರ್ಯಕ್ರಮಗಳನ್ನು ನಡೆಸಲು ನಿರಾಕ್ಷೇಪಣಾ ಪ್ರಮಾಣಪತ್ರ (ಎನ್ಒಸಿ)ವನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು ಎಂದು ಶಿಕ್ಷಣ ಇಲಾಖೆಯು ಆದೇಶಿಸಿದೆ.

“ಆಟದ ಮೈದಾನ ಸೇರಿದಂತೆ ಯಾವುದೇ ಶಾಲೆಗೆ ಸಂಬಂಧಿಸಿದ ಯಾವುದೇ ಸಂಪನ್ಮೂಲಗಳನ್ನು ರಾಜಕೀಯ ಕಾರ್ಯಕ್ರಮ ಹಾಗೂ ರ್‍ಯಾಲಿಗಳಿಗಾಗಿ ರಾಜಕೀಯ ಪಕ್ಷಗಳು ಬಳಸುವಂತಿಲ್ಲ. ರಜಾ ದಿನಗಳಲ್ಲಿ ಅಥವಾ ಶಾಲಾ ಸಮಯದ ನಂತರ ಇತರ ಕಾರ್ಯಕ್ರಮಗಳನ್ನು ಆಯೋಜಿಸಲು ಕೆಲವು ಮುಖ್ಯೋಪಾಧ್ಯಾಯರು/ಟಿಐಸಿಗಳು ಅವಕಾಶ ನೀಡುತ್ತಿದ್ದಾರೆ. ಇದು ನಿಯಮದ ಉಲ್ಲಂಘನೆಯಾಗಿದೆ” ಎಂದು ಇಲಾಖೆ ಹೇಳಿದೆ.

ಕೋವಿಡ್-19 ಲಾಕ್‌ಡೌನ್‌ ಕ್ರಮಗಳಿಂದಾಗಿ ಈಗಾಗಲೇ ತರಗತಿ ಬೋಧನೆಯ ಮೇಲೆ ತೀವ್ರ ಪರಿಣಾಮ ಬೀರಿರುವುದರಿಂದ ಶಾಲಾ ಸಮಯದಲ್ಲಿ ದೈಹಿಕ ತರಗತಿಗಳಲ್ಲಿನ ಅಧ್ಯಯನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತ್ರಿಪುರಾ ಸರ್ಕಾರ ಒತ್ತಿಹೇಳಿದೆ.

“ಶಿಕ್ಷಣ-ಕಲಿಕಾ ಚಟುವಟಿಕೆಗಳಿಗೆ ಅಡ್ಡಿಪಡಿಸುವ ಮತ್ತು ಇಲಾಖೆಯ ನಿಯಮಾವಳಿಗಳನ್ನು ಉಲ್ಲಂಘಿಸುವ ಇಂತಹ ಕಾರ್ಯಕ್ರಮಗಳಿಗೆ ಮುಖ್ಯೋಪಾಧ್ಯಾಯರು ಅವಕಾಶ ನೀಡುತ್ತಿರುವುದು ಸ್ವೀಕಾರಾರ್ಹವಲ್ಲ. ಈಗಾಗಲೇ ಮಾಡಿರುವ ಉಲ್ಲಂಘನೆಗಳಿಗಾಗಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಲ್ಲಾ ಮುಖ್ಯೋಪಾಧ್ಯಾಯರು/ಟಿಐಸಿಗಳಿಗೆ ತಿಳಿಸಬೇಕು ಎಂದೂ ಸರ್ಕಾರ ಹೇಳಿದೆ. ಈ ಮೂಲಕ, ಭವಿಷ್ಯದಲ್ಲಿ ನಿಯಮವನ್ನು ಉಲ್ಲಂಘಿಸುವವರಿಗೆ ಎಚ್ಚರಿಕೆ ನೀಡಬೇಕು” ಎಂದೂ ಆದೇಶದಲ್ಲಿ ಹೇಳಲಾಗಿದೆ.

“ಯಾವುದೇ ಸಂಸ್ಥೆಯು ಅನುಮತಿ ಪಡೆಯದೆ ಶಾಲೆಯ ಆವರಣದಲ್ಲಿ ಕಾರ್ಯಕ್ರಮ/ರ್‍ಯಾಲಿಗಳನ್ನು ನಡೆಸಲು ಯೋಜಿಸುತ್ತಿದ್ದರೆ, ಆ ಬಗ್ಗೆ HM/TIC ಅವರು ಶಾಲೆಗಳ ಇನ್ಸ್ಪೆಕ್ಟರ್/ಜಿಲ್ಲಾ ಶಿಕ್ಷಣಾಧಿಕಾರಿಗಳಿಗೆ ತಿಳಿಸಬೇಕು. ಅಂತಹ ಮಾಹಿತಿಯನ್ನು ಸ್ವೀಕರಿಸಿದ ನಂತರ, ಆ ಬಗ್ಗೆ ಶಿಕ್ಷಣಾಧಿಕಾರಿಗಳು ಸ್ಥಳೀಯ ಆಡಳಿತ ಮತ್ತು ಪೊಲೀಸ್ ಅಧಿಕಾರಿಗಳೊಂದಿಗೆ ತಕ್ಷಣವೇ ಕ್ರಮಕೈಗೊಳ್ಳಬೇಕು” ಎಂದು ಸರ್ಕಾರ ಹೇಳಿದೆ.

ದುರುದ್ದೇಶವೂ ಇರುವಂತಿದೆ: ಶಿವಸುಂದರ್‌

“ಬಿಜೆಪಿ ಸರ್ಕಾರ ಈ ಆದೇಶವನ್ನು ಸ್ವಾರ್ಥ ಹಿತಾಸಕ್ತಿಯಿಂದಲೂ ಮಾಡಿದಂತಿದೆ. ಯಾವುದೇ ರಾಜಕೀಯ ಪಕ್ಷಗಳಿಗೆ ಜನರನ್ನು ತಲುಪಲು, ಜನರನ್ನು ಸೇರಿಸಿ ಕಾರ್ಯಕ್ರಮಗಳನ್ನು ನಡೆಸಲು ಸುಲಭಕ್ಕೆ ಸಿಗುವ ಸ್ಥಳ ಎಂದರೆ ಶಾಲೆಗಳ ಆವರಣಗಳು. ಹೀಗಾಗಿ, ಬಿಜೆಪಿಗೆ ಈ ಆವರಣಗಳ ಹೊರತಾಗಿಯೂ ಜನರನ್ನು ತಲುಪಲು ವಾಟ್ಸಾಪ್, ಖಾಸಗೀ ಮೈದಾನಗಳು ಸೇರಿದಂತೆ ವಿವಿಧ ರೀತಿಯ ದಾರಿಗಳನ್ನು ಹುಡುಕಿಕೊಂಡಿದೆ” ಎಂದು ಸಾಮಾಜಿಕ ಕಾರ್ಯಕರ್ತ ಶಿವಸುಂದರ್ ಹೇಳಿದ್ದಾರೆ.

“ಶಾಲೆಗಳಲ್ಲಿ ಮಕ್ಕಳು ಆಗತಾನೇ ವಿಚಾರಗಳನ್ನು ಮೈಗೂಡಿಸಿಕೊಳ್ಳಲು ಆರಂಭಿಸಿರುತ್ತಾರೆ. ಬಿಜೆಪಿಯು ಶಿಕ್ಷಕರ ಮೂಲಕ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ತನ್ನ ಧೋರಣೆ, ಮತಾಂಧತೆಯ ವಾದವನ್ನು ತುಂಬುತ್ತಿದೆ. ಆದರೆ, ಬೇರೆ ಪಕ್ಷಗಳು ಈಗಲೂ ಸಾರ್ವಜನಿಕ ಮೈದಾನಗಳ ಮೇಲೆ ಅವಲಂಬಿತವಾಗಿವೆ. ಜನರನ್ನು ಹಾಗೂ ವಿದ್ಯಾರ್ಥಿಗಳನ್ನು ತಲುಪಲು ಬೇರಾವುದೇ ಮಾರ್ಗಗಳಿಲ್ಲ. ಅಂತಹ ಪಕ್ಷಗಳು ಜನರನ್ನು ತಲುಪದಂತೆ ತಡೆಯುವ ಹುನ್ನಾರದಿಂದ ಬಿಜೆಪಿ ಸರ್ಕಾರ ಈ ಆದೇಶವನ್ನು ಹೊರಡಿಸಿರುವಂತಿದೆ. ಶಾಲಾ ಆವರಣಗಳನ್ನು ರಾಜಕೀಯ ಕಾರ್ಯಕ್ರಮಕ್ಕಾಗಿ ಬಳಸಿಕೊಳ್ಳದಂತೆ ತಡೆಯುವುದು ಸರಿ, ಆದರೆ, ಅದಕ್ಕೆ ಪರ್ಯಾಯವಾಗಿ ಸುಲಭಕ್ಕೆ ಸಿಗುವಂತಹ ವ್ಯವಸ್ಥೆಯನ್ನು ಸರ್ಕಾರ ಮಾಡಬೇಕು. ಇಲ್ಲವಾದರೆ ಇದು ಮತ್ತಷ್ಟು ಆಕ್ಷೇಪಾರ್ಹವಾಗುತ್ತದೆ” ಎನ್ನುತ್ತಾರೆ ಶಿವಸುಂದರ್‌.


ಇದನ್ನೂ ಓದಿರಿ: ರಾಜಕೀಯದಲ್ಲಿ ಕುತೂಹಲ ಮೂಡಿಸಿದ ಪ್ರಶಾಂತ್ ಕಿಶೋರ್- ನಿತೀಶ್ ಕುಮಾರ್ ಭೇಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...