Homeಮುಖಪುಟತ್ರಿಪುರ: ಶಾಲಾ ಆವರಣದಲ್ಲಿ ರಾಜಕೀಯ ಕಾರ್ಯಕ್ರಮಗಳಿಗೆ ನಿಷೇಧ

ತ್ರಿಪುರ: ಶಾಲಾ ಆವರಣದಲ್ಲಿ ರಾಜಕೀಯ ಕಾರ್ಯಕ್ರಮಗಳಿಗೆ ನಿಷೇಧ

- Advertisement -
- Advertisement -

ಶಾಲಾ ಅವಧಿಯಲ್ಲಿ ಅಥವಾ ನಂತರದಲ್ಲಿ ಶಾಲಾ ಆವರಣದಲ್ಲಿ ಯಾವುದೇ ರೀತಿಯ ರಾಜಕೀಯ ರ್‍ಯಾಲಿಗಳನ್ನು ಹಾಗೂ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ ಎಂದು ತ್ರಿಪುರಾ ಸರ್ಕಾರ ಶನಿವಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

ಶಾಲಾ ಆವರಣದಲ್ಲಿ ರಾಜಕೀಯ ಕಾರ್ಯಕ್ರಮಗಳಿಗೆ ಅವಕಾಶ ನೀಡುತ್ತಿರುವ ಮುಖ್ಯೋಪಾಧ್ಯಾಯರ ವಿರುದ್ಧ ಕೆಲವು ದೂರುಗಳು ಬಂದ ನಂತರ ರಾಜ್ಯ ಶಿಕ್ಷಣ ಇಲಾಖೆ ಈ ಆದೇಶ ಹೊರಡಿಸಿದೆ.

ಶಾಲಾ ಆವರಣದಲ್ಲಿ ಇಂತಹ ಯಾವುದೇ ರಾಜಕೀಯ ಕಾರ್ಯಕ್ರಮಗಳನ್ನು ನಡೆಸಲು ನಿರಾಕ್ಷೇಪಣಾ ಪ್ರಮಾಣಪತ್ರ (ಎನ್ಒಸಿ)ವನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು ಎಂದು ಶಿಕ್ಷಣ ಇಲಾಖೆಯು ಆದೇಶಿಸಿದೆ.

“ಆಟದ ಮೈದಾನ ಸೇರಿದಂತೆ ಯಾವುದೇ ಶಾಲೆಗೆ ಸಂಬಂಧಿಸಿದ ಯಾವುದೇ ಸಂಪನ್ಮೂಲಗಳನ್ನು ರಾಜಕೀಯ ಕಾರ್ಯಕ್ರಮ ಹಾಗೂ ರ್‍ಯಾಲಿಗಳಿಗಾಗಿ ರಾಜಕೀಯ ಪಕ್ಷಗಳು ಬಳಸುವಂತಿಲ್ಲ. ರಜಾ ದಿನಗಳಲ್ಲಿ ಅಥವಾ ಶಾಲಾ ಸಮಯದ ನಂತರ ಇತರ ಕಾರ್ಯಕ್ರಮಗಳನ್ನು ಆಯೋಜಿಸಲು ಕೆಲವು ಮುಖ್ಯೋಪಾಧ್ಯಾಯರು/ಟಿಐಸಿಗಳು ಅವಕಾಶ ನೀಡುತ್ತಿದ್ದಾರೆ. ಇದು ನಿಯಮದ ಉಲ್ಲಂಘನೆಯಾಗಿದೆ” ಎಂದು ಇಲಾಖೆ ಹೇಳಿದೆ.

ಕೋವಿಡ್-19 ಲಾಕ್‌ಡೌನ್‌ ಕ್ರಮಗಳಿಂದಾಗಿ ಈಗಾಗಲೇ ತರಗತಿ ಬೋಧನೆಯ ಮೇಲೆ ತೀವ್ರ ಪರಿಣಾಮ ಬೀರಿರುವುದರಿಂದ ಶಾಲಾ ಸಮಯದಲ್ಲಿ ದೈಹಿಕ ತರಗತಿಗಳಲ್ಲಿನ ಅಧ್ಯಯನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತ್ರಿಪುರಾ ಸರ್ಕಾರ ಒತ್ತಿಹೇಳಿದೆ.

“ಶಿಕ್ಷಣ-ಕಲಿಕಾ ಚಟುವಟಿಕೆಗಳಿಗೆ ಅಡ್ಡಿಪಡಿಸುವ ಮತ್ತು ಇಲಾಖೆಯ ನಿಯಮಾವಳಿಗಳನ್ನು ಉಲ್ಲಂಘಿಸುವ ಇಂತಹ ಕಾರ್ಯಕ್ರಮಗಳಿಗೆ ಮುಖ್ಯೋಪಾಧ್ಯಾಯರು ಅವಕಾಶ ನೀಡುತ್ತಿರುವುದು ಸ್ವೀಕಾರಾರ್ಹವಲ್ಲ. ಈಗಾಗಲೇ ಮಾಡಿರುವ ಉಲ್ಲಂಘನೆಗಳಿಗಾಗಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಲ್ಲಾ ಮುಖ್ಯೋಪಾಧ್ಯಾಯರು/ಟಿಐಸಿಗಳಿಗೆ ತಿಳಿಸಬೇಕು ಎಂದೂ ಸರ್ಕಾರ ಹೇಳಿದೆ. ಈ ಮೂಲಕ, ಭವಿಷ್ಯದಲ್ಲಿ ನಿಯಮವನ್ನು ಉಲ್ಲಂಘಿಸುವವರಿಗೆ ಎಚ್ಚರಿಕೆ ನೀಡಬೇಕು” ಎಂದೂ ಆದೇಶದಲ್ಲಿ ಹೇಳಲಾಗಿದೆ.

“ಯಾವುದೇ ಸಂಸ್ಥೆಯು ಅನುಮತಿ ಪಡೆಯದೆ ಶಾಲೆಯ ಆವರಣದಲ್ಲಿ ಕಾರ್ಯಕ್ರಮ/ರ್‍ಯಾಲಿಗಳನ್ನು ನಡೆಸಲು ಯೋಜಿಸುತ್ತಿದ್ದರೆ, ಆ ಬಗ್ಗೆ HM/TIC ಅವರು ಶಾಲೆಗಳ ಇನ್ಸ್ಪೆಕ್ಟರ್/ಜಿಲ್ಲಾ ಶಿಕ್ಷಣಾಧಿಕಾರಿಗಳಿಗೆ ತಿಳಿಸಬೇಕು. ಅಂತಹ ಮಾಹಿತಿಯನ್ನು ಸ್ವೀಕರಿಸಿದ ನಂತರ, ಆ ಬಗ್ಗೆ ಶಿಕ್ಷಣಾಧಿಕಾರಿಗಳು ಸ್ಥಳೀಯ ಆಡಳಿತ ಮತ್ತು ಪೊಲೀಸ್ ಅಧಿಕಾರಿಗಳೊಂದಿಗೆ ತಕ್ಷಣವೇ ಕ್ರಮಕೈಗೊಳ್ಳಬೇಕು” ಎಂದು ಸರ್ಕಾರ ಹೇಳಿದೆ.

ದುರುದ್ದೇಶವೂ ಇರುವಂತಿದೆ: ಶಿವಸುಂದರ್‌

“ಬಿಜೆಪಿ ಸರ್ಕಾರ ಈ ಆದೇಶವನ್ನು ಸ್ವಾರ್ಥ ಹಿತಾಸಕ್ತಿಯಿಂದಲೂ ಮಾಡಿದಂತಿದೆ. ಯಾವುದೇ ರಾಜಕೀಯ ಪಕ್ಷಗಳಿಗೆ ಜನರನ್ನು ತಲುಪಲು, ಜನರನ್ನು ಸೇರಿಸಿ ಕಾರ್ಯಕ್ರಮಗಳನ್ನು ನಡೆಸಲು ಸುಲಭಕ್ಕೆ ಸಿಗುವ ಸ್ಥಳ ಎಂದರೆ ಶಾಲೆಗಳ ಆವರಣಗಳು. ಹೀಗಾಗಿ, ಬಿಜೆಪಿಗೆ ಈ ಆವರಣಗಳ ಹೊರತಾಗಿಯೂ ಜನರನ್ನು ತಲುಪಲು ವಾಟ್ಸಾಪ್, ಖಾಸಗೀ ಮೈದಾನಗಳು ಸೇರಿದಂತೆ ವಿವಿಧ ರೀತಿಯ ದಾರಿಗಳನ್ನು ಹುಡುಕಿಕೊಂಡಿದೆ” ಎಂದು ಸಾಮಾಜಿಕ ಕಾರ್ಯಕರ್ತ ಶಿವಸುಂದರ್ ಹೇಳಿದ್ದಾರೆ.

“ಶಾಲೆಗಳಲ್ಲಿ ಮಕ್ಕಳು ಆಗತಾನೇ ವಿಚಾರಗಳನ್ನು ಮೈಗೂಡಿಸಿಕೊಳ್ಳಲು ಆರಂಭಿಸಿರುತ್ತಾರೆ. ಬಿಜೆಪಿಯು ಶಿಕ್ಷಕರ ಮೂಲಕ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ತನ್ನ ಧೋರಣೆ, ಮತಾಂಧತೆಯ ವಾದವನ್ನು ತುಂಬುತ್ತಿದೆ. ಆದರೆ, ಬೇರೆ ಪಕ್ಷಗಳು ಈಗಲೂ ಸಾರ್ವಜನಿಕ ಮೈದಾನಗಳ ಮೇಲೆ ಅವಲಂಬಿತವಾಗಿವೆ. ಜನರನ್ನು ಹಾಗೂ ವಿದ್ಯಾರ್ಥಿಗಳನ್ನು ತಲುಪಲು ಬೇರಾವುದೇ ಮಾರ್ಗಗಳಿಲ್ಲ. ಅಂತಹ ಪಕ್ಷಗಳು ಜನರನ್ನು ತಲುಪದಂತೆ ತಡೆಯುವ ಹುನ್ನಾರದಿಂದ ಬಿಜೆಪಿ ಸರ್ಕಾರ ಈ ಆದೇಶವನ್ನು ಹೊರಡಿಸಿರುವಂತಿದೆ. ಶಾಲಾ ಆವರಣಗಳನ್ನು ರಾಜಕೀಯ ಕಾರ್ಯಕ್ರಮಕ್ಕಾಗಿ ಬಳಸಿಕೊಳ್ಳದಂತೆ ತಡೆಯುವುದು ಸರಿ, ಆದರೆ, ಅದಕ್ಕೆ ಪರ್ಯಾಯವಾಗಿ ಸುಲಭಕ್ಕೆ ಸಿಗುವಂತಹ ವ್ಯವಸ್ಥೆಯನ್ನು ಸರ್ಕಾರ ಮಾಡಬೇಕು. ಇಲ್ಲವಾದರೆ ಇದು ಮತ್ತಷ್ಟು ಆಕ್ಷೇಪಾರ್ಹವಾಗುತ್ತದೆ” ಎನ್ನುತ್ತಾರೆ ಶಿವಸುಂದರ್‌.


ಇದನ್ನೂ ಓದಿರಿ: ರಾಜಕೀಯದಲ್ಲಿ ಕುತೂಹಲ ಮೂಡಿಸಿದ ಪ್ರಶಾಂತ್ ಕಿಶೋರ್- ನಿತೀಶ್ ಕುಮಾರ್ ಭೇಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...