Homeಮುಖಪುಟತ್ರಿಪುರದಲ್ಲಿ ನಟಿ, ಟಿಎಂಸಿ ನಾಯಕಿ ಸಯೋನಿ ಘೋಷ್ ಮೇಲೆ ಹಲ್ಲೆ, ಬಂಧನ - ಪ್ರತಿಭಟನೆಗೆ ಸಜ್ಜು

ತ್ರಿಪುರದಲ್ಲಿ ನಟಿ, ಟಿಎಂಸಿ ನಾಯಕಿ ಸಯೋನಿ ಘೋಷ್ ಮೇಲೆ ಹಲ್ಲೆ, ಬಂಧನ – ಪ್ರತಿಭಟನೆಗೆ ಸಜ್ಜು

- Advertisement -
- Advertisement -

ಬಿಜೆಪಿ ಆಡಳಿತದ ತ್ರಿಪುರವು ಗೂಂಡಾರಾಜ್ ಆಗಿ ಬದಲಾಗಿದೆ ಎಂದು ಟಿಎಂಸಿ ಪಕ್ಷ ಆರೋಪಿಸಿದೆ. ನಟಿ, ಟಿಎಂಸಿ ನಾಯಕಿ ಸಯೋನಿ ಘೋಷ್‌ರವರನ್ನು ಬಂಧಿಸಿರುವ ತ್ರಿಪುರ ಪೊಲೀಸರ ಕ್ರಮ ಖಂಡಿಸಿ ಇಂದು ದೆಹಲಿಯಲ್ಲಿ ಟಿಎಂಸಿ ನಾಯಕರು ಪ್ರತಿಭಟನೆ ನಡೆಸಲು ಸಿದ್ದತೆ ನಡೆಸಿದ್ದಾರೆ. ಇದೇ ದಿನ ಬಿಜೆಪಿ ಎದುರಿಸುವುದರ ಕುರಿತು ನವದೆಹಲಿಯಲ್ಲಿ ಟಿಎಂಸಿ ಮುಖ್ಯಸ್ಥೆ ಮತ್ತು ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ವಿರೋಧ ಪಕ್ಷಗಳ ಜೊತೆ ಸಭೆ ನಡೆಸಲಿದ್ದು, ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿಯವರನ್ನು ಭೇಟಿಯಾಗಲಿದ್ದಾರೆ.

ತೃಣಮೂಲ ಕಾಂಗ್ರೆಸ್‌ನ ಪಶ್ಚಿಮ ಬಂಗಾಳದ ಯುವ ಘಟಕದ ಅಧ್ಯಕ್ಷೆಯಾದ ಸಯೋನಿ ಘೋಷ್ ಸೇರಿದಂತೆ ಹಲವರು ಮೇಲೆ ಅಗರ್ತಲದಲ್ಲಿ ಬಿಜೆಪಿ ಗೂಂಡಾಗಳು ಹಲ್ಲೆ ನಡೆಸಿದ್ದಾರೆ ಎಂದು ಟಿಎಂಸಿ ಆರೋಪಿಸಿದೆ. ಅಲ್ಲದೆ ಅವರೊಂದಿಗೆ ಟಿಎಂಸಿ ಸಂಸದೆಯಾದ ಸುಸ್ಮಿತ್ ದೇವ್, ಕುನಾಲ್ ಘೋಷ್, ಸುಬಾಲ್ ಬೌಮಿಕ್ ರವರನ್ನು ತ್ರಿಪುರ ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಠಾಣೆಯಲ್ಲಿಯೇ ಹಲ್ಲೆ ನಡೆದಿದೆ ಎಂದು ಟಿಎಂಸಿ ಆರೋಪಿಸಿದ್ದು, ಆರು ಜನ ಗಾಯಗೊಂಡಿದ್ದಾರೆ ಎಂದಿದೆ.

ವಿಷಯ ತಿಳಿಯುತ್ತಿದ್ದಂತೆ ಭಾನುವಾರ ರಾತ್ರಿಯೇ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಮತ್ತು ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿಯವರು ತ್ರಿಪುರಾಗೆ ತೆರಳಿದ್ದಾರೆ. ಪಕ್ಷದ 15ಕ್ಕೂ ಹೆಚ್ಚು ಸಂಸದರು ನವದೆಹಲಿ ತಲುಪಿದ್ದು, ಗೃಹ ಸಚಿವ ಅಮಿತ್ ಶಾ ಜೊತೆ ಚರ್ಚಿಸಲು ಸಮಯ ಕೋರಿದ್ದಾರೆ. ಅಲ್ಲದೇ ಇಂದು ಸೋಮವಾರ ಧರಣಿ ನಡೆಸಲು ನಿರ್ಧರಿಸಿದ್ದಾರೆ.

ಅಲ್ಲದೆ ಇಂದು ಮಮತಾ ಬ್ಯಾನರ್ಜಿ ಸಹ ದೆಹಲಿಯಲ್ಲಿರಲಿದ್ದು ಈ ವಿಷಯದ ಕುರಿತು ವಿರೋಧ ಪಕ್ಷಗಳೊಂದಿಗೆ ಚರ್ಚಿಸಲಿದ್ದಾರೆ. ಮುಖ್ಯವಾಗಿ ಬಿಜೆಪಿ ಹಿಂಸಾಚಾರಗಳ ಮತ್ತು ಬಿಜೆಪಿಯನ್ನು 2024ರ ಚುನಾವಣೆಯಲ್ಲಿ ಎದುರಿಸುವುದು ಹೇಗೆ ಎಂಬುದರ ಕುರಿತು ಚರ್ಚೆಗಳು ನಡೆಯಲಿವೆ ಎಂದು ವರದಿಯಾಗಿದೆ.

ಟಿಎಂಸಿಯ ಈ ಆರೋಪಗಳನ್ನು ಬಿಜೆಪಿ ಅಲ್ಲಗೆಳೆದಿದೆ. ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೆಬ್ ಭಾಗವಹಿಸಿದ್ದ ಸಾರ್ವಜನಿಕ ಸಭೆಯನ್ನು ಸಯೋನಿ ಘೋಷ್ ಸೇರಿ ಇತರರು ಅಡ್ಡಿಪಡಿಸಿದರು. ವೇದಿಕೆಗೆ ಕಲ್ಲು ತೂರಿದರು ಎಂದು ಆರೋಪಿಸಿದೆ.

ಗಲಭೆಗೆ ಸಂಬಂಧಿಸಿದಂತೆ ಸಯೋನಿ ಘೋಷ್ ಸೇರಿದಂತೆ ಟಿಎಂಸಿಯ ಇತರರನ್ನು ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದ ವೇಳೆ ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿ ಹಲ್ಲೆ ಮಾಡಿದರು. ಆದರೆ ಯಾರಿಗು ಗಾಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಆನಂತರ ಸಯೋನಿ ಘೋಷ್‌ರವರನ್ನು ಪೊಲೀಸರು ಅಧಿಕೃತವಾಗಿ ಬಂಧಿಸಿದ್ದಾರೆ. ಅವರ ಮೆಲೆ ಕೊಲೆಯತ್ನ ಮತ್ತು ಗಲಭೆ ಹ ಹರಡುವ ಪ್ರಕರಣಗಳನ್ನು ದಾಖಲಿಸಿದ್ದು ಜಾಮೀನು ರಹಿತ ಪ್ರಕರಣಗಳನ್ನು ಸೇರಿಸಿದ್ದಾರೆ. ಆದರೆ ಅವರನ್ನು ಕೋರ್ಟ್‌ಗೆ ಹಾಜರುಪಡಿಸಿಲ್ಲ ಎಂದು ಟಿಎಂಸಿ ಆರೋಪಿಸಿದೆ.

ಪಶ್ಚಿಮ ಬಂಗಾಳದಲ್ಲಿ ಭರ್ಜರಿ ಜಯ ಸಾಧಿಸಿರುವ ಟಿಎಂಸಿಯು ಇತರ ರಾಜ್ಯಗಳತ್ತ ದೃಷ್ಟಿ ಹಾಯಿಸಿದೆ. 2023ರಲ್ಲಿ ತ್ರಿಪುರದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಅಲ್ಲಿ ತನ್ನ ಪ್ರಭಾವ ಬೀರಲು ಯತ್ನಿಸುತ್ತಿದೆ. ಹಾಗಾಗಿ ಬಿಜೆಪಿ ಮತ್ತು ಟಿಎಂಸಿ ನಡುವೆ ಜಿದ್ದಾಜಿದ್ದಿ ಆರಂಭವಾಗಿದೆ.


ಇದನ್ನೂ ಓದಿ: ಸಂಸತ್ತಿನಲ್ಲಿ ಕಾಯ್ದೆ ರದ್ದಾದ ನಂತರವೇ ಮುಷ್ಕರ ವಾಪಸ್: ನಾಳೆ ಲಕ್ನೋದಲ್ಲಿ ಮಹಾಪಂಚಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. TMC ಬಂಗಾಳ ದಲ್ಲಿ ಮಾಡುತ್ತಿರುವ ದ್ವೇಷ ರಾಜಕಾರಣಕ್ಕೆ ಸರಿಯಾಗಿ ತಿರುಗೇಟು ಕೊಡುತ್ತಿರುವುದು ತ್ರಿಪುರಾ ದ ಬಿಜೆಪಿ ಸರ್ಕಾರ ಮಾತ್ರ.

    ಬಿಜೆಪಿ ನಾಯಕರನ್ನು ಸಂಬಂಧವೇ ಇಲ್ಲದ ಯಾವ ಯಾವುದೋ ಕೇಸ್ ಗಳಲ್ಲಿ ಸಿಕ್ಕಿಸಿ ಅವರನ್ನು ಅರೆಸ್ಟ್ ಮಾಡುತ್ತಿರುವುದು ಎಲ್ಲರಿಗೂ ತಿಳಿದ ವಿಷಯವೇ. ಈ ಬಗ್ಗೆ ಕಲ್ಕತ್ತ ಹೈ ಕೋರ್ಟ್ ಟಿ ಎಂ ಸಿ ಸರ್ಕಾರಕ್ಕೆ ಛೀ ಮಾರಿ ಹಾಕಿದೆ.

    ಆದರೆ ಬಂಗಾಳದ ಟಿ ಎಂ ಸಿ ಸರ್ಕಾರಕ್ಕೆ ಆ ಛೀ ಮಾರಿ ಬಗ್ಗೆ ಯಾವುದೇ ಗೌರವ ಇಲ್ಲ.

    ಏಟಿಗೆ ತಿರುಗೇಟು ಕೊಡದಿದ್ದರೆ ಸರ್ಕಾರದ ಬೆಂಬಲ ದಿಂದ ರೌಡಿಗಳೆಲ್ಲ ನಾಯಕರಾಗಿ ವಿಜೃಂಭಿಸುವದು ಭಾರತದಲ್ಲಿ ಅತ್ಯಂತ ಸಹಜ.

    ಈಗ ತ್ರಿಪುರಾ ದ ಬಿಜೆಪಿ ಸರ್ಕಾರ ಟಿ ಎಂ ಸಿ ಪಕ್ಷಕ್ಕೆ ಅದರದೇ ರುಚಿ ತೋರಿಸುತ್ತಿದೆ.

    ಟಿ ಎಂ ಸಿ ನಾಯಕರ ಭೇಟಿಗೆ ಅವಕಾಶ ನೀಡದೇ ಅಲ್ಲಿಗೆ ಬರುವ ಟಿ ಎಂ ಸಿ ನಾಯಕರಿಗೆ ಅರೆಸ್ಟ್ ಮಾಡುತ್ತಿದೆ! ಉದಾಹರಣೆ ಗೆ ಟಿ ಎಂ ಸಿ ಯುವ ನಾಯಕಿ ಸಾಯನಿ ಘೋಷ್ ಅವರನ್ನು ಕೊಲೆ ಕೇಸ್ ನಲ್ಲಿ ಅರೆಸ್ಟ್ ಮಾಡಿದೆ.

    ಟಿಟ್ ಫಾರ್ ಟ್ಯಾಟ್ ಆದಲ್ಲಿ ಮಾತ್ರ ಕಮ್ಯುನಿಸ್ಟರು ಮತ್ತು ಅವರ ಹಿಂಬಾಲಕರಾದ ಟಿ ಎಂ ಸಿ ಗೆ ತಾವು ದೈತ್ಯರು ತಮ್ಮನ್ನು ಯಾರೂ ಏನೂ ಮಾಡಲು ಸಾಧ್ಯವಿಲ್ಲ ಎಂಬ ಭ್ರಮೆ ಅಳಿಯಲು ಸಾಧ್ಯ. ಟಿ ಎಂ ಸಿ ಯ ಗೂಂಡಾ ಗಳನ್ನು ಭೂಮಿಗೆ ತರಲು ಇದು ಅತ್ಯಂತ ಅವಶ್ಯಕ.

    ವೆಲ್ ಡನ್ ತ್ರಿಪುರಾ ಗವರ್ನಮೆಂಟ್.

LEAVE A REPLY

Please enter your comment!
Please enter your name here

- Advertisment -

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...