Homeಮುಖಪುಟತ್ರಿಪುರದಲ್ಲಿ ನಟಿ, ಟಿಎಂಸಿ ನಾಯಕಿ ಸಯೋನಿ ಘೋಷ್ ಮೇಲೆ ಹಲ್ಲೆ, ಬಂಧನ - ಪ್ರತಿಭಟನೆಗೆ ಸಜ್ಜು

ತ್ರಿಪುರದಲ್ಲಿ ನಟಿ, ಟಿಎಂಸಿ ನಾಯಕಿ ಸಯೋನಿ ಘೋಷ್ ಮೇಲೆ ಹಲ್ಲೆ, ಬಂಧನ – ಪ್ರತಿಭಟನೆಗೆ ಸಜ್ಜು

- Advertisement -
- Advertisement -

ಬಿಜೆಪಿ ಆಡಳಿತದ ತ್ರಿಪುರವು ಗೂಂಡಾರಾಜ್ ಆಗಿ ಬದಲಾಗಿದೆ ಎಂದು ಟಿಎಂಸಿ ಪಕ್ಷ ಆರೋಪಿಸಿದೆ. ನಟಿ, ಟಿಎಂಸಿ ನಾಯಕಿ ಸಯೋನಿ ಘೋಷ್‌ರವರನ್ನು ಬಂಧಿಸಿರುವ ತ್ರಿಪುರ ಪೊಲೀಸರ ಕ್ರಮ ಖಂಡಿಸಿ ಇಂದು ದೆಹಲಿಯಲ್ಲಿ ಟಿಎಂಸಿ ನಾಯಕರು ಪ್ರತಿಭಟನೆ ನಡೆಸಲು ಸಿದ್ದತೆ ನಡೆಸಿದ್ದಾರೆ. ಇದೇ ದಿನ ಬಿಜೆಪಿ ಎದುರಿಸುವುದರ ಕುರಿತು ನವದೆಹಲಿಯಲ್ಲಿ ಟಿಎಂಸಿ ಮುಖ್ಯಸ್ಥೆ ಮತ್ತು ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ವಿರೋಧ ಪಕ್ಷಗಳ ಜೊತೆ ಸಭೆ ನಡೆಸಲಿದ್ದು, ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿಯವರನ್ನು ಭೇಟಿಯಾಗಲಿದ್ದಾರೆ.

ತೃಣಮೂಲ ಕಾಂಗ್ರೆಸ್‌ನ ಪಶ್ಚಿಮ ಬಂಗಾಳದ ಯುವ ಘಟಕದ ಅಧ್ಯಕ್ಷೆಯಾದ ಸಯೋನಿ ಘೋಷ್ ಸೇರಿದಂತೆ ಹಲವರು ಮೇಲೆ ಅಗರ್ತಲದಲ್ಲಿ ಬಿಜೆಪಿ ಗೂಂಡಾಗಳು ಹಲ್ಲೆ ನಡೆಸಿದ್ದಾರೆ ಎಂದು ಟಿಎಂಸಿ ಆರೋಪಿಸಿದೆ. ಅಲ್ಲದೆ ಅವರೊಂದಿಗೆ ಟಿಎಂಸಿ ಸಂಸದೆಯಾದ ಸುಸ್ಮಿತ್ ದೇವ್, ಕುನಾಲ್ ಘೋಷ್, ಸುಬಾಲ್ ಬೌಮಿಕ್ ರವರನ್ನು ತ್ರಿಪುರ ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಠಾಣೆಯಲ್ಲಿಯೇ ಹಲ್ಲೆ ನಡೆದಿದೆ ಎಂದು ಟಿಎಂಸಿ ಆರೋಪಿಸಿದ್ದು, ಆರು ಜನ ಗಾಯಗೊಂಡಿದ್ದಾರೆ ಎಂದಿದೆ.

ವಿಷಯ ತಿಳಿಯುತ್ತಿದ್ದಂತೆ ಭಾನುವಾರ ರಾತ್ರಿಯೇ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಮತ್ತು ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿಯವರು ತ್ರಿಪುರಾಗೆ ತೆರಳಿದ್ದಾರೆ. ಪಕ್ಷದ 15ಕ್ಕೂ ಹೆಚ್ಚು ಸಂಸದರು ನವದೆಹಲಿ ತಲುಪಿದ್ದು, ಗೃಹ ಸಚಿವ ಅಮಿತ್ ಶಾ ಜೊತೆ ಚರ್ಚಿಸಲು ಸಮಯ ಕೋರಿದ್ದಾರೆ. ಅಲ್ಲದೇ ಇಂದು ಸೋಮವಾರ ಧರಣಿ ನಡೆಸಲು ನಿರ್ಧರಿಸಿದ್ದಾರೆ.

ಅಲ್ಲದೆ ಇಂದು ಮಮತಾ ಬ್ಯಾನರ್ಜಿ ಸಹ ದೆಹಲಿಯಲ್ಲಿರಲಿದ್ದು ಈ ವಿಷಯದ ಕುರಿತು ವಿರೋಧ ಪಕ್ಷಗಳೊಂದಿಗೆ ಚರ್ಚಿಸಲಿದ್ದಾರೆ. ಮುಖ್ಯವಾಗಿ ಬಿಜೆಪಿ ಹಿಂಸಾಚಾರಗಳ ಮತ್ತು ಬಿಜೆಪಿಯನ್ನು 2024ರ ಚುನಾವಣೆಯಲ್ಲಿ ಎದುರಿಸುವುದು ಹೇಗೆ ಎಂಬುದರ ಕುರಿತು ಚರ್ಚೆಗಳು ನಡೆಯಲಿವೆ ಎಂದು ವರದಿಯಾಗಿದೆ.

ಟಿಎಂಸಿಯ ಈ ಆರೋಪಗಳನ್ನು ಬಿಜೆಪಿ ಅಲ್ಲಗೆಳೆದಿದೆ. ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೆಬ್ ಭಾಗವಹಿಸಿದ್ದ ಸಾರ್ವಜನಿಕ ಸಭೆಯನ್ನು ಸಯೋನಿ ಘೋಷ್ ಸೇರಿ ಇತರರು ಅಡ್ಡಿಪಡಿಸಿದರು. ವೇದಿಕೆಗೆ ಕಲ್ಲು ತೂರಿದರು ಎಂದು ಆರೋಪಿಸಿದೆ.

ಗಲಭೆಗೆ ಸಂಬಂಧಿಸಿದಂತೆ ಸಯೋನಿ ಘೋಷ್ ಸೇರಿದಂತೆ ಟಿಎಂಸಿಯ ಇತರರನ್ನು ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದ ವೇಳೆ ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿ ಹಲ್ಲೆ ಮಾಡಿದರು. ಆದರೆ ಯಾರಿಗು ಗಾಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಆನಂತರ ಸಯೋನಿ ಘೋಷ್‌ರವರನ್ನು ಪೊಲೀಸರು ಅಧಿಕೃತವಾಗಿ ಬಂಧಿಸಿದ್ದಾರೆ. ಅವರ ಮೆಲೆ ಕೊಲೆಯತ್ನ ಮತ್ತು ಗಲಭೆ ಹ ಹರಡುವ ಪ್ರಕರಣಗಳನ್ನು ದಾಖಲಿಸಿದ್ದು ಜಾಮೀನು ರಹಿತ ಪ್ರಕರಣಗಳನ್ನು ಸೇರಿಸಿದ್ದಾರೆ. ಆದರೆ ಅವರನ್ನು ಕೋರ್ಟ್‌ಗೆ ಹಾಜರುಪಡಿಸಿಲ್ಲ ಎಂದು ಟಿಎಂಸಿ ಆರೋಪಿಸಿದೆ.

ಪಶ್ಚಿಮ ಬಂಗಾಳದಲ್ಲಿ ಭರ್ಜರಿ ಜಯ ಸಾಧಿಸಿರುವ ಟಿಎಂಸಿಯು ಇತರ ರಾಜ್ಯಗಳತ್ತ ದೃಷ್ಟಿ ಹಾಯಿಸಿದೆ. 2023ರಲ್ಲಿ ತ್ರಿಪುರದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಅಲ್ಲಿ ತನ್ನ ಪ್ರಭಾವ ಬೀರಲು ಯತ್ನಿಸುತ್ತಿದೆ. ಹಾಗಾಗಿ ಬಿಜೆಪಿ ಮತ್ತು ಟಿಎಂಸಿ ನಡುವೆ ಜಿದ್ದಾಜಿದ್ದಿ ಆರಂಭವಾಗಿದೆ.


ಇದನ್ನೂ ಓದಿ: ಸಂಸತ್ತಿನಲ್ಲಿ ಕಾಯ್ದೆ ರದ್ದಾದ ನಂತರವೇ ಮುಷ್ಕರ ವಾಪಸ್: ನಾಳೆ ಲಕ್ನೋದಲ್ಲಿ ಮಹಾಪಂಚಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. TMC ಬಂಗಾಳ ದಲ್ಲಿ ಮಾಡುತ್ತಿರುವ ದ್ವೇಷ ರಾಜಕಾರಣಕ್ಕೆ ಸರಿಯಾಗಿ ತಿರುಗೇಟು ಕೊಡುತ್ತಿರುವುದು ತ್ರಿಪುರಾ ದ ಬಿಜೆಪಿ ಸರ್ಕಾರ ಮಾತ್ರ.

    ಬಿಜೆಪಿ ನಾಯಕರನ್ನು ಸಂಬಂಧವೇ ಇಲ್ಲದ ಯಾವ ಯಾವುದೋ ಕೇಸ್ ಗಳಲ್ಲಿ ಸಿಕ್ಕಿಸಿ ಅವರನ್ನು ಅರೆಸ್ಟ್ ಮಾಡುತ್ತಿರುವುದು ಎಲ್ಲರಿಗೂ ತಿಳಿದ ವಿಷಯವೇ. ಈ ಬಗ್ಗೆ ಕಲ್ಕತ್ತ ಹೈ ಕೋರ್ಟ್ ಟಿ ಎಂ ಸಿ ಸರ್ಕಾರಕ್ಕೆ ಛೀ ಮಾರಿ ಹಾಕಿದೆ.

    ಆದರೆ ಬಂಗಾಳದ ಟಿ ಎಂ ಸಿ ಸರ್ಕಾರಕ್ಕೆ ಆ ಛೀ ಮಾರಿ ಬಗ್ಗೆ ಯಾವುದೇ ಗೌರವ ಇಲ್ಲ.

    ಏಟಿಗೆ ತಿರುಗೇಟು ಕೊಡದಿದ್ದರೆ ಸರ್ಕಾರದ ಬೆಂಬಲ ದಿಂದ ರೌಡಿಗಳೆಲ್ಲ ನಾಯಕರಾಗಿ ವಿಜೃಂಭಿಸುವದು ಭಾರತದಲ್ಲಿ ಅತ್ಯಂತ ಸಹಜ.

    ಈಗ ತ್ರಿಪುರಾ ದ ಬಿಜೆಪಿ ಸರ್ಕಾರ ಟಿ ಎಂ ಸಿ ಪಕ್ಷಕ್ಕೆ ಅದರದೇ ರುಚಿ ತೋರಿಸುತ್ತಿದೆ.

    ಟಿ ಎಂ ಸಿ ನಾಯಕರ ಭೇಟಿಗೆ ಅವಕಾಶ ನೀಡದೇ ಅಲ್ಲಿಗೆ ಬರುವ ಟಿ ಎಂ ಸಿ ನಾಯಕರಿಗೆ ಅರೆಸ್ಟ್ ಮಾಡುತ್ತಿದೆ! ಉದಾಹರಣೆ ಗೆ ಟಿ ಎಂ ಸಿ ಯುವ ನಾಯಕಿ ಸಾಯನಿ ಘೋಷ್ ಅವರನ್ನು ಕೊಲೆ ಕೇಸ್ ನಲ್ಲಿ ಅರೆಸ್ಟ್ ಮಾಡಿದೆ.

    ಟಿಟ್ ಫಾರ್ ಟ್ಯಾಟ್ ಆದಲ್ಲಿ ಮಾತ್ರ ಕಮ್ಯುನಿಸ್ಟರು ಮತ್ತು ಅವರ ಹಿಂಬಾಲಕರಾದ ಟಿ ಎಂ ಸಿ ಗೆ ತಾವು ದೈತ್ಯರು ತಮ್ಮನ್ನು ಯಾರೂ ಏನೂ ಮಾಡಲು ಸಾಧ್ಯವಿಲ್ಲ ಎಂಬ ಭ್ರಮೆ ಅಳಿಯಲು ಸಾಧ್ಯ. ಟಿ ಎಂ ಸಿ ಯ ಗೂಂಡಾ ಗಳನ್ನು ಭೂಮಿಗೆ ತರಲು ಇದು ಅತ್ಯಂತ ಅವಶ್ಯಕ.

    ವೆಲ್ ಡನ್ ತ್ರಿಪುರಾ ಗವರ್ನಮೆಂಟ್.

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...