Homeಮುಖಪುಟತ್ರಿಪುರದಲ್ಲಿ ನಟಿ, ಟಿಎಂಸಿ ನಾಯಕಿ ಸಯೋನಿ ಘೋಷ್ ಮೇಲೆ ಹಲ್ಲೆ, ಬಂಧನ - ಪ್ರತಿಭಟನೆಗೆ ಸಜ್ಜು

ತ್ರಿಪುರದಲ್ಲಿ ನಟಿ, ಟಿಎಂಸಿ ನಾಯಕಿ ಸಯೋನಿ ಘೋಷ್ ಮೇಲೆ ಹಲ್ಲೆ, ಬಂಧನ – ಪ್ರತಿಭಟನೆಗೆ ಸಜ್ಜು

- Advertisement -
- Advertisement -

ಬಿಜೆಪಿ ಆಡಳಿತದ ತ್ರಿಪುರವು ಗೂಂಡಾರಾಜ್ ಆಗಿ ಬದಲಾಗಿದೆ ಎಂದು ಟಿಎಂಸಿ ಪಕ್ಷ ಆರೋಪಿಸಿದೆ. ನಟಿ, ಟಿಎಂಸಿ ನಾಯಕಿ ಸಯೋನಿ ಘೋಷ್‌ರವರನ್ನು ಬಂಧಿಸಿರುವ ತ್ರಿಪುರ ಪೊಲೀಸರ ಕ್ರಮ ಖಂಡಿಸಿ ಇಂದು ದೆಹಲಿಯಲ್ಲಿ ಟಿಎಂಸಿ ನಾಯಕರು ಪ್ರತಿಭಟನೆ ನಡೆಸಲು ಸಿದ್ದತೆ ನಡೆಸಿದ್ದಾರೆ. ಇದೇ ದಿನ ಬಿಜೆಪಿ ಎದುರಿಸುವುದರ ಕುರಿತು ನವದೆಹಲಿಯಲ್ಲಿ ಟಿಎಂಸಿ ಮುಖ್ಯಸ್ಥೆ ಮತ್ತು ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ವಿರೋಧ ಪಕ್ಷಗಳ ಜೊತೆ ಸಭೆ ನಡೆಸಲಿದ್ದು, ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿಯವರನ್ನು ಭೇಟಿಯಾಗಲಿದ್ದಾರೆ.

ತೃಣಮೂಲ ಕಾಂಗ್ರೆಸ್‌ನ ಪಶ್ಚಿಮ ಬಂಗಾಳದ ಯುವ ಘಟಕದ ಅಧ್ಯಕ್ಷೆಯಾದ ಸಯೋನಿ ಘೋಷ್ ಸೇರಿದಂತೆ ಹಲವರು ಮೇಲೆ ಅಗರ್ತಲದಲ್ಲಿ ಬಿಜೆಪಿ ಗೂಂಡಾಗಳು ಹಲ್ಲೆ ನಡೆಸಿದ್ದಾರೆ ಎಂದು ಟಿಎಂಸಿ ಆರೋಪಿಸಿದೆ. ಅಲ್ಲದೆ ಅವರೊಂದಿಗೆ ಟಿಎಂಸಿ ಸಂಸದೆಯಾದ ಸುಸ್ಮಿತ್ ದೇವ್, ಕುನಾಲ್ ಘೋಷ್, ಸುಬಾಲ್ ಬೌಮಿಕ್ ರವರನ್ನು ತ್ರಿಪುರ ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಠಾಣೆಯಲ್ಲಿಯೇ ಹಲ್ಲೆ ನಡೆದಿದೆ ಎಂದು ಟಿಎಂಸಿ ಆರೋಪಿಸಿದ್ದು, ಆರು ಜನ ಗಾಯಗೊಂಡಿದ್ದಾರೆ ಎಂದಿದೆ.

ವಿಷಯ ತಿಳಿಯುತ್ತಿದ್ದಂತೆ ಭಾನುವಾರ ರಾತ್ರಿಯೇ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಮತ್ತು ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿಯವರು ತ್ರಿಪುರಾಗೆ ತೆರಳಿದ್ದಾರೆ. ಪಕ್ಷದ 15ಕ್ಕೂ ಹೆಚ್ಚು ಸಂಸದರು ನವದೆಹಲಿ ತಲುಪಿದ್ದು, ಗೃಹ ಸಚಿವ ಅಮಿತ್ ಶಾ ಜೊತೆ ಚರ್ಚಿಸಲು ಸಮಯ ಕೋರಿದ್ದಾರೆ. ಅಲ್ಲದೇ ಇಂದು ಸೋಮವಾರ ಧರಣಿ ನಡೆಸಲು ನಿರ್ಧರಿಸಿದ್ದಾರೆ.

ಅಲ್ಲದೆ ಇಂದು ಮಮತಾ ಬ್ಯಾನರ್ಜಿ ಸಹ ದೆಹಲಿಯಲ್ಲಿರಲಿದ್ದು ಈ ವಿಷಯದ ಕುರಿತು ವಿರೋಧ ಪಕ್ಷಗಳೊಂದಿಗೆ ಚರ್ಚಿಸಲಿದ್ದಾರೆ. ಮುಖ್ಯವಾಗಿ ಬಿಜೆಪಿ ಹಿಂಸಾಚಾರಗಳ ಮತ್ತು ಬಿಜೆಪಿಯನ್ನು 2024ರ ಚುನಾವಣೆಯಲ್ಲಿ ಎದುರಿಸುವುದು ಹೇಗೆ ಎಂಬುದರ ಕುರಿತು ಚರ್ಚೆಗಳು ನಡೆಯಲಿವೆ ಎಂದು ವರದಿಯಾಗಿದೆ.

ಟಿಎಂಸಿಯ ಈ ಆರೋಪಗಳನ್ನು ಬಿಜೆಪಿ ಅಲ್ಲಗೆಳೆದಿದೆ. ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೆಬ್ ಭಾಗವಹಿಸಿದ್ದ ಸಾರ್ವಜನಿಕ ಸಭೆಯನ್ನು ಸಯೋನಿ ಘೋಷ್ ಸೇರಿ ಇತರರು ಅಡ್ಡಿಪಡಿಸಿದರು. ವೇದಿಕೆಗೆ ಕಲ್ಲು ತೂರಿದರು ಎಂದು ಆರೋಪಿಸಿದೆ.

ಗಲಭೆಗೆ ಸಂಬಂಧಿಸಿದಂತೆ ಸಯೋನಿ ಘೋಷ್ ಸೇರಿದಂತೆ ಟಿಎಂಸಿಯ ಇತರರನ್ನು ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದ ವೇಳೆ ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿ ಹಲ್ಲೆ ಮಾಡಿದರು. ಆದರೆ ಯಾರಿಗು ಗಾಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಆನಂತರ ಸಯೋನಿ ಘೋಷ್‌ರವರನ್ನು ಪೊಲೀಸರು ಅಧಿಕೃತವಾಗಿ ಬಂಧಿಸಿದ್ದಾರೆ. ಅವರ ಮೆಲೆ ಕೊಲೆಯತ್ನ ಮತ್ತು ಗಲಭೆ ಹ ಹರಡುವ ಪ್ರಕರಣಗಳನ್ನು ದಾಖಲಿಸಿದ್ದು ಜಾಮೀನು ರಹಿತ ಪ್ರಕರಣಗಳನ್ನು ಸೇರಿಸಿದ್ದಾರೆ. ಆದರೆ ಅವರನ್ನು ಕೋರ್ಟ್‌ಗೆ ಹಾಜರುಪಡಿಸಿಲ್ಲ ಎಂದು ಟಿಎಂಸಿ ಆರೋಪಿಸಿದೆ.

ಪಶ್ಚಿಮ ಬಂಗಾಳದಲ್ಲಿ ಭರ್ಜರಿ ಜಯ ಸಾಧಿಸಿರುವ ಟಿಎಂಸಿಯು ಇತರ ರಾಜ್ಯಗಳತ್ತ ದೃಷ್ಟಿ ಹಾಯಿಸಿದೆ. 2023ರಲ್ಲಿ ತ್ರಿಪುರದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಅಲ್ಲಿ ತನ್ನ ಪ್ರಭಾವ ಬೀರಲು ಯತ್ನಿಸುತ್ತಿದೆ. ಹಾಗಾಗಿ ಬಿಜೆಪಿ ಮತ್ತು ಟಿಎಂಸಿ ನಡುವೆ ಜಿದ್ದಾಜಿದ್ದಿ ಆರಂಭವಾಗಿದೆ.


ಇದನ್ನೂ ಓದಿ: ಸಂಸತ್ತಿನಲ್ಲಿ ಕಾಯ್ದೆ ರದ್ದಾದ ನಂತರವೇ ಮುಷ್ಕರ ವಾಪಸ್: ನಾಳೆ ಲಕ್ನೋದಲ್ಲಿ ಮಹಾಪಂಚಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. TMC ಬಂಗಾಳ ದಲ್ಲಿ ಮಾಡುತ್ತಿರುವ ದ್ವೇಷ ರಾಜಕಾರಣಕ್ಕೆ ಸರಿಯಾಗಿ ತಿರುಗೇಟು ಕೊಡುತ್ತಿರುವುದು ತ್ರಿಪುರಾ ದ ಬಿಜೆಪಿ ಸರ್ಕಾರ ಮಾತ್ರ.

    ಬಿಜೆಪಿ ನಾಯಕರನ್ನು ಸಂಬಂಧವೇ ಇಲ್ಲದ ಯಾವ ಯಾವುದೋ ಕೇಸ್ ಗಳಲ್ಲಿ ಸಿಕ್ಕಿಸಿ ಅವರನ್ನು ಅರೆಸ್ಟ್ ಮಾಡುತ್ತಿರುವುದು ಎಲ್ಲರಿಗೂ ತಿಳಿದ ವಿಷಯವೇ. ಈ ಬಗ್ಗೆ ಕಲ್ಕತ್ತ ಹೈ ಕೋರ್ಟ್ ಟಿ ಎಂ ಸಿ ಸರ್ಕಾರಕ್ಕೆ ಛೀ ಮಾರಿ ಹಾಕಿದೆ.

    ಆದರೆ ಬಂಗಾಳದ ಟಿ ಎಂ ಸಿ ಸರ್ಕಾರಕ್ಕೆ ಆ ಛೀ ಮಾರಿ ಬಗ್ಗೆ ಯಾವುದೇ ಗೌರವ ಇಲ್ಲ.

    ಏಟಿಗೆ ತಿರುಗೇಟು ಕೊಡದಿದ್ದರೆ ಸರ್ಕಾರದ ಬೆಂಬಲ ದಿಂದ ರೌಡಿಗಳೆಲ್ಲ ನಾಯಕರಾಗಿ ವಿಜೃಂಭಿಸುವದು ಭಾರತದಲ್ಲಿ ಅತ್ಯಂತ ಸಹಜ.

    ಈಗ ತ್ರಿಪುರಾ ದ ಬಿಜೆಪಿ ಸರ್ಕಾರ ಟಿ ಎಂ ಸಿ ಪಕ್ಷಕ್ಕೆ ಅದರದೇ ರುಚಿ ತೋರಿಸುತ್ತಿದೆ.

    ಟಿ ಎಂ ಸಿ ನಾಯಕರ ಭೇಟಿಗೆ ಅವಕಾಶ ನೀಡದೇ ಅಲ್ಲಿಗೆ ಬರುವ ಟಿ ಎಂ ಸಿ ನಾಯಕರಿಗೆ ಅರೆಸ್ಟ್ ಮಾಡುತ್ತಿದೆ! ಉದಾಹರಣೆ ಗೆ ಟಿ ಎಂ ಸಿ ಯುವ ನಾಯಕಿ ಸಾಯನಿ ಘೋಷ್ ಅವರನ್ನು ಕೊಲೆ ಕೇಸ್ ನಲ್ಲಿ ಅರೆಸ್ಟ್ ಮಾಡಿದೆ.

    ಟಿಟ್ ಫಾರ್ ಟ್ಯಾಟ್ ಆದಲ್ಲಿ ಮಾತ್ರ ಕಮ್ಯುನಿಸ್ಟರು ಮತ್ತು ಅವರ ಹಿಂಬಾಲಕರಾದ ಟಿ ಎಂ ಸಿ ಗೆ ತಾವು ದೈತ್ಯರು ತಮ್ಮನ್ನು ಯಾರೂ ಏನೂ ಮಾಡಲು ಸಾಧ್ಯವಿಲ್ಲ ಎಂಬ ಭ್ರಮೆ ಅಳಿಯಲು ಸಾಧ್ಯ. ಟಿ ಎಂ ಸಿ ಯ ಗೂಂಡಾ ಗಳನ್ನು ಭೂಮಿಗೆ ತರಲು ಇದು ಅತ್ಯಂತ ಅವಶ್ಯಕ.

    ವೆಲ್ ಡನ್ ತ್ರಿಪುರಾ ಗವರ್ನಮೆಂಟ್.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...