Homeಮುಖಪುಟತ್ರಿಪುರದಲ್ಲಿ ನಟಿ, ಟಿಎಂಸಿ ನಾಯಕಿ ಸಯೋನಿ ಘೋಷ್ ಮೇಲೆ ಹಲ್ಲೆ, ಬಂಧನ - ಪ್ರತಿಭಟನೆಗೆ ಸಜ್ಜು

ತ್ರಿಪುರದಲ್ಲಿ ನಟಿ, ಟಿಎಂಸಿ ನಾಯಕಿ ಸಯೋನಿ ಘೋಷ್ ಮೇಲೆ ಹಲ್ಲೆ, ಬಂಧನ – ಪ್ರತಿಭಟನೆಗೆ ಸಜ್ಜು

- Advertisement -
- Advertisement -

ಬಿಜೆಪಿ ಆಡಳಿತದ ತ್ರಿಪುರವು ಗೂಂಡಾರಾಜ್ ಆಗಿ ಬದಲಾಗಿದೆ ಎಂದು ಟಿಎಂಸಿ ಪಕ್ಷ ಆರೋಪಿಸಿದೆ. ನಟಿ, ಟಿಎಂಸಿ ನಾಯಕಿ ಸಯೋನಿ ಘೋಷ್‌ರವರನ್ನು ಬಂಧಿಸಿರುವ ತ್ರಿಪುರ ಪೊಲೀಸರ ಕ್ರಮ ಖಂಡಿಸಿ ಇಂದು ದೆಹಲಿಯಲ್ಲಿ ಟಿಎಂಸಿ ನಾಯಕರು ಪ್ರತಿಭಟನೆ ನಡೆಸಲು ಸಿದ್ದತೆ ನಡೆಸಿದ್ದಾರೆ. ಇದೇ ದಿನ ಬಿಜೆಪಿ ಎದುರಿಸುವುದರ ಕುರಿತು ನವದೆಹಲಿಯಲ್ಲಿ ಟಿಎಂಸಿ ಮುಖ್ಯಸ್ಥೆ ಮತ್ತು ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ವಿರೋಧ ಪಕ್ಷಗಳ ಜೊತೆ ಸಭೆ ನಡೆಸಲಿದ್ದು, ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿಯವರನ್ನು ಭೇಟಿಯಾಗಲಿದ್ದಾರೆ.

ತೃಣಮೂಲ ಕಾಂಗ್ರೆಸ್‌ನ ಪಶ್ಚಿಮ ಬಂಗಾಳದ ಯುವ ಘಟಕದ ಅಧ್ಯಕ್ಷೆಯಾದ ಸಯೋನಿ ಘೋಷ್ ಸೇರಿದಂತೆ ಹಲವರು ಮೇಲೆ ಅಗರ್ತಲದಲ್ಲಿ ಬಿಜೆಪಿ ಗೂಂಡಾಗಳು ಹಲ್ಲೆ ನಡೆಸಿದ್ದಾರೆ ಎಂದು ಟಿಎಂಸಿ ಆರೋಪಿಸಿದೆ. ಅಲ್ಲದೆ ಅವರೊಂದಿಗೆ ಟಿಎಂಸಿ ಸಂಸದೆಯಾದ ಸುಸ್ಮಿತ್ ದೇವ್, ಕುನಾಲ್ ಘೋಷ್, ಸುಬಾಲ್ ಬೌಮಿಕ್ ರವರನ್ನು ತ್ರಿಪುರ ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಠಾಣೆಯಲ್ಲಿಯೇ ಹಲ್ಲೆ ನಡೆದಿದೆ ಎಂದು ಟಿಎಂಸಿ ಆರೋಪಿಸಿದ್ದು, ಆರು ಜನ ಗಾಯಗೊಂಡಿದ್ದಾರೆ ಎಂದಿದೆ.

ವಿಷಯ ತಿಳಿಯುತ್ತಿದ್ದಂತೆ ಭಾನುವಾರ ರಾತ್ರಿಯೇ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಮತ್ತು ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿಯವರು ತ್ರಿಪುರಾಗೆ ತೆರಳಿದ್ದಾರೆ. ಪಕ್ಷದ 15ಕ್ಕೂ ಹೆಚ್ಚು ಸಂಸದರು ನವದೆಹಲಿ ತಲುಪಿದ್ದು, ಗೃಹ ಸಚಿವ ಅಮಿತ್ ಶಾ ಜೊತೆ ಚರ್ಚಿಸಲು ಸಮಯ ಕೋರಿದ್ದಾರೆ. ಅಲ್ಲದೇ ಇಂದು ಸೋಮವಾರ ಧರಣಿ ನಡೆಸಲು ನಿರ್ಧರಿಸಿದ್ದಾರೆ.

ಅಲ್ಲದೆ ಇಂದು ಮಮತಾ ಬ್ಯಾನರ್ಜಿ ಸಹ ದೆಹಲಿಯಲ್ಲಿರಲಿದ್ದು ಈ ವಿಷಯದ ಕುರಿತು ವಿರೋಧ ಪಕ್ಷಗಳೊಂದಿಗೆ ಚರ್ಚಿಸಲಿದ್ದಾರೆ. ಮುಖ್ಯವಾಗಿ ಬಿಜೆಪಿ ಹಿಂಸಾಚಾರಗಳ ಮತ್ತು ಬಿಜೆಪಿಯನ್ನು 2024ರ ಚುನಾವಣೆಯಲ್ಲಿ ಎದುರಿಸುವುದು ಹೇಗೆ ಎಂಬುದರ ಕುರಿತು ಚರ್ಚೆಗಳು ನಡೆಯಲಿವೆ ಎಂದು ವರದಿಯಾಗಿದೆ.

ಟಿಎಂಸಿಯ ಈ ಆರೋಪಗಳನ್ನು ಬಿಜೆಪಿ ಅಲ್ಲಗೆಳೆದಿದೆ. ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೆಬ್ ಭಾಗವಹಿಸಿದ್ದ ಸಾರ್ವಜನಿಕ ಸಭೆಯನ್ನು ಸಯೋನಿ ಘೋಷ್ ಸೇರಿ ಇತರರು ಅಡ್ಡಿಪಡಿಸಿದರು. ವೇದಿಕೆಗೆ ಕಲ್ಲು ತೂರಿದರು ಎಂದು ಆರೋಪಿಸಿದೆ.

ಗಲಭೆಗೆ ಸಂಬಂಧಿಸಿದಂತೆ ಸಯೋನಿ ಘೋಷ್ ಸೇರಿದಂತೆ ಟಿಎಂಸಿಯ ಇತರರನ್ನು ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದ ವೇಳೆ ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿ ಹಲ್ಲೆ ಮಾಡಿದರು. ಆದರೆ ಯಾರಿಗು ಗಾಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಆನಂತರ ಸಯೋನಿ ಘೋಷ್‌ರವರನ್ನು ಪೊಲೀಸರು ಅಧಿಕೃತವಾಗಿ ಬಂಧಿಸಿದ್ದಾರೆ. ಅವರ ಮೆಲೆ ಕೊಲೆಯತ್ನ ಮತ್ತು ಗಲಭೆ ಹ ಹರಡುವ ಪ್ರಕರಣಗಳನ್ನು ದಾಖಲಿಸಿದ್ದು ಜಾಮೀನು ರಹಿತ ಪ್ರಕರಣಗಳನ್ನು ಸೇರಿಸಿದ್ದಾರೆ. ಆದರೆ ಅವರನ್ನು ಕೋರ್ಟ್‌ಗೆ ಹಾಜರುಪಡಿಸಿಲ್ಲ ಎಂದು ಟಿಎಂಸಿ ಆರೋಪಿಸಿದೆ.

ಪಶ್ಚಿಮ ಬಂಗಾಳದಲ್ಲಿ ಭರ್ಜರಿ ಜಯ ಸಾಧಿಸಿರುವ ಟಿಎಂಸಿಯು ಇತರ ರಾಜ್ಯಗಳತ್ತ ದೃಷ್ಟಿ ಹಾಯಿಸಿದೆ. 2023ರಲ್ಲಿ ತ್ರಿಪುರದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಅಲ್ಲಿ ತನ್ನ ಪ್ರಭಾವ ಬೀರಲು ಯತ್ನಿಸುತ್ತಿದೆ. ಹಾಗಾಗಿ ಬಿಜೆಪಿ ಮತ್ತು ಟಿಎಂಸಿ ನಡುವೆ ಜಿದ್ದಾಜಿದ್ದಿ ಆರಂಭವಾಗಿದೆ.


ಇದನ್ನೂ ಓದಿ: ಸಂಸತ್ತಿನಲ್ಲಿ ಕಾಯ್ದೆ ರದ್ದಾದ ನಂತರವೇ ಮುಷ್ಕರ ವಾಪಸ್: ನಾಳೆ ಲಕ್ನೋದಲ್ಲಿ ಮಹಾಪಂಚಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. TMC ಬಂಗಾಳ ದಲ್ಲಿ ಮಾಡುತ್ತಿರುವ ದ್ವೇಷ ರಾಜಕಾರಣಕ್ಕೆ ಸರಿಯಾಗಿ ತಿರುಗೇಟು ಕೊಡುತ್ತಿರುವುದು ತ್ರಿಪುರಾ ದ ಬಿಜೆಪಿ ಸರ್ಕಾರ ಮಾತ್ರ.

    ಬಿಜೆಪಿ ನಾಯಕರನ್ನು ಸಂಬಂಧವೇ ಇಲ್ಲದ ಯಾವ ಯಾವುದೋ ಕೇಸ್ ಗಳಲ್ಲಿ ಸಿಕ್ಕಿಸಿ ಅವರನ್ನು ಅರೆಸ್ಟ್ ಮಾಡುತ್ತಿರುವುದು ಎಲ್ಲರಿಗೂ ತಿಳಿದ ವಿಷಯವೇ. ಈ ಬಗ್ಗೆ ಕಲ್ಕತ್ತ ಹೈ ಕೋರ್ಟ್ ಟಿ ಎಂ ಸಿ ಸರ್ಕಾರಕ್ಕೆ ಛೀ ಮಾರಿ ಹಾಕಿದೆ.

    ಆದರೆ ಬಂಗಾಳದ ಟಿ ಎಂ ಸಿ ಸರ್ಕಾರಕ್ಕೆ ಆ ಛೀ ಮಾರಿ ಬಗ್ಗೆ ಯಾವುದೇ ಗೌರವ ಇಲ್ಲ.

    ಏಟಿಗೆ ತಿರುಗೇಟು ಕೊಡದಿದ್ದರೆ ಸರ್ಕಾರದ ಬೆಂಬಲ ದಿಂದ ರೌಡಿಗಳೆಲ್ಲ ನಾಯಕರಾಗಿ ವಿಜೃಂಭಿಸುವದು ಭಾರತದಲ್ಲಿ ಅತ್ಯಂತ ಸಹಜ.

    ಈಗ ತ್ರಿಪುರಾ ದ ಬಿಜೆಪಿ ಸರ್ಕಾರ ಟಿ ಎಂ ಸಿ ಪಕ್ಷಕ್ಕೆ ಅದರದೇ ರುಚಿ ತೋರಿಸುತ್ತಿದೆ.

    ಟಿ ಎಂ ಸಿ ನಾಯಕರ ಭೇಟಿಗೆ ಅವಕಾಶ ನೀಡದೇ ಅಲ್ಲಿಗೆ ಬರುವ ಟಿ ಎಂ ಸಿ ನಾಯಕರಿಗೆ ಅರೆಸ್ಟ್ ಮಾಡುತ್ತಿದೆ! ಉದಾಹರಣೆ ಗೆ ಟಿ ಎಂ ಸಿ ಯುವ ನಾಯಕಿ ಸಾಯನಿ ಘೋಷ್ ಅವರನ್ನು ಕೊಲೆ ಕೇಸ್ ನಲ್ಲಿ ಅರೆಸ್ಟ್ ಮಾಡಿದೆ.

    ಟಿಟ್ ಫಾರ್ ಟ್ಯಾಟ್ ಆದಲ್ಲಿ ಮಾತ್ರ ಕಮ್ಯುನಿಸ್ಟರು ಮತ್ತು ಅವರ ಹಿಂಬಾಲಕರಾದ ಟಿ ಎಂ ಸಿ ಗೆ ತಾವು ದೈತ್ಯರು ತಮ್ಮನ್ನು ಯಾರೂ ಏನೂ ಮಾಡಲು ಸಾಧ್ಯವಿಲ್ಲ ಎಂಬ ಭ್ರಮೆ ಅಳಿಯಲು ಸಾಧ್ಯ. ಟಿ ಎಂ ಸಿ ಯ ಗೂಂಡಾ ಗಳನ್ನು ಭೂಮಿಗೆ ತರಲು ಇದು ಅತ್ಯಂತ ಅವಶ್ಯಕ.

    ವೆಲ್ ಡನ್ ತ್ರಿಪುರಾ ಗವರ್ನಮೆಂಟ್.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...