Homeಮುಖಪುಟತ್ರಿಪುರದಲ್ಲಿ ನಟಿ, ಟಿಎಂಸಿ ನಾಯಕಿ ಸಯೋನಿ ಘೋಷ್ ಮೇಲೆ ಹಲ್ಲೆ, ಬಂಧನ - ಪ್ರತಿಭಟನೆಗೆ ಸಜ್ಜು

ತ್ರಿಪುರದಲ್ಲಿ ನಟಿ, ಟಿಎಂಸಿ ನಾಯಕಿ ಸಯೋನಿ ಘೋಷ್ ಮೇಲೆ ಹಲ್ಲೆ, ಬಂಧನ – ಪ್ರತಿಭಟನೆಗೆ ಸಜ್ಜು

- Advertisement -
- Advertisement -

ಬಿಜೆಪಿ ಆಡಳಿತದ ತ್ರಿಪುರವು ಗೂಂಡಾರಾಜ್ ಆಗಿ ಬದಲಾಗಿದೆ ಎಂದು ಟಿಎಂಸಿ ಪಕ್ಷ ಆರೋಪಿಸಿದೆ. ನಟಿ, ಟಿಎಂಸಿ ನಾಯಕಿ ಸಯೋನಿ ಘೋಷ್‌ರವರನ್ನು ಬಂಧಿಸಿರುವ ತ್ರಿಪುರ ಪೊಲೀಸರ ಕ್ರಮ ಖಂಡಿಸಿ ಇಂದು ದೆಹಲಿಯಲ್ಲಿ ಟಿಎಂಸಿ ನಾಯಕರು ಪ್ರತಿಭಟನೆ ನಡೆಸಲು ಸಿದ್ದತೆ ನಡೆಸಿದ್ದಾರೆ. ಇದೇ ದಿನ ಬಿಜೆಪಿ ಎದುರಿಸುವುದರ ಕುರಿತು ನವದೆಹಲಿಯಲ್ಲಿ ಟಿಎಂಸಿ ಮುಖ್ಯಸ್ಥೆ ಮತ್ತು ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ವಿರೋಧ ಪಕ್ಷಗಳ ಜೊತೆ ಸಭೆ ನಡೆಸಲಿದ್ದು, ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿಯವರನ್ನು ಭೇಟಿಯಾಗಲಿದ್ದಾರೆ.

ತೃಣಮೂಲ ಕಾಂಗ್ರೆಸ್‌ನ ಪಶ್ಚಿಮ ಬಂಗಾಳದ ಯುವ ಘಟಕದ ಅಧ್ಯಕ್ಷೆಯಾದ ಸಯೋನಿ ಘೋಷ್ ಸೇರಿದಂತೆ ಹಲವರು ಮೇಲೆ ಅಗರ್ತಲದಲ್ಲಿ ಬಿಜೆಪಿ ಗೂಂಡಾಗಳು ಹಲ್ಲೆ ನಡೆಸಿದ್ದಾರೆ ಎಂದು ಟಿಎಂಸಿ ಆರೋಪಿಸಿದೆ. ಅಲ್ಲದೆ ಅವರೊಂದಿಗೆ ಟಿಎಂಸಿ ಸಂಸದೆಯಾದ ಸುಸ್ಮಿತ್ ದೇವ್, ಕುನಾಲ್ ಘೋಷ್, ಸುಬಾಲ್ ಬೌಮಿಕ್ ರವರನ್ನು ತ್ರಿಪುರ ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಠಾಣೆಯಲ್ಲಿಯೇ ಹಲ್ಲೆ ನಡೆದಿದೆ ಎಂದು ಟಿಎಂಸಿ ಆರೋಪಿಸಿದ್ದು, ಆರು ಜನ ಗಾಯಗೊಂಡಿದ್ದಾರೆ ಎಂದಿದೆ.

ವಿಷಯ ತಿಳಿಯುತ್ತಿದ್ದಂತೆ ಭಾನುವಾರ ರಾತ್ರಿಯೇ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಮತ್ತು ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿಯವರು ತ್ರಿಪುರಾಗೆ ತೆರಳಿದ್ದಾರೆ. ಪಕ್ಷದ 15ಕ್ಕೂ ಹೆಚ್ಚು ಸಂಸದರು ನವದೆಹಲಿ ತಲುಪಿದ್ದು, ಗೃಹ ಸಚಿವ ಅಮಿತ್ ಶಾ ಜೊತೆ ಚರ್ಚಿಸಲು ಸಮಯ ಕೋರಿದ್ದಾರೆ. ಅಲ್ಲದೇ ಇಂದು ಸೋಮವಾರ ಧರಣಿ ನಡೆಸಲು ನಿರ್ಧರಿಸಿದ್ದಾರೆ.

ಅಲ್ಲದೆ ಇಂದು ಮಮತಾ ಬ್ಯಾನರ್ಜಿ ಸಹ ದೆಹಲಿಯಲ್ಲಿರಲಿದ್ದು ಈ ವಿಷಯದ ಕುರಿತು ವಿರೋಧ ಪಕ್ಷಗಳೊಂದಿಗೆ ಚರ್ಚಿಸಲಿದ್ದಾರೆ. ಮುಖ್ಯವಾಗಿ ಬಿಜೆಪಿ ಹಿಂಸಾಚಾರಗಳ ಮತ್ತು ಬಿಜೆಪಿಯನ್ನು 2024ರ ಚುನಾವಣೆಯಲ್ಲಿ ಎದುರಿಸುವುದು ಹೇಗೆ ಎಂಬುದರ ಕುರಿತು ಚರ್ಚೆಗಳು ನಡೆಯಲಿವೆ ಎಂದು ವರದಿಯಾಗಿದೆ.

ಟಿಎಂಸಿಯ ಈ ಆರೋಪಗಳನ್ನು ಬಿಜೆಪಿ ಅಲ್ಲಗೆಳೆದಿದೆ. ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೆಬ್ ಭಾಗವಹಿಸಿದ್ದ ಸಾರ್ವಜನಿಕ ಸಭೆಯನ್ನು ಸಯೋನಿ ಘೋಷ್ ಸೇರಿ ಇತರರು ಅಡ್ಡಿಪಡಿಸಿದರು. ವೇದಿಕೆಗೆ ಕಲ್ಲು ತೂರಿದರು ಎಂದು ಆರೋಪಿಸಿದೆ.

ಗಲಭೆಗೆ ಸಂಬಂಧಿಸಿದಂತೆ ಸಯೋನಿ ಘೋಷ್ ಸೇರಿದಂತೆ ಟಿಎಂಸಿಯ ಇತರರನ್ನು ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದ ವೇಳೆ ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿ ಹಲ್ಲೆ ಮಾಡಿದರು. ಆದರೆ ಯಾರಿಗು ಗಾಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಆನಂತರ ಸಯೋನಿ ಘೋಷ್‌ರವರನ್ನು ಪೊಲೀಸರು ಅಧಿಕೃತವಾಗಿ ಬಂಧಿಸಿದ್ದಾರೆ. ಅವರ ಮೆಲೆ ಕೊಲೆಯತ್ನ ಮತ್ತು ಗಲಭೆ ಹ ಹರಡುವ ಪ್ರಕರಣಗಳನ್ನು ದಾಖಲಿಸಿದ್ದು ಜಾಮೀನು ರಹಿತ ಪ್ರಕರಣಗಳನ್ನು ಸೇರಿಸಿದ್ದಾರೆ. ಆದರೆ ಅವರನ್ನು ಕೋರ್ಟ್‌ಗೆ ಹಾಜರುಪಡಿಸಿಲ್ಲ ಎಂದು ಟಿಎಂಸಿ ಆರೋಪಿಸಿದೆ.

ಪಶ್ಚಿಮ ಬಂಗಾಳದಲ್ಲಿ ಭರ್ಜರಿ ಜಯ ಸಾಧಿಸಿರುವ ಟಿಎಂಸಿಯು ಇತರ ರಾಜ್ಯಗಳತ್ತ ದೃಷ್ಟಿ ಹಾಯಿಸಿದೆ. 2023ರಲ್ಲಿ ತ್ರಿಪುರದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಅಲ್ಲಿ ತನ್ನ ಪ್ರಭಾವ ಬೀರಲು ಯತ್ನಿಸುತ್ತಿದೆ. ಹಾಗಾಗಿ ಬಿಜೆಪಿ ಮತ್ತು ಟಿಎಂಸಿ ನಡುವೆ ಜಿದ್ದಾಜಿದ್ದಿ ಆರಂಭವಾಗಿದೆ.


ಇದನ್ನೂ ಓದಿ: ಸಂಸತ್ತಿನಲ್ಲಿ ಕಾಯ್ದೆ ರದ್ದಾದ ನಂತರವೇ ಮುಷ್ಕರ ವಾಪಸ್: ನಾಳೆ ಲಕ್ನೋದಲ್ಲಿ ಮಹಾಪಂಚಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. TMC ಬಂಗಾಳ ದಲ್ಲಿ ಮಾಡುತ್ತಿರುವ ದ್ವೇಷ ರಾಜಕಾರಣಕ್ಕೆ ಸರಿಯಾಗಿ ತಿರುಗೇಟು ಕೊಡುತ್ತಿರುವುದು ತ್ರಿಪುರಾ ದ ಬಿಜೆಪಿ ಸರ್ಕಾರ ಮಾತ್ರ.

    ಬಿಜೆಪಿ ನಾಯಕರನ್ನು ಸಂಬಂಧವೇ ಇಲ್ಲದ ಯಾವ ಯಾವುದೋ ಕೇಸ್ ಗಳಲ್ಲಿ ಸಿಕ್ಕಿಸಿ ಅವರನ್ನು ಅರೆಸ್ಟ್ ಮಾಡುತ್ತಿರುವುದು ಎಲ್ಲರಿಗೂ ತಿಳಿದ ವಿಷಯವೇ. ಈ ಬಗ್ಗೆ ಕಲ್ಕತ್ತ ಹೈ ಕೋರ್ಟ್ ಟಿ ಎಂ ಸಿ ಸರ್ಕಾರಕ್ಕೆ ಛೀ ಮಾರಿ ಹಾಕಿದೆ.

    ಆದರೆ ಬಂಗಾಳದ ಟಿ ಎಂ ಸಿ ಸರ್ಕಾರಕ್ಕೆ ಆ ಛೀ ಮಾರಿ ಬಗ್ಗೆ ಯಾವುದೇ ಗೌರವ ಇಲ್ಲ.

    ಏಟಿಗೆ ತಿರುಗೇಟು ಕೊಡದಿದ್ದರೆ ಸರ್ಕಾರದ ಬೆಂಬಲ ದಿಂದ ರೌಡಿಗಳೆಲ್ಲ ನಾಯಕರಾಗಿ ವಿಜೃಂಭಿಸುವದು ಭಾರತದಲ್ಲಿ ಅತ್ಯಂತ ಸಹಜ.

    ಈಗ ತ್ರಿಪುರಾ ದ ಬಿಜೆಪಿ ಸರ್ಕಾರ ಟಿ ಎಂ ಸಿ ಪಕ್ಷಕ್ಕೆ ಅದರದೇ ರುಚಿ ತೋರಿಸುತ್ತಿದೆ.

    ಟಿ ಎಂ ಸಿ ನಾಯಕರ ಭೇಟಿಗೆ ಅವಕಾಶ ನೀಡದೇ ಅಲ್ಲಿಗೆ ಬರುವ ಟಿ ಎಂ ಸಿ ನಾಯಕರಿಗೆ ಅರೆಸ್ಟ್ ಮಾಡುತ್ತಿದೆ! ಉದಾಹರಣೆ ಗೆ ಟಿ ಎಂ ಸಿ ಯುವ ನಾಯಕಿ ಸಾಯನಿ ಘೋಷ್ ಅವರನ್ನು ಕೊಲೆ ಕೇಸ್ ನಲ್ಲಿ ಅರೆಸ್ಟ್ ಮಾಡಿದೆ.

    ಟಿಟ್ ಫಾರ್ ಟ್ಯಾಟ್ ಆದಲ್ಲಿ ಮಾತ್ರ ಕಮ್ಯುನಿಸ್ಟರು ಮತ್ತು ಅವರ ಹಿಂಬಾಲಕರಾದ ಟಿ ಎಂ ಸಿ ಗೆ ತಾವು ದೈತ್ಯರು ತಮ್ಮನ್ನು ಯಾರೂ ಏನೂ ಮಾಡಲು ಸಾಧ್ಯವಿಲ್ಲ ಎಂಬ ಭ್ರಮೆ ಅಳಿಯಲು ಸಾಧ್ಯ. ಟಿ ಎಂ ಸಿ ಯ ಗೂಂಡಾ ಗಳನ್ನು ಭೂಮಿಗೆ ತರಲು ಇದು ಅತ್ಯಂತ ಅವಶ್ಯಕ.

    ವೆಲ್ ಡನ್ ತ್ರಿಪುರಾ ಗವರ್ನಮೆಂಟ್.

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...