Homeಮುಖಪುಟತ್ರಿಪುರದಲ್ಲಿ ನಟಿ, ಟಿಎಂಸಿ ನಾಯಕಿ ಸಯೋನಿ ಘೋಷ್ ಮೇಲೆ ಹಲ್ಲೆ, ಬಂಧನ - ಪ್ರತಿಭಟನೆಗೆ ಸಜ್ಜು

ತ್ರಿಪುರದಲ್ಲಿ ನಟಿ, ಟಿಎಂಸಿ ನಾಯಕಿ ಸಯೋನಿ ಘೋಷ್ ಮೇಲೆ ಹಲ್ಲೆ, ಬಂಧನ – ಪ್ರತಿಭಟನೆಗೆ ಸಜ್ಜು

- Advertisement -
- Advertisement -

ಬಿಜೆಪಿ ಆಡಳಿತದ ತ್ರಿಪುರವು ಗೂಂಡಾರಾಜ್ ಆಗಿ ಬದಲಾಗಿದೆ ಎಂದು ಟಿಎಂಸಿ ಪಕ್ಷ ಆರೋಪಿಸಿದೆ. ನಟಿ, ಟಿಎಂಸಿ ನಾಯಕಿ ಸಯೋನಿ ಘೋಷ್‌ರವರನ್ನು ಬಂಧಿಸಿರುವ ತ್ರಿಪುರ ಪೊಲೀಸರ ಕ್ರಮ ಖಂಡಿಸಿ ಇಂದು ದೆಹಲಿಯಲ್ಲಿ ಟಿಎಂಸಿ ನಾಯಕರು ಪ್ರತಿಭಟನೆ ನಡೆಸಲು ಸಿದ್ದತೆ ನಡೆಸಿದ್ದಾರೆ. ಇದೇ ದಿನ ಬಿಜೆಪಿ ಎದುರಿಸುವುದರ ಕುರಿತು ನವದೆಹಲಿಯಲ್ಲಿ ಟಿಎಂಸಿ ಮುಖ್ಯಸ್ಥೆ ಮತ್ತು ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ವಿರೋಧ ಪಕ್ಷಗಳ ಜೊತೆ ಸಭೆ ನಡೆಸಲಿದ್ದು, ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿಯವರನ್ನು ಭೇಟಿಯಾಗಲಿದ್ದಾರೆ.

ತೃಣಮೂಲ ಕಾಂಗ್ರೆಸ್‌ನ ಪಶ್ಚಿಮ ಬಂಗಾಳದ ಯುವ ಘಟಕದ ಅಧ್ಯಕ್ಷೆಯಾದ ಸಯೋನಿ ಘೋಷ್ ಸೇರಿದಂತೆ ಹಲವರು ಮೇಲೆ ಅಗರ್ತಲದಲ್ಲಿ ಬಿಜೆಪಿ ಗೂಂಡಾಗಳು ಹಲ್ಲೆ ನಡೆಸಿದ್ದಾರೆ ಎಂದು ಟಿಎಂಸಿ ಆರೋಪಿಸಿದೆ. ಅಲ್ಲದೆ ಅವರೊಂದಿಗೆ ಟಿಎಂಸಿ ಸಂಸದೆಯಾದ ಸುಸ್ಮಿತ್ ದೇವ್, ಕುನಾಲ್ ಘೋಷ್, ಸುಬಾಲ್ ಬೌಮಿಕ್ ರವರನ್ನು ತ್ರಿಪುರ ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಠಾಣೆಯಲ್ಲಿಯೇ ಹಲ್ಲೆ ನಡೆದಿದೆ ಎಂದು ಟಿಎಂಸಿ ಆರೋಪಿಸಿದ್ದು, ಆರು ಜನ ಗಾಯಗೊಂಡಿದ್ದಾರೆ ಎಂದಿದೆ.

ವಿಷಯ ತಿಳಿಯುತ್ತಿದ್ದಂತೆ ಭಾನುವಾರ ರಾತ್ರಿಯೇ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಮತ್ತು ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿಯವರು ತ್ರಿಪುರಾಗೆ ತೆರಳಿದ್ದಾರೆ. ಪಕ್ಷದ 15ಕ್ಕೂ ಹೆಚ್ಚು ಸಂಸದರು ನವದೆಹಲಿ ತಲುಪಿದ್ದು, ಗೃಹ ಸಚಿವ ಅಮಿತ್ ಶಾ ಜೊತೆ ಚರ್ಚಿಸಲು ಸಮಯ ಕೋರಿದ್ದಾರೆ. ಅಲ್ಲದೇ ಇಂದು ಸೋಮವಾರ ಧರಣಿ ನಡೆಸಲು ನಿರ್ಧರಿಸಿದ್ದಾರೆ.

ಅಲ್ಲದೆ ಇಂದು ಮಮತಾ ಬ್ಯಾನರ್ಜಿ ಸಹ ದೆಹಲಿಯಲ್ಲಿರಲಿದ್ದು ಈ ವಿಷಯದ ಕುರಿತು ವಿರೋಧ ಪಕ್ಷಗಳೊಂದಿಗೆ ಚರ್ಚಿಸಲಿದ್ದಾರೆ. ಮುಖ್ಯವಾಗಿ ಬಿಜೆಪಿ ಹಿಂಸಾಚಾರಗಳ ಮತ್ತು ಬಿಜೆಪಿಯನ್ನು 2024ರ ಚುನಾವಣೆಯಲ್ಲಿ ಎದುರಿಸುವುದು ಹೇಗೆ ಎಂಬುದರ ಕುರಿತು ಚರ್ಚೆಗಳು ನಡೆಯಲಿವೆ ಎಂದು ವರದಿಯಾಗಿದೆ.

ಟಿಎಂಸಿಯ ಈ ಆರೋಪಗಳನ್ನು ಬಿಜೆಪಿ ಅಲ್ಲಗೆಳೆದಿದೆ. ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೆಬ್ ಭಾಗವಹಿಸಿದ್ದ ಸಾರ್ವಜನಿಕ ಸಭೆಯನ್ನು ಸಯೋನಿ ಘೋಷ್ ಸೇರಿ ಇತರರು ಅಡ್ಡಿಪಡಿಸಿದರು. ವೇದಿಕೆಗೆ ಕಲ್ಲು ತೂರಿದರು ಎಂದು ಆರೋಪಿಸಿದೆ.

ಗಲಭೆಗೆ ಸಂಬಂಧಿಸಿದಂತೆ ಸಯೋನಿ ಘೋಷ್ ಸೇರಿದಂತೆ ಟಿಎಂಸಿಯ ಇತರರನ್ನು ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದ ವೇಳೆ ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿ ಹಲ್ಲೆ ಮಾಡಿದರು. ಆದರೆ ಯಾರಿಗು ಗಾಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಆನಂತರ ಸಯೋನಿ ಘೋಷ್‌ರವರನ್ನು ಪೊಲೀಸರು ಅಧಿಕೃತವಾಗಿ ಬಂಧಿಸಿದ್ದಾರೆ. ಅವರ ಮೆಲೆ ಕೊಲೆಯತ್ನ ಮತ್ತು ಗಲಭೆ ಹ ಹರಡುವ ಪ್ರಕರಣಗಳನ್ನು ದಾಖಲಿಸಿದ್ದು ಜಾಮೀನು ರಹಿತ ಪ್ರಕರಣಗಳನ್ನು ಸೇರಿಸಿದ್ದಾರೆ. ಆದರೆ ಅವರನ್ನು ಕೋರ್ಟ್‌ಗೆ ಹಾಜರುಪಡಿಸಿಲ್ಲ ಎಂದು ಟಿಎಂಸಿ ಆರೋಪಿಸಿದೆ.

ಪಶ್ಚಿಮ ಬಂಗಾಳದಲ್ಲಿ ಭರ್ಜರಿ ಜಯ ಸಾಧಿಸಿರುವ ಟಿಎಂಸಿಯು ಇತರ ರಾಜ್ಯಗಳತ್ತ ದೃಷ್ಟಿ ಹಾಯಿಸಿದೆ. 2023ರಲ್ಲಿ ತ್ರಿಪುರದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಅಲ್ಲಿ ತನ್ನ ಪ್ರಭಾವ ಬೀರಲು ಯತ್ನಿಸುತ್ತಿದೆ. ಹಾಗಾಗಿ ಬಿಜೆಪಿ ಮತ್ತು ಟಿಎಂಸಿ ನಡುವೆ ಜಿದ್ದಾಜಿದ್ದಿ ಆರಂಭವಾಗಿದೆ.


ಇದನ್ನೂ ಓದಿ: ಸಂಸತ್ತಿನಲ್ಲಿ ಕಾಯ್ದೆ ರದ್ದಾದ ನಂತರವೇ ಮುಷ್ಕರ ವಾಪಸ್: ನಾಳೆ ಲಕ್ನೋದಲ್ಲಿ ಮಹಾಪಂಚಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. TMC ಬಂಗಾಳ ದಲ್ಲಿ ಮಾಡುತ್ತಿರುವ ದ್ವೇಷ ರಾಜಕಾರಣಕ್ಕೆ ಸರಿಯಾಗಿ ತಿರುಗೇಟು ಕೊಡುತ್ತಿರುವುದು ತ್ರಿಪುರಾ ದ ಬಿಜೆಪಿ ಸರ್ಕಾರ ಮಾತ್ರ.

    ಬಿಜೆಪಿ ನಾಯಕರನ್ನು ಸಂಬಂಧವೇ ಇಲ್ಲದ ಯಾವ ಯಾವುದೋ ಕೇಸ್ ಗಳಲ್ಲಿ ಸಿಕ್ಕಿಸಿ ಅವರನ್ನು ಅರೆಸ್ಟ್ ಮಾಡುತ್ತಿರುವುದು ಎಲ್ಲರಿಗೂ ತಿಳಿದ ವಿಷಯವೇ. ಈ ಬಗ್ಗೆ ಕಲ್ಕತ್ತ ಹೈ ಕೋರ್ಟ್ ಟಿ ಎಂ ಸಿ ಸರ್ಕಾರಕ್ಕೆ ಛೀ ಮಾರಿ ಹಾಕಿದೆ.

    ಆದರೆ ಬಂಗಾಳದ ಟಿ ಎಂ ಸಿ ಸರ್ಕಾರಕ್ಕೆ ಆ ಛೀ ಮಾರಿ ಬಗ್ಗೆ ಯಾವುದೇ ಗೌರವ ಇಲ್ಲ.

    ಏಟಿಗೆ ತಿರುಗೇಟು ಕೊಡದಿದ್ದರೆ ಸರ್ಕಾರದ ಬೆಂಬಲ ದಿಂದ ರೌಡಿಗಳೆಲ್ಲ ನಾಯಕರಾಗಿ ವಿಜೃಂಭಿಸುವದು ಭಾರತದಲ್ಲಿ ಅತ್ಯಂತ ಸಹಜ.

    ಈಗ ತ್ರಿಪುರಾ ದ ಬಿಜೆಪಿ ಸರ್ಕಾರ ಟಿ ಎಂ ಸಿ ಪಕ್ಷಕ್ಕೆ ಅದರದೇ ರುಚಿ ತೋರಿಸುತ್ತಿದೆ.

    ಟಿ ಎಂ ಸಿ ನಾಯಕರ ಭೇಟಿಗೆ ಅವಕಾಶ ನೀಡದೇ ಅಲ್ಲಿಗೆ ಬರುವ ಟಿ ಎಂ ಸಿ ನಾಯಕರಿಗೆ ಅರೆಸ್ಟ್ ಮಾಡುತ್ತಿದೆ! ಉದಾಹರಣೆ ಗೆ ಟಿ ಎಂ ಸಿ ಯುವ ನಾಯಕಿ ಸಾಯನಿ ಘೋಷ್ ಅವರನ್ನು ಕೊಲೆ ಕೇಸ್ ನಲ್ಲಿ ಅರೆಸ್ಟ್ ಮಾಡಿದೆ.

    ಟಿಟ್ ಫಾರ್ ಟ್ಯಾಟ್ ಆದಲ್ಲಿ ಮಾತ್ರ ಕಮ್ಯುನಿಸ್ಟರು ಮತ್ತು ಅವರ ಹಿಂಬಾಲಕರಾದ ಟಿ ಎಂ ಸಿ ಗೆ ತಾವು ದೈತ್ಯರು ತಮ್ಮನ್ನು ಯಾರೂ ಏನೂ ಮಾಡಲು ಸಾಧ್ಯವಿಲ್ಲ ಎಂಬ ಭ್ರಮೆ ಅಳಿಯಲು ಸಾಧ್ಯ. ಟಿ ಎಂ ಸಿ ಯ ಗೂಂಡಾ ಗಳನ್ನು ಭೂಮಿಗೆ ತರಲು ಇದು ಅತ್ಯಂತ ಅವಶ್ಯಕ.

    ವೆಲ್ ಡನ್ ತ್ರಿಪುರಾ ಗವರ್ನಮೆಂಟ್.

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...