Homeಮುಖಪುಟತ್ರಿಪುರ BJP ಸರ್ಕಾರದಲ್ಲಿ ಬಿರುಕು; ದೆಹಲಿಗೆ ದೌಡಾಯಿಸಿದ ಬಂಡಾಯ ಶಾಸಕರು

ತ್ರಿಪುರ BJP ಸರ್ಕಾರದಲ್ಲಿ ಬಿರುಕು; ದೆಹಲಿಗೆ ದೌಡಾಯಿಸಿದ ಬಂಡಾಯ ಶಾಸಕರು

ಮುಖ್ಯಮಂತ್ರಿ ವಿಪ್ಲವ್ ದೇವ್ ಹಲವಾರು ವಿಷಯಗಳ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡಿ ಪಕ್ಷವನ್ನು ಹಲವಾರು ಬಾರಿ ಮುಜುಗರಕ್ಕೀಡು ಮಾಡಿದ್ದಾರೆ ಎಂದು ಬಂಡಾಯ ಶಾಸಕರು ಹೇಳಿದ್ದಾರೆ.

- Advertisement -
- Advertisement -

ತ್ರಿಪುರ ಮುಖ್ಯಮಂತ್ರಿ ವಿಪ್ಲವ್ ಕುಮಾರ್ ದೇವ್ ವಿರುದ್ಧ ಬಿಜೆಪಿ ಶಾಸಕರ ಒಂದು ಗುಂಪು ದಂಗೆಯೆದ್ದಿದ್ದು, ದೆಹಲಿಗೆ ತಲುಪಿದ್ದಾರೆ. ರಾಜ್ಯದ 12 ಮಂದಿ ಶಾಸಕರು ಪಕ್ಷದ ಉನ್ನತ ನಾಯಕತ್ವವನ್ನು ಭೇಟಿಯಾಗಿ ಮುಖ್ಯಮಂತ್ರಿಯ “ಕಳಪೆ ನಾಯಕತ್ವ” ಮತ್ತು “ದುರಾಡಳಿತ” ಬಗ್ಗೆ ದೂರ ನೀಡಲು ಪ್ರಯತ್ನಿಸುತ್ತಿದ್ದಾರೆ ಎಂದು ವರದಿಯಾಗಿದೆ.

ರಾಜ್ಯದ ಮಾಜಿ ಆರೋಗ್ಯ ಸಚಿವ ಮತ್ತು ಬಿಜೆಪಿ ಶಾಸಕ ಸುದೀಪ್ ರಾಯ್ ಬಾರ್ಮನ್ ನೇತೃತ್ವದ ಗುಂಪು ಪಕ್ಷದ ಮುಖ್ಯಸ್ಥ ಜೆ.ಪಿ.ನಡ್ಡಾ ಮತ್ತು ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರ ಭೇಟಿಗೆ ಸಮಯವನ್ನು ಕೇಳಿದ್ದಾರೆ.

ಇದನ್ನೂ ಓದಿ: ಪಂಜಾಬಿಗಳು ಮತ್ತು ಜಾಟ್‌ಗಳು ದೈಹಿಕವಾಗಿ ಶಕ್ತರು; ಆದರೆ ಅವರಿಗೆ ಮಿದುಳಿಲ್ಲ: ತ್ರಿಪುರ ಸಿಎಂ ವಿಪ್ಲವ್ ದೇವ್ ವಿವಾದ

ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಕೂಡಾ ಭೇಟಿಯಾಗಲು ಅವರು ಪ್ರಯತ್ನಿಸುತ್ತಿದ್ದಾರೆಂದು, ನವದೆಹಲಿಯ ತ್ರಿಪುರ ಭವನದಲ್ಲಿರುವ ಶಾಸಕರೊಬ್ಬರು ಹೇಳಿದ್ದಾಗಿ ಎನ್‌ಡಿಟಿವಿ ತಿಳಿಸಿದೆ.

“ಪಕ್ಷದ ಜನಪ್ರಿಯತೆ ಕುಸಿಯುತ್ತಿದ್ದು ನಾವು ಸುಮಾರು 12 ಮಂದಿ ಶಾಸಕರು ಪಕ್ಷದ ನಾಯಕತ್ವದ ಸರ್ವಾಧಿಕಾರ, ಮುಖ್ಯಮಂತ್ರಿಯ ಕಳಪೆ ಆಡಳಿತದ ಬಗ್ಗೆ ಮೌಲ್ಯಮಾಪನ ಮಾಡಬೇಕೆಂದು ನಿರ್ಧರಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.

“ನಾವೆಲ್ಲರೂ ಪಕ್ಷದ ಬದ್ಧ ಕಾರ್ಯಕರ್ತರು ಮತ್ತು ರಾಜ್ಯದಲ್ಲಿ ಬಿಜೆಪಿ ಆಡಳಿತವು ಒಂದಕ್ಕಿಂತ ಹೆಚ್ಚು ಬಾರಿ ತನ್ನ ಅವಧಿಯನ್ನು ಉಳಿಸಿಕೊಳ್ಳಬೇಕೆಂದು ರಾಷ್ಟ್ರೀಯ ನಾಯಕತ್ವಕ್ಕೆ ಹೇಳಲು ನಾವು ಬಯಸುತ್ತೇವೆ. ಆದರೆ ಪ್ರಸ್ತುತ ನಾಯಕತ್ವ ಮುಂದುವರಿದರೆ, ಪ್ರತಿಪಕ್ಷಳಾದ ಎಡಪಕ್ಷಗಳು ಮತ್ತು ಕಾಂಗ್ರೆಸ್ ಇದನ್ನು ಆಕ್ರಮಿಸಿಕೊಳ್ಳುತ್ತದೆ”ಎಂದು ಅವರು ಹೇಳಿದರು.

ಇದನ್ನೂ ಓದಿ: ಹಲವು ರಾಜ್ಯಗಳಲ್ಲಿ ಬಿಜೆಪಿ ಸೋತ ನಂತರ ಮೋದಿ ವರ್ಚಸ್ಸು ಕಡಿಮೆಯಾಗಿದೆಯೆ? – ಡಿ.ಉಮಾಪತಿ

“ಮುಖ್ಯಮಂತ್ರಿ ಹಲವಾರು ವಿಷಯಗಳ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡಿ ಪಕ್ಷವನ್ನು ಹಲವಾರು ಬಾರಿ ಮುಜುಗರಕ್ಕೀಡು ಮಾಡಿದ್ದಾರೆ” ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಕೊರೊನಾ ಬಿಕ್ಕಟ್ಟಿನ ನಿರ್ವಹಣೆ ಕೂಡಾ ಕಳಪೆಯಾಗಿದೆ ಎಂದು ಭಿನ್ನಮತೀಯ ಶಾಸಕರು ಆರೋಪಿಸಿದ್ದು, ಕೇಂದ್ರವು ತ್ರಿಪುರಕ್ಕೆ ತಂಡವನ್ನು ಕಳುಹಿಸುವಂತೆ ಒತ್ತಾಯಿಸಿದೆ. “ಸಾಂಕ್ರಾಮಿಕ ಸಮಯದಲ್ಲಿ, ರಾಜ್ಯದಲ್ಲಿ ಸರಿಯಾದ ಆರೋಗ್ಯ ಸಚಿವರು ಇಲ್ಲ” ಎಂದು ಒಬ್ಬ ಭಿನ್ನಮತೀಯ ಶಾಸಕ ಹೇಳಿದ್ದಾರೆ.

“ಅನುಭವಿ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು ಮುಖ್ಯಮಂತ್ರಿಯ ಸರ್ವಾಧಿಕಾರದ ಸ್ವರೂಪವನ್ನು ನಿಭಾಯಿಸಲು ಸಾಧ್ಯವಾಗದ ಕಾರಣ ಸ್ವಯಂಪ್ರೇರಿತ ನಿವೃತ್ತಿಯ ಮೇಲೆ ರಾಜ್ಯವನ್ನು ತೊರೆಯುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

“ಪಕ್ಷದ ಬಹುಪಾಲು ಶಾಸಕರು ನಾಯಕತ್ವ ಬದಲಾವಣೆಯನ್ನು ಬಯಸುತ್ತಿದ್ದಾರೆ” ಎಂದು ಶಾಸಕರು ಹೇಳಿದ್ದಾರೆ.

ಇದನ್ನೂ ಓದಿ: “ಯಾವುದೇ ಕಾರಣಗಳಿದ್ದರೂ ಸಹ ಜನರು ಹಸಿವಿನಿಂದ ಸಾಯುವಂತೆ ಮಾಡಬಾರದು” : ಕೇಂದ್ರಕ್ಕೆ ಸುಪ್ರೀಂ ತರಾಟೆ

ಆದರೆ, ಮುಖ್ಯಮಂತ್ರಿ ವಿಪ್ಲವ್ ದೇವ್ ಅವರ ಆಪ್ತ ಸಹಾಯಕರು ಭಿನ್ನಮತೀಯ ಶಾಸಕರ ಪ್ರಮಾಣವನ್ನು ಅತೀ ಕಡಿಮೆ ಎಂದು ಹೇಳಿದ್ದಾರೆ. “ಕೇವಲ ಏಳು-ಎಂಟು ಶಾಸಕರು ಮಾತ್ರ ಸರ್ಕಾರದ ಸುಗಮ ಕಾರ್ಯಚಟುವಟಿಕೆಯಲ್ಲಿ ಗೊಂದಲವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಮತ್ತು ಬಹುಷಃ ಅವರು ಕಾಂಗ್ರೆಸ್‌‌ನಿಂದ ಬಂದವರು” ಎಂದು ಹೇಳಿದ್ದಾರೆ.

ಹಳೆಯ ಬಿಜೆಪಿಗರಿಗೆ, ಪಕ್ಷದ ಹೆಚ್ಚಿನ ಕಾರ್ಯಕರ್ತರಿಗೆ ಮತ್ತು ವಿವಿಧ ಹಂತಗಳಲ್ಲಿರುವ ನಾಯಕರಿಗೆ ವಿಪ್ಲವ್ ದೇವ್ ನಾಯಕತ್ವದ ಬಗ್ಗೆ ಸಂಪೂರ್ಣ ನಂಬಿಕೆ ಮತ್ತು ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.

ಬಿಜೆಪಿ ಮತ್ತು ಅದರ ಮಿತ್ರಪಕ್ಷ ಇಂಡೀಜಿನಿಯಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರ (ಐಪಿಎಫ್‌ಟಿ) 2018 ರಲ್ಲಿ ತ್ರಿಪುರದಲ್ಲಿ ಐತಿಹಾಸಿಕ ಗೆಲುವು ದಾಖಲಿಸಿ, 25 ವರ್ಷದ ಎಡಪಂಥೀಯ ಸರ್ಕಾರವನ್ನು ಕೆಳಗಿಳಿಸಿತ್ತು. 60 ಸದಸ್ಯರಿರುವ ವಿಧಾನಸಭೆಯಲ್ಲಿ ಬಿಜೆಪಿ 36 ಶಾಸಕರನ್ನು ಹೊಂದಿದ್ದು, 8 ಐಪಿಎಫ್‌ಟಿ ಶಾಸಕರ ಬೆಂಬಲವನ್ನು ಹೊಂದಿದೆ.

ಇದನ್ನೂ ಓದಿ: ಥ್ಯಾಂಕ್ಯೂ ಅಮೀರ್ ಖಾನ್ ಎಂದ ಪ್ರಧಾನಿ ನರೇಂದ್ರ ಮೋದಿ

ವಿಡಿಯೋ ನೋಡಿ: ಆರ್ಥಿಕ ಪರಿಸ್ಥಿತಿ ಕುರಿತು ಮಾಜಿ ಪ್ರಧಾನಿ ಮನಮೋಹನ್ ಸಿಂಗರ ಹೇಳಿಕೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...