Homeಮುಖಪುಟತ್ರಿಪುರ BJP ಸರ್ಕಾರದಲ್ಲಿ ಬಿರುಕು; ದೆಹಲಿಗೆ ದೌಡಾಯಿಸಿದ ಬಂಡಾಯ ಶಾಸಕರು

ತ್ರಿಪುರ BJP ಸರ್ಕಾರದಲ್ಲಿ ಬಿರುಕು; ದೆಹಲಿಗೆ ದೌಡಾಯಿಸಿದ ಬಂಡಾಯ ಶಾಸಕರು

ಮುಖ್ಯಮಂತ್ರಿ ವಿಪ್ಲವ್ ದೇವ್ ಹಲವಾರು ವಿಷಯಗಳ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡಿ ಪಕ್ಷವನ್ನು ಹಲವಾರು ಬಾರಿ ಮುಜುಗರಕ್ಕೀಡು ಮಾಡಿದ್ದಾರೆ ಎಂದು ಬಂಡಾಯ ಶಾಸಕರು ಹೇಳಿದ್ದಾರೆ.

- Advertisement -
- Advertisement -

ತ್ರಿಪುರ ಮುಖ್ಯಮಂತ್ರಿ ವಿಪ್ಲವ್ ಕುಮಾರ್ ದೇವ್ ವಿರುದ್ಧ ಬಿಜೆಪಿ ಶಾಸಕರ ಒಂದು ಗುಂಪು ದಂಗೆಯೆದ್ದಿದ್ದು, ದೆಹಲಿಗೆ ತಲುಪಿದ್ದಾರೆ. ರಾಜ್ಯದ 12 ಮಂದಿ ಶಾಸಕರು ಪಕ್ಷದ ಉನ್ನತ ನಾಯಕತ್ವವನ್ನು ಭೇಟಿಯಾಗಿ ಮುಖ್ಯಮಂತ್ರಿಯ “ಕಳಪೆ ನಾಯಕತ್ವ” ಮತ್ತು “ದುರಾಡಳಿತ” ಬಗ್ಗೆ ದೂರ ನೀಡಲು ಪ್ರಯತ್ನಿಸುತ್ತಿದ್ದಾರೆ ಎಂದು ವರದಿಯಾಗಿದೆ.

ರಾಜ್ಯದ ಮಾಜಿ ಆರೋಗ್ಯ ಸಚಿವ ಮತ್ತು ಬಿಜೆಪಿ ಶಾಸಕ ಸುದೀಪ್ ರಾಯ್ ಬಾರ್ಮನ್ ನೇತೃತ್ವದ ಗುಂಪು ಪಕ್ಷದ ಮುಖ್ಯಸ್ಥ ಜೆ.ಪಿ.ನಡ್ಡಾ ಮತ್ತು ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರ ಭೇಟಿಗೆ ಸಮಯವನ್ನು ಕೇಳಿದ್ದಾರೆ.

ಇದನ್ನೂ ಓದಿ: ಪಂಜಾಬಿಗಳು ಮತ್ತು ಜಾಟ್‌ಗಳು ದೈಹಿಕವಾಗಿ ಶಕ್ತರು; ಆದರೆ ಅವರಿಗೆ ಮಿದುಳಿಲ್ಲ: ತ್ರಿಪುರ ಸಿಎಂ ವಿಪ್ಲವ್ ದೇವ್ ವಿವಾದ

ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಕೂಡಾ ಭೇಟಿಯಾಗಲು ಅವರು ಪ್ರಯತ್ನಿಸುತ್ತಿದ್ದಾರೆಂದು, ನವದೆಹಲಿಯ ತ್ರಿಪುರ ಭವನದಲ್ಲಿರುವ ಶಾಸಕರೊಬ್ಬರು ಹೇಳಿದ್ದಾಗಿ ಎನ್‌ಡಿಟಿವಿ ತಿಳಿಸಿದೆ.

“ಪಕ್ಷದ ಜನಪ್ರಿಯತೆ ಕುಸಿಯುತ್ತಿದ್ದು ನಾವು ಸುಮಾರು 12 ಮಂದಿ ಶಾಸಕರು ಪಕ್ಷದ ನಾಯಕತ್ವದ ಸರ್ವಾಧಿಕಾರ, ಮುಖ್ಯಮಂತ್ರಿಯ ಕಳಪೆ ಆಡಳಿತದ ಬಗ್ಗೆ ಮೌಲ್ಯಮಾಪನ ಮಾಡಬೇಕೆಂದು ನಿರ್ಧರಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.

“ನಾವೆಲ್ಲರೂ ಪಕ್ಷದ ಬದ್ಧ ಕಾರ್ಯಕರ್ತರು ಮತ್ತು ರಾಜ್ಯದಲ್ಲಿ ಬಿಜೆಪಿ ಆಡಳಿತವು ಒಂದಕ್ಕಿಂತ ಹೆಚ್ಚು ಬಾರಿ ತನ್ನ ಅವಧಿಯನ್ನು ಉಳಿಸಿಕೊಳ್ಳಬೇಕೆಂದು ರಾಷ್ಟ್ರೀಯ ನಾಯಕತ್ವಕ್ಕೆ ಹೇಳಲು ನಾವು ಬಯಸುತ್ತೇವೆ. ಆದರೆ ಪ್ರಸ್ತುತ ನಾಯಕತ್ವ ಮುಂದುವರಿದರೆ, ಪ್ರತಿಪಕ್ಷಳಾದ ಎಡಪಕ್ಷಗಳು ಮತ್ತು ಕಾಂಗ್ರೆಸ್ ಇದನ್ನು ಆಕ್ರಮಿಸಿಕೊಳ್ಳುತ್ತದೆ”ಎಂದು ಅವರು ಹೇಳಿದರು.

ಇದನ್ನೂ ಓದಿ: ಹಲವು ರಾಜ್ಯಗಳಲ್ಲಿ ಬಿಜೆಪಿ ಸೋತ ನಂತರ ಮೋದಿ ವರ್ಚಸ್ಸು ಕಡಿಮೆಯಾಗಿದೆಯೆ? – ಡಿ.ಉಮಾಪತಿ

“ಮುಖ್ಯಮಂತ್ರಿ ಹಲವಾರು ವಿಷಯಗಳ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡಿ ಪಕ್ಷವನ್ನು ಹಲವಾರು ಬಾರಿ ಮುಜುಗರಕ್ಕೀಡು ಮಾಡಿದ್ದಾರೆ” ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಕೊರೊನಾ ಬಿಕ್ಕಟ್ಟಿನ ನಿರ್ವಹಣೆ ಕೂಡಾ ಕಳಪೆಯಾಗಿದೆ ಎಂದು ಭಿನ್ನಮತೀಯ ಶಾಸಕರು ಆರೋಪಿಸಿದ್ದು, ಕೇಂದ್ರವು ತ್ರಿಪುರಕ್ಕೆ ತಂಡವನ್ನು ಕಳುಹಿಸುವಂತೆ ಒತ್ತಾಯಿಸಿದೆ. “ಸಾಂಕ್ರಾಮಿಕ ಸಮಯದಲ್ಲಿ, ರಾಜ್ಯದಲ್ಲಿ ಸರಿಯಾದ ಆರೋಗ್ಯ ಸಚಿವರು ಇಲ್ಲ” ಎಂದು ಒಬ್ಬ ಭಿನ್ನಮತೀಯ ಶಾಸಕ ಹೇಳಿದ್ದಾರೆ.

“ಅನುಭವಿ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು ಮುಖ್ಯಮಂತ್ರಿಯ ಸರ್ವಾಧಿಕಾರದ ಸ್ವರೂಪವನ್ನು ನಿಭಾಯಿಸಲು ಸಾಧ್ಯವಾಗದ ಕಾರಣ ಸ್ವಯಂಪ್ರೇರಿತ ನಿವೃತ್ತಿಯ ಮೇಲೆ ರಾಜ್ಯವನ್ನು ತೊರೆಯುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

“ಪಕ್ಷದ ಬಹುಪಾಲು ಶಾಸಕರು ನಾಯಕತ್ವ ಬದಲಾವಣೆಯನ್ನು ಬಯಸುತ್ತಿದ್ದಾರೆ” ಎಂದು ಶಾಸಕರು ಹೇಳಿದ್ದಾರೆ.

ಇದನ್ನೂ ಓದಿ: “ಯಾವುದೇ ಕಾರಣಗಳಿದ್ದರೂ ಸಹ ಜನರು ಹಸಿವಿನಿಂದ ಸಾಯುವಂತೆ ಮಾಡಬಾರದು” : ಕೇಂದ್ರಕ್ಕೆ ಸುಪ್ರೀಂ ತರಾಟೆ

ಆದರೆ, ಮುಖ್ಯಮಂತ್ರಿ ವಿಪ್ಲವ್ ದೇವ್ ಅವರ ಆಪ್ತ ಸಹಾಯಕರು ಭಿನ್ನಮತೀಯ ಶಾಸಕರ ಪ್ರಮಾಣವನ್ನು ಅತೀ ಕಡಿಮೆ ಎಂದು ಹೇಳಿದ್ದಾರೆ. “ಕೇವಲ ಏಳು-ಎಂಟು ಶಾಸಕರು ಮಾತ್ರ ಸರ್ಕಾರದ ಸುಗಮ ಕಾರ್ಯಚಟುವಟಿಕೆಯಲ್ಲಿ ಗೊಂದಲವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಮತ್ತು ಬಹುಷಃ ಅವರು ಕಾಂಗ್ರೆಸ್‌‌ನಿಂದ ಬಂದವರು” ಎಂದು ಹೇಳಿದ್ದಾರೆ.

ಹಳೆಯ ಬಿಜೆಪಿಗರಿಗೆ, ಪಕ್ಷದ ಹೆಚ್ಚಿನ ಕಾರ್ಯಕರ್ತರಿಗೆ ಮತ್ತು ವಿವಿಧ ಹಂತಗಳಲ್ಲಿರುವ ನಾಯಕರಿಗೆ ವಿಪ್ಲವ್ ದೇವ್ ನಾಯಕತ್ವದ ಬಗ್ಗೆ ಸಂಪೂರ್ಣ ನಂಬಿಕೆ ಮತ್ತು ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.

ಬಿಜೆಪಿ ಮತ್ತು ಅದರ ಮಿತ್ರಪಕ್ಷ ಇಂಡೀಜಿನಿಯಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರ (ಐಪಿಎಫ್‌ಟಿ) 2018 ರಲ್ಲಿ ತ್ರಿಪುರದಲ್ಲಿ ಐತಿಹಾಸಿಕ ಗೆಲುವು ದಾಖಲಿಸಿ, 25 ವರ್ಷದ ಎಡಪಂಥೀಯ ಸರ್ಕಾರವನ್ನು ಕೆಳಗಿಳಿಸಿತ್ತು. 60 ಸದಸ್ಯರಿರುವ ವಿಧಾನಸಭೆಯಲ್ಲಿ ಬಿಜೆಪಿ 36 ಶಾಸಕರನ್ನು ಹೊಂದಿದ್ದು, 8 ಐಪಿಎಫ್‌ಟಿ ಶಾಸಕರ ಬೆಂಬಲವನ್ನು ಹೊಂದಿದೆ.

ಇದನ್ನೂ ಓದಿ: ಥ್ಯಾಂಕ್ಯೂ ಅಮೀರ್ ಖಾನ್ ಎಂದ ಪ್ರಧಾನಿ ನರೇಂದ್ರ ಮೋದಿ

ವಿಡಿಯೋ ನೋಡಿ: ಆರ್ಥಿಕ ಪರಿಸ್ಥಿತಿ ಕುರಿತು ಮಾಜಿ ಪ್ರಧಾನಿ ಮನಮೋಹನ್ ಸಿಂಗರ ಹೇಳಿಕೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...