Homeಮುಖಪುಟತ್ರಿಪುರ BJP ಸರ್ಕಾರದಲ್ಲಿ ಬಿರುಕು; ದೆಹಲಿಗೆ ದೌಡಾಯಿಸಿದ ಬಂಡಾಯ ಶಾಸಕರು

ತ್ರಿಪುರ BJP ಸರ್ಕಾರದಲ್ಲಿ ಬಿರುಕು; ದೆಹಲಿಗೆ ದೌಡಾಯಿಸಿದ ಬಂಡಾಯ ಶಾಸಕರು

ಮುಖ್ಯಮಂತ್ರಿ ವಿಪ್ಲವ್ ದೇವ್ ಹಲವಾರು ವಿಷಯಗಳ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡಿ ಪಕ್ಷವನ್ನು ಹಲವಾರು ಬಾರಿ ಮುಜುಗರಕ್ಕೀಡು ಮಾಡಿದ್ದಾರೆ ಎಂದು ಬಂಡಾಯ ಶಾಸಕರು ಹೇಳಿದ್ದಾರೆ.

- Advertisement -
- Advertisement -

ತ್ರಿಪುರ ಮುಖ್ಯಮಂತ್ರಿ ವಿಪ್ಲವ್ ಕುಮಾರ್ ದೇವ್ ವಿರುದ್ಧ ಬಿಜೆಪಿ ಶಾಸಕರ ಒಂದು ಗುಂಪು ದಂಗೆಯೆದ್ದಿದ್ದು, ದೆಹಲಿಗೆ ತಲುಪಿದ್ದಾರೆ. ರಾಜ್ಯದ 12 ಮಂದಿ ಶಾಸಕರು ಪಕ್ಷದ ಉನ್ನತ ನಾಯಕತ್ವವನ್ನು ಭೇಟಿಯಾಗಿ ಮುಖ್ಯಮಂತ್ರಿಯ “ಕಳಪೆ ನಾಯಕತ್ವ” ಮತ್ತು “ದುರಾಡಳಿತ” ಬಗ್ಗೆ ದೂರ ನೀಡಲು ಪ್ರಯತ್ನಿಸುತ್ತಿದ್ದಾರೆ ಎಂದು ವರದಿಯಾಗಿದೆ.

ರಾಜ್ಯದ ಮಾಜಿ ಆರೋಗ್ಯ ಸಚಿವ ಮತ್ತು ಬಿಜೆಪಿ ಶಾಸಕ ಸುದೀಪ್ ರಾಯ್ ಬಾರ್ಮನ್ ನೇತೃತ್ವದ ಗುಂಪು ಪಕ್ಷದ ಮುಖ್ಯಸ್ಥ ಜೆ.ಪಿ.ನಡ್ಡಾ ಮತ್ತು ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರ ಭೇಟಿಗೆ ಸಮಯವನ್ನು ಕೇಳಿದ್ದಾರೆ.

ಇದನ್ನೂ ಓದಿ: ಪಂಜಾಬಿಗಳು ಮತ್ತು ಜಾಟ್‌ಗಳು ದೈಹಿಕವಾಗಿ ಶಕ್ತರು; ಆದರೆ ಅವರಿಗೆ ಮಿದುಳಿಲ್ಲ: ತ್ರಿಪುರ ಸಿಎಂ ವಿಪ್ಲವ್ ದೇವ್ ವಿವಾದ

ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಕೂಡಾ ಭೇಟಿಯಾಗಲು ಅವರು ಪ್ರಯತ್ನಿಸುತ್ತಿದ್ದಾರೆಂದು, ನವದೆಹಲಿಯ ತ್ರಿಪುರ ಭವನದಲ್ಲಿರುವ ಶಾಸಕರೊಬ್ಬರು ಹೇಳಿದ್ದಾಗಿ ಎನ್‌ಡಿಟಿವಿ ತಿಳಿಸಿದೆ.

“ಪಕ್ಷದ ಜನಪ್ರಿಯತೆ ಕುಸಿಯುತ್ತಿದ್ದು ನಾವು ಸುಮಾರು 12 ಮಂದಿ ಶಾಸಕರು ಪಕ್ಷದ ನಾಯಕತ್ವದ ಸರ್ವಾಧಿಕಾರ, ಮುಖ್ಯಮಂತ್ರಿಯ ಕಳಪೆ ಆಡಳಿತದ ಬಗ್ಗೆ ಮೌಲ್ಯಮಾಪನ ಮಾಡಬೇಕೆಂದು ನಿರ್ಧರಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.

“ನಾವೆಲ್ಲರೂ ಪಕ್ಷದ ಬದ್ಧ ಕಾರ್ಯಕರ್ತರು ಮತ್ತು ರಾಜ್ಯದಲ್ಲಿ ಬಿಜೆಪಿ ಆಡಳಿತವು ಒಂದಕ್ಕಿಂತ ಹೆಚ್ಚು ಬಾರಿ ತನ್ನ ಅವಧಿಯನ್ನು ಉಳಿಸಿಕೊಳ್ಳಬೇಕೆಂದು ರಾಷ್ಟ್ರೀಯ ನಾಯಕತ್ವಕ್ಕೆ ಹೇಳಲು ನಾವು ಬಯಸುತ್ತೇವೆ. ಆದರೆ ಪ್ರಸ್ತುತ ನಾಯಕತ್ವ ಮುಂದುವರಿದರೆ, ಪ್ರತಿಪಕ್ಷಳಾದ ಎಡಪಕ್ಷಗಳು ಮತ್ತು ಕಾಂಗ್ರೆಸ್ ಇದನ್ನು ಆಕ್ರಮಿಸಿಕೊಳ್ಳುತ್ತದೆ”ಎಂದು ಅವರು ಹೇಳಿದರು.

ಇದನ್ನೂ ಓದಿ: ಹಲವು ರಾಜ್ಯಗಳಲ್ಲಿ ಬಿಜೆಪಿ ಸೋತ ನಂತರ ಮೋದಿ ವರ್ಚಸ್ಸು ಕಡಿಮೆಯಾಗಿದೆಯೆ? – ಡಿ.ಉಮಾಪತಿ

“ಮುಖ್ಯಮಂತ್ರಿ ಹಲವಾರು ವಿಷಯಗಳ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡಿ ಪಕ್ಷವನ್ನು ಹಲವಾರು ಬಾರಿ ಮುಜುಗರಕ್ಕೀಡು ಮಾಡಿದ್ದಾರೆ” ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಕೊರೊನಾ ಬಿಕ್ಕಟ್ಟಿನ ನಿರ್ವಹಣೆ ಕೂಡಾ ಕಳಪೆಯಾಗಿದೆ ಎಂದು ಭಿನ್ನಮತೀಯ ಶಾಸಕರು ಆರೋಪಿಸಿದ್ದು, ಕೇಂದ್ರವು ತ್ರಿಪುರಕ್ಕೆ ತಂಡವನ್ನು ಕಳುಹಿಸುವಂತೆ ಒತ್ತಾಯಿಸಿದೆ. “ಸಾಂಕ್ರಾಮಿಕ ಸಮಯದಲ್ಲಿ, ರಾಜ್ಯದಲ್ಲಿ ಸರಿಯಾದ ಆರೋಗ್ಯ ಸಚಿವರು ಇಲ್ಲ” ಎಂದು ಒಬ್ಬ ಭಿನ್ನಮತೀಯ ಶಾಸಕ ಹೇಳಿದ್ದಾರೆ.

“ಅನುಭವಿ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು ಮುಖ್ಯಮಂತ್ರಿಯ ಸರ್ವಾಧಿಕಾರದ ಸ್ವರೂಪವನ್ನು ನಿಭಾಯಿಸಲು ಸಾಧ್ಯವಾಗದ ಕಾರಣ ಸ್ವಯಂಪ್ರೇರಿತ ನಿವೃತ್ತಿಯ ಮೇಲೆ ರಾಜ್ಯವನ್ನು ತೊರೆಯುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

“ಪಕ್ಷದ ಬಹುಪಾಲು ಶಾಸಕರು ನಾಯಕತ್ವ ಬದಲಾವಣೆಯನ್ನು ಬಯಸುತ್ತಿದ್ದಾರೆ” ಎಂದು ಶಾಸಕರು ಹೇಳಿದ್ದಾರೆ.

ಇದನ್ನೂ ಓದಿ: “ಯಾವುದೇ ಕಾರಣಗಳಿದ್ದರೂ ಸಹ ಜನರು ಹಸಿವಿನಿಂದ ಸಾಯುವಂತೆ ಮಾಡಬಾರದು” : ಕೇಂದ್ರಕ್ಕೆ ಸುಪ್ರೀಂ ತರಾಟೆ

ಆದರೆ, ಮುಖ್ಯಮಂತ್ರಿ ವಿಪ್ಲವ್ ದೇವ್ ಅವರ ಆಪ್ತ ಸಹಾಯಕರು ಭಿನ್ನಮತೀಯ ಶಾಸಕರ ಪ್ರಮಾಣವನ್ನು ಅತೀ ಕಡಿಮೆ ಎಂದು ಹೇಳಿದ್ದಾರೆ. “ಕೇವಲ ಏಳು-ಎಂಟು ಶಾಸಕರು ಮಾತ್ರ ಸರ್ಕಾರದ ಸುಗಮ ಕಾರ್ಯಚಟುವಟಿಕೆಯಲ್ಲಿ ಗೊಂದಲವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಮತ್ತು ಬಹುಷಃ ಅವರು ಕಾಂಗ್ರೆಸ್‌‌ನಿಂದ ಬಂದವರು” ಎಂದು ಹೇಳಿದ್ದಾರೆ.

ಹಳೆಯ ಬಿಜೆಪಿಗರಿಗೆ, ಪಕ್ಷದ ಹೆಚ್ಚಿನ ಕಾರ್ಯಕರ್ತರಿಗೆ ಮತ್ತು ವಿವಿಧ ಹಂತಗಳಲ್ಲಿರುವ ನಾಯಕರಿಗೆ ವಿಪ್ಲವ್ ದೇವ್ ನಾಯಕತ್ವದ ಬಗ್ಗೆ ಸಂಪೂರ್ಣ ನಂಬಿಕೆ ಮತ್ತು ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.

ಬಿಜೆಪಿ ಮತ್ತು ಅದರ ಮಿತ್ರಪಕ್ಷ ಇಂಡೀಜಿನಿಯಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರ (ಐಪಿಎಫ್‌ಟಿ) 2018 ರಲ್ಲಿ ತ್ರಿಪುರದಲ್ಲಿ ಐತಿಹಾಸಿಕ ಗೆಲುವು ದಾಖಲಿಸಿ, 25 ವರ್ಷದ ಎಡಪಂಥೀಯ ಸರ್ಕಾರವನ್ನು ಕೆಳಗಿಳಿಸಿತ್ತು. 60 ಸದಸ್ಯರಿರುವ ವಿಧಾನಸಭೆಯಲ್ಲಿ ಬಿಜೆಪಿ 36 ಶಾಸಕರನ್ನು ಹೊಂದಿದ್ದು, 8 ಐಪಿಎಫ್‌ಟಿ ಶಾಸಕರ ಬೆಂಬಲವನ್ನು ಹೊಂದಿದೆ.

ಇದನ್ನೂ ಓದಿ: ಥ್ಯಾಂಕ್ಯೂ ಅಮೀರ್ ಖಾನ್ ಎಂದ ಪ್ರಧಾನಿ ನರೇಂದ್ರ ಮೋದಿ

ವಿಡಿಯೋ ನೋಡಿ: ಆರ್ಥಿಕ ಪರಿಸ್ಥಿತಿ ಕುರಿತು ಮಾಜಿ ಪ್ರಧಾನಿ ಮನಮೋಹನ್ ಸಿಂಗರ ಹೇಳಿಕೆ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ಕಿರುಕುಳ ಪ್ರಕರಣ: ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣಗೆ ಮಧ್ಯಂತರ ಜಾಮೀನು

0
ಮನೆಕೆಲಸದಾಕೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಗುರುವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. 47ರ ಹರೆಯದ ಮನೆ ಕೆಲಸದಾಕೆಗೆ ಲೈಂಗಿಕ...