Homeಮುಖಪುಟತ್ರಿಪುರ BJP ಸರ್ಕಾರದಲ್ಲಿ ಬಿರುಕು; ದೆಹಲಿಗೆ ದೌಡಾಯಿಸಿದ ಬಂಡಾಯ ಶಾಸಕರು

ತ್ರಿಪುರ BJP ಸರ್ಕಾರದಲ್ಲಿ ಬಿರುಕು; ದೆಹಲಿಗೆ ದೌಡಾಯಿಸಿದ ಬಂಡಾಯ ಶಾಸಕರು

ಮುಖ್ಯಮಂತ್ರಿ ವಿಪ್ಲವ್ ದೇವ್ ಹಲವಾರು ವಿಷಯಗಳ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡಿ ಪಕ್ಷವನ್ನು ಹಲವಾರು ಬಾರಿ ಮುಜುಗರಕ್ಕೀಡು ಮಾಡಿದ್ದಾರೆ ಎಂದು ಬಂಡಾಯ ಶಾಸಕರು ಹೇಳಿದ್ದಾರೆ.

- Advertisement -
- Advertisement -

ತ್ರಿಪುರ ಮುಖ್ಯಮಂತ್ರಿ ವಿಪ್ಲವ್ ಕುಮಾರ್ ದೇವ್ ವಿರುದ್ಧ ಬಿಜೆಪಿ ಶಾಸಕರ ಒಂದು ಗುಂಪು ದಂಗೆಯೆದ್ದಿದ್ದು, ದೆಹಲಿಗೆ ತಲುಪಿದ್ದಾರೆ. ರಾಜ್ಯದ 12 ಮಂದಿ ಶಾಸಕರು ಪಕ್ಷದ ಉನ್ನತ ನಾಯಕತ್ವವನ್ನು ಭೇಟಿಯಾಗಿ ಮುಖ್ಯಮಂತ್ರಿಯ “ಕಳಪೆ ನಾಯಕತ್ವ” ಮತ್ತು “ದುರಾಡಳಿತ” ಬಗ್ಗೆ ದೂರ ನೀಡಲು ಪ್ರಯತ್ನಿಸುತ್ತಿದ್ದಾರೆ ಎಂದು ವರದಿಯಾಗಿದೆ.

ರಾಜ್ಯದ ಮಾಜಿ ಆರೋಗ್ಯ ಸಚಿವ ಮತ್ತು ಬಿಜೆಪಿ ಶಾಸಕ ಸುದೀಪ್ ರಾಯ್ ಬಾರ್ಮನ್ ನೇತೃತ್ವದ ಗುಂಪು ಪಕ್ಷದ ಮುಖ್ಯಸ್ಥ ಜೆ.ಪಿ.ನಡ್ಡಾ ಮತ್ತು ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರ ಭೇಟಿಗೆ ಸಮಯವನ್ನು ಕೇಳಿದ್ದಾರೆ.

ಇದನ್ನೂ ಓದಿ: ಪಂಜಾಬಿಗಳು ಮತ್ತು ಜಾಟ್‌ಗಳು ದೈಹಿಕವಾಗಿ ಶಕ್ತರು; ಆದರೆ ಅವರಿಗೆ ಮಿದುಳಿಲ್ಲ: ತ್ರಿಪುರ ಸಿಎಂ ವಿಪ್ಲವ್ ದೇವ್ ವಿವಾದ

ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಕೂಡಾ ಭೇಟಿಯಾಗಲು ಅವರು ಪ್ರಯತ್ನಿಸುತ್ತಿದ್ದಾರೆಂದು, ನವದೆಹಲಿಯ ತ್ರಿಪುರ ಭವನದಲ್ಲಿರುವ ಶಾಸಕರೊಬ್ಬರು ಹೇಳಿದ್ದಾಗಿ ಎನ್‌ಡಿಟಿವಿ ತಿಳಿಸಿದೆ.

“ಪಕ್ಷದ ಜನಪ್ರಿಯತೆ ಕುಸಿಯುತ್ತಿದ್ದು ನಾವು ಸುಮಾರು 12 ಮಂದಿ ಶಾಸಕರು ಪಕ್ಷದ ನಾಯಕತ್ವದ ಸರ್ವಾಧಿಕಾರ, ಮುಖ್ಯಮಂತ್ರಿಯ ಕಳಪೆ ಆಡಳಿತದ ಬಗ್ಗೆ ಮೌಲ್ಯಮಾಪನ ಮಾಡಬೇಕೆಂದು ನಿರ್ಧರಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.

“ನಾವೆಲ್ಲರೂ ಪಕ್ಷದ ಬದ್ಧ ಕಾರ್ಯಕರ್ತರು ಮತ್ತು ರಾಜ್ಯದಲ್ಲಿ ಬಿಜೆಪಿ ಆಡಳಿತವು ಒಂದಕ್ಕಿಂತ ಹೆಚ್ಚು ಬಾರಿ ತನ್ನ ಅವಧಿಯನ್ನು ಉಳಿಸಿಕೊಳ್ಳಬೇಕೆಂದು ರಾಷ್ಟ್ರೀಯ ನಾಯಕತ್ವಕ್ಕೆ ಹೇಳಲು ನಾವು ಬಯಸುತ್ತೇವೆ. ಆದರೆ ಪ್ರಸ್ತುತ ನಾಯಕತ್ವ ಮುಂದುವರಿದರೆ, ಪ್ರತಿಪಕ್ಷಳಾದ ಎಡಪಕ್ಷಗಳು ಮತ್ತು ಕಾಂಗ್ರೆಸ್ ಇದನ್ನು ಆಕ್ರಮಿಸಿಕೊಳ್ಳುತ್ತದೆ”ಎಂದು ಅವರು ಹೇಳಿದರು.

ಇದನ್ನೂ ಓದಿ: ಹಲವು ರಾಜ್ಯಗಳಲ್ಲಿ ಬಿಜೆಪಿ ಸೋತ ನಂತರ ಮೋದಿ ವರ್ಚಸ್ಸು ಕಡಿಮೆಯಾಗಿದೆಯೆ? – ಡಿ.ಉಮಾಪತಿ

“ಮುಖ್ಯಮಂತ್ರಿ ಹಲವಾರು ವಿಷಯಗಳ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡಿ ಪಕ್ಷವನ್ನು ಹಲವಾರು ಬಾರಿ ಮುಜುಗರಕ್ಕೀಡು ಮಾಡಿದ್ದಾರೆ” ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಕೊರೊನಾ ಬಿಕ್ಕಟ್ಟಿನ ನಿರ್ವಹಣೆ ಕೂಡಾ ಕಳಪೆಯಾಗಿದೆ ಎಂದು ಭಿನ್ನಮತೀಯ ಶಾಸಕರು ಆರೋಪಿಸಿದ್ದು, ಕೇಂದ್ರವು ತ್ರಿಪುರಕ್ಕೆ ತಂಡವನ್ನು ಕಳುಹಿಸುವಂತೆ ಒತ್ತಾಯಿಸಿದೆ. “ಸಾಂಕ್ರಾಮಿಕ ಸಮಯದಲ್ಲಿ, ರಾಜ್ಯದಲ್ಲಿ ಸರಿಯಾದ ಆರೋಗ್ಯ ಸಚಿವರು ಇಲ್ಲ” ಎಂದು ಒಬ್ಬ ಭಿನ್ನಮತೀಯ ಶಾಸಕ ಹೇಳಿದ್ದಾರೆ.

“ಅನುಭವಿ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು ಮುಖ್ಯಮಂತ್ರಿಯ ಸರ್ವಾಧಿಕಾರದ ಸ್ವರೂಪವನ್ನು ನಿಭಾಯಿಸಲು ಸಾಧ್ಯವಾಗದ ಕಾರಣ ಸ್ವಯಂಪ್ರೇರಿತ ನಿವೃತ್ತಿಯ ಮೇಲೆ ರಾಜ್ಯವನ್ನು ತೊರೆಯುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

“ಪಕ್ಷದ ಬಹುಪಾಲು ಶಾಸಕರು ನಾಯಕತ್ವ ಬದಲಾವಣೆಯನ್ನು ಬಯಸುತ್ತಿದ್ದಾರೆ” ಎಂದು ಶಾಸಕರು ಹೇಳಿದ್ದಾರೆ.

ಇದನ್ನೂ ಓದಿ: “ಯಾವುದೇ ಕಾರಣಗಳಿದ್ದರೂ ಸಹ ಜನರು ಹಸಿವಿನಿಂದ ಸಾಯುವಂತೆ ಮಾಡಬಾರದು” : ಕೇಂದ್ರಕ್ಕೆ ಸುಪ್ರೀಂ ತರಾಟೆ

ಆದರೆ, ಮುಖ್ಯಮಂತ್ರಿ ವಿಪ್ಲವ್ ದೇವ್ ಅವರ ಆಪ್ತ ಸಹಾಯಕರು ಭಿನ್ನಮತೀಯ ಶಾಸಕರ ಪ್ರಮಾಣವನ್ನು ಅತೀ ಕಡಿಮೆ ಎಂದು ಹೇಳಿದ್ದಾರೆ. “ಕೇವಲ ಏಳು-ಎಂಟು ಶಾಸಕರು ಮಾತ್ರ ಸರ್ಕಾರದ ಸುಗಮ ಕಾರ್ಯಚಟುವಟಿಕೆಯಲ್ಲಿ ಗೊಂದಲವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಮತ್ತು ಬಹುಷಃ ಅವರು ಕಾಂಗ್ರೆಸ್‌‌ನಿಂದ ಬಂದವರು” ಎಂದು ಹೇಳಿದ್ದಾರೆ.

ಹಳೆಯ ಬಿಜೆಪಿಗರಿಗೆ, ಪಕ್ಷದ ಹೆಚ್ಚಿನ ಕಾರ್ಯಕರ್ತರಿಗೆ ಮತ್ತು ವಿವಿಧ ಹಂತಗಳಲ್ಲಿರುವ ನಾಯಕರಿಗೆ ವಿಪ್ಲವ್ ದೇವ್ ನಾಯಕತ್ವದ ಬಗ್ಗೆ ಸಂಪೂರ್ಣ ನಂಬಿಕೆ ಮತ್ತು ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.

ಬಿಜೆಪಿ ಮತ್ತು ಅದರ ಮಿತ್ರಪಕ್ಷ ಇಂಡೀಜಿನಿಯಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರ (ಐಪಿಎಫ್‌ಟಿ) 2018 ರಲ್ಲಿ ತ್ರಿಪುರದಲ್ಲಿ ಐತಿಹಾಸಿಕ ಗೆಲುವು ದಾಖಲಿಸಿ, 25 ವರ್ಷದ ಎಡಪಂಥೀಯ ಸರ್ಕಾರವನ್ನು ಕೆಳಗಿಳಿಸಿತ್ತು. 60 ಸದಸ್ಯರಿರುವ ವಿಧಾನಸಭೆಯಲ್ಲಿ ಬಿಜೆಪಿ 36 ಶಾಸಕರನ್ನು ಹೊಂದಿದ್ದು, 8 ಐಪಿಎಫ್‌ಟಿ ಶಾಸಕರ ಬೆಂಬಲವನ್ನು ಹೊಂದಿದೆ.

ಇದನ್ನೂ ಓದಿ: ಥ್ಯಾಂಕ್ಯೂ ಅಮೀರ್ ಖಾನ್ ಎಂದ ಪ್ರಧಾನಿ ನರೇಂದ್ರ ಮೋದಿ

ವಿಡಿಯೋ ನೋಡಿ: ಆರ್ಥಿಕ ಪರಿಸ್ಥಿತಿ ಕುರಿತು ಮಾಜಿ ಪ್ರಧಾನಿ ಮನಮೋಹನ್ ಸಿಂಗರ ಹೇಳಿಕೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...