Homeಮುಖಪುಟತ್ರಿಪುರ: ಸದನದಲ್ಲಿ ಪೋರ್ನ್ ವಿಡಿಯೊ ನೋಡಿ ಸಿಕ್ಕಿಬಿದ್ದ ಬಿಜೆಪಿ ಶಾಸಕ

ತ್ರಿಪುರ: ಸದನದಲ್ಲಿ ಪೋರ್ನ್ ವಿಡಿಯೊ ನೋಡಿ ಸಿಕ್ಕಿಬಿದ್ದ ಬಿಜೆಪಿ ಶಾಸಕ

- Advertisement -
- Advertisement -

ತ್ರಿಪುರ ರಾಜ್ಯ ವಿಧಾನಸಭೆಯ ಅಧಿವೇಶನದ ವೇಳೆ ಬಿಜೆಪಿ ಶಾಸಕರೊಬ್ಬರು ತಮ್ಮ ಮೊಬೈಲ್ ಫೋನ್‌ನಲ್ಲಿ ಪೋರ್ನ್ ವೀಕ್ಷಿಸುತ್ತಿರುವುದು ವಿಡಿಯೊದಲ್ಲಿ ರೆಕಾರ್ಡ್ ಆಗಿದೆ.

ವೀಡಿಯೊವು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಆಕ್ರೋಶ ಮತ್ತು ಟೀಕೆಗೆ ಗುರಿಯಾಗಿದೆ. ರಾಜ್ಯದ ಬಾಗ್ಬಸ್ಸಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಶಾಸಕ ಜದಬ್ ಲಾಲ್ ನಾಥ್ ಪೋರ್ನ್ ವಿಡಿಯೊ ನೋಡಿ ಸಿಕ್ಕಿಬಿದ್ದಿದ್ದಾರೆ.

ರಾಜ್ಯ ಬಜೆಟ್‌ಗೆ ಸಂಬಂಧಿಸಿದ ವಿಷಯಗಳ ಕುರಿತು ವಿಧಾನಸಭೆಯಲ್ಲಿ ಚರ್ಚೆ ನಡೆಯುತ್ತಿರುವಾಗ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಶಾಸಕ ಜದಬ್ ಅವರ ಹಿಂದೆ ಕುಳಿತಿದ್ದವರು ಯಾರೋ ವಿಡಿಯೊವನ್ನು ಸೆರೆಹಿಡಿದಿದ್ದಾರೆ.

ಇದನ್ನೂ ಓದಿರಿ: ಧರ್ಮದೊಂದಿಗೆ ರಾಜಕೀಯ ಬೆರೆಸುವುದನ್ನು ನಿಲ್ಲಿಸಿ, ದ್ವೇಷ ಭಾ‍ಷಣ ನಿಲ್ಲುತ್ತೆ: ರಾಜಕಾರಣಿಗಳಿಗೆ ಸುಪ್ರೀಂ ತಾಖೀತು

ಸ್ಪೀಕರ್ ಮತ್ತು ಇತರ ಶಾಸಕರು ಮಾತನಾಡುತ್ತಿರುವಾಗ ಜದಬ್ ತಮ್ಮ ಫೋನ್‌ನಲ್ಲಿ ಅಶ್ಲೀಲ ವಿಡಿಯೊಗಳನ್ನು ನೋಡುತ್ತಿರುವುದು ಕಂಡುಬಂದಿದೆ.

ಜದಬ್ ಅವರಿಗೆ ಸಮನ್ಸ್‌ ನೀಡಿರುವ ಬಿಜೆಪಿ ವಿವರಣೆ ಕೇಳಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಈಗ ಬಂದಿರುವ ಆರೋಪಕ್ಕಾಗಲೀ, ವಿಡಿಯೊ ವೀಕ್ಷಣೆ ಕುರಿತಾಗಲೀ ಯಾವುದೇ ಪ್ರತಿಕ್ರಿಯೆಯನ್ನು ಜದಬ್ ನೀಡಿಲ್ಲ. ಅಧಿವೇಶನ ಮುಗಿದ ಕೂಡಲೇ ಅವರು ಸದನದಿಂದ ನಿರ್ಗಮಿಸಿದರು ಎಂದು ಮೂಲಗಳು ತಿಳಿಸಿವೆ.

ಬಿಜೆಪಿಯವರು ಸಾರ್ವಜನಿಕ ಸ್ಥಳದಲ್ಲಿ ಪೋರ್ನ್ ವೀಕ್ಷಿಸಿ ಸಿಕ್ಕಿಬಿದ್ದಿರುವುದು ಇದೇ ಮೊದಲಲ್ಲ. 2012 ರಲ್ಲಿ ಕರ್ನಾಟಕದ ಬಿಜೆಪಿ ಸರ್ಕಾರದ ಇಬ್ಬರು ಸಚಿವರು ರಾಜ್ಯ ವಿಧಾನಸಭೆಯೊಳಗೆ ತಮ್ಮ ಫೋನ್‌ಗಳಲ್ಲಿ ಪೋರ್ನ್ ಕ್ಲಿಪ್‌ಗಳನ್ನು ವೀಕ್ಷಿಸಿ ಸಿಕ್ಕಿಬಿದ್ದಿದ್ದರು. ನಂತರ ರಾಜೀನಾಮೆಯನ್ನೂ ನೀಡಬೇಕಾಗಿ ಬಂದಿತ್ತು.

“ಯಾವುದೇ ತಪ್ಪು ಮಾಡಿಲ್ಲ” ಎಂದು ತನಿಖೆಯ ವರದಿ ತಿಳಿಸಿದ ಬಳಿಕ ಲಕ್ಷ್ಮಣ ಸವದಿ ಮತ್ತು ಸಿ.ಸಿ.ಪಾಟೀಲ್ ಅವರನ್ನು ಪಕ್ಷಕ್ಕೆ ಮರಳಿ ಸೇರಿಸಿಕೊಳ್ಳಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...