Homeಮುಖಪುಟತ್ರಿಪುರಾ: ಸಾಮಾಜಿಕ ಮಾಧ್ಯಮದಲ್ಲಿ ಪ್ರಚೋದನಕಾರಿ ಪೋಸ್ಟ್‌, 71 ಜನರ ವಿರುದ್ಧ ಪ್ರಕರಣ

ತ್ರಿಪುರಾ: ಸಾಮಾಜಿಕ ಮಾಧ್ಯಮದಲ್ಲಿ ಪ್ರಚೋದನಕಾರಿ ಪೋಸ್ಟ್‌, 71 ಜನರ ವಿರುದ್ಧ ಪ್ರಕರಣ

- Advertisement -
- Advertisement -

ತ್ರಿಪುರಾ ರಾಜ್ಯದಲ್ಲಿ ಶಾಂತಿ ಮತ್ತು ಕೋಮು ಸೌಹಾರ್ದವನ್ನು ಕದಡುವ ಉದ್ದೇಶದಿಂದ ಸಾಮಾಜಿಕ ಮಾಧ್ಯಮದಲ್ಲಿ ಪ್ರಚೋದನಕಾರಿ ಮತ್ತು ನಕಲಿ ಪೋಸ್ಟ್‌ಗಳನ್ನು ಹಾಕಿದ್ದ ಆರೋಪದ ಮೇಲೆ 71 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ತ್ರಿಪುರಾದಲ್ಲಿ ಇತ್ತೀಚೆಗೆ ನಡೆದ ಕೋಮುಗಲಭೆ ಘಟನೆಗಳ ವಿಷಯವಾಗಿ ಪ್ರಚೋದನಕಾರಿ ಮತ್ತು ನಕಲಿ ಪೋಸ್ಟ್‌ಗಳನ್ನು ಹಾಕಿದ್ದ 71 ಜನರ ವಿರುದ್ಧ ಐದು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ತ್ರಿಪುರಾ ಪೊಲೀಸರು ಬುಧವಾರ ತಿಳಿಸಿದ್ದಾರೆ.

ಕೋಮುಗಲಭೆಯ ವದಂತಿಗಳನ್ನು ಹರಡುವ ಮತ್ತು ಸಮಾಜದಲ್ಲಿ ದ್ವೇಷವನ್ನು ಸೃಷ್ಟಿಸಲು ಪ್ರಯತ್ನಿಸುವವ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿದ 71 ಜನರ ವಿರುದ್ಧ ಐದು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ರಾಜ್ಯ ಪೊಲೀಸರು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಸಮಾಜದಲ್ಲಿ ದ್ವೇಷ ಸೃಷ್ಟಿಸಲು ಪ್ರಯತ್ನಿಸುತ್ತಿರುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತ್ರಿಪುರಾ ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ತ್ರಿಪುರಾ: VHP ರ್‍ಯಾಲಿ ವೇಳೆ ಮಸೀದಿ ಧ್ವಂಸ, ಎರಡು ಅಂಗಡಿಗಳಿಗೆ ಬೆಂಕಿ

 

 

‘‘ಸರ್ಕಾರ ಮತ್ತು ರಾಜ್ಯ ಪೊಲೀಸರಿಗೆ ಕಳಂಕ ತರುವ ಉದ್ದೇಶದಿಂದ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಚಿತ್ರಗಳು ಮತ್ತು ವಿಡಿಯೋಗಳನ್ನು ಅಪ್‌ಲೋಡ್ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪ್ರಚೋದನಕಾರಿ ಪೋಸ್ಟ್‌ಗಳನ್ನು ಲೈಕ್ ಅಥವಾ ಮರುಟ್ವೀಟ್ ಮಾಡಬೇಡಿ. ಏಕೆಂದರೆ ಅದು ವದಂತಿಗಳನ್ನು ಹರಡುತ್ತದೆ” ಎಂದು ಪೊಲೀಸರು ಜನರಲ್ಲಿ ಮನವಿ ಮಾಡಿದ್ದಾರೆ.

ಗೋಮತಿ ಜಿಲ್ಲೆಯ ಕಕ್ರಾಬನ್ ಪ್ರದೇಶದಲ್ಲಿ ಮಸೀದಿಯನ್ನು ಹಾನಿಗೊಳಿಸಿ, ಧ್ವಂಸಗೊಳಿಸಲಾಗಿದೆ ಎಂದು ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡಲಾಗುತ್ತಿದೆ ಎಂದು ಸುದ್ದಿ ಹಬ್ಬಿಸಲಾಗಿತ್ತು.

“ಇದು ಸುಳ್ಳು ಸುದ್ದಿಯಾಗಿದೆ. ಕಕ್ರಬನ್‌ನ ದರ್ಗಾಬಜಾರ್ ಪ್ರದೇಶದಲ್ಲಿನ ಮಸೀದಿಯು ಸಂಪೂರ್ಣವಾಗಿ ಉತ್ತಮವಾಗಿದೆ. ಗೋಮತಿ ಪೊಲೀಸರು ಶಾಂತಿ ಮತ್ತು ನೆಮ್ಮದಿಯನ್ನು ಕಾಪಾಡಲು ಕೆಲಸ ಮಾಡುತ್ತಿದ್ದಾರೆ” ಎಂದು ರಾಜ್ಯ ಪೊಲೀಸರು ತಿಳಿಸಿದ್ದಾರೆ.

ಇತ್ತೀಚೆಗೆ ಬಾಂಗ್ಲಾದೇಶದಲ್ಲಿ ದುರ್ಗಾಪೂಜಾ ಮಂಟಪವನ್ನು ಧ್ವಂಸಗೊಳಿಸಿದ್ದನ್ನು ವಿರೋಧಿಸಿ ತ್ರಿಪುರಾದ ಪಾಣಿಸಾಗರ್‌ನಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಗಳಾದ ವಿಎಚ್‌ಪಿ ಮತ್ತು ಬಜರಂಗದಳ ರ್‍ಯಾಲಿ ನಡೆಸಿದ್ದವು. ಈ ವೇಳೆ ಚಮ್ಟಿಲ್ಲಾ ಪ್ರದೇಶದ ಮಸೀದಿ ಮತ್ತು ಕೆಲವು ಅಂಗಡಿಗಳನ್ನು ಧ್ವಂಸಗೊಳಿಸಲಾಗಿದ್ದು ಎರಡು ಅಂಗಡಿಗಳಿಗೆ ಬೆಂಕಿ ಹಚ್ಚಿದ್ದರು.

“ಪಾಣಿಸಾಗರದಲ್ಲಿ ವಿಎಚ್‌ಪಿ ಸುಮಾರು 3,500 ಜನರ ಪ್ರತಿಭಟನಾ ರ್‍ಯಾಲಿಯನ್ನು ಆಯೋಜಿಸಿತ್ತು. ರ್‍ಯಾಲಿಯಲ್ಲಿ ವಿಎಚ್‌ಪಿ ಕಾರ್ಯಕರ್ತರ ಒಂದು ವಿಭಾಗವು ಚಮ್ಟಿಲ್ಲಾ ಪ್ರದೇಶದಲ್ಲಿ ಮಸೀದಿಯನ್ನು ಧ್ವಂಸಗೊಳಿಸಿದೆ. ನಂತರ, ಅಲ್ಲಿಂದ ಸುಮಾರು 800 ಗಜಗಳಷ್ಟು ದೂರದಲ್ಲಿರುವ ರೋವಾ ಬಜಾರ್ ಪ್ರದೇಶದ ಮೂರು ಮನೆಗಳು ಮತ್ತು ಮೂರು ಅಂಗಡಿಗಳನ್ನು ಧ್ವಂಸಗೊಳಿಸಲಾಗಿದೆ ಮತ್ತು ಎರಡು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ” ಪಾಣಿಸಾಗರ ಉಪವಿಭಾಗೀಯ ಪೊಲೀಸ್ ಅಧಿಕಾರಿ (SDPO) ಸೌಭಿಕ್ ಡೇ ಹೇಳಿದ್ದರು.


ಇದನ್ನೂ ಓದಿ: ಮತೀಯ ಸಂಕೇತಗಳಿಗೆ ಎನ್‌ಎಸ್‌ಡಿ ಇನ್‌ಸ್ಟಾಗ್ರಾಮ್‌ ಖಾತೆ ದುರ್ಬಳಕೆ: 272 ಜೀವಪರರ ಬಹಿರಂಗ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...