Homeಮುಖಪುಟತನ್ನದೇ ಪಕ್ಷದ ಶಾಸಕನನ್ನು ‘ಭೂ ಮಾಫಿಯ’ ಎಂದ ತ್ರಿಪುರಾ ಸಿಎಂ ಬಿಪ್ಲಬ್ ದೇಬ್!

ತನ್ನದೇ ಪಕ್ಷದ ಶಾಸಕನನ್ನು ‘ಭೂ ಮಾಫಿಯ’ ಎಂದ ತ್ರಿಪುರಾ ಸಿಎಂ ಬಿಪ್ಲಬ್ ದೇಬ್!

- Advertisement -
- Advertisement -

ತ್ರಿಪುರಾದ ಆಡಳಿತಾರೂಢ ಬಿಜೆಪಿಯೊಳಗಿನ ಬಣ ವೈಷಮ್ಯವು ತಿರುವು ಪಡೆದುಕೊಂಡಿದ್ದು, ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಶನಿವಾರ ಪಕ್ಷದ ಶಾಸಕ ಆಶಿಸ್ ಕುಮಾರ್ ಸಹಾ ಅವರನ್ನು ‘ಭೂ ಮಾಫಿಯಾ’ ಎಂದು ಕರೆದಿದ್ದು, ಅವರನ್ನು ಜೈಲಿಗೆ ಕಳುಹಿಸಬೇಕು ಎಂದು ಹೇಳಿದ್ದಾರೆ.

“ಯಾರಾದರೂ ರಾಜಕೀಯವನ್ನು ಗುರಾಣಿಯಾಗಿ ಬಳಸಿಕೊಂಡು ಭೂ ಒತ್ತುವರಿಯಂತಹ ಕಾನೂನುಬಾಹಿರ ಕೃತ್ಯಗಳನ್ನು ನಡೆಸಿದರೆ, ಕಾನೂನು ಕ್ರಮದಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ. ಕಾನೂನು ತನ್ನದೇ ಆದ ಕ್ರಮ ತೆಗೆದುಕೊಳ್ಳುತ್ತದೆ ಮತ್ತು ಯಾರನ್ನೂ ಬಿಡುವುದಿಲ್ಲ” ಎಂದು ಮುಖ್ಯಮಂತ್ರಿ ಬಿಪ್ಲಬ್‌ ದೇಬ್ ಹೇಳಿದ್ದಾರೆ.

ಇದನ್ನೂ ಓದಿ:ಪಂಜಾಬಿಗಳು ಮತ್ತು ಜಾಟ್‌ಗಳಿಗೆ ಮಿದುಳಿಲ್ಲ ಹೇಳಿಕೆ: ಕ್ಷಮೆ ಕೇಳಿದ ಸಿಎಂ ಬಿಪ್ಲಬ್‌ ದೇಬ್

ಮುಖ್ಯಮಂತ್ರಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಆಶಿಸ್‌ ಕುಮಾರ್‌ ಸಹಾ, “ಈ ಆರೋಪದ ಕುರಿತು ತನಿಖೆ ನಡೆಸಿ ಸಾಧ್ಯವಾದರೆ ಕ್ರಮ ಕೈಗೊಳ್ಳಲಿ” ಎಂದು ಸವಾಲು ಹಾಕಿದ್ದಾರೆ.

ಮುಖ್ಯಮಂತ್ರಿ ಹೇಳಿಕೆಗೆ ಒಂದು ದಿನ ಮೊದಲು, ಕಳೆದ 30 ವರ್ಷಗಳಿಂದ ಶಾಸಕ ಆಶಿಸ್‌ ಸಹಾ ಅವರ ವಶದಲ್ಲಿದ್ದ ಉಜ್ಜಯಂತ ಅರಮನೆ ಮುಂಭಾಗದ ಕಟ್ಟಡದ ಒಂದು ಭಾಗವನ್ನು ಅಗರ್ತಲಾ ಮುನ್ಸಿಪಲ್ ಕಾರ್ಪೊರೇಷನ್‌ (ಎಎಂಸಿ) ಕೆಡವಿತ್ತು. ಈ ಕಟ್ಟಡವನ್ನು ಎಡಪಂಥ ವಿರೋಧಿ ಸರ್ಕಾರಿ ನೌಕರರ ಒಕ್ಕೂಟದ ಕಚೇರಿಯಾಗಿ ಬಳಸಲಾಗುತ್ತು.

ನಗರದ ಹೃದಯ ಭಾಗದಲ್ಲಿರುವ 7,000 ಚದರ ಅಡಿ ಅಳತೆಯ ಸರ್ಕಾರಿ ಭೂಮಿಯನ್ನು ಶಾಸಕ ಆಶಿಸ್‌ ಸಹಾ ಮತ್ತು ಟಿಎಂಸಿ ರಾಜ್ಯ ಸಂಚಾಲಕ ಸುಬಾಲ್ ಭೌಮಿಕ್ 90ರ ದಶಕದ ಆರಂಭದಲ್ಲಿ ಅಕ್ರಮವಾಗಿ ವಶಪಡಿಸಿಕೊಂಡಿದ್ದಾರೆ. ಜೊತೆಗೆ ಅದನ್ನು ತಮ್ಮ ವೈಯಕ್ತಿಕ ಚಟುವಟಿಕೆಗಳಿಗೆ ಬಳಸಿಕೊಂಡಿದ್ದಾರೆ ಎಂದು ಎಎಂಸಿ ಮೇಯರ್ ದೀಪಕ್ ಮಜುಂದಾರ್ ಆರೋಪಿಸಿದ್ದಾರೆ.

ಇದನ್ನೂ ಓದಿ:ತ್ರಿಪುರದಲ್ಲಿ ನಟಿ, ಟಿಎಂಸಿ ನಾಯಕಿ ಸಯೋನಿ ಘೋಷ್ ಮೇಲೆ ಹಲ್ಲೆ, ಬಂಧನ – ಪ್ರತಿಭಟನೆಗೆ ಸಜ್ಜು

ಆರಂಭದಲ್ಲಿ ಈ ಕಟ್ಟಡವನ್ನು ಕಾಂಗ್ರೆಸ್ ಪಕ್ಷ, ನಂತರ ತೃಣಮೂಲ ಕಾಂಗ್ರೆಸ್‌ ಪಕ್ಷದ ಚಟುವಟಿಕೆಗಳಿಗೆ ಬಳಸಲಾಯಿತು. 2018 ರಲ್ಲಿ ಬಿಜೆಪಿ ಟಿಕೆಟ್‌ ಮೂಲಕ ಆಶಿಸ್‌‌ ಸಹಾ ಶಾಸಕರಾದಾಗ ಸರ್ಕಾರಿ ನೌಕರರ ಒಕ್ಕೂಟದ ಕಚೇರಿಯಾಗಿ ಬದಲಾಯಿತು.

“ಎಡರಂಗದ ಆಡಳಿತಾವಧಿಯಲ್ಲಿ ಈ ಕಟ್ಟಡವನ್ನು ಮರಳಿ ಪಡೆಯಲು ಆಗಿನ ಎಎಂಸಿ ಹಲವಾರು ಪ್ರಯತ್ನಗಳನ್ನು ಮಾಡಿ ವಿಫಲವಾಗಿತ್ತು. ಆದರೆ ನಾವು ಎಎಂಸಿಯ ಅಧಿಕಾರ ವಹಿಸಿಕೊಂಡ ಎರಡು ವಾರಗಳ ಹಿಂದೆ ನಂತರ, ನಗರದಲ್ಲಿ ಅಕ್ರಮವಾಗಿ ವಶಪಡಿಸಿಕೊಂಡಿರುವ ಎಲ್ಲಾ ಭೂಮಿಯನ್ನು ಮರಳಿ ಪಡೆಯಲು ನಿರ್ಧರಿಸಿದ್ದೇವೆ. ಅನಧಿಕೃತ ವ್ಯಾಪಾರಿಗಳು, ಎಲ್ಲಾ ಫುಟ್‌ಪಾತ್‌ ಅತಿಕ್ರಮಣಗಳನ್ನು ಯಾವುದೆ ರಾಜಕೀಯ ಬಣ್ಣವನ್ನು ಲೆಕ್ಕಿಸದೇ ತೆರವುಗೊಳಿಸುತ್ತೇವೆ” ಎಂದು ಮೇಯರ್‌ ಮಜುಂದಾರ್ ಹೇಳಿದ್ದಾರೆ.

ಮೇಯರ್ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಆಶಿಸ್‌ ಸಹಾ ಮತ್ತು ಸುಬಾಲ್ ಭೌಮಿಕ್, “ಇದು ವೈಯಕ್ತಿಕ ಆಸ್ತಿಯಾಗಿದ್ದು, ಹಲವಾರು ಪ್ರಯತ್ನಗಳನ್ನು ಮಾಡಿ ಎಡರಂಗ ಸರ್ಕಾರಕ್ಕೇ ಏನನ್ನೂ ಮಾಡಲು ಸಾಧ್ಯವಾಗಲಿಲ್ಲ” ಹೇಳಿದ್ದಾರೆ.

ಇದನ್ನೂ ಓದಿ:ತಲೆ ಬೋಳಿಸಿಕೊಂಡು ಬಿಜೆಪಿ ತೊರೆಯಲು ಸಿದ್ದರಾದ ತ್ರಿಪುರ ಶಾಸಕ- ಟಿಎಂಸಿ ಸೇರುವ ಸಾಧ್ಯತೆ

“ತನ್ನದೇ ಶಾಸಕರ ಬಗ್ಗೆ ಸರ್ಕಾರದ ವರ್ತನೆಯನ್ನು ನೋಡಿ ನನಗೆ ಆಶ್ಚರ್ಯವಾಗಿದೆ. ಇದು ರಾಜಕೀಯ ದ್ವೇಷದಿಂದ ಪ್ರೇರಿತವಾದ ಹೆಜ್ಜೆಯಾಗಿದೆ. ಹೈಕೋರ್ಟ್‌ನಲ್ಲಿ ಪರಿಹಾರಕ್ಕಾಗಿ ಹೊಸ ಪ್ರಕರಣವನ್ನು ದಾಖಲಿಸುತ್ತೇನೆ” ಎಂದು ಆಶಿಸ್‌ ಸಹಾ ಹೇಳಿದ್ದಾರೆ.

ನೌಕರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸಮರ್ ರಾಯ್ ಕೂಡ ಬಿಜೆಪಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ನಾವು ಮೊದಲಿನಿಂದಲೂ ಎಡಪಕ್ಷಗಳ ವಿರುದ್ಧ ಕೆಲಸ ಮಾಡುತ್ತಿದ್ದೇವೆ. ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿಗೆ ಬೆಂಬಲ ನೀಡಿ ಈಗಲೂ ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದೇವೆ. ಮೇಯರ್ ಮಾಡಿದ್ದು ಅಕ್ರಮವಾಗಿದ್ದು, ಯಾರನ್ನೋ ಮೆಚ್ಚಿಸಲು ಬಯಸಿದ್ದರು. ಆದರೆ ಇದನ್ನು ನಾವು ಸುಲಭವಾಗಿ ಮರೆಯುವುದಿಲ್ಲ” ಎಂದು ಸಮರ್ ರಾಯ್ ಹೇಳಿದ್ದಾರೆ.

ಇದನ್ನೂ ಓದಿ:ತ್ರಿಪುರ BJP ಸರ್ಕಾರದಲ್ಲಿ ಬಿರುಕು; ದೆಹಲಿಗೆ ದೌಡಾಯಿಸಿದ ಬಂಡಾಯ ಶಾಸಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...