Homeಮುಖಪುಟತನ್ನದೇ ಪಕ್ಷದ ಶಾಸಕನನ್ನು ‘ಭೂ ಮಾಫಿಯ’ ಎಂದ ತ್ರಿಪುರಾ ಸಿಎಂ ಬಿಪ್ಲಬ್ ದೇಬ್!

ತನ್ನದೇ ಪಕ್ಷದ ಶಾಸಕನನ್ನು ‘ಭೂ ಮಾಫಿಯ’ ಎಂದ ತ್ರಿಪುರಾ ಸಿಎಂ ಬಿಪ್ಲಬ್ ದೇಬ್!

- Advertisement -
- Advertisement -

ತ್ರಿಪುರಾದ ಆಡಳಿತಾರೂಢ ಬಿಜೆಪಿಯೊಳಗಿನ ಬಣ ವೈಷಮ್ಯವು ತಿರುವು ಪಡೆದುಕೊಂಡಿದ್ದು, ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಶನಿವಾರ ಪಕ್ಷದ ಶಾಸಕ ಆಶಿಸ್ ಕುಮಾರ್ ಸಹಾ ಅವರನ್ನು ‘ಭೂ ಮಾಫಿಯಾ’ ಎಂದು ಕರೆದಿದ್ದು, ಅವರನ್ನು ಜೈಲಿಗೆ ಕಳುಹಿಸಬೇಕು ಎಂದು ಹೇಳಿದ್ದಾರೆ.

“ಯಾರಾದರೂ ರಾಜಕೀಯವನ್ನು ಗುರಾಣಿಯಾಗಿ ಬಳಸಿಕೊಂಡು ಭೂ ಒತ್ತುವರಿಯಂತಹ ಕಾನೂನುಬಾಹಿರ ಕೃತ್ಯಗಳನ್ನು ನಡೆಸಿದರೆ, ಕಾನೂನು ಕ್ರಮದಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ. ಕಾನೂನು ತನ್ನದೇ ಆದ ಕ್ರಮ ತೆಗೆದುಕೊಳ್ಳುತ್ತದೆ ಮತ್ತು ಯಾರನ್ನೂ ಬಿಡುವುದಿಲ್ಲ” ಎಂದು ಮುಖ್ಯಮಂತ್ರಿ ಬಿಪ್ಲಬ್‌ ದೇಬ್ ಹೇಳಿದ್ದಾರೆ.

ಇದನ್ನೂ ಓದಿ:ಪಂಜಾಬಿಗಳು ಮತ್ತು ಜಾಟ್‌ಗಳಿಗೆ ಮಿದುಳಿಲ್ಲ ಹೇಳಿಕೆ: ಕ್ಷಮೆ ಕೇಳಿದ ಸಿಎಂ ಬಿಪ್ಲಬ್‌ ದೇಬ್

ಮುಖ್ಯಮಂತ್ರಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಆಶಿಸ್‌ ಕುಮಾರ್‌ ಸಹಾ, “ಈ ಆರೋಪದ ಕುರಿತು ತನಿಖೆ ನಡೆಸಿ ಸಾಧ್ಯವಾದರೆ ಕ್ರಮ ಕೈಗೊಳ್ಳಲಿ” ಎಂದು ಸವಾಲು ಹಾಕಿದ್ದಾರೆ.

ಮುಖ್ಯಮಂತ್ರಿ ಹೇಳಿಕೆಗೆ ಒಂದು ದಿನ ಮೊದಲು, ಕಳೆದ 30 ವರ್ಷಗಳಿಂದ ಶಾಸಕ ಆಶಿಸ್‌ ಸಹಾ ಅವರ ವಶದಲ್ಲಿದ್ದ ಉಜ್ಜಯಂತ ಅರಮನೆ ಮುಂಭಾಗದ ಕಟ್ಟಡದ ಒಂದು ಭಾಗವನ್ನು ಅಗರ್ತಲಾ ಮುನ್ಸಿಪಲ್ ಕಾರ್ಪೊರೇಷನ್‌ (ಎಎಂಸಿ) ಕೆಡವಿತ್ತು. ಈ ಕಟ್ಟಡವನ್ನು ಎಡಪಂಥ ವಿರೋಧಿ ಸರ್ಕಾರಿ ನೌಕರರ ಒಕ್ಕೂಟದ ಕಚೇರಿಯಾಗಿ ಬಳಸಲಾಗುತ್ತು.

ನಗರದ ಹೃದಯ ಭಾಗದಲ್ಲಿರುವ 7,000 ಚದರ ಅಡಿ ಅಳತೆಯ ಸರ್ಕಾರಿ ಭೂಮಿಯನ್ನು ಶಾಸಕ ಆಶಿಸ್‌ ಸಹಾ ಮತ್ತು ಟಿಎಂಸಿ ರಾಜ್ಯ ಸಂಚಾಲಕ ಸುಬಾಲ್ ಭೌಮಿಕ್ 90ರ ದಶಕದ ಆರಂಭದಲ್ಲಿ ಅಕ್ರಮವಾಗಿ ವಶಪಡಿಸಿಕೊಂಡಿದ್ದಾರೆ. ಜೊತೆಗೆ ಅದನ್ನು ತಮ್ಮ ವೈಯಕ್ತಿಕ ಚಟುವಟಿಕೆಗಳಿಗೆ ಬಳಸಿಕೊಂಡಿದ್ದಾರೆ ಎಂದು ಎಎಂಸಿ ಮೇಯರ್ ದೀಪಕ್ ಮಜುಂದಾರ್ ಆರೋಪಿಸಿದ್ದಾರೆ.

ಇದನ್ನೂ ಓದಿ:ತ್ರಿಪುರದಲ್ಲಿ ನಟಿ, ಟಿಎಂಸಿ ನಾಯಕಿ ಸಯೋನಿ ಘೋಷ್ ಮೇಲೆ ಹಲ್ಲೆ, ಬಂಧನ – ಪ್ರತಿಭಟನೆಗೆ ಸಜ್ಜು

ಆರಂಭದಲ್ಲಿ ಈ ಕಟ್ಟಡವನ್ನು ಕಾಂಗ್ರೆಸ್ ಪಕ್ಷ, ನಂತರ ತೃಣಮೂಲ ಕಾಂಗ್ರೆಸ್‌ ಪಕ್ಷದ ಚಟುವಟಿಕೆಗಳಿಗೆ ಬಳಸಲಾಯಿತು. 2018 ರಲ್ಲಿ ಬಿಜೆಪಿ ಟಿಕೆಟ್‌ ಮೂಲಕ ಆಶಿಸ್‌‌ ಸಹಾ ಶಾಸಕರಾದಾಗ ಸರ್ಕಾರಿ ನೌಕರರ ಒಕ್ಕೂಟದ ಕಚೇರಿಯಾಗಿ ಬದಲಾಯಿತು.

“ಎಡರಂಗದ ಆಡಳಿತಾವಧಿಯಲ್ಲಿ ಈ ಕಟ್ಟಡವನ್ನು ಮರಳಿ ಪಡೆಯಲು ಆಗಿನ ಎಎಂಸಿ ಹಲವಾರು ಪ್ರಯತ್ನಗಳನ್ನು ಮಾಡಿ ವಿಫಲವಾಗಿತ್ತು. ಆದರೆ ನಾವು ಎಎಂಸಿಯ ಅಧಿಕಾರ ವಹಿಸಿಕೊಂಡ ಎರಡು ವಾರಗಳ ಹಿಂದೆ ನಂತರ, ನಗರದಲ್ಲಿ ಅಕ್ರಮವಾಗಿ ವಶಪಡಿಸಿಕೊಂಡಿರುವ ಎಲ್ಲಾ ಭೂಮಿಯನ್ನು ಮರಳಿ ಪಡೆಯಲು ನಿರ್ಧರಿಸಿದ್ದೇವೆ. ಅನಧಿಕೃತ ವ್ಯಾಪಾರಿಗಳು, ಎಲ್ಲಾ ಫುಟ್‌ಪಾತ್‌ ಅತಿಕ್ರಮಣಗಳನ್ನು ಯಾವುದೆ ರಾಜಕೀಯ ಬಣ್ಣವನ್ನು ಲೆಕ್ಕಿಸದೇ ತೆರವುಗೊಳಿಸುತ್ತೇವೆ” ಎಂದು ಮೇಯರ್‌ ಮಜುಂದಾರ್ ಹೇಳಿದ್ದಾರೆ.

ಮೇಯರ್ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಆಶಿಸ್‌ ಸಹಾ ಮತ್ತು ಸುಬಾಲ್ ಭೌಮಿಕ್, “ಇದು ವೈಯಕ್ತಿಕ ಆಸ್ತಿಯಾಗಿದ್ದು, ಹಲವಾರು ಪ್ರಯತ್ನಗಳನ್ನು ಮಾಡಿ ಎಡರಂಗ ಸರ್ಕಾರಕ್ಕೇ ಏನನ್ನೂ ಮಾಡಲು ಸಾಧ್ಯವಾಗಲಿಲ್ಲ” ಹೇಳಿದ್ದಾರೆ.

ಇದನ್ನೂ ಓದಿ:ತಲೆ ಬೋಳಿಸಿಕೊಂಡು ಬಿಜೆಪಿ ತೊರೆಯಲು ಸಿದ್ದರಾದ ತ್ರಿಪುರ ಶಾಸಕ- ಟಿಎಂಸಿ ಸೇರುವ ಸಾಧ್ಯತೆ

“ತನ್ನದೇ ಶಾಸಕರ ಬಗ್ಗೆ ಸರ್ಕಾರದ ವರ್ತನೆಯನ್ನು ನೋಡಿ ನನಗೆ ಆಶ್ಚರ್ಯವಾಗಿದೆ. ಇದು ರಾಜಕೀಯ ದ್ವೇಷದಿಂದ ಪ್ರೇರಿತವಾದ ಹೆಜ್ಜೆಯಾಗಿದೆ. ಹೈಕೋರ್ಟ್‌ನಲ್ಲಿ ಪರಿಹಾರಕ್ಕಾಗಿ ಹೊಸ ಪ್ರಕರಣವನ್ನು ದಾಖಲಿಸುತ್ತೇನೆ” ಎಂದು ಆಶಿಸ್‌ ಸಹಾ ಹೇಳಿದ್ದಾರೆ.

ನೌಕರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸಮರ್ ರಾಯ್ ಕೂಡ ಬಿಜೆಪಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ನಾವು ಮೊದಲಿನಿಂದಲೂ ಎಡಪಕ್ಷಗಳ ವಿರುದ್ಧ ಕೆಲಸ ಮಾಡುತ್ತಿದ್ದೇವೆ. ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿಗೆ ಬೆಂಬಲ ನೀಡಿ ಈಗಲೂ ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದೇವೆ. ಮೇಯರ್ ಮಾಡಿದ್ದು ಅಕ್ರಮವಾಗಿದ್ದು, ಯಾರನ್ನೋ ಮೆಚ್ಚಿಸಲು ಬಯಸಿದ್ದರು. ಆದರೆ ಇದನ್ನು ನಾವು ಸುಲಭವಾಗಿ ಮರೆಯುವುದಿಲ್ಲ” ಎಂದು ಸಮರ್ ರಾಯ್ ಹೇಳಿದ್ದಾರೆ.

ಇದನ್ನೂ ಓದಿ:ತ್ರಿಪುರ BJP ಸರ್ಕಾರದಲ್ಲಿ ಬಿರುಕು; ದೆಹಲಿಗೆ ದೌಡಾಯಿಸಿದ ಬಂಡಾಯ ಶಾಸಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...