Homeಮುಖಪುಟತನ್ನದೇ ಪಕ್ಷದ ಶಾಸಕನನ್ನು ‘ಭೂ ಮಾಫಿಯ’ ಎಂದ ತ್ರಿಪುರಾ ಸಿಎಂ ಬಿಪ್ಲಬ್ ದೇಬ್!

ತನ್ನದೇ ಪಕ್ಷದ ಶಾಸಕನನ್ನು ‘ಭೂ ಮಾಫಿಯ’ ಎಂದ ತ್ರಿಪುರಾ ಸಿಎಂ ಬಿಪ್ಲಬ್ ದೇಬ್!

- Advertisement -
- Advertisement -

ತ್ರಿಪುರಾದ ಆಡಳಿತಾರೂಢ ಬಿಜೆಪಿಯೊಳಗಿನ ಬಣ ವೈಷಮ್ಯವು ತಿರುವು ಪಡೆದುಕೊಂಡಿದ್ದು, ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಶನಿವಾರ ಪಕ್ಷದ ಶಾಸಕ ಆಶಿಸ್ ಕುಮಾರ್ ಸಹಾ ಅವರನ್ನು ‘ಭೂ ಮಾಫಿಯಾ’ ಎಂದು ಕರೆದಿದ್ದು, ಅವರನ್ನು ಜೈಲಿಗೆ ಕಳುಹಿಸಬೇಕು ಎಂದು ಹೇಳಿದ್ದಾರೆ.

“ಯಾರಾದರೂ ರಾಜಕೀಯವನ್ನು ಗುರಾಣಿಯಾಗಿ ಬಳಸಿಕೊಂಡು ಭೂ ಒತ್ತುವರಿಯಂತಹ ಕಾನೂನುಬಾಹಿರ ಕೃತ್ಯಗಳನ್ನು ನಡೆಸಿದರೆ, ಕಾನೂನು ಕ್ರಮದಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ. ಕಾನೂನು ತನ್ನದೇ ಆದ ಕ್ರಮ ತೆಗೆದುಕೊಳ್ಳುತ್ತದೆ ಮತ್ತು ಯಾರನ್ನೂ ಬಿಡುವುದಿಲ್ಲ” ಎಂದು ಮುಖ್ಯಮಂತ್ರಿ ಬಿಪ್ಲಬ್‌ ದೇಬ್ ಹೇಳಿದ್ದಾರೆ.

ಇದನ್ನೂ ಓದಿ:ಪಂಜಾಬಿಗಳು ಮತ್ತು ಜಾಟ್‌ಗಳಿಗೆ ಮಿದುಳಿಲ್ಲ ಹೇಳಿಕೆ: ಕ್ಷಮೆ ಕೇಳಿದ ಸಿಎಂ ಬಿಪ್ಲಬ್‌ ದೇಬ್

ಮುಖ್ಯಮಂತ್ರಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಆಶಿಸ್‌ ಕುಮಾರ್‌ ಸಹಾ, “ಈ ಆರೋಪದ ಕುರಿತು ತನಿಖೆ ನಡೆಸಿ ಸಾಧ್ಯವಾದರೆ ಕ್ರಮ ಕೈಗೊಳ್ಳಲಿ” ಎಂದು ಸವಾಲು ಹಾಕಿದ್ದಾರೆ.

ಮುಖ್ಯಮಂತ್ರಿ ಹೇಳಿಕೆಗೆ ಒಂದು ದಿನ ಮೊದಲು, ಕಳೆದ 30 ವರ್ಷಗಳಿಂದ ಶಾಸಕ ಆಶಿಸ್‌ ಸಹಾ ಅವರ ವಶದಲ್ಲಿದ್ದ ಉಜ್ಜಯಂತ ಅರಮನೆ ಮುಂಭಾಗದ ಕಟ್ಟಡದ ಒಂದು ಭಾಗವನ್ನು ಅಗರ್ತಲಾ ಮುನ್ಸಿಪಲ್ ಕಾರ್ಪೊರೇಷನ್‌ (ಎಎಂಸಿ) ಕೆಡವಿತ್ತು. ಈ ಕಟ್ಟಡವನ್ನು ಎಡಪಂಥ ವಿರೋಧಿ ಸರ್ಕಾರಿ ನೌಕರರ ಒಕ್ಕೂಟದ ಕಚೇರಿಯಾಗಿ ಬಳಸಲಾಗುತ್ತು.

ನಗರದ ಹೃದಯ ಭಾಗದಲ್ಲಿರುವ 7,000 ಚದರ ಅಡಿ ಅಳತೆಯ ಸರ್ಕಾರಿ ಭೂಮಿಯನ್ನು ಶಾಸಕ ಆಶಿಸ್‌ ಸಹಾ ಮತ್ತು ಟಿಎಂಸಿ ರಾಜ್ಯ ಸಂಚಾಲಕ ಸುಬಾಲ್ ಭೌಮಿಕ್ 90ರ ದಶಕದ ಆರಂಭದಲ್ಲಿ ಅಕ್ರಮವಾಗಿ ವಶಪಡಿಸಿಕೊಂಡಿದ್ದಾರೆ. ಜೊತೆಗೆ ಅದನ್ನು ತಮ್ಮ ವೈಯಕ್ತಿಕ ಚಟುವಟಿಕೆಗಳಿಗೆ ಬಳಸಿಕೊಂಡಿದ್ದಾರೆ ಎಂದು ಎಎಂಸಿ ಮೇಯರ್ ದೀಪಕ್ ಮಜುಂದಾರ್ ಆರೋಪಿಸಿದ್ದಾರೆ.

ಇದನ್ನೂ ಓದಿ:ತ್ರಿಪುರದಲ್ಲಿ ನಟಿ, ಟಿಎಂಸಿ ನಾಯಕಿ ಸಯೋನಿ ಘೋಷ್ ಮೇಲೆ ಹಲ್ಲೆ, ಬಂಧನ – ಪ್ರತಿಭಟನೆಗೆ ಸಜ್ಜು

ಆರಂಭದಲ್ಲಿ ಈ ಕಟ್ಟಡವನ್ನು ಕಾಂಗ್ರೆಸ್ ಪಕ್ಷ, ನಂತರ ತೃಣಮೂಲ ಕಾಂಗ್ರೆಸ್‌ ಪಕ್ಷದ ಚಟುವಟಿಕೆಗಳಿಗೆ ಬಳಸಲಾಯಿತು. 2018 ರಲ್ಲಿ ಬಿಜೆಪಿ ಟಿಕೆಟ್‌ ಮೂಲಕ ಆಶಿಸ್‌‌ ಸಹಾ ಶಾಸಕರಾದಾಗ ಸರ್ಕಾರಿ ನೌಕರರ ಒಕ್ಕೂಟದ ಕಚೇರಿಯಾಗಿ ಬದಲಾಯಿತು.

“ಎಡರಂಗದ ಆಡಳಿತಾವಧಿಯಲ್ಲಿ ಈ ಕಟ್ಟಡವನ್ನು ಮರಳಿ ಪಡೆಯಲು ಆಗಿನ ಎಎಂಸಿ ಹಲವಾರು ಪ್ರಯತ್ನಗಳನ್ನು ಮಾಡಿ ವಿಫಲವಾಗಿತ್ತು. ಆದರೆ ನಾವು ಎಎಂಸಿಯ ಅಧಿಕಾರ ವಹಿಸಿಕೊಂಡ ಎರಡು ವಾರಗಳ ಹಿಂದೆ ನಂತರ, ನಗರದಲ್ಲಿ ಅಕ್ರಮವಾಗಿ ವಶಪಡಿಸಿಕೊಂಡಿರುವ ಎಲ್ಲಾ ಭೂಮಿಯನ್ನು ಮರಳಿ ಪಡೆಯಲು ನಿರ್ಧರಿಸಿದ್ದೇವೆ. ಅನಧಿಕೃತ ವ್ಯಾಪಾರಿಗಳು, ಎಲ್ಲಾ ಫುಟ್‌ಪಾತ್‌ ಅತಿಕ್ರಮಣಗಳನ್ನು ಯಾವುದೆ ರಾಜಕೀಯ ಬಣ್ಣವನ್ನು ಲೆಕ್ಕಿಸದೇ ತೆರವುಗೊಳಿಸುತ್ತೇವೆ” ಎಂದು ಮೇಯರ್‌ ಮಜುಂದಾರ್ ಹೇಳಿದ್ದಾರೆ.

ಮೇಯರ್ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಆಶಿಸ್‌ ಸಹಾ ಮತ್ತು ಸುಬಾಲ್ ಭೌಮಿಕ್, “ಇದು ವೈಯಕ್ತಿಕ ಆಸ್ತಿಯಾಗಿದ್ದು, ಹಲವಾರು ಪ್ರಯತ್ನಗಳನ್ನು ಮಾಡಿ ಎಡರಂಗ ಸರ್ಕಾರಕ್ಕೇ ಏನನ್ನೂ ಮಾಡಲು ಸಾಧ್ಯವಾಗಲಿಲ್ಲ” ಹೇಳಿದ್ದಾರೆ.

ಇದನ್ನೂ ಓದಿ:ತಲೆ ಬೋಳಿಸಿಕೊಂಡು ಬಿಜೆಪಿ ತೊರೆಯಲು ಸಿದ್ದರಾದ ತ್ರಿಪುರ ಶಾಸಕ- ಟಿಎಂಸಿ ಸೇರುವ ಸಾಧ್ಯತೆ

“ತನ್ನದೇ ಶಾಸಕರ ಬಗ್ಗೆ ಸರ್ಕಾರದ ವರ್ತನೆಯನ್ನು ನೋಡಿ ನನಗೆ ಆಶ್ಚರ್ಯವಾಗಿದೆ. ಇದು ರಾಜಕೀಯ ದ್ವೇಷದಿಂದ ಪ್ರೇರಿತವಾದ ಹೆಜ್ಜೆಯಾಗಿದೆ. ಹೈಕೋರ್ಟ್‌ನಲ್ಲಿ ಪರಿಹಾರಕ್ಕಾಗಿ ಹೊಸ ಪ್ರಕರಣವನ್ನು ದಾಖಲಿಸುತ್ತೇನೆ” ಎಂದು ಆಶಿಸ್‌ ಸಹಾ ಹೇಳಿದ್ದಾರೆ.

ನೌಕರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸಮರ್ ರಾಯ್ ಕೂಡ ಬಿಜೆಪಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ನಾವು ಮೊದಲಿನಿಂದಲೂ ಎಡಪಕ್ಷಗಳ ವಿರುದ್ಧ ಕೆಲಸ ಮಾಡುತ್ತಿದ್ದೇವೆ. ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿಗೆ ಬೆಂಬಲ ನೀಡಿ ಈಗಲೂ ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದೇವೆ. ಮೇಯರ್ ಮಾಡಿದ್ದು ಅಕ್ರಮವಾಗಿದ್ದು, ಯಾರನ್ನೋ ಮೆಚ್ಚಿಸಲು ಬಯಸಿದ್ದರು. ಆದರೆ ಇದನ್ನು ನಾವು ಸುಲಭವಾಗಿ ಮರೆಯುವುದಿಲ್ಲ” ಎಂದು ಸಮರ್ ರಾಯ್ ಹೇಳಿದ್ದಾರೆ.

ಇದನ್ನೂ ಓದಿ:ತ್ರಿಪುರ BJP ಸರ್ಕಾರದಲ್ಲಿ ಬಿರುಕು; ದೆಹಲಿಗೆ ದೌಡಾಯಿಸಿದ ಬಂಡಾಯ ಶಾಸಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...