Homeಮುಖಪುಟತನ್ನದೇ ಪಕ್ಷದ ಶಾಸಕನನ್ನು ‘ಭೂ ಮಾಫಿಯ’ ಎಂದ ತ್ರಿಪುರಾ ಸಿಎಂ ಬಿಪ್ಲಬ್ ದೇಬ್!

ತನ್ನದೇ ಪಕ್ಷದ ಶಾಸಕನನ್ನು ‘ಭೂ ಮಾಫಿಯ’ ಎಂದ ತ್ರಿಪುರಾ ಸಿಎಂ ಬಿಪ್ಲಬ್ ದೇಬ್!

- Advertisement -
- Advertisement -

ತ್ರಿಪುರಾದ ಆಡಳಿತಾರೂಢ ಬಿಜೆಪಿಯೊಳಗಿನ ಬಣ ವೈಷಮ್ಯವು ತಿರುವು ಪಡೆದುಕೊಂಡಿದ್ದು, ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಶನಿವಾರ ಪಕ್ಷದ ಶಾಸಕ ಆಶಿಸ್ ಕುಮಾರ್ ಸಹಾ ಅವರನ್ನು ‘ಭೂ ಮಾಫಿಯಾ’ ಎಂದು ಕರೆದಿದ್ದು, ಅವರನ್ನು ಜೈಲಿಗೆ ಕಳುಹಿಸಬೇಕು ಎಂದು ಹೇಳಿದ್ದಾರೆ.

“ಯಾರಾದರೂ ರಾಜಕೀಯವನ್ನು ಗುರಾಣಿಯಾಗಿ ಬಳಸಿಕೊಂಡು ಭೂ ಒತ್ತುವರಿಯಂತಹ ಕಾನೂನುಬಾಹಿರ ಕೃತ್ಯಗಳನ್ನು ನಡೆಸಿದರೆ, ಕಾನೂನು ಕ್ರಮದಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ. ಕಾನೂನು ತನ್ನದೇ ಆದ ಕ್ರಮ ತೆಗೆದುಕೊಳ್ಳುತ್ತದೆ ಮತ್ತು ಯಾರನ್ನೂ ಬಿಡುವುದಿಲ್ಲ” ಎಂದು ಮುಖ್ಯಮಂತ್ರಿ ಬಿಪ್ಲಬ್‌ ದೇಬ್ ಹೇಳಿದ್ದಾರೆ.

ಇದನ್ನೂ ಓದಿ:ಪಂಜಾಬಿಗಳು ಮತ್ತು ಜಾಟ್‌ಗಳಿಗೆ ಮಿದುಳಿಲ್ಲ ಹೇಳಿಕೆ: ಕ್ಷಮೆ ಕೇಳಿದ ಸಿಎಂ ಬಿಪ್ಲಬ್‌ ದೇಬ್

ಮುಖ್ಯಮಂತ್ರಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಆಶಿಸ್‌ ಕುಮಾರ್‌ ಸಹಾ, “ಈ ಆರೋಪದ ಕುರಿತು ತನಿಖೆ ನಡೆಸಿ ಸಾಧ್ಯವಾದರೆ ಕ್ರಮ ಕೈಗೊಳ್ಳಲಿ” ಎಂದು ಸವಾಲು ಹಾಕಿದ್ದಾರೆ.

ಮುಖ್ಯಮಂತ್ರಿ ಹೇಳಿಕೆಗೆ ಒಂದು ದಿನ ಮೊದಲು, ಕಳೆದ 30 ವರ್ಷಗಳಿಂದ ಶಾಸಕ ಆಶಿಸ್‌ ಸಹಾ ಅವರ ವಶದಲ್ಲಿದ್ದ ಉಜ್ಜಯಂತ ಅರಮನೆ ಮುಂಭಾಗದ ಕಟ್ಟಡದ ಒಂದು ಭಾಗವನ್ನು ಅಗರ್ತಲಾ ಮುನ್ಸಿಪಲ್ ಕಾರ್ಪೊರೇಷನ್‌ (ಎಎಂಸಿ) ಕೆಡವಿತ್ತು. ಈ ಕಟ್ಟಡವನ್ನು ಎಡಪಂಥ ವಿರೋಧಿ ಸರ್ಕಾರಿ ನೌಕರರ ಒಕ್ಕೂಟದ ಕಚೇರಿಯಾಗಿ ಬಳಸಲಾಗುತ್ತು.

ನಗರದ ಹೃದಯ ಭಾಗದಲ್ಲಿರುವ 7,000 ಚದರ ಅಡಿ ಅಳತೆಯ ಸರ್ಕಾರಿ ಭೂಮಿಯನ್ನು ಶಾಸಕ ಆಶಿಸ್‌ ಸಹಾ ಮತ್ತು ಟಿಎಂಸಿ ರಾಜ್ಯ ಸಂಚಾಲಕ ಸುಬಾಲ್ ಭೌಮಿಕ್ 90ರ ದಶಕದ ಆರಂಭದಲ್ಲಿ ಅಕ್ರಮವಾಗಿ ವಶಪಡಿಸಿಕೊಂಡಿದ್ದಾರೆ. ಜೊತೆಗೆ ಅದನ್ನು ತಮ್ಮ ವೈಯಕ್ತಿಕ ಚಟುವಟಿಕೆಗಳಿಗೆ ಬಳಸಿಕೊಂಡಿದ್ದಾರೆ ಎಂದು ಎಎಂಸಿ ಮೇಯರ್ ದೀಪಕ್ ಮಜುಂದಾರ್ ಆರೋಪಿಸಿದ್ದಾರೆ.

ಇದನ್ನೂ ಓದಿ:ತ್ರಿಪುರದಲ್ಲಿ ನಟಿ, ಟಿಎಂಸಿ ನಾಯಕಿ ಸಯೋನಿ ಘೋಷ್ ಮೇಲೆ ಹಲ್ಲೆ, ಬಂಧನ – ಪ್ರತಿಭಟನೆಗೆ ಸಜ್ಜು

ಆರಂಭದಲ್ಲಿ ಈ ಕಟ್ಟಡವನ್ನು ಕಾಂಗ್ರೆಸ್ ಪಕ್ಷ, ನಂತರ ತೃಣಮೂಲ ಕಾಂಗ್ರೆಸ್‌ ಪಕ್ಷದ ಚಟುವಟಿಕೆಗಳಿಗೆ ಬಳಸಲಾಯಿತು. 2018 ರಲ್ಲಿ ಬಿಜೆಪಿ ಟಿಕೆಟ್‌ ಮೂಲಕ ಆಶಿಸ್‌‌ ಸಹಾ ಶಾಸಕರಾದಾಗ ಸರ್ಕಾರಿ ನೌಕರರ ಒಕ್ಕೂಟದ ಕಚೇರಿಯಾಗಿ ಬದಲಾಯಿತು.

“ಎಡರಂಗದ ಆಡಳಿತಾವಧಿಯಲ್ಲಿ ಈ ಕಟ್ಟಡವನ್ನು ಮರಳಿ ಪಡೆಯಲು ಆಗಿನ ಎಎಂಸಿ ಹಲವಾರು ಪ್ರಯತ್ನಗಳನ್ನು ಮಾಡಿ ವಿಫಲವಾಗಿತ್ತು. ಆದರೆ ನಾವು ಎಎಂಸಿಯ ಅಧಿಕಾರ ವಹಿಸಿಕೊಂಡ ಎರಡು ವಾರಗಳ ಹಿಂದೆ ನಂತರ, ನಗರದಲ್ಲಿ ಅಕ್ರಮವಾಗಿ ವಶಪಡಿಸಿಕೊಂಡಿರುವ ಎಲ್ಲಾ ಭೂಮಿಯನ್ನು ಮರಳಿ ಪಡೆಯಲು ನಿರ್ಧರಿಸಿದ್ದೇವೆ. ಅನಧಿಕೃತ ವ್ಯಾಪಾರಿಗಳು, ಎಲ್ಲಾ ಫುಟ್‌ಪಾತ್‌ ಅತಿಕ್ರಮಣಗಳನ್ನು ಯಾವುದೆ ರಾಜಕೀಯ ಬಣ್ಣವನ್ನು ಲೆಕ್ಕಿಸದೇ ತೆರವುಗೊಳಿಸುತ್ತೇವೆ” ಎಂದು ಮೇಯರ್‌ ಮಜುಂದಾರ್ ಹೇಳಿದ್ದಾರೆ.

ಮೇಯರ್ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಆಶಿಸ್‌ ಸಹಾ ಮತ್ತು ಸುಬಾಲ್ ಭೌಮಿಕ್, “ಇದು ವೈಯಕ್ತಿಕ ಆಸ್ತಿಯಾಗಿದ್ದು, ಹಲವಾರು ಪ್ರಯತ್ನಗಳನ್ನು ಮಾಡಿ ಎಡರಂಗ ಸರ್ಕಾರಕ್ಕೇ ಏನನ್ನೂ ಮಾಡಲು ಸಾಧ್ಯವಾಗಲಿಲ್ಲ” ಹೇಳಿದ್ದಾರೆ.

ಇದನ್ನೂ ಓದಿ:ತಲೆ ಬೋಳಿಸಿಕೊಂಡು ಬಿಜೆಪಿ ತೊರೆಯಲು ಸಿದ್ದರಾದ ತ್ರಿಪುರ ಶಾಸಕ- ಟಿಎಂಸಿ ಸೇರುವ ಸಾಧ್ಯತೆ

“ತನ್ನದೇ ಶಾಸಕರ ಬಗ್ಗೆ ಸರ್ಕಾರದ ವರ್ತನೆಯನ್ನು ನೋಡಿ ನನಗೆ ಆಶ್ಚರ್ಯವಾಗಿದೆ. ಇದು ರಾಜಕೀಯ ದ್ವೇಷದಿಂದ ಪ್ರೇರಿತವಾದ ಹೆಜ್ಜೆಯಾಗಿದೆ. ಹೈಕೋರ್ಟ್‌ನಲ್ಲಿ ಪರಿಹಾರಕ್ಕಾಗಿ ಹೊಸ ಪ್ರಕರಣವನ್ನು ದಾಖಲಿಸುತ್ತೇನೆ” ಎಂದು ಆಶಿಸ್‌ ಸಹಾ ಹೇಳಿದ್ದಾರೆ.

ನೌಕರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸಮರ್ ರಾಯ್ ಕೂಡ ಬಿಜೆಪಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ನಾವು ಮೊದಲಿನಿಂದಲೂ ಎಡಪಕ್ಷಗಳ ವಿರುದ್ಧ ಕೆಲಸ ಮಾಡುತ್ತಿದ್ದೇವೆ. ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿಗೆ ಬೆಂಬಲ ನೀಡಿ ಈಗಲೂ ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದೇವೆ. ಮೇಯರ್ ಮಾಡಿದ್ದು ಅಕ್ರಮವಾಗಿದ್ದು, ಯಾರನ್ನೋ ಮೆಚ್ಚಿಸಲು ಬಯಸಿದ್ದರು. ಆದರೆ ಇದನ್ನು ನಾವು ಸುಲಭವಾಗಿ ಮರೆಯುವುದಿಲ್ಲ” ಎಂದು ಸಮರ್ ರಾಯ್ ಹೇಳಿದ್ದಾರೆ.

ಇದನ್ನೂ ಓದಿ:ತ್ರಿಪುರ BJP ಸರ್ಕಾರದಲ್ಲಿ ಬಿರುಕು; ದೆಹಲಿಗೆ ದೌಡಾಯಿಸಿದ ಬಂಡಾಯ ಶಾಸಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...