Homeಮುಖಪುಟತನ್ನದೇ ಪಕ್ಷದ ಶಾಸಕನನ್ನು ‘ಭೂ ಮಾಫಿಯ’ ಎಂದ ತ್ರಿಪುರಾ ಸಿಎಂ ಬಿಪ್ಲಬ್ ದೇಬ್!

ತನ್ನದೇ ಪಕ್ಷದ ಶಾಸಕನನ್ನು ‘ಭೂ ಮಾಫಿಯ’ ಎಂದ ತ್ರಿಪುರಾ ಸಿಎಂ ಬಿಪ್ಲಬ್ ದೇಬ್!

- Advertisement -
- Advertisement -

ತ್ರಿಪುರಾದ ಆಡಳಿತಾರೂಢ ಬಿಜೆಪಿಯೊಳಗಿನ ಬಣ ವೈಷಮ್ಯವು ತಿರುವು ಪಡೆದುಕೊಂಡಿದ್ದು, ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಶನಿವಾರ ಪಕ್ಷದ ಶಾಸಕ ಆಶಿಸ್ ಕುಮಾರ್ ಸಹಾ ಅವರನ್ನು ‘ಭೂ ಮಾಫಿಯಾ’ ಎಂದು ಕರೆದಿದ್ದು, ಅವರನ್ನು ಜೈಲಿಗೆ ಕಳುಹಿಸಬೇಕು ಎಂದು ಹೇಳಿದ್ದಾರೆ.

“ಯಾರಾದರೂ ರಾಜಕೀಯವನ್ನು ಗುರಾಣಿಯಾಗಿ ಬಳಸಿಕೊಂಡು ಭೂ ಒತ್ತುವರಿಯಂತಹ ಕಾನೂನುಬಾಹಿರ ಕೃತ್ಯಗಳನ್ನು ನಡೆಸಿದರೆ, ಕಾನೂನು ಕ್ರಮದಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ. ಕಾನೂನು ತನ್ನದೇ ಆದ ಕ್ರಮ ತೆಗೆದುಕೊಳ್ಳುತ್ತದೆ ಮತ್ತು ಯಾರನ್ನೂ ಬಿಡುವುದಿಲ್ಲ” ಎಂದು ಮುಖ್ಯಮಂತ್ರಿ ಬಿಪ್ಲಬ್‌ ದೇಬ್ ಹೇಳಿದ್ದಾರೆ.

ಇದನ್ನೂ ಓದಿ:ಪಂಜಾಬಿಗಳು ಮತ್ತು ಜಾಟ್‌ಗಳಿಗೆ ಮಿದುಳಿಲ್ಲ ಹೇಳಿಕೆ: ಕ್ಷಮೆ ಕೇಳಿದ ಸಿಎಂ ಬಿಪ್ಲಬ್‌ ದೇಬ್

ಮುಖ್ಯಮಂತ್ರಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಆಶಿಸ್‌ ಕುಮಾರ್‌ ಸಹಾ, “ಈ ಆರೋಪದ ಕುರಿತು ತನಿಖೆ ನಡೆಸಿ ಸಾಧ್ಯವಾದರೆ ಕ್ರಮ ಕೈಗೊಳ್ಳಲಿ” ಎಂದು ಸವಾಲು ಹಾಕಿದ್ದಾರೆ.

ಮುಖ್ಯಮಂತ್ರಿ ಹೇಳಿಕೆಗೆ ಒಂದು ದಿನ ಮೊದಲು, ಕಳೆದ 30 ವರ್ಷಗಳಿಂದ ಶಾಸಕ ಆಶಿಸ್‌ ಸಹಾ ಅವರ ವಶದಲ್ಲಿದ್ದ ಉಜ್ಜಯಂತ ಅರಮನೆ ಮುಂಭಾಗದ ಕಟ್ಟಡದ ಒಂದು ಭಾಗವನ್ನು ಅಗರ್ತಲಾ ಮುನ್ಸಿಪಲ್ ಕಾರ್ಪೊರೇಷನ್‌ (ಎಎಂಸಿ) ಕೆಡವಿತ್ತು. ಈ ಕಟ್ಟಡವನ್ನು ಎಡಪಂಥ ವಿರೋಧಿ ಸರ್ಕಾರಿ ನೌಕರರ ಒಕ್ಕೂಟದ ಕಚೇರಿಯಾಗಿ ಬಳಸಲಾಗುತ್ತು.

ನಗರದ ಹೃದಯ ಭಾಗದಲ್ಲಿರುವ 7,000 ಚದರ ಅಡಿ ಅಳತೆಯ ಸರ್ಕಾರಿ ಭೂಮಿಯನ್ನು ಶಾಸಕ ಆಶಿಸ್‌ ಸಹಾ ಮತ್ತು ಟಿಎಂಸಿ ರಾಜ್ಯ ಸಂಚಾಲಕ ಸುಬಾಲ್ ಭೌಮಿಕ್ 90ರ ದಶಕದ ಆರಂಭದಲ್ಲಿ ಅಕ್ರಮವಾಗಿ ವಶಪಡಿಸಿಕೊಂಡಿದ್ದಾರೆ. ಜೊತೆಗೆ ಅದನ್ನು ತಮ್ಮ ವೈಯಕ್ತಿಕ ಚಟುವಟಿಕೆಗಳಿಗೆ ಬಳಸಿಕೊಂಡಿದ್ದಾರೆ ಎಂದು ಎಎಂಸಿ ಮೇಯರ್ ದೀಪಕ್ ಮಜುಂದಾರ್ ಆರೋಪಿಸಿದ್ದಾರೆ.

ಇದನ್ನೂ ಓದಿ:ತ್ರಿಪುರದಲ್ಲಿ ನಟಿ, ಟಿಎಂಸಿ ನಾಯಕಿ ಸಯೋನಿ ಘೋಷ್ ಮೇಲೆ ಹಲ್ಲೆ, ಬಂಧನ – ಪ್ರತಿಭಟನೆಗೆ ಸಜ್ಜು

ಆರಂಭದಲ್ಲಿ ಈ ಕಟ್ಟಡವನ್ನು ಕಾಂಗ್ರೆಸ್ ಪಕ್ಷ, ನಂತರ ತೃಣಮೂಲ ಕಾಂಗ್ರೆಸ್‌ ಪಕ್ಷದ ಚಟುವಟಿಕೆಗಳಿಗೆ ಬಳಸಲಾಯಿತು. 2018 ರಲ್ಲಿ ಬಿಜೆಪಿ ಟಿಕೆಟ್‌ ಮೂಲಕ ಆಶಿಸ್‌‌ ಸಹಾ ಶಾಸಕರಾದಾಗ ಸರ್ಕಾರಿ ನೌಕರರ ಒಕ್ಕೂಟದ ಕಚೇರಿಯಾಗಿ ಬದಲಾಯಿತು.

“ಎಡರಂಗದ ಆಡಳಿತಾವಧಿಯಲ್ಲಿ ಈ ಕಟ್ಟಡವನ್ನು ಮರಳಿ ಪಡೆಯಲು ಆಗಿನ ಎಎಂಸಿ ಹಲವಾರು ಪ್ರಯತ್ನಗಳನ್ನು ಮಾಡಿ ವಿಫಲವಾಗಿತ್ತು. ಆದರೆ ನಾವು ಎಎಂಸಿಯ ಅಧಿಕಾರ ವಹಿಸಿಕೊಂಡ ಎರಡು ವಾರಗಳ ಹಿಂದೆ ನಂತರ, ನಗರದಲ್ಲಿ ಅಕ್ರಮವಾಗಿ ವಶಪಡಿಸಿಕೊಂಡಿರುವ ಎಲ್ಲಾ ಭೂಮಿಯನ್ನು ಮರಳಿ ಪಡೆಯಲು ನಿರ್ಧರಿಸಿದ್ದೇವೆ. ಅನಧಿಕೃತ ವ್ಯಾಪಾರಿಗಳು, ಎಲ್ಲಾ ಫುಟ್‌ಪಾತ್‌ ಅತಿಕ್ರಮಣಗಳನ್ನು ಯಾವುದೆ ರಾಜಕೀಯ ಬಣ್ಣವನ್ನು ಲೆಕ್ಕಿಸದೇ ತೆರವುಗೊಳಿಸುತ್ತೇವೆ” ಎಂದು ಮೇಯರ್‌ ಮಜುಂದಾರ್ ಹೇಳಿದ್ದಾರೆ.

ಮೇಯರ್ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಆಶಿಸ್‌ ಸಹಾ ಮತ್ತು ಸುಬಾಲ್ ಭೌಮಿಕ್, “ಇದು ವೈಯಕ್ತಿಕ ಆಸ್ತಿಯಾಗಿದ್ದು, ಹಲವಾರು ಪ್ರಯತ್ನಗಳನ್ನು ಮಾಡಿ ಎಡರಂಗ ಸರ್ಕಾರಕ್ಕೇ ಏನನ್ನೂ ಮಾಡಲು ಸಾಧ್ಯವಾಗಲಿಲ್ಲ” ಹೇಳಿದ್ದಾರೆ.

ಇದನ್ನೂ ಓದಿ:ತಲೆ ಬೋಳಿಸಿಕೊಂಡು ಬಿಜೆಪಿ ತೊರೆಯಲು ಸಿದ್ದರಾದ ತ್ರಿಪುರ ಶಾಸಕ- ಟಿಎಂಸಿ ಸೇರುವ ಸಾಧ್ಯತೆ

“ತನ್ನದೇ ಶಾಸಕರ ಬಗ್ಗೆ ಸರ್ಕಾರದ ವರ್ತನೆಯನ್ನು ನೋಡಿ ನನಗೆ ಆಶ್ಚರ್ಯವಾಗಿದೆ. ಇದು ರಾಜಕೀಯ ದ್ವೇಷದಿಂದ ಪ್ರೇರಿತವಾದ ಹೆಜ್ಜೆಯಾಗಿದೆ. ಹೈಕೋರ್ಟ್‌ನಲ್ಲಿ ಪರಿಹಾರಕ್ಕಾಗಿ ಹೊಸ ಪ್ರಕರಣವನ್ನು ದಾಖಲಿಸುತ್ತೇನೆ” ಎಂದು ಆಶಿಸ್‌ ಸಹಾ ಹೇಳಿದ್ದಾರೆ.

ನೌಕರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸಮರ್ ರಾಯ್ ಕೂಡ ಬಿಜೆಪಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ನಾವು ಮೊದಲಿನಿಂದಲೂ ಎಡಪಕ್ಷಗಳ ವಿರುದ್ಧ ಕೆಲಸ ಮಾಡುತ್ತಿದ್ದೇವೆ. ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿಗೆ ಬೆಂಬಲ ನೀಡಿ ಈಗಲೂ ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದೇವೆ. ಮೇಯರ್ ಮಾಡಿದ್ದು ಅಕ್ರಮವಾಗಿದ್ದು, ಯಾರನ್ನೋ ಮೆಚ್ಚಿಸಲು ಬಯಸಿದ್ದರು. ಆದರೆ ಇದನ್ನು ನಾವು ಸುಲಭವಾಗಿ ಮರೆಯುವುದಿಲ್ಲ” ಎಂದು ಸಮರ್ ರಾಯ್ ಹೇಳಿದ್ದಾರೆ.

ಇದನ್ನೂ ಓದಿ:ತ್ರಿಪುರ BJP ಸರ್ಕಾರದಲ್ಲಿ ಬಿರುಕು; ದೆಹಲಿಗೆ ದೌಡಾಯಿಸಿದ ಬಂಡಾಯ ಶಾಸಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....