Homeಮುಖಪುಟತ್ರಿಪುರ ಕೋಮು ಗಲಭೆ: 68 ಜನರ ಟ್ವಿಟರ್‌ ಖಾತೆ ಅಮಾನತುಗೊಳಿಸುವಂತೆ ಟ್ವಿಟರ್‌ಗೆ ಪತ್ರ ಬರೆದ ಪೊಲೀಸರು

ತ್ರಿಪುರ ಕೋಮು ಗಲಭೆ: 68 ಜನರ ಟ್ವಿಟರ್‌ ಖಾತೆ ಅಮಾನತುಗೊಳಿಸುವಂತೆ ಟ್ವಿಟರ್‌ಗೆ ಪತ್ರ ಬರೆದ ಪೊಲೀಸರು

- Advertisement -
- Advertisement -

ತ್ರಿಪುರ ರಾಜ್ಯದಲ್ಲಿ ನಡೆದ ಕೋಮು ಘರ್ಷಣೆಗಳ ಕುರಿತು ‘ಆಕ್ಷೇಪಾರ್ಹ’ ವಿಷಯಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡ 68 ಜನರ ಟ್ವಿಟರ್‌ ಖಾತೆಗಳನ್ನು ಅಮಾನತುಗೊಳಿಸುವಂತೆ ಸಾಮಾಜಿಕ ಮಾಧ್ಯಮ ಸಂಸ್ಥೆ ಟ್ವಿಟರ್‌ ಅನ್ನು ತ್ರಿಪುರ ಪೊಲೀಸರು ಕೇಳಿಕೊಂಡಿದ್ದಾರೆ.

ರಾಜ್ಯದಲ್ಲಿ ಮಸೀದಿ ಧ್ವಂಸಕ್ಕೆ ಸಂಬಂಧಿಸಿದಂತೆ ‘ವಿಕೃತ ಮತ್ತು ಆಕ್ಷೇಪಾರ್ಹ’ ವಿಷಯಗಳನ್ನು ಪೋಸ್ಟ್‌ ಮಾಡಲು ಟ್ವಿಟರ್‌ ಖಾತೆಗಳನ್ನು ಬಳಸಲಾಗಿದೆ. ಅಂತಹ 68 ಟ್ವಿಟರ್‌ ಖಾತೆಗಳ ಮೇಲೆ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಪಶ್ಚಿಮ ತ್ರಿಪುರಾದ ಪೊಲೀಸರು ಟ್ವಿಟರ್‌ನ ಕುಂದುಕೊರತೆ ಅಧಿಕಾರಿಗಳಿಗೆ ಪತ್ರ ಬರೆದಿದ್ದು, ಅದರಲ್ಲಿ ಅಮಾನತುಮಾಡಬೇಕಾದ 68 ಜನರ ಟ್ವಿಟರ್‌ ಖಾತೆಗಳ ಲಿಂಕ್‌ಗಳನ್ನು ನಮೂದಿಸಿದ್ದಾರೆ.

’ರಾಜ್ಯದಲ್ಲಿನ ಮುಸ್ಲಿಂ ಸಮುದಾಯಗಳ ಮಸೀದಿಗಳ ಮೇಲೆ ನಡೆದ ಇತ್ತೀಚಿನ ಘರ್ಷಣೆ ಮತ್ತು ಆಪಾದಿತ ದಾಳಿಗೆ ಸಂಬಂಧಿಸಿದಂತೆ ಕೆಲವು ವ್ಯಕ್ತಿಗಳು / ಸಂಘಟನೆಗಳು ಟ್ವಿಟರ್‌ನಲ್ಲಿ ತಿರುಚಿದ ಮತ್ತು ಆಕ್ಷೇಪಾರ್ಹ ಸುದ್ದಿಗಳು / ಹೇಳಿಕೆಗಳನ್ನು ಪ್ರಕಟಿಸುತ್ತಿದ್ದಾರೆ / ಪೋಸ್ಟ್ ಮಾಡುತ್ತಿದ್ದಾರೆ’ ಎಂದು ಪತ್ರದಲ್ಲಿ ತಿಳಿಸಲಾಗಿದೆ.

‘ಈ ಟ್ವಿಟರ್‌ ಖಾತೆಗಳಲ್ಲಿನ ಕೆಲವು ಸುದ್ದಿಗಳು ಅಥವಾ ಪೋಸ್ಟ್‌ಗಳು ಇತರ ಕೆಲವು ಘಟನೆಗಳ ಛಾಯಾಚಿತ್ರಗಳು ಅಥವಾ ವೀಡಿಯೊಗಳು, ಧಾರ್ಮಿಕ ಗುಂಪುಗಳು ಮತ್ತು ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಕಲ್ಪಿತ ಹೇಳಿಕೆಗಳು ಅಥವಾ ವ್ಯಾಖ್ಯಾನಗಳನ್ನು ಒಳಗೊಂಡಿವೆ’ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ

’ಈ ಪೋಸ್ಟ್‌ಗಳು ತ್ರಿಪುರಾ ರಾಜ್ಯದಲ್ಲಿ ವಿವಿಧ ಧಾರ್ಮಿಕ ಸಮುದಾಯಗಳ ನಡುವೆ ಕೋಮು ಉದ್ವಿಗ್ನತೆಯನ್ನು ಉಂಟುಮಾಡುವ ಸಾಮರ್ಥ್ಯವನ್ನು ಹೊಂದಿವೆ, ಇದು ಕೋಮು ಗಲಭೆಗೆ ಕಾರಣವಾಗಬಹುದು’ ಎಂದು ಪತ್ರದಲ್ಲಿ ವಿವಿರಿಸಲಾಗಿದೆ.

ಬಳಕೆದಾರರು ಟ್ವಿಟರ್‌ ಖಾತೆಗಳಿಗೆ ಲಾಗ್ ಇನ್ ಆಗಿರುವ ಐಪಿ ವಿಳಾಸ ಮತ್ತು ಟ್ವಿಟರ್ ಖಾತೆಗಳಿಗೆ ಸೇರಿಸಲಾದ ಮೊಬೈಲ್ ಸಂಖ್ಯೆಗಳ ವಿವರಗಳನ್ನು ಪೊಲೀಸರು ಕೇಳಿದ್ದಾರೆ.

ಇತ್ತೀಚೆಗೆ ಬಾಂಗ್ಲಾದೇಶದಲ್ಲಿ ದುರ್ಗಾಪೂಜಾ ಮಂಟಪವನ್ನು ಧ್ವಂಸಗೊಳಿಸಿದ್ದನ್ನು ವಿರೋಧಿಸಿ ತ್ರಿಪುರಾದ ಪಾಣಿಸಾಗರ್‌ನಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಗಳಾದ ವಿಎಚ್‌ಪಿ ಮತ್ತು ಬಜರಂಗದಳ ರ್‍ಯಾಲಿ ನಡೆಸಿದ್ದವು. ಈ ವೇಳೆ ಚಮ್ಟಿಲ್ಲಾ ಪ್ರದೇಶದ ಮಸೀದಿ ಮತ್ತು ಕೆಲವು ಅಂಗಡಿಗಳನ್ನು ಧ್ವಂಸಗೊಳಿಸಲಾಗಿದ್ದು ಎರಡು ಅಂಗಡಿಗಳಿಗೆ ಬೆಂಕಿ ಹಚ್ಚಿದ್ದರು.

“ಪಾಣಿಸಾಗರದಲ್ಲಿ ವಿಎಚ್‌ಪಿ ಸುಮಾರು 3,500 ಜನರ ಪ್ರತಿಭಟನಾ ರ್‍ಯಾಲಿಯನ್ನು ಆಯೋಜಿಸಿತ್ತು. ರ್‍ಯಾಲಿಯಲ್ಲಿ ವಿಎಚ್‌ಪಿ ಕಾರ್ಯಕರ್ತರ ಒಂದು ವಿಭಾಗವು ಚಮ್ಟಿಲ್ಲಾ ಪ್ರದೇಶದಲ್ಲಿ ಮಸೀದಿಯನ್ನು ಧ್ವಂಸಗೊಳಿಸಿದೆ. ನಂತರ, ಅಲ್ಲಿಂದ ಸುಮಾರು 800 ಗಜಗಳಷ್ಟು ದೂರದಲ್ಲಿರುವ ರೋವಾ ಬಜಾರ್ ಪ್ರದೇಶದ ಮೂರು ಮನೆಗಳು ಮತ್ತು ಮೂರು ಅಂಗಡಿಗಳನ್ನು ಧ್ವಂಸಗೊಳಿಸಲಾಗಿದೆ ಮತ್ತು ಎರಡು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ” ಪಾಣಿಸಾಗರ ಉಪವಿಭಾಗೀಯ ಪೊಲೀಸ್ ಅಧಿಕಾರಿ (SDPO) ಸೌಭಿಕ್ ಡೇ ಹೇಳಿದ್ದರು.

ಇದೇ ಸಂದರ್ಭದಲ್ಲಿ ತ್ರಿಪುರಾದಲ್ಲಿ ನಡೆದ ಕೋಮುಗಲಭೆ ಕುರಿತು ಸತ್ಯಶೋಧನೆ ನಡೆಸಿದ ತಂಡದ ಭಾಗವಾಗಿದ್ದ ಇಬ್ಬರು ವಕೀಲರ ಮೇಲೆ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಪೊಲೀಸರ ಈ ಕ್ರಮಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.


ಇದನ್ನೂ ಓದಿ: ತ್ರಿಪುರಾ ಹಿಂಸಾಚಾರದ ಸತ್ಯಶೋಧನೆ ನಡೆಸಿದ ವಕೀಲರ ಮೇಲೆ ಯುಎಪಿಎ ಪ್ರಕರಣ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...