Homeಮುಖಪುಟಇಂದು ತ್ರಿಪುರ ಚುನಾವಣೆ : ಮೂರು ಮೈತ್ರಿಕೂಟಗಳ ನಡುವೆ ಒಲವು ಯಾರಿಗೆ?

ಇಂದು ತ್ರಿಪುರ ಚುನಾವಣೆ : ಮೂರು ಮೈತ್ರಿಕೂಟಗಳ ನಡುವೆ ಒಲವು ಯಾರಿಗೆ?

- Advertisement -
- Advertisement -

60 ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡ ತ್ರಿಪುರದಲ್ಲಿ ಇಂದು ಮತದಾನ ನಡೆಯುತ್ತಿದೆ. 10 ಪ.ಜಾ ಮತ್ತು 20 ಪ.ಪಂಗಡದ ಮೀಸಲು ಕ್ಷೇತ್ರಗಳು ತ್ರಿಪುರದಲ್ಲಿವೆ. ಸಿಪಿಐ(ಎಂ) ಪಕ್ಷದ ಪ್ರಬಲ ನೆಲೆಯಾಗಿದ್ದ ತ್ರಿಪುರದಲ್ಲಿ ಸರಳ ಸಿಎಂ ಎಂದು ಖ್ಯಾತರಾದ ಮಾಣಿಕ್ ಸರ್ಕಾರ್‌ರವರು 1998 ರಿಂದ 2018ರವರೆಗೆ 20 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದರು. ಆದರೆ ಕಳೆದ ಚುನಾವಣೆಯಲ್ಲಿ ಪಕ್ಷ ಸೋತ ನಂತರ ಅವರು ಹಿಂದೆ ಸರಿದಿದ್ದಾರೆ. ಇಲ್ಲಿ ಬಹುಮತಕ್ಕೆ 31 ಸ್ಥಾನಗಳ ಅಗತ್ಯವಿದೆ.

2018ರ ಬಲಾಬಲ

ಬಿಜೆಪಿ 35, ಐಪಿಎಫ್‌ಟಿ 8 ಮತ್ತು ಸಿಪಿಐ(ಎಂ) 16 ಕ್ಷೇತ್ರಗಳಲ್ಲಿ ಜಯಗಳಿಸಿದ್ದವು.

ಈ ಚುನಾವಣೆಯಲ್ಲಿ ಅಧಿಕಾರಕ್ಕಾಗಿ ಮೂರು ಮೈತ್ರಿಕೂಟಗಳು ಸೆಣಸುತ್ತಿವೆ. ಅವುಗಳ ಸಂಕ್ಷಿಪ್ತ ಪರಿಚಯ ಇಲ್ಲಿದೆ.

ಎನ್‌ಡಿಎ

ಕಳೆದ ಚುನಾವಣೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಬೃಹತ್ ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿಯಿತು. ಬಿಪ್ಲವ್ ದೇವ್ ಮುಖ್ಯಮಂತ್ರಿಯಾಗಿದ್ದರು. ಆನಂತರ ಅವರನ್ನು ಕೆಳಗಿಸಿ ಸದ್ಯ ಮಾಣಿಕ್ ಶಾ ರಾಜ್ಯದ ಸಿಎಂ ಆಗಿದ್ದಾರೆ. ಅವರೇ ಈ ಬಾರಿಯ ಚುನಾವಣಾ ಉಸ್ತುವಾರಿ ಹೊತ್ತಿದ್ದಾರೆ.

ಈ ಚುನಾವಣೆಯಲ್ಲಿ ಬಿಜೆಪಿಯು ಐಪಿಎಫ್‌ಟಿನೊಂದಿಗೆ (Indigenous Peoples Front of Tripura) ಮೈತ್ರಿಮಾಡಿಕೊಂಡು ಎನ್‌ಡಿಎ ಕೂಟ ರಚಿಸಿದೆ. ಬಿಜೆಪಿ 55 ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ ಐಪಿಎಫ್‌ಟಿ ಉಳಿದ 5 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ.

ಸೆಕ್ಯುಲರ್ ಡೆಮಾಕ್ರಟಿಕ್ ಫೋರ್ಸಸ್

ಸಿಪಿಐ(ಎಂ) (43 ಕ್ಷೇತ್ರಗಳಲ್ಲಿ ಸ್ಪರ್ಧೆ), ಕಾಂಗ್ರೆಸ್ (13 ಕ್ಷೇತ್ರಗಳು), ಸಿಪಿಐ (1), ರೆವಲೂಷನರಿ ಸೋಷಿಯಲ್ ಪಾರ್ಟಿ(1), ಆಲ್ ಇಂಡಿಯಾ ಫಾರ್ವಡ್ ಬ್ಲಾಕ್ (1) ಪಕ್ಷಗಳು ಸೇರಿ ಸೆಕ್ಯುಲರ್ ಡೆಮಾಕ್ರಟಿಕ್ ಫೋರ್ಸಸ್ ಎಂಬ ಮೈತ್ರಿಕೂಟ ರಚಿಸಿಕೊಂಡಿವೆ. ಸಿಪಿಐ(ಎಂ) ಪಕ್ಷದ ಜಿತೇಂದ್ರ ಚೌಧರಿಯವರು ಈ ಮೈತ್ರಿಕೂಟದ ನಾಯಕರಾಗಿದ್ದು ಸಿಎಂ ಅಭ್ಯರ್ಥಿ ಎಂದು ಬಿಂಬಿತವಾಗಿದ್ದಾರೆ.

ಟಿಪ್ರ ಮೋಥಾ ಪಾರ್ಟಿ

ರಾಜಮನೆತನಕ್ಕೆ ಸೇರಿದ ಪ್ರದ್ಯೋತ್ ಮಾಣಿಕ್ಯ ದೇಬಬರ್ಮಾ ಅವರು ಟಿಪ್ರ ಮೋಥಾ ಪಕ್ಷದ ನೇತೃತ್ವವಹಿಸಿದ್ದಾರೆ. ಅಲ್ಲದೆ ಟಿಪ್ರ ಮೋಥಾ ಬಿಜೆಪಿ ಮೈತ್ರಿಕೂಟ ಅಥವಾ ಕಾಂಗ್ರೆಸ್ ಮೈತ್ರಿಕೂಟದ ಜೊತೆ ಚುನಾವಣಾ ಪೂರ್ವ ಮೈತ್ರಿ ನಿರಾಕರಿಸಿದ್ದು, 42 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ.

“ಚುನಾವಣೋತ್ತರ ಮೈತ್ರಿಯನ್ನು ಅಲ್ಲಗಳೆಯುವುದಿಲ್ಲ. ಪ್ರತ್ಯೇಕ ‘ಗ್ರೇಟರ್ ಟಿಪ್ರಲ್ಯಾಂಡ್’ ರಾಜ್ಯ ರಚಿಸುವ ನಮ್ಮ ಬೇಡಿಕೆಗೆ ಬೆಂಬಲ ನೀಡುವ ಯಾವುದೇ ಪಕ್ಷವನ್ನು ಬೆಂಬಲಿಸುತ್ತೇವೆ” ಎಂದು ಟಿಪ್ರ ಮೋಥಾ ಪಕ್ಷ ಹೇಳಿದೆ.

2021ರಲ್ಲಿ ನಡೆದ ಚುನಾವಣೆಯಲ್ಲಿ ತ್ರಿಪುರಾ ಬುಡಕಟ್ಟು ಪ್ರದೇಶಗಳ ಸ್ವಾಯತ್ತ ಜಿಲ್ಲಾ ಮಂಡಳಿಗೆ (ಟಿಟಿಎಡಿಸಿ) 30ರ ಪೈಕಿ 18 ಸ್ಥಾನಗಳನ್ನು ಗೆದ್ದ ನಂತರ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಟಿಪ್ರಮೋಥಾ ನಿರ್ಧರಿಸಿದೆ. ಪಕ್ಷ 60 ವಿಧಾನಸಭಾ ಕ್ಷೇತ್ರಗಳ ಪೈಕಿ ಬುಡಕಟ್ಟು ಪ್ರಾಬಲ್ಯದ 20 ಕ್ಷೇತ್ರಗಳನ್ನು ಗೆಲ್ಲುವ ನಿರೀಕ್ಷೆಯಲ್ಲಿದೆ.

ಉಳಿದಂತೆ ಟಿಎಂಸಿ ಪಕ್ಷವು 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. SUCI ಪಕ್ಷವು 5 ಸ್ಥಾನಗಳಲ್ಲಿ ಮತ್ತು ಸಿಪಿಐ(ಎಂಎಲ್) ಪಕ್ಷ 1 ಸ್ಥಾನದಲ್ಲಿ ಸ್ಪರ್ಧಿಸುತ್ತಿವೆ.

ತ್ರಿಪುರದಲ್ಲಿನ ಗ್ರೇಟರ್ ತ್ರಿಪುರ್‌ಲ್ಯಾಂಡ್ ಹೊಸ ರಾಜ್ಯದ ಬೇಡಿಕೆ, ಉದ್ಯೋಗ ಸೃಷ್ಟಿ ಚುನಾವಣಾ ವಿಷಯಗಳಾಗಿವೆ.

ಭಾರತದ ಈಶಾನ್ಯ ರಾಜ್ಯಗಳಾದ ನಾಗಲ್ಯಾಂಡ್, ಮೇಘಾಲಯಗಳಲ್ಲಿ ಈ ತಿಂಗಳ 26 ರಂದು ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಮಾರ್ಚ್ 02 ರಂದು ಎಲ್ಲಾ ಮೂರು ರಾಜ್ಯಗಳ ಫಲಿತಾಂಶ ಘೋಷಣೆಯಾಗಲಿದೆ.

ಇದನ್ನೂ ಓದಿ; ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಮೇಲುಕೋಟೆಯಲ್ಲಿ ಸಿ.ಎಸ್ ಪುಟ್ಟರಾಜು ವರ್ಸಸ್ ದರ್ಶನ್ ಪುಟ್ಟಣ್ಣಯ್ಯ ನಡುವೆ ಫೈಟ್: ಅದೃಷ್ಟದ ಅದಲುಬದಲು ಸಾಧ್ಯವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...