Homeಮುಖಪುಟಇಂದು ತ್ರಿಪುರ ಚುನಾವಣೆ : ಮೂರು ಮೈತ್ರಿಕೂಟಗಳ ನಡುವೆ ಒಲವು ಯಾರಿಗೆ?

ಇಂದು ತ್ರಿಪುರ ಚುನಾವಣೆ : ಮೂರು ಮೈತ್ರಿಕೂಟಗಳ ನಡುವೆ ಒಲವು ಯಾರಿಗೆ?

- Advertisement -
- Advertisement -

60 ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡ ತ್ರಿಪುರದಲ್ಲಿ ಇಂದು ಮತದಾನ ನಡೆಯುತ್ತಿದೆ. 10 ಪ.ಜಾ ಮತ್ತು 20 ಪ.ಪಂಗಡದ ಮೀಸಲು ಕ್ಷೇತ್ರಗಳು ತ್ರಿಪುರದಲ್ಲಿವೆ. ಸಿಪಿಐ(ಎಂ) ಪಕ್ಷದ ಪ್ರಬಲ ನೆಲೆಯಾಗಿದ್ದ ತ್ರಿಪುರದಲ್ಲಿ ಸರಳ ಸಿಎಂ ಎಂದು ಖ್ಯಾತರಾದ ಮಾಣಿಕ್ ಸರ್ಕಾರ್‌ರವರು 1998 ರಿಂದ 2018ರವರೆಗೆ 20 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದರು. ಆದರೆ ಕಳೆದ ಚುನಾವಣೆಯಲ್ಲಿ ಪಕ್ಷ ಸೋತ ನಂತರ ಅವರು ಹಿಂದೆ ಸರಿದಿದ್ದಾರೆ. ಇಲ್ಲಿ ಬಹುಮತಕ್ಕೆ 31 ಸ್ಥಾನಗಳ ಅಗತ್ಯವಿದೆ.

2018ರ ಬಲಾಬಲ

ಬಿಜೆಪಿ 35, ಐಪಿಎಫ್‌ಟಿ 8 ಮತ್ತು ಸಿಪಿಐ(ಎಂ) 16 ಕ್ಷೇತ್ರಗಳಲ್ಲಿ ಜಯಗಳಿಸಿದ್ದವು.

ಈ ಚುನಾವಣೆಯಲ್ಲಿ ಅಧಿಕಾರಕ್ಕಾಗಿ ಮೂರು ಮೈತ್ರಿಕೂಟಗಳು ಸೆಣಸುತ್ತಿವೆ. ಅವುಗಳ ಸಂಕ್ಷಿಪ್ತ ಪರಿಚಯ ಇಲ್ಲಿದೆ.

ಎನ್‌ಡಿಎ

ಕಳೆದ ಚುನಾವಣೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಬೃಹತ್ ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿಯಿತು. ಬಿಪ್ಲವ್ ದೇವ್ ಮುಖ್ಯಮಂತ್ರಿಯಾಗಿದ್ದರು. ಆನಂತರ ಅವರನ್ನು ಕೆಳಗಿಸಿ ಸದ್ಯ ಮಾಣಿಕ್ ಶಾ ರಾಜ್ಯದ ಸಿಎಂ ಆಗಿದ್ದಾರೆ. ಅವರೇ ಈ ಬಾರಿಯ ಚುನಾವಣಾ ಉಸ್ತುವಾರಿ ಹೊತ್ತಿದ್ದಾರೆ.

ಈ ಚುನಾವಣೆಯಲ್ಲಿ ಬಿಜೆಪಿಯು ಐಪಿಎಫ್‌ಟಿನೊಂದಿಗೆ (Indigenous Peoples Front of Tripura) ಮೈತ್ರಿಮಾಡಿಕೊಂಡು ಎನ್‌ಡಿಎ ಕೂಟ ರಚಿಸಿದೆ. ಬಿಜೆಪಿ 55 ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ ಐಪಿಎಫ್‌ಟಿ ಉಳಿದ 5 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ.

ಸೆಕ್ಯುಲರ್ ಡೆಮಾಕ್ರಟಿಕ್ ಫೋರ್ಸಸ್

ಸಿಪಿಐ(ಎಂ) (43 ಕ್ಷೇತ್ರಗಳಲ್ಲಿ ಸ್ಪರ್ಧೆ), ಕಾಂಗ್ರೆಸ್ (13 ಕ್ಷೇತ್ರಗಳು), ಸಿಪಿಐ (1), ರೆವಲೂಷನರಿ ಸೋಷಿಯಲ್ ಪಾರ್ಟಿ(1), ಆಲ್ ಇಂಡಿಯಾ ಫಾರ್ವಡ್ ಬ್ಲಾಕ್ (1) ಪಕ್ಷಗಳು ಸೇರಿ ಸೆಕ್ಯುಲರ್ ಡೆಮಾಕ್ರಟಿಕ್ ಫೋರ್ಸಸ್ ಎಂಬ ಮೈತ್ರಿಕೂಟ ರಚಿಸಿಕೊಂಡಿವೆ. ಸಿಪಿಐ(ಎಂ) ಪಕ್ಷದ ಜಿತೇಂದ್ರ ಚೌಧರಿಯವರು ಈ ಮೈತ್ರಿಕೂಟದ ನಾಯಕರಾಗಿದ್ದು ಸಿಎಂ ಅಭ್ಯರ್ಥಿ ಎಂದು ಬಿಂಬಿತವಾಗಿದ್ದಾರೆ.

ಟಿಪ್ರ ಮೋಥಾ ಪಾರ್ಟಿ

ರಾಜಮನೆತನಕ್ಕೆ ಸೇರಿದ ಪ್ರದ್ಯೋತ್ ಮಾಣಿಕ್ಯ ದೇಬಬರ್ಮಾ ಅವರು ಟಿಪ್ರ ಮೋಥಾ ಪಕ್ಷದ ನೇತೃತ್ವವಹಿಸಿದ್ದಾರೆ. ಅಲ್ಲದೆ ಟಿಪ್ರ ಮೋಥಾ ಬಿಜೆಪಿ ಮೈತ್ರಿಕೂಟ ಅಥವಾ ಕಾಂಗ್ರೆಸ್ ಮೈತ್ರಿಕೂಟದ ಜೊತೆ ಚುನಾವಣಾ ಪೂರ್ವ ಮೈತ್ರಿ ನಿರಾಕರಿಸಿದ್ದು, 42 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ.

“ಚುನಾವಣೋತ್ತರ ಮೈತ್ರಿಯನ್ನು ಅಲ್ಲಗಳೆಯುವುದಿಲ್ಲ. ಪ್ರತ್ಯೇಕ ‘ಗ್ರೇಟರ್ ಟಿಪ್ರಲ್ಯಾಂಡ್’ ರಾಜ್ಯ ರಚಿಸುವ ನಮ್ಮ ಬೇಡಿಕೆಗೆ ಬೆಂಬಲ ನೀಡುವ ಯಾವುದೇ ಪಕ್ಷವನ್ನು ಬೆಂಬಲಿಸುತ್ತೇವೆ” ಎಂದು ಟಿಪ್ರ ಮೋಥಾ ಪಕ್ಷ ಹೇಳಿದೆ.

2021ರಲ್ಲಿ ನಡೆದ ಚುನಾವಣೆಯಲ್ಲಿ ತ್ರಿಪುರಾ ಬುಡಕಟ್ಟು ಪ್ರದೇಶಗಳ ಸ್ವಾಯತ್ತ ಜಿಲ್ಲಾ ಮಂಡಳಿಗೆ (ಟಿಟಿಎಡಿಸಿ) 30ರ ಪೈಕಿ 18 ಸ್ಥಾನಗಳನ್ನು ಗೆದ್ದ ನಂತರ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಟಿಪ್ರಮೋಥಾ ನಿರ್ಧರಿಸಿದೆ. ಪಕ್ಷ 60 ವಿಧಾನಸಭಾ ಕ್ಷೇತ್ರಗಳ ಪೈಕಿ ಬುಡಕಟ್ಟು ಪ್ರಾಬಲ್ಯದ 20 ಕ್ಷೇತ್ರಗಳನ್ನು ಗೆಲ್ಲುವ ನಿರೀಕ್ಷೆಯಲ್ಲಿದೆ.

ಉಳಿದಂತೆ ಟಿಎಂಸಿ ಪಕ್ಷವು 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. SUCI ಪಕ್ಷವು 5 ಸ್ಥಾನಗಳಲ್ಲಿ ಮತ್ತು ಸಿಪಿಐ(ಎಂಎಲ್) ಪಕ್ಷ 1 ಸ್ಥಾನದಲ್ಲಿ ಸ್ಪರ್ಧಿಸುತ್ತಿವೆ.

ತ್ರಿಪುರದಲ್ಲಿನ ಗ್ರೇಟರ್ ತ್ರಿಪುರ್‌ಲ್ಯಾಂಡ್ ಹೊಸ ರಾಜ್ಯದ ಬೇಡಿಕೆ, ಉದ್ಯೋಗ ಸೃಷ್ಟಿ ಚುನಾವಣಾ ವಿಷಯಗಳಾಗಿವೆ.

ಭಾರತದ ಈಶಾನ್ಯ ರಾಜ್ಯಗಳಾದ ನಾಗಲ್ಯಾಂಡ್, ಮೇಘಾಲಯಗಳಲ್ಲಿ ಈ ತಿಂಗಳ 26 ರಂದು ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಮಾರ್ಚ್ 02 ರಂದು ಎಲ್ಲಾ ಮೂರು ರಾಜ್ಯಗಳ ಫಲಿತಾಂಶ ಘೋಷಣೆಯಾಗಲಿದೆ.

ಇದನ್ನೂ ಓದಿ; ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಮೇಲುಕೋಟೆಯಲ್ಲಿ ಸಿ.ಎಸ್ ಪುಟ್ಟರಾಜು ವರ್ಸಸ್ ದರ್ಶನ್ ಪುಟ್ಟಣ್ಣಯ್ಯ ನಡುವೆ ಫೈಟ್: ಅದೃಷ್ಟದ ಅದಲುಬದಲು ಸಾಧ್ಯವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...