Homeಮುಖಪುಟಇಂದು ತ್ರಿಪುರ ಚುನಾವಣೆ : ಮೂರು ಮೈತ್ರಿಕೂಟಗಳ ನಡುವೆ ಒಲವು ಯಾರಿಗೆ?

ಇಂದು ತ್ರಿಪುರ ಚುನಾವಣೆ : ಮೂರು ಮೈತ್ರಿಕೂಟಗಳ ನಡುವೆ ಒಲವು ಯಾರಿಗೆ?

- Advertisement -
- Advertisement -

60 ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡ ತ್ರಿಪುರದಲ್ಲಿ ಇಂದು ಮತದಾನ ನಡೆಯುತ್ತಿದೆ. 10 ಪ.ಜಾ ಮತ್ತು 20 ಪ.ಪಂಗಡದ ಮೀಸಲು ಕ್ಷೇತ್ರಗಳು ತ್ರಿಪುರದಲ್ಲಿವೆ. ಸಿಪಿಐ(ಎಂ) ಪಕ್ಷದ ಪ್ರಬಲ ನೆಲೆಯಾಗಿದ್ದ ತ್ರಿಪುರದಲ್ಲಿ ಸರಳ ಸಿಎಂ ಎಂದು ಖ್ಯಾತರಾದ ಮಾಣಿಕ್ ಸರ್ಕಾರ್‌ರವರು 1998 ರಿಂದ 2018ರವರೆಗೆ 20 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದರು. ಆದರೆ ಕಳೆದ ಚುನಾವಣೆಯಲ್ಲಿ ಪಕ್ಷ ಸೋತ ನಂತರ ಅವರು ಹಿಂದೆ ಸರಿದಿದ್ದಾರೆ. ಇಲ್ಲಿ ಬಹುಮತಕ್ಕೆ 31 ಸ್ಥಾನಗಳ ಅಗತ್ಯವಿದೆ.

2018ರ ಬಲಾಬಲ

ಬಿಜೆಪಿ 35, ಐಪಿಎಫ್‌ಟಿ 8 ಮತ್ತು ಸಿಪಿಐ(ಎಂ) 16 ಕ್ಷೇತ್ರಗಳಲ್ಲಿ ಜಯಗಳಿಸಿದ್ದವು.

ಈ ಚುನಾವಣೆಯಲ್ಲಿ ಅಧಿಕಾರಕ್ಕಾಗಿ ಮೂರು ಮೈತ್ರಿಕೂಟಗಳು ಸೆಣಸುತ್ತಿವೆ. ಅವುಗಳ ಸಂಕ್ಷಿಪ್ತ ಪರಿಚಯ ಇಲ್ಲಿದೆ.

ಎನ್‌ಡಿಎ

ಕಳೆದ ಚುನಾವಣೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಬೃಹತ್ ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿಯಿತು. ಬಿಪ್ಲವ್ ದೇವ್ ಮುಖ್ಯಮಂತ್ರಿಯಾಗಿದ್ದರು. ಆನಂತರ ಅವರನ್ನು ಕೆಳಗಿಸಿ ಸದ್ಯ ಮಾಣಿಕ್ ಶಾ ರಾಜ್ಯದ ಸಿಎಂ ಆಗಿದ್ದಾರೆ. ಅವರೇ ಈ ಬಾರಿಯ ಚುನಾವಣಾ ಉಸ್ತುವಾರಿ ಹೊತ್ತಿದ್ದಾರೆ.

ಈ ಚುನಾವಣೆಯಲ್ಲಿ ಬಿಜೆಪಿಯು ಐಪಿಎಫ್‌ಟಿನೊಂದಿಗೆ (Indigenous Peoples Front of Tripura) ಮೈತ್ರಿಮಾಡಿಕೊಂಡು ಎನ್‌ಡಿಎ ಕೂಟ ರಚಿಸಿದೆ. ಬಿಜೆಪಿ 55 ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ ಐಪಿಎಫ್‌ಟಿ ಉಳಿದ 5 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ.

ಸೆಕ್ಯುಲರ್ ಡೆಮಾಕ್ರಟಿಕ್ ಫೋರ್ಸಸ್

ಸಿಪಿಐ(ಎಂ) (43 ಕ್ಷೇತ್ರಗಳಲ್ಲಿ ಸ್ಪರ್ಧೆ), ಕಾಂಗ್ರೆಸ್ (13 ಕ್ಷೇತ್ರಗಳು), ಸಿಪಿಐ (1), ರೆವಲೂಷನರಿ ಸೋಷಿಯಲ್ ಪಾರ್ಟಿ(1), ಆಲ್ ಇಂಡಿಯಾ ಫಾರ್ವಡ್ ಬ್ಲಾಕ್ (1) ಪಕ್ಷಗಳು ಸೇರಿ ಸೆಕ್ಯುಲರ್ ಡೆಮಾಕ್ರಟಿಕ್ ಫೋರ್ಸಸ್ ಎಂಬ ಮೈತ್ರಿಕೂಟ ರಚಿಸಿಕೊಂಡಿವೆ. ಸಿಪಿಐ(ಎಂ) ಪಕ್ಷದ ಜಿತೇಂದ್ರ ಚೌಧರಿಯವರು ಈ ಮೈತ್ರಿಕೂಟದ ನಾಯಕರಾಗಿದ್ದು ಸಿಎಂ ಅಭ್ಯರ್ಥಿ ಎಂದು ಬಿಂಬಿತವಾಗಿದ್ದಾರೆ.

ಟಿಪ್ರ ಮೋಥಾ ಪಾರ್ಟಿ

ರಾಜಮನೆತನಕ್ಕೆ ಸೇರಿದ ಪ್ರದ್ಯೋತ್ ಮಾಣಿಕ್ಯ ದೇಬಬರ್ಮಾ ಅವರು ಟಿಪ್ರ ಮೋಥಾ ಪಕ್ಷದ ನೇತೃತ್ವವಹಿಸಿದ್ದಾರೆ. ಅಲ್ಲದೆ ಟಿಪ್ರ ಮೋಥಾ ಬಿಜೆಪಿ ಮೈತ್ರಿಕೂಟ ಅಥವಾ ಕಾಂಗ್ರೆಸ್ ಮೈತ್ರಿಕೂಟದ ಜೊತೆ ಚುನಾವಣಾ ಪೂರ್ವ ಮೈತ್ರಿ ನಿರಾಕರಿಸಿದ್ದು, 42 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ.

“ಚುನಾವಣೋತ್ತರ ಮೈತ್ರಿಯನ್ನು ಅಲ್ಲಗಳೆಯುವುದಿಲ್ಲ. ಪ್ರತ್ಯೇಕ ‘ಗ್ರೇಟರ್ ಟಿಪ್ರಲ್ಯಾಂಡ್’ ರಾಜ್ಯ ರಚಿಸುವ ನಮ್ಮ ಬೇಡಿಕೆಗೆ ಬೆಂಬಲ ನೀಡುವ ಯಾವುದೇ ಪಕ್ಷವನ್ನು ಬೆಂಬಲಿಸುತ್ತೇವೆ” ಎಂದು ಟಿಪ್ರ ಮೋಥಾ ಪಕ್ಷ ಹೇಳಿದೆ.

2021ರಲ್ಲಿ ನಡೆದ ಚುನಾವಣೆಯಲ್ಲಿ ತ್ರಿಪುರಾ ಬುಡಕಟ್ಟು ಪ್ರದೇಶಗಳ ಸ್ವಾಯತ್ತ ಜಿಲ್ಲಾ ಮಂಡಳಿಗೆ (ಟಿಟಿಎಡಿಸಿ) 30ರ ಪೈಕಿ 18 ಸ್ಥಾನಗಳನ್ನು ಗೆದ್ದ ನಂತರ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಟಿಪ್ರಮೋಥಾ ನಿರ್ಧರಿಸಿದೆ. ಪಕ್ಷ 60 ವಿಧಾನಸಭಾ ಕ್ಷೇತ್ರಗಳ ಪೈಕಿ ಬುಡಕಟ್ಟು ಪ್ರಾಬಲ್ಯದ 20 ಕ್ಷೇತ್ರಗಳನ್ನು ಗೆಲ್ಲುವ ನಿರೀಕ್ಷೆಯಲ್ಲಿದೆ.

ಉಳಿದಂತೆ ಟಿಎಂಸಿ ಪಕ್ಷವು 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. SUCI ಪಕ್ಷವು 5 ಸ್ಥಾನಗಳಲ್ಲಿ ಮತ್ತು ಸಿಪಿಐ(ಎಂಎಲ್) ಪಕ್ಷ 1 ಸ್ಥಾನದಲ್ಲಿ ಸ್ಪರ್ಧಿಸುತ್ತಿವೆ.

ತ್ರಿಪುರದಲ್ಲಿನ ಗ್ರೇಟರ್ ತ್ರಿಪುರ್‌ಲ್ಯಾಂಡ್ ಹೊಸ ರಾಜ್ಯದ ಬೇಡಿಕೆ, ಉದ್ಯೋಗ ಸೃಷ್ಟಿ ಚುನಾವಣಾ ವಿಷಯಗಳಾಗಿವೆ.

ಭಾರತದ ಈಶಾನ್ಯ ರಾಜ್ಯಗಳಾದ ನಾಗಲ್ಯಾಂಡ್, ಮೇಘಾಲಯಗಳಲ್ಲಿ ಈ ತಿಂಗಳ 26 ರಂದು ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಮಾರ್ಚ್ 02 ರಂದು ಎಲ್ಲಾ ಮೂರು ರಾಜ್ಯಗಳ ಫಲಿತಾಂಶ ಘೋಷಣೆಯಾಗಲಿದೆ.

ಇದನ್ನೂ ಓದಿ; ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಮೇಲುಕೋಟೆಯಲ್ಲಿ ಸಿ.ಎಸ್ ಪುಟ್ಟರಾಜು ವರ್ಸಸ್ ದರ್ಶನ್ ಪುಟ್ಟಣ್ಣಯ್ಯ ನಡುವೆ ಫೈಟ್: ಅದೃಷ್ಟದ ಅದಲುಬದಲು ಸಾಧ್ಯವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...