Homeಮುಖಪುಟಇಂದು ತ್ರಿಪುರ ಚುನಾವಣೆ : ಮೂರು ಮೈತ್ರಿಕೂಟಗಳ ನಡುವೆ ಒಲವು ಯಾರಿಗೆ?

ಇಂದು ತ್ರಿಪುರ ಚುನಾವಣೆ : ಮೂರು ಮೈತ್ರಿಕೂಟಗಳ ನಡುವೆ ಒಲವು ಯಾರಿಗೆ?

- Advertisement -
- Advertisement -

60 ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡ ತ್ರಿಪುರದಲ್ಲಿ ಇಂದು ಮತದಾನ ನಡೆಯುತ್ತಿದೆ. 10 ಪ.ಜಾ ಮತ್ತು 20 ಪ.ಪಂಗಡದ ಮೀಸಲು ಕ್ಷೇತ್ರಗಳು ತ್ರಿಪುರದಲ್ಲಿವೆ. ಸಿಪಿಐ(ಎಂ) ಪಕ್ಷದ ಪ್ರಬಲ ನೆಲೆಯಾಗಿದ್ದ ತ್ರಿಪುರದಲ್ಲಿ ಸರಳ ಸಿಎಂ ಎಂದು ಖ್ಯಾತರಾದ ಮಾಣಿಕ್ ಸರ್ಕಾರ್‌ರವರು 1998 ರಿಂದ 2018ರವರೆಗೆ 20 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದರು. ಆದರೆ ಕಳೆದ ಚುನಾವಣೆಯಲ್ಲಿ ಪಕ್ಷ ಸೋತ ನಂತರ ಅವರು ಹಿಂದೆ ಸರಿದಿದ್ದಾರೆ. ಇಲ್ಲಿ ಬಹುಮತಕ್ಕೆ 31 ಸ್ಥಾನಗಳ ಅಗತ್ಯವಿದೆ.

2018ರ ಬಲಾಬಲ

ಬಿಜೆಪಿ 35, ಐಪಿಎಫ್‌ಟಿ 8 ಮತ್ತು ಸಿಪಿಐ(ಎಂ) 16 ಕ್ಷೇತ್ರಗಳಲ್ಲಿ ಜಯಗಳಿಸಿದ್ದವು.

ಈ ಚುನಾವಣೆಯಲ್ಲಿ ಅಧಿಕಾರಕ್ಕಾಗಿ ಮೂರು ಮೈತ್ರಿಕೂಟಗಳು ಸೆಣಸುತ್ತಿವೆ. ಅವುಗಳ ಸಂಕ್ಷಿಪ್ತ ಪರಿಚಯ ಇಲ್ಲಿದೆ.

ಎನ್‌ಡಿಎ

ಕಳೆದ ಚುನಾವಣೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಬೃಹತ್ ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿಯಿತು. ಬಿಪ್ಲವ್ ದೇವ್ ಮುಖ್ಯಮಂತ್ರಿಯಾಗಿದ್ದರು. ಆನಂತರ ಅವರನ್ನು ಕೆಳಗಿಸಿ ಸದ್ಯ ಮಾಣಿಕ್ ಶಾ ರಾಜ್ಯದ ಸಿಎಂ ಆಗಿದ್ದಾರೆ. ಅವರೇ ಈ ಬಾರಿಯ ಚುನಾವಣಾ ಉಸ್ತುವಾರಿ ಹೊತ್ತಿದ್ದಾರೆ.

ಈ ಚುನಾವಣೆಯಲ್ಲಿ ಬಿಜೆಪಿಯು ಐಪಿಎಫ್‌ಟಿನೊಂದಿಗೆ (Indigenous Peoples Front of Tripura) ಮೈತ್ರಿಮಾಡಿಕೊಂಡು ಎನ್‌ಡಿಎ ಕೂಟ ರಚಿಸಿದೆ. ಬಿಜೆಪಿ 55 ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ ಐಪಿಎಫ್‌ಟಿ ಉಳಿದ 5 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ.

ಸೆಕ್ಯುಲರ್ ಡೆಮಾಕ್ರಟಿಕ್ ಫೋರ್ಸಸ್

ಸಿಪಿಐ(ಎಂ) (43 ಕ್ಷೇತ್ರಗಳಲ್ಲಿ ಸ್ಪರ್ಧೆ), ಕಾಂಗ್ರೆಸ್ (13 ಕ್ಷೇತ್ರಗಳು), ಸಿಪಿಐ (1), ರೆವಲೂಷನರಿ ಸೋಷಿಯಲ್ ಪಾರ್ಟಿ(1), ಆಲ್ ಇಂಡಿಯಾ ಫಾರ್ವಡ್ ಬ್ಲಾಕ್ (1) ಪಕ್ಷಗಳು ಸೇರಿ ಸೆಕ್ಯುಲರ್ ಡೆಮಾಕ್ರಟಿಕ್ ಫೋರ್ಸಸ್ ಎಂಬ ಮೈತ್ರಿಕೂಟ ರಚಿಸಿಕೊಂಡಿವೆ. ಸಿಪಿಐ(ಎಂ) ಪಕ್ಷದ ಜಿತೇಂದ್ರ ಚೌಧರಿಯವರು ಈ ಮೈತ್ರಿಕೂಟದ ನಾಯಕರಾಗಿದ್ದು ಸಿಎಂ ಅಭ್ಯರ್ಥಿ ಎಂದು ಬಿಂಬಿತವಾಗಿದ್ದಾರೆ.

ಟಿಪ್ರ ಮೋಥಾ ಪಾರ್ಟಿ

ರಾಜಮನೆತನಕ್ಕೆ ಸೇರಿದ ಪ್ರದ್ಯೋತ್ ಮಾಣಿಕ್ಯ ದೇಬಬರ್ಮಾ ಅವರು ಟಿಪ್ರ ಮೋಥಾ ಪಕ್ಷದ ನೇತೃತ್ವವಹಿಸಿದ್ದಾರೆ. ಅಲ್ಲದೆ ಟಿಪ್ರ ಮೋಥಾ ಬಿಜೆಪಿ ಮೈತ್ರಿಕೂಟ ಅಥವಾ ಕಾಂಗ್ರೆಸ್ ಮೈತ್ರಿಕೂಟದ ಜೊತೆ ಚುನಾವಣಾ ಪೂರ್ವ ಮೈತ್ರಿ ನಿರಾಕರಿಸಿದ್ದು, 42 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ.

“ಚುನಾವಣೋತ್ತರ ಮೈತ್ರಿಯನ್ನು ಅಲ್ಲಗಳೆಯುವುದಿಲ್ಲ. ಪ್ರತ್ಯೇಕ ‘ಗ್ರೇಟರ್ ಟಿಪ್ರಲ್ಯಾಂಡ್’ ರಾಜ್ಯ ರಚಿಸುವ ನಮ್ಮ ಬೇಡಿಕೆಗೆ ಬೆಂಬಲ ನೀಡುವ ಯಾವುದೇ ಪಕ್ಷವನ್ನು ಬೆಂಬಲಿಸುತ್ತೇವೆ” ಎಂದು ಟಿಪ್ರ ಮೋಥಾ ಪಕ್ಷ ಹೇಳಿದೆ.

2021ರಲ್ಲಿ ನಡೆದ ಚುನಾವಣೆಯಲ್ಲಿ ತ್ರಿಪುರಾ ಬುಡಕಟ್ಟು ಪ್ರದೇಶಗಳ ಸ್ವಾಯತ್ತ ಜಿಲ್ಲಾ ಮಂಡಳಿಗೆ (ಟಿಟಿಎಡಿಸಿ) 30ರ ಪೈಕಿ 18 ಸ್ಥಾನಗಳನ್ನು ಗೆದ್ದ ನಂತರ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಟಿಪ್ರಮೋಥಾ ನಿರ್ಧರಿಸಿದೆ. ಪಕ್ಷ 60 ವಿಧಾನಸಭಾ ಕ್ಷೇತ್ರಗಳ ಪೈಕಿ ಬುಡಕಟ್ಟು ಪ್ರಾಬಲ್ಯದ 20 ಕ್ಷೇತ್ರಗಳನ್ನು ಗೆಲ್ಲುವ ನಿರೀಕ್ಷೆಯಲ್ಲಿದೆ.

ಉಳಿದಂತೆ ಟಿಎಂಸಿ ಪಕ್ಷವು 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. SUCI ಪಕ್ಷವು 5 ಸ್ಥಾನಗಳಲ್ಲಿ ಮತ್ತು ಸಿಪಿಐ(ಎಂಎಲ್) ಪಕ್ಷ 1 ಸ್ಥಾನದಲ್ಲಿ ಸ್ಪರ್ಧಿಸುತ್ತಿವೆ.

ತ್ರಿಪುರದಲ್ಲಿನ ಗ್ರೇಟರ್ ತ್ರಿಪುರ್‌ಲ್ಯಾಂಡ್ ಹೊಸ ರಾಜ್ಯದ ಬೇಡಿಕೆ, ಉದ್ಯೋಗ ಸೃಷ್ಟಿ ಚುನಾವಣಾ ವಿಷಯಗಳಾಗಿವೆ.

ಭಾರತದ ಈಶಾನ್ಯ ರಾಜ್ಯಗಳಾದ ನಾಗಲ್ಯಾಂಡ್, ಮೇಘಾಲಯಗಳಲ್ಲಿ ಈ ತಿಂಗಳ 26 ರಂದು ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಮಾರ್ಚ್ 02 ರಂದು ಎಲ್ಲಾ ಮೂರು ರಾಜ್ಯಗಳ ಫಲಿತಾಂಶ ಘೋಷಣೆಯಾಗಲಿದೆ.

ಇದನ್ನೂ ಓದಿ; ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಮೇಲುಕೋಟೆಯಲ್ಲಿ ಸಿ.ಎಸ್ ಪುಟ್ಟರಾಜು ವರ್ಸಸ್ ದರ್ಶನ್ ಪುಟ್ಟಣ್ಣಯ್ಯ ನಡುವೆ ಫೈಟ್: ಅದೃಷ್ಟದ ಅದಲುಬದಲು ಸಾಧ್ಯವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...