Homeಮುಖಪುಟಸಿಂಹಗಳ ಜೋಡಿಗೆ ಅಕ್ಬರ್-ಸೀತಾ ನಾಮಕರಣ ವಿವಾದ: ಹಿರಿಯ ಅರಣ್ಯಾಧಿಕಾರಿ ಅಮಾನತು

ಸಿಂಹಗಳ ಜೋಡಿಗೆ ಅಕ್ಬರ್-ಸೀತಾ ನಾಮಕರಣ ವಿವಾದ: ಹಿರಿಯ ಅರಣ್ಯಾಧಿಕಾರಿ ಅಮಾನತು

- Advertisement -
- Advertisement -

ಸಿಂಹಗಳ ಜೋಡಿಯ ನಾಮಕರಣ ವಿವಾದದ ಬೆನ್ನಲ್ಲಿ ಅಕ್ಬರ್ ಮತ್ತು ಸೀತಾ ಎಂದು ಸಿಂಹಗಳ ಜೋಡಿಗೆ ನಾಮಕರಣವನ್ನು ಮಾಡಿದ್ದ ವಿವಾದಕ್ಕೆ ಸಂಬಂಧಿಸಿ ತ್ರಿಪುರಾ ರಾಜ್ಯ ಸರ್ಕಾರವು, ಮುಖ್ಯ ವನ್ಯಜೀವಿ ವಾರ್ಡನ್ ಪ್ರಬಿನ್ ಲಾಲ್ ಅಗರವಾಲ್ ಅವರನ್ನು ಫೆಬ್ರವರಿ 24 ರಂದು ಅಮಾನತುಗೊಳಿಸಿದ್ದಾರೆ.

ಸಂಭಾವ್ಯ ಧಾರ್ಮಿಕ ವಿವಾದಗಳನ್ನು ಉಂಟುಮಾಡಲು ಅಕ್ಬರ್ ಮತ್ತು ಸೀತೆಯ ಹೆಸರನ್ನು ಸಿಂಹಗಳಿಗೆ ಏಕೆ ಇಡಲಾಗಿದೆ ಎಂದು ಕೋಲ್ಕತ್ತಾ ಹೈಕೋರ್ಟ್ ಕೇಳಿದ ನಂತರ ಈ ಬೆಳವಣಿಗೆ ನಡೆದಿದೆ. ಬಿಜೆಪಿ ಮತ್ತು ಅದರ ಮಿತ್ರಪಕ್ಷವಾದ ಇಂಡಿಜಿನಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರಾ ಸಮ್ಮಿಶ್ರ ಸರಕಾರ ಅಗರವಾಲ್ ಅವರನ್ನು ಅಮಾನತು ಮಾಡಿದೆ ಎಂದು ದಿ ವೈರ್‌ ವರದಿ ತಿಳಿಸಿದೆ.

ಸಿಲಿಗುರಿಯಲ್ಲಿರುವ ಬಂಗಾಳ ಸಫಾರಿ ಪಾರ್ಕ್‌ಗೆ ಫೆಬ್ರವರಿ 12ರಂದು ತ್ರಿಪುರಾದ ಸೆಪಹಿಜಲಾ ಝುವೊಲಾಜಿಕಲ್‌ ಪಾರ್ಕಿನಿಂದ ಎರಡು ಸಿಂಹಗಳನ್ನು ತರಲಾಗಿತ್ತು. ಅವುಗಳಲ್ಲಿ ಒಂದಕ್ಕೆ ʼಅಕ್ಬರ್‌ʼ ಎಂದು ಹೆಸರನ್ನಿಡಲಾಗಿದ್ದರೆ, ಇನ್ನೊಂದಕ್ಕೆ ಸೀತಾ ಎಂಬ ಹೆಸರನ್ನಿಡಲಾಗಿದೆ. ಈ 7 ವರ್ಷದ ʼಅಕ್ಬರ್‌ ಮತ್ತು 5 ವರ್ಷದ ಸೀತಾ ಸಿಂಹದ ಜೋಡಿಯನ್ನು ಒಂದೇ ಕಡೆ ಅಧಿಕಾರಿಗಳು ಇರಿಸಿದ್ದಾರೆ. ಇದನ್ನು ಪ್ರಶ್ನಿಸಿ ವಿಶ್ವ ಹಿಂದೂ ಪರಿಷತ್‌ ಕೋಲ್ಕತಾ ಹೈಕೋರ್ಟ್‌ ಮೊರೆ ಹೋಗಿದೆ. ಇದು ಹಿಂದೂ ಧರ್ಮಕ್ಕೆ ಅವಮಾನ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು.
ಕೋಲ್ಕತ್ತ ಉಚ್ಚ ನ್ಯಾಯಾಲಯದ ಜಲ್‌ ಪಾಯ್‌ಗುರಿ ಸರ್ಕ್ಯೂಟ್‌ ಪೀಠಕ್ಕೆ ವಿಶ್ವಹಿಂದೂ ಪರಿಷತ್‌ ಅರ್ಜಿಯನ್ನು ಸಲ್ಲಿಸಿತ್ತು. ಈ ಕುರಿತು ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ಸುಗತಾ ಭಟ್ಟಾಚಾರ್ಯ ಅವರ ಕಲ್ಕತ್ತಾ ಹೈಕೋರ್ಟ್‌ ಪೀಠವು ‘ಅಕ್ಬರ್ ಮತ್ತು ಸೀತಾ’ ಸಿಂಹಗಳ ಹೆಸರು ಬದಲಿಸುವಂತೆ ಸರ್ಕಾರಕ್ಕೆ ಆದೇಶಿಸಿದೆ.

1994ರ ಬ್ಯಾಚ್‌ನ ಭಾರತೀಯ ಅರಣ್ಯ ಸೇವೆಯ ಅಧಿಕಾರಿ ಪ್ರಬಿನ್ ಲಾಲ್ ಅಗರವಾಲ್ ಅವರು ಸಿಂಹಗಳ ಜೋಡಿಯನ್ನು ಪಶ್ಚಿಮ ಬಂಗಾಳಕ್ಕೆ ಕಳುಹಿಸುವ ಮೊದಲು ಜೋಡಿಯ ಹೆಸರನ್ನು ಅಕ್ಬರ್ ಮತ್ತು ಸೀತಾ ಎಂದು ದಾಖಲಿಸಿದ್ದರು. ಅಗರವಾಲ್ ಅವರು ತ್ರಿಪುರಾದ ಮುಖ್ಯ ವನ್ಯಜೀವಿ ವಾರ್ಡನ್ ಆಗಿದ್ದು, ರಾಜ್ಯ ಅರಣ್ಯ ಇಲಾಖೆಯ ಉನ್ನತ ಉದ್ಯೋಗಿಗಳಲ್ಲಿ ಒಬ್ಬರಾಗಿದ್ದರು. ಅವರು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾಗಿದ್ದರು.

ಫೆಬ್ರವರಿ 16ರಂದು ಸ್ಥಳೀಯ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಸಿಂಹಗಳ ಜೋಡಿಯನ್ನು ಅಕ್ಬರ್ ಮತ್ತು ಸೀತಾ ಎಂದು ಹೆಸರಿಸುವುದರ ಕುರಿತು ಕೋಲ್ಕತ್ತಾ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ವಿಎಚ್‌ಪಿ ಜಿಲ್ಲಾ ಮುಖ್ಯಸ್ಥ ದುಲಾಲ್ ಚಂದ್ರ ರೇ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಈ ನಾಮಕರಣವು ಹಿಂದೂ ಧರ್ಮದ ಮೇಲಿನ ದಾಳಿ, ಅಕ್ಬರ್ ಎಂಬುದು ಮೊಘಲ್ ಚಕ್ರವರ್ತಿಯ ಹೆಸರು ಮತ್ತು ಸೀತಾ ಹಿಂದೂ ಮಹಾಕಾವ್ಯ ರಾಮಾಯಣದಲ್ಲಿ ಒಂದು ಪಾತ್ರವಾಗಿದೆ, ಇದನ್ನು ಹಿಂದೂ ಧರ್ಮದಲ್ಲಿ ದೇವತೆಯಾಗಿ ಪೂಜಿಸಲಾಗುತ್ತದೆ ಎಂದು ಹೇಳಿದ್ದರು. ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ಹೈಕೋರ್ಟ್ ವಿವಾದವನ್ನು ತಪ್ಪಿಸಬಹುದಿತ್ತು ಎಂದು ಹೇಳಿದೆ.

ವರದಿಯ ಪ್ರಕಾರ, ತ್ರಿಪುರಾ ಸರ್ಕಾರವು ಅಗರವಾಲ್ ಅವರಿಂದ ಸ್ಪಷ್ಟೀಕರಣವನ್ನು ಕೇಳಿದೆ ಮತ್ತು ಅವರು ಜೋಡಿಗೆ ಅಕ್ಬರ್ ಮತ್ತು ಸೀತಾ ಎಂದು ಹೆಸರಿಸಿರುವುದನ್ನು ನಿರಾಕರಿಸಿದ್ದಾರೆ. ಆದರೆ ತ್ರಿಪುರಾದಲ್ಲಿನ ವನ್ಯಜೀವಿ ಅಧಿಕಾರಿಗಳು ಸಿಂಹದ ಜೋಡಿಯ ಹೆಸರುಗಳನ್ನು ಬದಲಾಯಿಸಿದ್ದಾರೆ ಎಂದು ತನಿಖೆಯಿಂದ ತಿಳಿದು ಬಂದಿದೆ.

ಇದನ್ನು ಓದಿ: ಅಕ್ಬರ್-ಸೀತಾ ಸಿಂಹಗಳ ಹೆಸರು ಬದಲಿಸಲು ಹೈಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...