Homeಮುಖಪುಟಸಿಂಹಗಳ ಜೋಡಿಗೆ ಅಕ್ಬರ್-ಸೀತಾ ನಾಮಕರಣ ವಿವಾದ: ಹಿರಿಯ ಅರಣ್ಯಾಧಿಕಾರಿ ಅಮಾನತು

ಸಿಂಹಗಳ ಜೋಡಿಗೆ ಅಕ್ಬರ್-ಸೀತಾ ನಾಮಕರಣ ವಿವಾದ: ಹಿರಿಯ ಅರಣ್ಯಾಧಿಕಾರಿ ಅಮಾನತು

- Advertisement -
- Advertisement -

ಸಿಂಹಗಳ ಜೋಡಿಯ ನಾಮಕರಣ ವಿವಾದದ ಬೆನ್ನಲ್ಲಿ ಅಕ್ಬರ್ ಮತ್ತು ಸೀತಾ ಎಂದು ಸಿಂಹಗಳ ಜೋಡಿಗೆ ನಾಮಕರಣವನ್ನು ಮಾಡಿದ್ದ ವಿವಾದಕ್ಕೆ ಸಂಬಂಧಿಸಿ ತ್ರಿಪುರಾ ರಾಜ್ಯ ಸರ್ಕಾರವು, ಮುಖ್ಯ ವನ್ಯಜೀವಿ ವಾರ್ಡನ್ ಪ್ರಬಿನ್ ಲಾಲ್ ಅಗರವಾಲ್ ಅವರನ್ನು ಫೆಬ್ರವರಿ 24 ರಂದು ಅಮಾನತುಗೊಳಿಸಿದ್ದಾರೆ.

ಸಂಭಾವ್ಯ ಧಾರ್ಮಿಕ ವಿವಾದಗಳನ್ನು ಉಂಟುಮಾಡಲು ಅಕ್ಬರ್ ಮತ್ತು ಸೀತೆಯ ಹೆಸರನ್ನು ಸಿಂಹಗಳಿಗೆ ಏಕೆ ಇಡಲಾಗಿದೆ ಎಂದು ಕೋಲ್ಕತ್ತಾ ಹೈಕೋರ್ಟ್ ಕೇಳಿದ ನಂತರ ಈ ಬೆಳವಣಿಗೆ ನಡೆದಿದೆ. ಬಿಜೆಪಿ ಮತ್ತು ಅದರ ಮಿತ್ರಪಕ್ಷವಾದ ಇಂಡಿಜಿನಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರಾ ಸಮ್ಮಿಶ್ರ ಸರಕಾರ ಅಗರವಾಲ್ ಅವರನ್ನು ಅಮಾನತು ಮಾಡಿದೆ ಎಂದು ದಿ ವೈರ್‌ ವರದಿ ತಿಳಿಸಿದೆ.

ಸಿಲಿಗುರಿಯಲ್ಲಿರುವ ಬಂಗಾಳ ಸಫಾರಿ ಪಾರ್ಕ್‌ಗೆ ಫೆಬ್ರವರಿ 12ರಂದು ತ್ರಿಪುರಾದ ಸೆಪಹಿಜಲಾ ಝುವೊಲಾಜಿಕಲ್‌ ಪಾರ್ಕಿನಿಂದ ಎರಡು ಸಿಂಹಗಳನ್ನು ತರಲಾಗಿತ್ತು. ಅವುಗಳಲ್ಲಿ ಒಂದಕ್ಕೆ ʼಅಕ್ಬರ್‌ʼ ಎಂದು ಹೆಸರನ್ನಿಡಲಾಗಿದ್ದರೆ, ಇನ್ನೊಂದಕ್ಕೆ ಸೀತಾ ಎಂಬ ಹೆಸರನ್ನಿಡಲಾಗಿದೆ. ಈ 7 ವರ್ಷದ ʼಅಕ್ಬರ್‌ ಮತ್ತು 5 ವರ್ಷದ ಸೀತಾ ಸಿಂಹದ ಜೋಡಿಯನ್ನು ಒಂದೇ ಕಡೆ ಅಧಿಕಾರಿಗಳು ಇರಿಸಿದ್ದಾರೆ. ಇದನ್ನು ಪ್ರಶ್ನಿಸಿ ವಿಶ್ವ ಹಿಂದೂ ಪರಿಷತ್‌ ಕೋಲ್ಕತಾ ಹೈಕೋರ್ಟ್‌ ಮೊರೆ ಹೋಗಿದೆ. ಇದು ಹಿಂದೂ ಧರ್ಮಕ್ಕೆ ಅವಮಾನ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು.
ಕೋಲ್ಕತ್ತ ಉಚ್ಚ ನ್ಯಾಯಾಲಯದ ಜಲ್‌ ಪಾಯ್‌ಗುರಿ ಸರ್ಕ್ಯೂಟ್‌ ಪೀಠಕ್ಕೆ ವಿಶ್ವಹಿಂದೂ ಪರಿಷತ್‌ ಅರ್ಜಿಯನ್ನು ಸಲ್ಲಿಸಿತ್ತು. ಈ ಕುರಿತು ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ಸುಗತಾ ಭಟ್ಟಾಚಾರ್ಯ ಅವರ ಕಲ್ಕತ್ತಾ ಹೈಕೋರ್ಟ್‌ ಪೀಠವು ‘ಅಕ್ಬರ್ ಮತ್ತು ಸೀತಾ’ ಸಿಂಹಗಳ ಹೆಸರು ಬದಲಿಸುವಂತೆ ಸರ್ಕಾರಕ್ಕೆ ಆದೇಶಿಸಿದೆ.

1994ರ ಬ್ಯಾಚ್‌ನ ಭಾರತೀಯ ಅರಣ್ಯ ಸೇವೆಯ ಅಧಿಕಾರಿ ಪ್ರಬಿನ್ ಲಾಲ್ ಅಗರವಾಲ್ ಅವರು ಸಿಂಹಗಳ ಜೋಡಿಯನ್ನು ಪಶ್ಚಿಮ ಬಂಗಾಳಕ್ಕೆ ಕಳುಹಿಸುವ ಮೊದಲು ಜೋಡಿಯ ಹೆಸರನ್ನು ಅಕ್ಬರ್ ಮತ್ತು ಸೀತಾ ಎಂದು ದಾಖಲಿಸಿದ್ದರು. ಅಗರವಾಲ್ ಅವರು ತ್ರಿಪುರಾದ ಮುಖ್ಯ ವನ್ಯಜೀವಿ ವಾರ್ಡನ್ ಆಗಿದ್ದು, ರಾಜ್ಯ ಅರಣ್ಯ ಇಲಾಖೆಯ ಉನ್ನತ ಉದ್ಯೋಗಿಗಳಲ್ಲಿ ಒಬ್ಬರಾಗಿದ್ದರು. ಅವರು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾಗಿದ್ದರು.

ಫೆಬ್ರವರಿ 16ರಂದು ಸ್ಥಳೀಯ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಸಿಂಹಗಳ ಜೋಡಿಯನ್ನು ಅಕ್ಬರ್ ಮತ್ತು ಸೀತಾ ಎಂದು ಹೆಸರಿಸುವುದರ ಕುರಿತು ಕೋಲ್ಕತ್ತಾ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ವಿಎಚ್‌ಪಿ ಜಿಲ್ಲಾ ಮುಖ್ಯಸ್ಥ ದುಲಾಲ್ ಚಂದ್ರ ರೇ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಈ ನಾಮಕರಣವು ಹಿಂದೂ ಧರ್ಮದ ಮೇಲಿನ ದಾಳಿ, ಅಕ್ಬರ್ ಎಂಬುದು ಮೊಘಲ್ ಚಕ್ರವರ್ತಿಯ ಹೆಸರು ಮತ್ತು ಸೀತಾ ಹಿಂದೂ ಮಹಾಕಾವ್ಯ ರಾಮಾಯಣದಲ್ಲಿ ಒಂದು ಪಾತ್ರವಾಗಿದೆ, ಇದನ್ನು ಹಿಂದೂ ಧರ್ಮದಲ್ಲಿ ದೇವತೆಯಾಗಿ ಪೂಜಿಸಲಾಗುತ್ತದೆ ಎಂದು ಹೇಳಿದ್ದರು. ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ಹೈಕೋರ್ಟ್ ವಿವಾದವನ್ನು ತಪ್ಪಿಸಬಹುದಿತ್ತು ಎಂದು ಹೇಳಿದೆ.

ವರದಿಯ ಪ್ರಕಾರ, ತ್ರಿಪುರಾ ಸರ್ಕಾರವು ಅಗರವಾಲ್ ಅವರಿಂದ ಸ್ಪಷ್ಟೀಕರಣವನ್ನು ಕೇಳಿದೆ ಮತ್ತು ಅವರು ಜೋಡಿಗೆ ಅಕ್ಬರ್ ಮತ್ತು ಸೀತಾ ಎಂದು ಹೆಸರಿಸಿರುವುದನ್ನು ನಿರಾಕರಿಸಿದ್ದಾರೆ. ಆದರೆ ತ್ರಿಪುರಾದಲ್ಲಿನ ವನ್ಯಜೀವಿ ಅಧಿಕಾರಿಗಳು ಸಿಂಹದ ಜೋಡಿಯ ಹೆಸರುಗಳನ್ನು ಬದಲಾಯಿಸಿದ್ದಾರೆ ಎಂದು ತನಿಖೆಯಿಂದ ತಿಳಿದು ಬಂದಿದೆ.

ಇದನ್ನು ಓದಿ: ಅಕ್ಬರ್-ಸೀತಾ ಸಿಂಹಗಳ ಹೆಸರು ಬದಲಿಸಲು ಹೈಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...