Homeಮುಖಪುಟಸಿಂಹಗಳ ಜೋಡಿಗೆ ಅಕ್ಬರ್-ಸೀತಾ ನಾಮಕರಣ ವಿವಾದ: ಹಿರಿಯ ಅರಣ್ಯಾಧಿಕಾರಿ ಅಮಾನತು

ಸಿಂಹಗಳ ಜೋಡಿಗೆ ಅಕ್ಬರ್-ಸೀತಾ ನಾಮಕರಣ ವಿವಾದ: ಹಿರಿಯ ಅರಣ್ಯಾಧಿಕಾರಿ ಅಮಾನತು

- Advertisement -
- Advertisement -

ಸಿಂಹಗಳ ಜೋಡಿಯ ನಾಮಕರಣ ವಿವಾದದ ಬೆನ್ನಲ್ಲಿ ಅಕ್ಬರ್ ಮತ್ತು ಸೀತಾ ಎಂದು ಸಿಂಹಗಳ ಜೋಡಿಗೆ ನಾಮಕರಣವನ್ನು ಮಾಡಿದ್ದ ವಿವಾದಕ್ಕೆ ಸಂಬಂಧಿಸಿ ತ್ರಿಪುರಾ ರಾಜ್ಯ ಸರ್ಕಾರವು, ಮುಖ್ಯ ವನ್ಯಜೀವಿ ವಾರ್ಡನ್ ಪ್ರಬಿನ್ ಲಾಲ್ ಅಗರವಾಲ್ ಅವರನ್ನು ಫೆಬ್ರವರಿ 24 ರಂದು ಅಮಾನತುಗೊಳಿಸಿದ್ದಾರೆ.

ಸಂಭಾವ್ಯ ಧಾರ್ಮಿಕ ವಿವಾದಗಳನ್ನು ಉಂಟುಮಾಡಲು ಅಕ್ಬರ್ ಮತ್ತು ಸೀತೆಯ ಹೆಸರನ್ನು ಸಿಂಹಗಳಿಗೆ ಏಕೆ ಇಡಲಾಗಿದೆ ಎಂದು ಕೋಲ್ಕತ್ತಾ ಹೈಕೋರ್ಟ್ ಕೇಳಿದ ನಂತರ ಈ ಬೆಳವಣಿಗೆ ನಡೆದಿದೆ. ಬಿಜೆಪಿ ಮತ್ತು ಅದರ ಮಿತ್ರಪಕ್ಷವಾದ ಇಂಡಿಜಿನಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರಾ ಸಮ್ಮಿಶ್ರ ಸರಕಾರ ಅಗರವಾಲ್ ಅವರನ್ನು ಅಮಾನತು ಮಾಡಿದೆ ಎಂದು ದಿ ವೈರ್‌ ವರದಿ ತಿಳಿಸಿದೆ.

ಸಿಲಿಗುರಿಯಲ್ಲಿರುವ ಬಂಗಾಳ ಸಫಾರಿ ಪಾರ್ಕ್‌ಗೆ ಫೆಬ್ರವರಿ 12ರಂದು ತ್ರಿಪುರಾದ ಸೆಪಹಿಜಲಾ ಝುವೊಲಾಜಿಕಲ್‌ ಪಾರ್ಕಿನಿಂದ ಎರಡು ಸಿಂಹಗಳನ್ನು ತರಲಾಗಿತ್ತು. ಅವುಗಳಲ್ಲಿ ಒಂದಕ್ಕೆ ʼಅಕ್ಬರ್‌ʼ ಎಂದು ಹೆಸರನ್ನಿಡಲಾಗಿದ್ದರೆ, ಇನ್ನೊಂದಕ್ಕೆ ಸೀತಾ ಎಂಬ ಹೆಸರನ್ನಿಡಲಾಗಿದೆ. ಈ 7 ವರ್ಷದ ʼಅಕ್ಬರ್‌ ಮತ್ತು 5 ವರ್ಷದ ಸೀತಾ ಸಿಂಹದ ಜೋಡಿಯನ್ನು ಒಂದೇ ಕಡೆ ಅಧಿಕಾರಿಗಳು ಇರಿಸಿದ್ದಾರೆ. ಇದನ್ನು ಪ್ರಶ್ನಿಸಿ ವಿಶ್ವ ಹಿಂದೂ ಪರಿಷತ್‌ ಕೋಲ್ಕತಾ ಹೈಕೋರ್ಟ್‌ ಮೊರೆ ಹೋಗಿದೆ. ಇದು ಹಿಂದೂ ಧರ್ಮಕ್ಕೆ ಅವಮಾನ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು.
ಕೋಲ್ಕತ್ತ ಉಚ್ಚ ನ್ಯಾಯಾಲಯದ ಜಲ್‌ ಪಾಯ್‌ಗುರಿ ಸರ್ಕ್ಯೂಟ್‌ ಪೀಠಕ್ಕೆ ವಿಶ್ವಹಿಂದೂ ಪರಿಷತ್‌ ಅರ್ಜಿಯನ್ನು ಸಲ್ಲಿಸಿತ್ತು. ಈ ಕುರಿತು ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ಸುಗತಾ ಭಟ್ಟಾಚಾರ್ಯ ಅವರ ಕಲ್ಕತ್ತಾ ಹೈಕೋರ್ಟ್‌ ಪೀಠವು ‘ಅಕ್ಬರ್ ಮತ್ತು ಸೀತಾ’ ಸಿಂಹಗಳ ಹೆಸರು ಬದಲಿಸುವಂತೆ ಸರ್ಕಾರಕ್ಕೆ ಆದೇಶಿಸಿದೆ.

1994ರ ಬ್ಯಾಚ್‌ನ ಭಾರತೀಯ ಅರಣ್ಯ ಸೇವೆಯ ಅಧಿಕಾರಿ ಪ್ರಬಿನ್ ಲಾಲ್ ಅಗರವಾಲ್ ಅವರು ಸಿಂಹಗಳ ಜೋಡಿಯನ್ನು ಪಶ್ಚಿಮ ಬಂಗಾಳಕ್ಕೆ ಕಳುಹಿಸುವ ಮೊದಲು ಜೋಡಿಯ ಹೆಸರನ್ನು ಅಕ್ಬರ್ ಮತ್ತು ಸೀತಾ ಎಂದು ದಾಖಲಿಸಿದ್ದರು. ಅಗರವಾಲ್ ಅವರು ತ್ರಿಪುರಾದ ಮುಖ್ಯ ವನ್ಯಜೀವಿ ವಾರ್ಡನ್ ಆಗಿದ್ದು, ರಾಜ್ಯ ಅರಣ್ಯ ಇಲಾಖೆಯ ಉನ್ನತ ಉದ್ಯೋಗಿಗಳಲ್ಲಿ ಒಬ್ಬರಾಗಿದ್ದರು. ಅವರು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾಗಿದ್ದರು.

ಫೆಬ್ರವರಿ 16ರಂದು ಸ್ಥಳೀಯ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಸಿಂಹಗಳ ಜೋಡಿಯನ್ನು ಅಕ್ಬರ್ ಮತ್ತು ಸೀತಾ ಎಂದು ಹೆಸರಿಸುವುದರ ಕುರಿತು ಕೋಲ್ಕತ್ತಾ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ವಿಎಚ್‌ಪಿ ಜಿಲ್ಲಾ ಮುಖ್ಯಸ್ಥ ದುಲಾಲ್ ಚಂದ್ರ ರೇ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಈ ನಾಮಕರಣವು ಹಿಂದೂ ಧರ್ಮದ ಮೇಲಿನ ದಾಳಿ, ಅಕ್ಬರ್ ಎಂಬುದು ಮೊಘಲ್ ಚಕ್ರವರ್ತಿಯ ಹೆಸರು ಮತ್ತು ಸೀತಾ ಹಿಂದೂ ಮಹಾಕಾವ್ಯ ರಾಮಾಯಣದಲ್ಲಿ ಒಂದು ಪಾತ್ರವಾಗಿದೆ, ಇದನ್ನು ಹಿಂದೂ ಧರ್ಮದಲ್ಲಿ ದೇವತೆಯಾಗಿ ಪೂಜಿಸಲಾಗುತ್ತದೆ ಎಂದು ಹೇಳಿದ್ದರು. ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ಹೈಕೋರ್ಟ್ ವಿವಾದವನ್ನು ತಪ್ಪಿಸಬಹುದಿತ್ತು ಎಂದು ಹೇಳಿದೆ.

ವರದಿಯ ಪ್ರಕಾರ, ತ್ರಿಪುರಾ ಸರ್ಕಾರವು ಅಗರವಾಲ್ ಅವರಿಂದ ಸ್ಪಷ್ಟೀಕರಣವನ್ನು ಕೇಳಿದೆ ಮತ್ತು ಅವರು ಜೋಡಿಗೆ ಅಕ್ಬರ್ ಮತ್ತು ಸೀತಾ ಎಂದು ಹೆಸರಿಸಿರುವುದನ್ನು ನಿರಾಕರಿಸಿದ್ದಾರೆ. ಆದರೆ ತ್ರಿಪುರಾದಲ್ಲಿನ ವನ್ಯಜೀವಿ ಅಧಿಕಾರಿಗಳು ಸಿಂಹದ ಜೋಡಿಯ ಹೆಸರುಗಳನ್ನು ಬದಲಾಯಿಸಿದ್ದಾರೆ ಎಂದು ತನಿಖೆಯಿಂದ ತಿಳಿದು ಬಂದಿದೆ.

ಇದನ್ನು ಓದಿ: ಅಕ್ಬರ್-ಸೀತಾ ಸಿಂಹಗಳ ಹೆಸರು ಬದಲಿಸಲು ಹೈಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...