Homeಮುಖಪುಟತ್ರಿಪುರದಲ್ಲಿ ಬುಡಕಟ್ಟು ಜನರಿಂದ ಮತದಾನ ಬಹಿಷ್ಕಾರ

ತ್ರಿಪುರದಲ್ಲಿ ಬುಡಕಟ್ಟು ಜನರಿಂದ ಮತದಾನ ಬಹಿಷ್ಕಾರ

- Advertisement -
- Advertisement -

ತ್ರಿಪುರ ಪೂರ್ವ ಲೋಕಸಭಾ ಕ್ಷೇತ್ರದ ಭಾಗವಾದ ಧಲೈ ಜಿಲ್ಲೆಯಲ್ಲಿ ರಸ್ತೆ, ನೀರಿನಂತಹ ಮೂಲಭೂತ ಸೌಕರ್ಯಗಳ ವ್ಯವಸ್ಥೆಯಿಲ್ಲದೆ ಕಂಗೆಟ್ಟ ಬುಡಕಟ್ಟು ಗ್ರಾಮದ 600ಕ್ಕೂ ಹೆಚ್ಚು ಜನರು ಮತದಾನವನ್ನು ಬಹಿಷ್ಕರಿಸುವ ಮೂಲಕ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದ್ದಾರೆ.

ಗ್ರಾಮದಲ್ಲಿ ಸುಮಾರು 900ರಷ್ಟು ಜನಸಂಖ್ಯೆಯಿದ್ದು, ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ 7ಕಿ.ಮೀ ದೂರದ ಗ್ರಾಮಸ್ಥರು ರಸ್ತೆ ನಿರ್ಮಾಣ, ನೀರಿನ ವ್ಯವಸ್ಥೆ ಕಲ್ಪಿಸುವಂತೆ ಹಲವು ತಿಂಗಳುಗಳಿಂದ ಆಗ್ರಹಿಸುತ್ತಿದ್ದರು, ಆದರೆ ಅವರ ಬೇಡಿಕೆ ಈಡೇರದ ಕಾರಣ ಮತದಾನ ಬಹಿಷ್ಕಾರವನ್ನು ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಿಗದಿಯಂತೆ, ತ್ರಿಪುರಾ ಪೂರ್ವ ಲೋಕಸಭಾ ಕ್ಷೇತ್ರದ ರೈಮಾ ವ್ಯಾಲಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಸದೈ ಮೋಹನ್ ಪಾರಾ ಮತಗಟ್ಟೆಗೆ ಚುನಾವಣಾ ತಂಡವು ತೆರಳಿದೆ. ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಪ್ರತಿಭಟಿಸುತ್ತಿರುವುದರಿಂದ ಗ್ರಾಮಸ್ಥರು ಮತಗಟ್ಟೆಯ ಹೊರಗೆ ನಿಂತಿದ್ದಾರೆ ಆದರೆ ಮತ ಚಲಾಯಿಸಲು ಮತಗಟ್ಟೆಗೆ ಪ್ರವೇಶಿಸಲಿಲ್ಲ. ಪ್ರಜಾಪ್ರಭುತ್ವದ ಹಬ್ಬದಲ್ಲಿ ಗ್ರಾಮಸ್ಥರು ಸೇರುತ್ತಾರೆ ಎಂದು ನಾವು ಭಾವಿಸಿದ್ದೆವು ಆಡಳಿತವು ಅವರ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಬೇಕಿದೆ. ಗ್ರಾಮಸ್ಥರು ಕುಡಿಯುವ ನೀರಿನ ಸಮಸ್ಯೆಯ ಬಗ್ಗೆಯೂ ದೂರು ನೀಡಿದ್ದು, ವರದಿ ಪಡೆದ ನಂತರ ಅಧಿಕಾರಿಗಳ ತಂಡ ಸದಾಯಿ ಮೋಹನ್ ಪಾರಾಕ್ಕೆ ಧಾವಿಸಿ ಮತದಾರರ ಮನವೊಲಿಸಲು ಪ್ರಯತ್ನಿಸಿದ್ದಾರೆ ಎಂದು ಎಂದು ಗಂಡಚೆರಾ (ರೈಮಾ ವ್ಯಾಲಿ) ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಅರಿಂದಮ್ ದಾಸ್ ಹೇಳಿದ್ದಾರೆ.

ರಾಜ್ಯ ಸಂಸದೀಯ ವ್ಯವಹಾರಗಳ ಸಚಿವ ರತನ್ ಲಾಲ್ ನಾಥ್ ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ್ದು, ಧಲೈ ಜಿಲ್ಲೆಯ ಮಲ್ದಪರ (ಸದಾಯಿ ಮೋಹ ಪಾರಾ) ಮತ್ತು ಗುಮತಿ ಜಿಲ್ಲೆಯ ಅಂಪಿಯಲ್ಲಿ ಎರಡು ಮತಗಟ್ಟೆಗಳ ಮತದಾರರು ರಸ್ತೆ ಮತ್ತು ನೀರಿನ ಪೂರೈಕೆಯ ಬೇಡಿಕೆಯನ್ನು ಪರಿಹರಿಸದ ಕಾರಣ ಮತದಾನ ಮಾಡಲು ಹೋಗುತ್ತಿಲ್ಲ ಎಂದು ಪ್ರತಿಭಟಿಸಿರುವುದು ನನ್ನ ಗಮನಕ್ಕೆ ಬಂದಿದೆ. ಅಧಿಕಾರಿಗಳು ಚುನಾವಣೆಯಲ್ಲಿ ಮತದಾನ ಮಾಡುವಂತೆ ಗ್ರಾಮಸ್ಥರ ಮನವೊಲಿಸಲು ಅಲ್ಲಿಗೆ ಹೋಗಿದ್ದಾರೆ. ಈ ಎರಡು ಮತಗಟ್ಟೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಕಡೆ ಮತದಾನವು ಸಾಧಾರಣ ಮತ್ತು ಶಾಂತಿಯುತವಾಗಿತ್ತು. ಸಿಪಿಐ(ಎಂ) ಮತಗಟ್ಟೆಗಳಿಗೆ ಪೋಲಿಂಗ್‌ ಏಜೆಂಟ್‌ಗಳನ್ನು ಕಳುಹಿಸಿಲ್ಲ. ಇದು ಯುದ್ಧಭೂಮಿಯಿಂದ ಪಲಾಯನ ಮಾಡುತ್ತಿರುವಂತೆ ತೋರುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: 100 ಕೋಟಿ ದಾಟಿದ ಬಿಜೆಪಿಯ ಗೂಗಲ್‌ ಜಾಹೀರಾತು ವೆಚ್ಚ!; ಕರ್ನಾಟಕವೇ ಪ್ರಮುಖ ಟಾರ್ಗೆಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...