Homeಮುಖಪುಟಈ ತಿಂಗಳಲ್ಲಿ ತ್ರಿಪುರ, ನಾಗಲ್ಯಾಂಡ್, ಮೇಘಾಲಯ ಚುನಾವಣೆ: ತಿಳಿದಿರಬೇಕಾದ ಅಂಶಗಳು

ಈ ತಿಂಗಳಲ್ಲಿ ತ್ರಿಪುರ, ನಾಗಲ್ಯಾಂಡ್, ಮೇಘಾಲಯ ಚುನಾವಣೆ: ತಿಳಿದಿರಬೇಕಾದ ಅಂಶಗಳು

- Advertisement -
- Advertisement -

ಭಾರತದ ಈಶಾನ್ಯ ರಾಜ್ಯಗಳಾದ ತ್ರಿಪುರ, ನಾಗಲ್ಯಾಂಡ್, ಮೇಘಾಲಯಗಳಲ್ಲಿ ಈ ತಿಂಗಳಿನಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಮಾರ್ಚ್ 02 ರಂದು ಎಲ್ಲಾ ರಾಜ್ಯಗಳ ಫಲಿತಾಂಶ ಘೋಷಣೆಯಾಗಲಿದೆ. ಈ ಹಿನ್ನೆಲೆಯಲ್ಲಿ ಆ ರಾಜ್ಯಗಳ ಬಲಾಬಲ, ರಾಜಕೀಯ ವಿಷಯಗಳ ಕುರಿತ ಕಿರು ಪರಿಚಯ ಇಲ್ಲಿದೆ.

ತ್ರಿಪುರ ಚುನಾವಣೆ: ಫೆಬ್ರವರಿ 16

60 ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡ ತ್ರಿಪುರದಲ್ಲಿ ಫೆಬ್ರವರಿ 16 ರಂದು ಚುನಾವಣೆ ನಡೆಯಲಿದೆ. 10 ಪ.ಜಾ ಮತ್ತು 20 ಪ.ಪಂಗಡದ ಮೀಸಲು ಕ್ಷೇತ್ರಗಳು ತ್ರಿಪುರದಲ್ಲಿವೆ. ಸಿಪಿಐ(ಎಂ) ಪಕ್ಷದ ಪ್ರಬಲ ನೆಲೆಯಾಗಿದ್ದ ತ್ರಿಪುರದಲ್ಲಿ ಸರಳ ಸಿಎಂ ಎಂದು ಖ್ಯಾತರಾದ ಮಾಣಿಕ್ ಸರ್ಕಾರ್‌ರವರು 1998 ರಿಂದ 2018ರವರೆಗೆ 20 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದರು. ಆದರೆ ಕಳೆದ ಚುನಾವಣೆಯಲ್ಲಿ ಪಕ್ಷ ಸೋತ ನಂತರ ಅವರು ಹಿಂದೆ ಸರಿದಿದ್ದಾರೆ. ಇಲ್ಲಿ ಬಹುಮತಕ್ಕೆ 31 ಸ್ಥಾನಗಳ ಅಗತ್ಯವಿದೆ.

ಎನ್‌ಡಿಎ

ಕಳೆದ ಚುನಾವಣೆಯಲ್ಲಿ ಮೊದಲ ಬಿಜೆಪಿ ಬೃಹತ್ ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿಯಿತು. ಬಿಪ್ಲವ್ ದೇವ್ ಮುಖ್ಯಮಂತ್ರಿಯಾಗಿದ್ದರು. ಆನಂತರ ಅವರನ್ನು ಕೆಳಗಿಸಿ ಸದ್ಯ ಮಾಣಿಕ್ ಶಾ ರಾಜ್ಯದ ಸಿಎಂ ಆಗಿದ್ದಾರೆ. ಅವರೇ ಈ ಬಾರಿಯ ಚುನಾವಣಾ ಉಸ್ತುವಾರಿ ಹೊತ್ತಿದ್ದಾರೆ.

ಈ ಚುನಾವಣೆಯಲ್ಲಿ ಬಿಜೆಪಿಯು ಐಪಿಎಫ್‌ಟಿನೊಂದಿಗೆ (Indigenous Peoples Front of Tripura) ಮೈತ್ರಿಮಾಡಿಕೊಂಡು ಎನ್‌ಡಿಎ ಕೂಟ ರಚಿಸಿದೆ. ಬಿಜೆಪಿ 55 ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ ಐಪಿಎಫ್‌ಟಿ ಉಳಿದ 5 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ.

ಸೆಕ್ಯುಲರ್ ಡೆಮಾಕ್ರಟಿಕ್ ಫೋರ್ಸಸ್

ಸಿಪಿಐ(ಎಂ) (43 ಕ್ಷೇತ್ರಗಳು), ಕಾಂಗ್ರೆಸ್ (13 ಕ್ಷೇತ್ರಗಳು), ಸಿಪಿಐ (1), ರೆವಲೂಷನರಿ ಸೋಷಿಯಲ್ ಪಾರ್ಟಿ(1), ಆಲ್ ಇಂಡಿಯಾ ಫಾರ್ವಡ್ ಬ್ಲಾಕ್ (1) ಪಕ್ಷಗಳು ಸೇರಿ ಸೆಕ್ಯುಲರ್ ಡೆಮಾಕ್ರಟಿಕ್ ಫೋರ್ಸಸ್ ಎಂಬ ಮೈತ್ರಿಕೂಟ ರಚಿಸಿಕೊಂಡಿವೆ. ಸಿಪಿಐ(ಎಂ) ಪಕ್ಷದ ಜಿತೇಂದ್ರ ಚೌಧರಿಯವರು ಈ ಮೈತ್ರಿಕೂಟದ ನಾಯಕರಾಗಿದ್ದು ಸಿಎಂ ಅಭ್ಯರ್ಥಿ ಎಂದು ಬಿಂಬಿತವಾಗಿದ್ದಾರೆ.

ಉಳಿದಂತೆ ತ್ರಿಪುರ ಮೋಥಾ ಪಾರ್ಟಿ 42 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಟಿಎಂಸಿ ಪಕ್ಷವು 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. SUCI ಪಕ್ಷವು 5 ಸ್ಥಾನಗಳಲ್ಲಿ ಮತ್ತು ಸಿಪಿಐ(ಎಂಎಲ್) ಪಕ್ಷ 1 ಸ್ಥಾನದಲ್ಲಿ ಸ್ಪರ್ಧಿಸುತ್ತಿವೆ.

2018ರ ಬಲಾಬಲ

ಬಿಜೆಪಿ 35, ಐಪಿಎಫ್‌ಟಿ 8 ಮತ್ತು ಸಿಪಿಐ(ಎಂ) 16 ಕ್ಷೇತ್ರಗಳಲ್ಲಿ ಜಯಗಳಿಸಿದ್ದವು.

ತ್ರಿಪುರದಲ್ಲಿನ ಗ್ರೇಟರ್ ತ್ರಿಪುರ್‌ಲ್ಯಾಂಡ್ ಹೊಸ  ರಾಜ್ಯದ ಬೇಡಿಕೆ, ಉದ್ಯೋಗ ಸೃಷ್ಟಿ ಚುನಾವಣಾ ವಿಷಯಗಳಾಗಿವೆ.

ನಾಗಲ್ಯಾಂಡ್: ಫೆಬ್ರವರಿ 17

60 ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡ ನಾಗಲ್ಯಾಂಡ್‌ನಲ್ಲಿ ಫೆಬ್ರವರಿ 27 ರಂದು ಚುನಾವಣೆ ನಡೆಯಲಿದೆ. ಅಲ್ಲಿ 59 ಕ್ಷೇತ್ರಗಳು ಪರಿಶಿಷ್ಟ ಪಂಗಡ ಜಾತಿಗೆ ಮೀಸಲಾಗಿರುವುದು ವಿಶೇ‍ಷ. ಇಲ್ಲಿ ಬಹುಮತಕ್ಕೆ 31 ಸ್ಥಾನಗಳ ಅಗತ್ಯವಿದೆ.

2021ರಲ್ಲಿ ನಾಗಾಲ್ಯಾಂಡ್‌ನ ಮಯನ್ಮಾರ್‌ ಗಡಿಯ ಬಳಿ ದಂಗೆಕೋರರ ವಿರುದ್ಧದ ಕಾರ್ಯಾಚರಣೆಯ ವೇಳೆ ಸೇನೆಯು ಗುಂಡಿನ ದಾಳಿ ನಡೆಸಿ 14 ಅಮಾಯಕ ನಾಗರೀಕರನ್ನು ಹತ್ಯೆಗೈದಿತ್ತು. ಘಟನೆಯಲ್ಲಿ ಓರ್ವ ಯೋಧನು ಪ್ರಾಣ ಕಳೆದುಕೊಂಡಿದ್ದನು. ಇದಕ್ಕೆ ವಿವಾದಿತ ‘ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆ-1958’ (AFSPA) ಕಾರಣವೆಂದು ನಾಗಾ ಜನರು ಆರೋಪಿಸುತ್ತಾರೆ. ಅದನ್ನು ವಾಪಾಸ್ ಪಡೆಯುವ ಕುರಿತು ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಅದು ಈ ಬಾರಿ ಚುನಾವಣಾ ವಿಷಯವಾಗುವ ಸಂಭವವಿದೆ.

ನಾರ್ಥ್ ಈಸ್ಟ್ ಡೆಮಾಕ್ರಟಿಕ್ ಅಲೆಯೆನ್ಸ್

ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೊಗ್ರೆಸ್ಸಿವ್ ಪಾರ್ಟಿಯ 40 ಸ್ಥಾನಗಳಲ್ಲಿ ಮತ್ತು ಮಿತ್ರಪಕ್ಷ ಬಿಜೆಪಿಯು 20 ಸ್ಥಾನಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿವೆ. ನೆಫಿಯು ರಿಯೊ ಮತ್ತು ಬಿಜೆಪಿ ತೆಮೆಜಾನ್ ಇಮಾ ಅಲಾಂಗ್ ಮುಖ್ಯಮಂತ್ರಿ ಸ್ಪರ್ಧಿಗಳಾಗಿದ್ದಾರೆ.

ನಾಗ ಪೀಪಲ್ಸ್ ಫ್ರಂಟ್, NPP, ಕಾಂಗ್ರೆಸ್, ಜೆಡಿಯು, ಆರ್‌ಜೆಡಿ, ಎನ್‌ಸಿಪಿ, ಆಪ್ ಸ್ಪರ್ಧಿಸುವ ಇರಾದೆ ವ್ಯಕ್ತಪಡಿಸಿವೆ. ಆದರೆ ಸೀಟುಗಳನ್ನು ಘೋಷಿಸಿಲ್ಲ.

2018ರ ಬಲಾಬಲ

ಬಿಜೆಪಿ 12, ಎನ್‌ಡಿಪಿಪಿ 17, ಎನ್‌ಪಿಎಫ್ 26, ಎನ್‌ಪಿಪಿ 02 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದವು.

ಮೇಘಾಲಯ: ಫೆಬ್ರವರಿ 27

60 ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡ ಮೇಘಾಲಯದಲ್ಲಿ ಫೆಬ್ರವರಿ 27 ರಂದು ಚುನಾವಣೆ ನಡೆಯುತ್ತಿದೆ. ಬಹುಮತಕ್ಕೆ 31 ಸ್ಥಾನಗಳ ಅಗತ್ಯವಿದೆ.

ಮೇಘಾಲಯದಲ್ಲಿ ಯಾವುದೇ ಮೈತ್ರಿಕೂಟಗಳ ಬದಲು ಎಲ್ಲಾ ಪಕ್ಷಗಳು ಏಕಾಂಗಿಯಾಗಿ ಸ್ಪರ್ಧಿಸಲು ಮುಂದಾಗಿವೆ. ಕಳೆದ ತಿಂಗಳು ಸಿಎಂ ಕಾನ್ರಾಡ್ ಸಂಗ್ಮಾ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪಕ್ಷವು ಆಡಳಿತಾರೂಢ ಮೇಘಾಲಯ ಡೆಮಾಕ್ರಟಿಕ್ ಅಲಯನ್ಸ್‌ನಿಂದ ಬೇರ್ಪಟ್ಟು ರಾಜ್ಯ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದೆ.

ಅಸ್ಸಾಂನೊಂದಿಗೆ ಮೇಘಾಲಯ ಗಡಿ ಸಮಸ್ಯೆ ಎದುರಿಸುತ್ತಿದೆ. ಜೊತೆಗೆ ಅಭಿವೃದ್ದಿಯಲ್ಲಿಯೂ ಹಿಂದೆ ಉಳಿದಿದೆ. ಇವುಗಳು ಈ ಭಾರಿಯ ಚುನಾವಣಾ ವಿಷಯಗಳಾಗಿವೆ.

ಸಿಎಂ ಕಾನ್ರಾಡ್ ಸಂಗ್ಮಾ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪಕ್ಷವು 58 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಟಿಎಂಸಿ ಪಕ್ಷವು ಮುಕುಲ್ ಸಂಗ್ಮಾ ನೇತೃತ್ವದಲ್ಲಿ 55 ಸ್ಥಾನಗಳಲ್ಲಿ ಸ್ಪರ್ಧಿಸಲು ಮುಂದಾಗಿದೆ. ಕಾಂಗ್ರೆಸ್ ಎಲ್ಲಾ 60 ಸ್ಥಾನಗಳಲ್ಲಿ ಕಣಕ್ಕಿಳಿಯುತ್ತಿದೆ. ಬಿಜೆಪಿ ಸಹ 60 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಉಳಿದಂತೆ ಯುನೈಟೈಡ್ ಡೆಮಾಕ್ರಟಿಕ್ ಪಾರ್ಟಿ 34, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ 7, ಹಿಲ್‌ಸ್ಟೇಲ್ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ 7 ಮತ್ತು ವಾಯ್ಸ್ ಆಫ್ ಪೀಪಲ್ ಪಾರ್ಟಿ 14 ಕಡೆಗಳಲ್ಲಿ ಸ್ಪರ್ಧಿಸುತ್ತಿದೆ.

ಮೇಘಾಲಯದ ದಕ್ಷಿಣ ತುರಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗ್ಮಾ ವಿರುದ್ಧ ಬಿಜೆಪಿಯು ತನ್ನ ರಾಜ್ಯ ಘಟಕದ ಉಪಾಧ್ಯಕ್ಷ ಮತ್ತು ಮಾಜಿ ಉಗ್ರಗಾಮಿ ನಾಯಕ ಬರ್ನಾರ್ಡ್ ಎನ್ ಮರಕ್ ಅವರನ್ನು ತನ್ನ ಅಧಿಕೃತ ಅಭ್ಯರ್ಥಿಯನ್ನಾಗಿ ಘೋಷಿಸಿದೆ.

2018ರ ಬಲಾಬಲ

ಕಾಂಗ್ರೆಸ್ – 21, ಎನ್‌ಪಿಪಿ 19, ಯುನೈಟೈಡ್ ಡೆಮಾಕ್ರಟಿಕ್ ಪಾರ್ಟಿ 06, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ 04 ಮತ್ತು ಬಿಜೆಪಿ 02 ಕಡೆಗಳಲ್ಲಿ ಜಯ ಗಳಿಸಿತ್ತು.

ಈ ಮೂರು ರಾಜ್ಯಗಳ ಚುನಾವಣಾ ಫಲಿತಾಂಶವು ಮಾರ್ಚ್ 02 ರಂದು ಪ್ರಕಟವಾಗಲಿದೆ.

ಇದನ್ನೂ ಓದಿ: ಮೇಘಾಲಯ: ಸಿಎಂ ವಿರುದ್ಧ ಮಾಜಿ ಉಗ್ರಗಾಮಿ ನಾಯಕನಿಗೆ ಟಿಕೆಟ್ ಘೋಷಿಸಿದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...