Homeಮುಖಪುಟಈ ತಿಂಗಳಲ್ಲಿ ತ್ರಿಪುರ, ನಾಗಲ್ಯಾಂಡ್, ಮೇಘಾಲಯ ಚುನಾವಣೆ: ತಿಳಿದಿರಬೇಕಾದ ಅಂಶಗಳು

ಈ ತಿಂಗಳಲ್ಲಿ ತ್ರಿಪುರ, ನಾಗಲ್ಯಾಂಡ್, ಮೇಘಾಲಯ ಚುನಾವಣೆ: ತಿಳಿದಿರಬೇಕಾದ ಅಂಶಗಳು

- Advertisement -
- Advertisement -

ಭಾರತದ ಈಶಾನ್ಯ ರಾಜ್ಯಗಳಾದ ತ್ರಿಪುರ, ನಾಗಲ್ಯಾಂಡ್, ಮೇಘಾಲಯಗಳಲ್ಲಿ ಈ ತಿಂಗಳಿನಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಮಾರ್ಚ್ 02 ರಂದು ಎಲ್ಲಾ ರಾಜ್ಯಗಳ ಫಲಿತಾಂಶ ಘೋಷಣೆಯಾಗಲಿದೆ. ಈ ಹಿನ್ನೆಲೆಯಲ್ಲಿ ಆ ರಾಜ್ಯಗಳ ಬಲಾಬಲ, ರಾಜಕೀಯ ವಿಷಯಗಳ ಕುರಿತ ಕಿರು ಪರಿಚಯ ಇಲ್ಲಿದೆ.

ತ್ರಿಪುರ ಚುನಾವಣೆ: ಫೆಬ್ರವರಿ 16

60 ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡ ತ್ರಿಪುರದಲ್ಲಿ ಫೆಬ್ರವರಿ 16 ರಂದು ಚುನಾವಣೆ ನಡೆಯಲಿದೆ. 10 ಪ.ಜಾ ಮತ್ತು 20 ಪ.ಪಂಗಡದ ಮೀಸಲು ಕ್ಷೇತ್ರಗಳು ತ್ರಿಪುರದಲ್ಲಿವೆ. ಸಿಪಿಐ(ಎಂ) ಪಕ್ಷದ ಪ್ರಬಲ ನೆಲೆಯಾಗಿದ್ದ ತ್ರಿಪುರದಲ್ಲಿ ಸರಳ ಸಿಎಂ ಎಂದು ಖ್ಯಾತರಾದ ಮಾಣಿಕ್ ಸರ್ಕಾರ್‌ರವರು 1998 ರಿಂದ 2018ರವರೆಗೆ 20 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದರು. ಆದರೆ ಕಳೆದ ಚುನಾವಣೆಯಲ್ಲಿ ಪಕ್ಷ ಸೋತ ನಂತರ ಅವರು ಹಿಂದೆ ಸರಿದಿದ್ದಾರೆ. ಇಲ್ಲಿ ಬಹುಮತಕ್ಕೆ 31 ಸ್ಥಾನಗಳ ಅಗತ್ಯವಿದೆ.

ಎನ್‌ಡಿಎ

ಕಳೆದ ಚುನಾವಣೆಯಲ್ಲಿ ಮೊದಲ ಬಿಜೆಪಿ ಬೃಹತ್ ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿಯಿತು. ಬಿಪ್ಲವ್ ದೇವ್ ಮುಖ್ಯಮಂತ್ರಿಯಾಗಿದ್ದರು. ಆನಂತರ ಅವರನ್ನು ಕೆಳಗಿಸಿ ಸದ್ಯ ಮಾಣಿಕ್ ಶಾ ರಾಜ್ಯದ ಸಿಎಂ ಆಗಿದ್ದಾರೆ. ಅವರೇ ಈ ಬಾರಿಯ ಚುನಾವಣಾ ಉಸ್ತುವಾರಿ ಹೊತ್ತಿದ್ದಾರೆ.

ಈ ಚುನಾವಣೆಯಲ್ಲಿ ಬಿಜೆಪಿಯು ಐಪಿಎಫ್‌ಟಿನೊಂದಿಗೆ (Indigenous Peoples Front of Tripura) ಮೈತ್ರಿಮಾಡಿಕೊಂಡು ಎನ್‌ಡಿಎ ಕೂಟ ರಚಿಸಿದೆ. ಬಿಜೆಪಿ 55 ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ ಐಪಿಎಫ್‌ಟಿ ಉಳಿದ 5 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ.

ಸೆಕ್ಯುಲರ್ ಡೆಮಾಕ್ರಟಿಕ್ ಫೋರ್ಸಸ್

ಸಿಪಿಐ(ಎಂ) (43 ಕ್ಷೇತ್ರಗಳು), ಕಾಂಗ್ರೆಸ್ (13 ಕ್ಷೇತ್ರಗಳು), ಸಿಪಿಐ (1), ರೆವಲೂಷನರಿ ಸೋಷಿಯಲ್ ಪಾರ್ಟಿ(1), ಆಲ್ ಇಂಡಿಯಾ ಫಾರ್ವಡ್ ಬ್ಲಾಕ್ (1) ಪಕ್ಷಗಳು ಸೇರಿ ಸೆಕ್ಯುಲರ್ ಡೆಮಾಕ್ರಟಿಕ್ ಫೋರ್ಸಸ್ ಎಂಬ ಮೈತ್ರಿಕೂಟ ರಚಿಸಿಕೊಂಡಿವೆ. ಸಿಪಿಐ(ಎಂ) ಪಕ್ಷದ ಜಿತೇಂದ್ರ ಚೌಧರಿಯವರು ಈ ಮೈತ್ರಿಕೂಟದ ನಾಯಕರಾಗಿದ್ದು ಸಿಎಂ ಅಭ್ಯರ್ಥಿ ಎಂದು ಬಿಂಬಿತವಾಗಿದ್ದಾರೆ.

ಉಳಿದಂತೆ ತ್ರಿಪುರ ಮೋಥಾ ಪಾರ್ಟಿ 42 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಟಿಎಂಸಿ ಪಕ್ಷವು 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. SUCI ಪಕ್ಷವು 5 ಸ್ಥಾನಗಳಲ್ಲಿ ಮತ್ತು ಸಿಪಿಐ(ಎಂಎಲ್) ಪಕ್ಷ 1 ಸ್ಥಾನದಲ್ಲಿ ಸ್ಪರ್ಧಿಸುತ್ತಿವೆ.

2018ರ ಬಲಾಬಲ

ಬಿಜೆಪಿ 35, ಐಪಿಎಫ್‌ಟಿ 8 ಮತ್ತು ಸಿಪಿಐ(ಎಂ) 16 ಕ್ಷೇತ್ರಗಳಲ್ಲಿ ಜಯಗಳಿಸಿದ್ದವು.

ತ್ರಿಪುರದಲ್ಲಿನ ಗ್ರೇಟರ್ ತ್ರಿಪುರ್‌ಲ್ಯಾಂಡ್ ಹೊಸ  ರಾಜ್ಯದ ಬೇಡಿಕೆ, ಉದ್ಯೋಗ ಸೃಷ್ಟಿ ಚುನಾವಣಾ ವಿಷಯಗಳಾಗಿವೆ.

ನಾಗಲ್ಯಾಂಡ್: ಫೆಬ್ರವರಿ 17

60 ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡ ನಾಗಲ್ಯಾಂಡ್‌ನಲ್ಲಿ ಫೆಬ್ರವರಿ 27 ರಂದು ಚುನಾವಣೆ ನಡೆಯಲಿದೆ. ಅಲ್ಲಿ 59 ಕ್ಷೇತ್ರಗಳು ಪರಿಶಿಷ್ಟ ಪಂಗಡ ಜಾತಿಗೆ ಮೀಸಲಾಗಿರುವುದು ವಿಶೇ‍ಷ. ಇಲ್ಲಿ ಬಹುಮತಕ್ಕೆ 31 ಸ್ಥಾನಗಳ ಅಗತ್ಯವಿದೆ.

2021ರಲ್ಲಿ ನಾಗಾಲ್ಯಾಂಡ್‌ನ ಮಯನ್ಮಾರ್‌ ಗಡಿಯ ಬಳಿ ದಂಗೆಕೋರರ ವಿರುದ್ಧದ ಕಾರ್ಯಾಚರಣೆಯ ವೇಳೆ ಸೇನೆಯು ಗುಂಡಿನ ದಾಳಿ ನಡೆಸಿ 14 ಅಮಾಯಕ ನಾಗರೀಕರನ್ನು ಹತ್ಯೆಗೈದಿತ್ತು. ಘಟನೆಯಲ್ಲಿ ಓರ್ವ ಯೋಧನು ಪ್ರಾಣ ಕಳೆದುಕೊಂಡಿದ್ದನು. ಇದಕ್ಕೆ ವಿವಾದಿತ ‘ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆ-1958’ (AFSPA) ಕಾರಣವೆಂದು ನಾಗಾ ಜನರು ಆರೋಪಿಸುತ್ತಾರೆ. ಅದನ್ನು ವಾಪಾಸ್ ಪಡೆಯುವ ಕುರಿತು ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಅದು ಈ ಬಾರಿ ಚುನಾವಣಾ ವಿಷಯವಾಗುವ ಸಂಭವವಿದೆ.

ನಾರ್ಥ್ ಈಸ್ಟ್ ಡೆಮಾಕ್ರಟಿಕ್ ಅಲೆಯೆನ್ಸ್

ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೊಗ್ರೆಸ್ಸಿವ್ ಪಾರ್ಟಿಯ 40 ಸ್ಥಾನಗಳಲ್ಲಿ ಮತ್ತು ಮಿತ್ರಪಕ್ಷ ಬಿಜೆಪಿಯು 20 ಸ್ಥಾನಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿವೆ. ನೆಫಿಯು ರಿಯೊ ಮತ್ತು ಬಿಜೆಪಿ ತೆಮೆಜಾನ್ ಇಮಾ ಅಲಾಂಗ್ ಮುಖ್ಯಮಂತ್ರಿ ಸ್ಪರ್ಧಿಗಳಾಗಿದ್ದಾರೆ.

ನಾಗ ಪೀಪಲ್ಸ್ ಫ್ರಂಟ್, NPP, ಕಾಂಗ್ರೆಸ್, ಜೆಡಿಯು, ಆರ್‌ಜೆಡಿ, ಎನ್‌ಸಿಪಿ, ಆಪ್ ಸ್ಪರ್ಧಿಸುವ ಇರಾದೆ ವ್ಯಕ್ತಪಡಿಸಿವೆ. ಆದರೆ ಸೀಟುಗಳನ್ನು ಘೋಷಿಸಿಲ್ಲ.

2018ರ ಬಲಾಬಲ

ಬಿಜೆಪಿ 12, ಎನ್‌ಡಿಪಿಪಿ 17, ಎನ್‌ಪಿಎಫ್ 26, ಎನ್‌ಪಿಪಿ 02 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದವು.

ಮೇಘಾಲಯ: ಫೆಬ್ರವರಿ 27

60 ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡ ಮೇಘಾಲಯದಲ್ಲಿ ಫೆಬ್ರವರಿ 27 ರಂದು ಚುನಾವಣೆ ನಡೆಯುತ್ತಿದೆ. ಬಹುಮತಕ್ಕೆ 31 ಸ್ಥಾನಗಳ ಅಗತ್ಯವಿದೆ.

ಮೇಘಾಲಯದಲ್ಲಿ ಯಾವುದೇ ಮೈತ್ರಿಕೂಟಗಳ ಬದಲು ಎಲ್ಲಾ ಪಕ್ಷಗಳು ಏಕಾಂಗಿಯಾಗಿ ಸ್ಪರ್ಧಿಸಲು ಮುಂದಾಗಿವೆ. ಕಳೆದ ತಿಂಗಳು ಸಿಎಂ ಕಾನ್ರಾಡ್ ಸಂಗ್ಮಾ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪಕ್ಷವು ಆಡಳಿತಾರೂಢ ಮೇಘಾಲಯ ಡೆಮಾಕ್ರಟಿಕ್ ಅಲಯನ್ಸ್‌ನಿಂದ ಬೇರ್ಪಟ್ಟು ರಾಜ್ಯ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದೆ.

ಅಸ್ಸಾಂನೊಂದಿಗೆ ಮೇಘಾಲಯ ಗಡಿ ಸಮಸ್ಯೆ ಎದುರಿಸುತ್ತಿದೆ. ಜೊತೆಗೆ ಅಭಿವೃದ್ದಿಯಲ್ಲಿಯೂ ಹಿಂದೆ ಉಳಿದಿದೆ. ಇವುಗಳು ಈ ಭಾರಿಯ ಚುನಾವಣಾ ವಿಷಯಗಳಾಗಿವೆ.

ಸಿಎಂ ಕಾನ್ರಾಡ್ ಸಂಗ್ಮಾ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪಕ್ಷವು 58 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಟಿಎಂಸಿ ಪಕ್ಷವು ಮುಕುಲ್ ಸಂಗ್ಮಾ ನೇತೃತ್ವದಲ್ಲಿ 55 ಸ್ಥಾನಗಳಲ್ಲಿ ಸ್ಪರ್ಧಿಸಲು ಮುಂದಾಗಿದೆ. ಕಾಂಗ್ರೆಸ್ ಎಲ್ಲಾ 60 ಸ್ಥಾನಗಳಲ್ಲಿ ಕಣಕ್ಕಿಳಿಯುತ್ತಿದೆ. ಬಿಜೆಪಿ ಸಹ 60 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಉಳಿದಂತೆ ಯುನೈಟೈಡ್ ಡೆಮಾಕ್ರಟಿಕ್ ಪಾರ್ಟಿ 34, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ 7, ಹಿಲ್‌ಸ್ಟೇಲ್ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ 7 ಮತ್ತು ವಾಯ್ಸ್ ಆಫ್ ಪೀಪಲ್ ಪಾರ್ಟಿ 14 ಕಡೆಗಳಲ್ಲಿ ಸ್ಪರ್ಧಿಸುತ್ತಿದೆ.

ಮೇಘಾಲಯದ ದಕ್ಷಿಣ ತುರಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗ್ಮಾ ವಿರುದ್ಧ ಬಿಜೆಪಿಯು ತನ್ನ ರಾಜ್ಯ ಘಟಕದ ಉಪಾಧ್ಯಕ್ಷ ಮತ್ತು ಮಾಜಿ ಉಗ್ರಗಾಮಿ ನಾಯಕ ಬರ್ನಾರ್ಡ್ ಎನ್ ಮರಕ್ ಅವರನ್ನು ತನ್ನ ಅಧಿಕೃತ ಅಭ್ಯರ್ಥಿಯನ್ನಾಗಿ ಘೋಷಿಸಿದೆ.

2018ರ ಬಲಾಬಲ

ಕಾಂಗ್ರೆಸ್ – 21, ಎನ್‌ಪಿಪಿ 19, ಯುನೈಟೈಡ್ ಡೆಮಾಕ್ರಟಿಕ್ ಪಾರ್ಟಿ 06, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ 04 ಮತ್ತು ಬಿಜೆಪಿ 02 ಕಡೆಗಳಲ್ಲಿ ಜಯ ಗಳಿಸಿತ್ತು.

ಈ ಮೂರು ರಾಜ್ಯಗಳ ಚುನಾವಣಾ ಫಲಿತಾಂಶವು ಮಾರ್ಚ್ 02 ರಂದು ಪ್ರಕಟವಾಗಲಿದೆ.

ಇದನ್ನೂ ಓದಿ: ಮೇಘಾಲಯ: ಸಿಎಂ ವಿರುದ್ಧ ಮಾಜಿ ಉಗ್ರಗಾಮಿ ನಾಯಕನಿಗೆ ಟಿಕೆಟ್ ಘೋಷಿಸಿದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...