Homeಮುಖಪುಟಈ ತಿಂಗಳಲ್ಲಿ ತ್ರಿಪುರ, ನಾಗಲ್ಯಾಂಡ್, ಮೇಘಾಲಯ ಚುನಾವಣೆ: ತಿಳಿದಿರಬೇಕಾದ ಅಂಶಗಳು

ಈ ತಿಂಗಳಲ್ಲಿ ತ್ರಿಪುರ, ನಾಗಲ್ಯಾಂಡ್, ಮೇಘಾಲಯ ಚುನಾವಣೆ: ತಿಳಿದಿರಬೇಕಾದ ಅಂಶಗಳು

- Advertisement -
- Advertisement -

ಭಾರತದ ಈಶಾನ್ಯ ರಾಜ್ಯಗಳಾದ ತ್ರಿಪುರ, ನಾಗಲ್ಯಾಂಡ್, ಮೇಘಾಲಯಗಳಲ್ಲಿ ಈ ತಿಂಗಳಿನಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಮಾರ್ಚ್ 02 ರಂದು ಎಲ್ಲಾ ರಾಜ್ಯಗಳ ಫಲಿತಾಂಶ ಘೋಷಣೆಯಾಗಲಿದೆ. ಈ ಹಿನ್ನೆಲೆಯಲ್ಲಿ ಆ ರಾಜ್ಯಗಳ ಬಲಾಬಲ, ರಾಜಕೀಯ ವಿಷಯಗಳ ಕುರಿತ ಕಿರು ಪರಿಚಯ ಇಲ್ಲಿದೆ.

ತ್ರಿಪುರ ಚುನಾವಣೆ: ಫೆಬ್ರವರಿ 16

60 ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡ ತ್ರಿಪುರದಲ್ಲಿ ಫೆಬ್ರವರಿ 16 ರಂದು ಚುನಾವಣೆ ನಡೆಯಲಿದೆ. 10 ಪ.ಜಾ ಮತ್ತು 20 ಪ.ಪಂಗಡದ ಮೀಸಲು ಕ್ಷೇತ್ರಗಳು ತ್ರಿಪುರದಲ್ಲಿವೆ. ಸಿಪಿಐ(ಎಂ) ಪಕ್ಷದ ಪ್ರಬಲ ನೆಲೆಯಾಗಿದ್ದ ತ್ರಿಪುರದಲ್ಲಿ ಸರಳ ಸಿಎಂ ಎಂದು ಖ್ಯಾತರಾದ ಮಾಣಿಕ್ ಸರ್ಕಾರ್‌ರವರು 1998 ರಿಂದ 2018ರವರೆಗೆ 20 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದರು. ಆದರೆ ಕಳೆದ ಚುನಾವಣೆಯಲ್ಲಿ ಪಕ್ಷ ಸೋತ ನಂತರ ಅವರು ಹಿಂದೆ ಸರಿದಿದ್ದಾರೆ. ಇಲ್ಲಿ ಬಹುಮತಕ್ಕೆ 31 ಸ್ಥಾನಗಳ ಅಗತ್ಯವಿದೆ.

ಎನ್‌ಡಿಎ

ಕಳೆದ ಚುನಾವಣೆಯಲ್ಲಿ ಮೊದಲ ಬಿಜೆಪಿ ಬೃಹತ್ ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿಯಿತು. ಬಿಪ್ಲವ್ ದೇವ್ ಮುಖ್ಯಮಂತ್ರಿಯಾಗಿದ್ದರು. ಆನಂತರ ಅವರನ್ನು ಕೆಳಗಿಸಿ ಸದ್ಯ ಮಾಣಿಕ್ ಶಾ ರಾಜ್ಯದ ಸಿಎಂ ಆಗಿದ್ದಾರೆ. ಅವರೇ ಈ ಬಾರಿಯ ಚುನಾವಣಾ ಉಸ್ತುವಾರಿ ಹೊತ್ತಿದ್ದಾರೆ.

ಈ ಚುನಾವಣೆಯಲ್ಲಿ ಬಿಜೆಪಿಯು ಐಪಿಎಫ್‌ಟಿನೊಂದಿಗೆ (Indigenous Peoples Front of Tripura) ಮೈತ್ರಿಮಾಡಿಕೊಂಡು ಎನ್‌ಡಿಎ ಕೂಟ ರಚಿಸಿದೆ. ಬಿಜೆಪಿ 55 ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ ಐಪಿಎಫ್‌ಟಿ ಉಳಿದ 5 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ.

ಸೆಕ್ಯುಲರ್ ಡೆಮಾಕ್ರಟಿಕ್ ಫೋರ್ಸಸ್

ಸಿಪಿಐ(ಎಂ) (43 ಕ್ಷೇತ್ರಗಳು), ಕಾಂಗ್ರೆಸ್ (13 ಕ್ಷೇತ್ರಗಳು), ಸಿಪಿಐ (1), ರೆವಲೂಷನರಿ ಸೋಷಿಯಲ್ ಪಾರ್ಟಿ(1), ಆಲ್ ಇಂಡಿಯಾ ಫಾರ್ವಡ್ ಬ್ಲಾಕ್ (1) ಪಕ್ಷಗಳು ಸೇರಿ ಸೆಕ್ಯುಲರ್ ಡೆಮಾಕ್ರಟಿಕ್ ಫೋರ್ಸಸ್ ಎಂಬ ಮೈತ್ರಿಕೂಟ ರಚಿಸಿಕೊಂಡಿವೆ. ಸಿಪಿಐ(ಎಂ) ಪಕ್ಷದ ಜಿತೇಂದ್ರ ಚೌಧರಿಯವರು ಈ ಮೈತ್ರಿಕೂಟದ ನಾಯಕರಾಗಿದ್ದು ಸಿಎಂ ಅಭ್ಯರ್ಥಿ ಎಂದು ಬಿಂಬಿತವಾಗಿದ್ದಾರೆ.

ಉಳಿದಂತೆ ತ್ರಿಪುರ ಮೋಥಾ ಪಾರ್ಟಿ 42 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಟಿಎಂಸಿ ಪಕ್ಷವು 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. SUCI ಪಕ್ಷವು 5 ಸ್ಥಾನಗಳಲ್ಲಿ ಮತ್ತು ಸಿಪಿಐ(ಎಂಎಲ್) ಪಕ್ಷ 1 ಸ್ಥಾನದಲ್ಲಿ ಸ್ಪರ್ಧಿಸುತ್ತಿವೆ.

2018ರ ಬಲಾಬಲ

ಬಿಜೆಪಿ 35, ಐಪಿಎಫ್‌ಟಿ 8 ಮತ್ತು ಸಿಪಿಐ(ಎಂ) 16 ಕ್ಷೇತ್ರಗಳಲ್ಲಿ ಜಯಗಳಿಸಿದ್ದವು.

ತ್ರಿಪುರದಲ್ಲಿನ ಗ್ರೇಟರ್ ತ್ರಿಪುರ್‌ಲ್ಯಾಂಡ್ ಹೊಸ  ರಾಜ್ಯದ ಬೇಡಿಕೆ, ಉದ್ಯೋಗ ಸೃಷ್ಟಿ ಚುನಾವಣಾ ವಿಷಯಗಳಾಗಿವೆ.

ನಾಗಲ್ಯಾಂಡ್: ಫೆಬ್ರವರಿ 17

60 ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡ ನಾಗಲ್ಯಾಂಡ್‌ನಲ್ಲಿ ಫೆಬ್ರವರಿ 27 ರಂದು ಚುನಾವಣೆ ನಡೆಯಲಿದೆ. ಅಲ್ಲಿ 59 ಕ್ಷೇತ್ರಗಳು ಪರಿಶಿಷ್ಟ ಪಂಗಡ ಜಾತಿಗೆ ಮೀಸಲಾಗಿರುವುದು ವಿಶೇ‍ಷ. ಇಲ್ಲಿ ಬಹುಮತಕ್ಕೆ 31 ಸ್ಥಾನಗಳ ಅಗತ್ಯವಿದೆ.

2021ರಲ್ಲಿ ನಾಗಾಲ್ಯಾಂಡ್‌ನ ಮಯನ್ಮಾರ್‌ ಗಡಿಯ ಬಳಿ ದಂಗೆಕೋರರ ವಿರುದ್ಧದ ಕಾರ್ಯಾಚರಣೆಯ ವೇಳೆ ಸೇನೆಯು ಗುಂಡಿನ ದಾಳಿ ನಡೆಸಿ 14 ಅಮಾಯಕ ನಾಗರೀಕರನ್ನು ಹತ್ಯೆಗೈದಿತ್ತು. ಘಟನೆಯಲ್ಲಿ ಓರ್ವ ಯೋಧನು ಪ್ರಾಣ ಕಳೆದುಕೊಂಡಿದ್ದನು. ಇದಕ್ಕೆ ವಿವಾದಿತ ‘ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆ-1958’ (AFSPA) ಕಾರಣವೆಂದು ನಾಗಾ ಜನರು ಆರೋಪಿಸುತ್ತಾರೆ. ಅದನ್ನು ವಾಪಾಸ್ ಪಡೆಯುವ ಕುರಿತು ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಅದು ಈ ಬಾರಿ ಚುನಾವಣಾ ವಿಷಯವಾಗುವ ಸಂಭವವಿದೆ.

ನಾರ್ಥ್ ಈಸ್ಟ್ ಡೆಮಾಕ್ರಟಿಕ್ ಅಲೆಯೆನ್ಸ್

ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೊಗ್ರೆಸ್ಸಿವ್ ಪಾರ್ಟಿಯ 40 ಸ್ಥಾನಗಳಲ್ಲಿ ಮತ್ತು ಮಿತ್ರಪಕ್ಷ ಬಿಜೆಪಿಯು 20 ಸ್ಥಾನಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿವೆ. ನೆಫಿಯು ರಿಯೊ ಮತ್ತು ಬಿಜೆಪಿ ತೆಮೆಜಾನ್ ಇಮಾ ಅಲಾಂಗ್ ಮುಖ್ಯಮಂತ್ರಿ ಸ್ಪರ್ಧಿಗಳಾಗಿದ್ದಾರೆ.

ನಾಗ ಪೀಪಲ್ಸ್ ಫ್ರಂಟ್, NPP, ಕಾಂಗ್ರೆಸ್, ಜೆಡಿಯು, ಆರ್‌ಜೆಡಿ, ಎನ್‌ಸಿಪಿ, ಆಪ್ ಸ್ಪರ್ಧಿಸುವ ಇರಾದೆ ವ್ಯಕ್ತಪಡಿಸಿವೆ. ಆದರೆ ಸೀಟುಗಳನ್ನು ಘೋಷಿಸಿಲ್ಲ.

2018ರ ಬಲಾಬಲ

ಬಿಜೆಪಿ 12, ಎನ್‌ಡಿಪಿಪಿ 17, ಎನ್‌ಪಿಎಫ್ 26, ಎನ್‌ಪಿಪಿ 02 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದವು.

ಮೇಘಾಲಯ: ಫೆಬ್ರವರಿ 27

60 ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡ ಮೇಘಾಲಯದಲ್ಲಿ ಫೆಬ್ರವರಿ 27 ರಂದು ಚುನಾವಣೆ ನಡೆಯುತ್ತಿದೆ. ಬಹುಮತಕ್ಕೆ 31 ಸ್ಥಾನಗಳ ಅಗತ್ಯವಿದೆ.

ಮೇಘಾಲಯದಲ್ಲಿ ಯಾವುದೇ ಮೈತ್ರಿಕೂಟಗಳ ಬದಲು ಎಲ್ಲಾ ಪಕ್ಷಗಳು ಏಕಾಂಗಿಯಾಗಿ ಸ್ಪರ್ಧಿಸಲು ಮುಂದಾಗಿವೆ. ಕಳೆದ ತಿಂಗಳು ಸಿಎಂ ಕಾನ್ರಾಡ್ ಸಂಗ್ಮಾ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪಕ್ಷವು ಆಡಳಿತಾರೂಢ ಮೇಘಾಲಯ ಡೆಮಾಕ್ರಟಿಕ್ ಅಲಯನ್ಸ್‌ನಿಂದ ಬೇರ್ಪಟ್ಟು ರಾಜ್ಯ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದೆ.

ಅಸ್ಸಾಂನೊಂದಿಗೆ ಮೇಘಾಲಯ ಗಡಿ ಸಮಸ್ಯೆ ಎದುರಿಸುತ್ತಿದೆ. ಜೊತೆಗೆ ಅಭಿವೃದ್ದಿಯಲ್ಲಿಯೂ ಹಿಂದೆ ಉಳಿದಿದೆ. ಇವುಗಳು ಈ ಭಾರಿಯ ಚುನಾವಣಾ ವಿಷಯಗಳಾಗಿವೆ.

ಸಿಎಂ ಕಾನ್ರಾಡ್ ಸಂಗ್ಮಾ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪಕ್ಷವು 58 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಟಿಎಂಸಿ ಪಕ್ಷವು ಮುಕುಲ್ ಸಂಗ್ಮಾ ನೇತೃತ್ವದಲ್ಲಿ 55 ಸ್ಥಾನಗಳಲ್ಲಿ ಸ್ಪರ್ಧಿಸಲು ಮುಂದಾಗಿದೆ. ಕಾಂಗ್ರೆಸ್ ಎಲ್ಲಾ 60 ಸ್ಥಾನಗಳಲ್ಲಿ ಕಣಕ್ಕಿಳಿಯುತ್ತಿದೆ. ಬಿಜೆಪಿ ಸಹ 60 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಉಳಿದಂತೆ ಯುನೈಟೈಡ್ ಡೆಮಾಕ್ರಟಿಕ್ ಪಾರ್ಟಿ 34, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ 7, ಹಿಲ್‌ಸ್ಟೇಲ್ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ 7 ಮತ್ತು ವಾಯ್ಸ್ ಆಫ್ ಪೀಪಲ್ ಪಾರ್ಟಿ 14 ಕಡೆಗಳಲ್ಲಿ ಸ್ಪರ್ಧಿಸುತ್ತಿದೆ.

ಮೇಘಾಲಯದ ದಕ್ಷಿಣ ತುರಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗ್ಮಾ ವಿರುದ್ಧ ಬಿಜೆಪಿಯು ತನ್ನ ರಾಜ್ಯ ಘಟಕದ ಉಪಾಧ್ಯಕ್ಷ ಮತ್ತು ಮಾಜಿ ಉಗ್ರಗಾಮಿ ನಾಯಕ ಬರ್ನಾರ್ಡ್ ಎನ್ ಮರಕ್ ಅವರನ್ನು ತನ್ನ ಅಧಿಕೃತ ಅಭ್ಯರ್ಥಿಯನ್ನಾಗಿ ಘೋಷಿಸಿದೆ.

2018ರ ಬಲಾಬಲ

ಕಾಂಗ್ರೆಸ್ – 21, ಎನ್‌ಪಿಪಿ 19, ಯುನೈಟೈಡ್ ಡೆಮಾಕ್ರಟಿಕ್ ಪಾರ್ಟಿ 06, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ 04 ಮತ್ತು ಬಿಜೆಪಿ 02 ಕಡೆಗಳಲ್ಲಿ ಜಯ ಗಳಿಸಿತ್ತು.

ಈ ಮೂರು ರಾಜ್ಯಗಳ ಚುನಾವಣಾ ಫಲಿತಾಂಶವು ಮಾರ್ಚ್ 02 ರಂದು ಪ್ರಕಟವಾಗಲಿದೆ.

ಇದನ್ನೂ ಓದಿ: ಮೇಘಾಲಯ: ಸಿಎಂ ವಿರುದ್ಧ ಮಾಜಿ ಉಗ್ರಗಾಮಿ ನಾಯಕನಿಗೆ ಟಿಕೆಟ್ ಘೋಷಿಸಿದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...