Homeಮುಖಪುಟಈ ತಿಂಗಳಲ್ಲಿ ತ್ರಿಪುರ, ನಾಗಲ್ಯಾಂಡ್, ಮೇಘಾಲಯ ಚುನಾವಣೆ: ತಿಳಿದಿರಬೇಕಾದ ಅಂಶಗಳು

ಈ ತಿಂಗಳಲ್ಲಿ ತ್ರಿಪುರ, ನಾಗಲ್ಯಾಂಡ್, ಮೇಘಾಲಯ ಚುನಾವಣೆ: ತಿಳಿದಿರಬೇಕಾದ ಅಂಶಗಳು

- Advertisement -
- Advertisement -

ಭಾರತದ ಈಶಾನ್ಯ ರಾಜ್ಯಗಳಾದ ತ್ರಿಪುರ, ನಾಗಲ್ಯಾಂಡ್, ಮೇಘಾಲಯಗಳಲ್ಲಿ ಈ ತಿಂಗಳಿನಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಮಾರ್ಚ್ 02 ರಂದು ಎಲ್ಲಾ ರಾಜ್ಯಗಳ ಫಲಿತಾಂಶ ಘೋಷಣೆಯಾಗಲಿದೆ. ಈ ಹಿನ್ನೆಲೆಯಲ್ಲಿ ಆ ರಾಜ್ಯಗಳ ಬಲಾಬಲ, ರಾಜಕೀಯ ವಿಷಯಗಳ ಕುರಿತ ಕಿರು ಪರಿಚಯ ಇಲ್ಲಿದೆ.

ತ್ರಿಪುರ ಚುನಾವಣೆ: ಫೆಬ್ರವರಿ 16

60 ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡ ತ್ರಿಪುರದಲ್ಲಿ ಫೆಬ್ರವರಿ 16 ರಂದು ಚುನಾವಣೆ ನಡೆಯಲಿದೆ. 10 ಪ.ಜಾ ಮತ್ತು 20 ಪ.ಪಂಗಡದ ಮೀಸಲು ಕ್ಷೇತ್ರಗಳು ತ್ರಿಪುರದಲ್ಲಿವೆ. ಸಿಪಿಐ(ಎಂ) ಪಕ್ಷದ ಪ್ರಬಲ ನೆಲೆಯಾಗಿದ್ದ ತ್ರಿಪುರದಲ್ಲಿ ಸರಳ ಸಿಎಂ ಎಂದು ಖ್ಯಾತರಾದ ಮಾಣಿಕ್ ಸರ್ಕಾರ್‌ರವರು 1998 ರಿಂದ 2018ರವರೆಗೆ 20 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದರು. ಆದರೆ ಕಳೆದ ಚುನಾವಣೆಯಲ್ಲಿ ಪಕ್ಷ ಸೋತ ನಂತರ ಅವರು ಹಿಂದೆ ಸರಿದಿದ್ದಾರೆ. ಇಲ್ಲಿ ಬಹುಮತಕ್ಕೆ 31 ಸ್ಥಾನಗಳ ಅಗತ್ಯವಿದೆ.

ಎನ್‌ಡಿಎ

ಕಳೆದ ಚುನಾವಣೆಯಲ್ಲಿ ಮೊದಲ ಬಿಜೆಪಿ ಬೃಹತ್ ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿಯಿತು. ಬಿಪ್ಲವ್ ದೇವ್ ಮುಖ್ಯಮಂತ್ರಿಯಾಗಿದ್ದರು. ಆನಂತರ ಅವರನ್ನು ಕೆಳಗಿಸಿ ಸದ್ಯ ಮಾಣಿಕ್ ಶಾ ರಾಜ್ಯದ ಸಿಎಂ ಆಗಿದ್ದಾರೆ. ಅವರೇ ಈ ಬಾರಿಯ ಚುನಾವಣಾ ಉಸ್ತುವಾರಿ ಹೊತ್ತಿದ್ದಾರೆ.

ಈ ಚುನಾವಣೆಯಲ್ಲಿ ಬಿಜೆಪಿಯು ಐಪಿಎಫ್‌ಟಿನೊಂದಿಗೆ (Indigenous Peoples Front of Tripura) ಮೈತ್ರಿಮಾಡಿಕೊಂಡು ಎನ್‌ಡಿಎ ಕೂಟ ರಚಿಸಿದೆ. ಬಿಜೆಪಿ 55 ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ ಐಪಿಎಫ್‌ಟಿ ಉಳಿದ 5 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ.

ಸೆಕ್ಯುಲರ್ ಡೆಮಾಕ್ರಟಿಕ್ ಫೋರ್ಸಸ್

ಸಿಪಿಐ(ಎಂ) (43 ಕ್ಷೇತ್ರಗಳು), ಕಾಂಗ್ರೆಸ್ (13 ಕ್ಷೇತ್ರಗಳು), ಸಿಪಿಐ (1), ರೆವಲೂಷನರಿ ಸೋಷಿಯಲ್ ಪಾರ್ಟಿ(1), ಆಲ್ ಇಂಡಿಯಾ ಫಾರ್ವಡ್ ಬ್ಲಾಕ್ (1) ಪಕ್ಷಗಳು ಸೇರಿ ಸೆಕ್ಯುಲರ್ ಡೆಮಾಕ್ರಟಿಕ್ ಫೋರ್ಸಸ್ ಎಂಬ ಮೈತ್ರಿಕೂಟ ರಚಿಸಿಕೊಂಡಿವೆ. ಸಿಪಿಐ(ಎಂ) ಪಕ್ಷದ ಜಿತೇಂದ್ರ ಚೌಧರಿಯವರು ಈ ಮೈತ್ರಿಕೂಟದ ನಾಯಕರಾಗಿದ್ದು ಸಿಎಂ ಅಭ್ಯರ್ಥಿ ಎಂದು ಬಿಂಬಿತವಾಗಿದ್ದಾರೆ.

ಉಳಿದಂತೆ ತ್ರಿಪುರ ಮೋಥಾ ಪಾರ್ಟಿ 42 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಟಿಎಂಸಿ ಪಕ್ಷವು 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. SUCI ಪಕ್ಷವು 5 ಸ್ಥಾನಗಳಲ್ಲಿ ಮತ್ತು ಸಿಪಿಐ(ಎಂಎಲ್) ಪಕ್ಷ 1 ಸ್ಥಾನದಲ್ಲಿ ಸ್ಪರ್ಧಿಸುತ್ತಿವೆ.

2018ರ ಬಲಾಬಲ

ಬಿಜೆಪಿ 35, ಐಪಿಎಫ್‌ಟಿ 8 ಮತ್ತು ಸಿಪಿಐ(ಎಂ) 16 ಕ್ಷೇತ್ರಗಳಲ್ಲಿ ಜಯಗಳಿಸಿದ್ದವು.

ತ್ರಿಪುರದಲ್ಲಿನ ಗ್ರೇಟರ್ ತ್ರಿಪುರ್‌ಲ್ಯಾಂಡ್ ಹೊಸ  ರಾಜ್ಯದ ಬೇಡಿಕೆ, ಉದ್ಯೋಗ ಸೃಷ್ಟಿ ಚುನಾವಣಾ ವಿಷಯಗಳಾಗಿವೆ.

ನಾಗಲ್ಯಾಂಡ್: ಫೆಬ್ರವರಿ 17

60 ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡ ನಾಗಲ್ಯಾಂಡ್‌ನಲ್ಲಿ ಫೆಬ್ರವರಿ 27 ರಂದು ಚುನಾವಣೆ ನಡೆಯಲಿದೆ. ಅಲ್ಲಿ 59 ಕ್ಷೇತ್ರಗಳು ಪರಿಶಿಷ್ಟ ಪಂಗಡ ಜಾತಿಗೆ ಮೀಸಲಾಗಿರುವುದು ವಿಶೇ‍ಷ. ಇಲ್ಲಿ ಬಹುಮತಕ್ಕೆ 31 ಸ್ಥಾನಗಳ ಅಗತ್ಯವಿದೆ.

2021ರಲ್ಲಿ ನಾಗಾಲ್ಯಾಂಡ್‌ನ ಮಯನ್ಮಾರ್‌ ಗಡಿಯ ಬಳಿ ದಂಗೆಕೋರರ ವಿರುದ್ಧದ ಕಾರ್ಯಾಚರಣೆಯ ವೇಳೆ ಸೇನೆಯು ಗುಂಡಿನ ದಾಳಿ ನಡೆಸಿ 14 ಅಮಾಯಕ ನಾಗರೀಕರನ್ನು ಹತ್ಯೆಗೈದಿತ್ತು. ಘಟನೆಯಲ್ಲಿ ಓರ್ವ ಯೋಧನು ಪ್ರಾಣ ಕಳೆದುಕೊಂಡಿದ್ದನು. ಇದಕ್ಕೆ ವಿವಾದಿತ ‘ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆ-1958’ (AFSPA) ಕಾರಣವೆಂದು ನಾಗಾ ಜನರು ಆರೋಪಿಸುತ್ತಾರೆ. ಅದನ್ನು ವಾಪಾಸ್ ಪಡೆಯುವ ಕುರಿತು ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಅದು ಈ ಬಾರಿ ಚುನಾವಣಾ ವಿಷಯವಾಗುವ ಸಂಭವವಿದೆ.

ನಾರ್ಥ್ ಈಸ್ಟ್ ಡೆಮಾಕ್ರಟಿಕ್ ಅಲೆಯೆನ್ಸ್

ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೊಗ್ರೆಸ್ಸಿವ್ ಪಾರ್ಟಿಯ 40 ಸ್ಥಾನಗಳಲ್ಲಿ ಮತ್ತು ಮಿತ್ರಪಕ್ಷ ಬಿಜೆಪಿಯು 20 ಸ್ಥಾನಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿವೆ. ನೆಫಿಯು ರಿಯೊ ಮತ್ತು ಬಿಜೆಪಿ ತೆಮೆಜಾನ್ ಇಮಾ ಅಲಾಂಗ್ ಮುಖ್ಯಮಂತ್ರಿ ಸ್ಪರ್ಧಿಗಳಾಗಿದ್ದಾರೆ.

ನಾಗ ಪೀಪಲ್ಸ್ ಫ್ರಂಟ್, NPP, ಕಾಂಗ್ರೆಸ್, ಜೆಡಿಯು, ಆರ್‌ಜೆಡಿ, ಎನ್‌ಸಿಪಿ, ಆಪ್ ಸ್ಪರ್ಧಿಸುವ ಇರಾದೆ ವ್ಯಕ್ತಪಡಿಸಿವೆ. ಆದರೆ ಸೀಟುಗಳನ್ನು ಘೋಷಿಸಿಲ್ಲ.

2018ರ ಬಲಾಬಲ

ಬಿಜೆಪಿ 12, ಎನ್‌ಡಿಪಿಪಿ 17, ಎನ್‌ಪಿಎಫ್ 26, ಎನ್‌ಪಿಪಿ 02 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದವು.

ಮೇಘಾಲಯ: ಫೆಬ್ರವರಿ 27

60 ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡ ಮೇಘಾಲಯದಲ್ಲಿ ಫೆಬ್ರವರಿ 27 ರಂದು ಚುನಾವಣೆ ನಡೆಯುತ್ತಿದೆ. ಬಹುಮತಕ್ಕೆ 31 ಸ್ಥಾನಗಳ ಅಗತ್ಯವಿದೆ.

ಮೇಘಾಲಯದಲ್ಲಿ ಯಾವುದೇ ಮೈತ್ರಿಕೂಟಗಳ ಬದಲು ಎಲ್ಲಾ ಪಕ್ಷಗಳು ಏಕಾಂಗಿಯಾಗಿ ಸ್ಪರ್ಧಿಸಲು ಮುಂದಾಗಿವೆ. ಕಳೆದ ತಿಂಗಳು ಸಿಎಂ ಕಾನ್ರಾಡ್ ಸಂಗ್ಮಾ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪಕ್ಷವು ಆಡಳಿತಾರೂಢ ಮೇಘಾಲಯ ಡೆಮಾಕ್ರಟಿಕ್ ಅಲಯನ್ಸ್‌ನಿಂದ ಬೇರ್ಪಟ್ಟು ರಾಜ್ಯ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದೆ.

ಅಸ್ಸಾಂನೊಂದಿಗೆ ಮೇಘಾಲಯ ಗಡಿ ಸಮಸ್ಯೆ ಎದುರಿಸುತ್ತಿದೆ. ಜೊತೆಗೆ ಅಭಿವೃದ್ದಿಯಲ್ಲಿಯೂ ಹಿಂದೆ ಉಳಿದಿದೆ. ಇವುಗಳು ಈ ಭಾರಿಯ ಚುನಾವಣಾ ವಿಷಯಗಳಾಗಿವೆ.

ಸಿಎಂ ಕಾನ್ರಾಡ್ ಸಂಗ್ಮಾ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪಕ್ಷವು 58 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಟಿಎಂಸಿ ಪಕ್ಷವು ಮುಕುಲ್ ಸಂಗ್ಮಾ ನೇತೃತ್ವದಲ್ಲಿ 55 ಸ್ಥಾನಗಳಲ್ಲಿ ಸ್ಪರ್ಧಿಸಲು ಮುಂದಾಗಿದೆ. ಕಾಂಗ್ರೆಸ್ ಎಲ್ಲಾ 60 ಸ್ಥಾನಗಳಲ್ಲಿ ಕಣಕ್ಕಿಳಿಯುತ್ತಿದೆ. ಬಿಜೆಪಿ ಸಹ 60 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಉಳಿದಂತೆ ಯುನೈಟೈಡ್ ಡೆಮಾಕ್ರಟಿಕ್ ಪಾರ್ಟಿ 34, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ 7, ಹಿಲ್‌ಸ್ಟೇಲ್ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ 7 ಮತ್ತು ವಾಯ್ಸ್ ಆಫ್ ಪೀಪಲ್ ಪಾರ್ಟಿ 14 ಕಡೆಗಳಲ್ಲಿ ಸ್ಪರ್ಧಿಸುತ್ತಿದೆ.

ಮೇಘಾಲಯದ ದಕ್ಷಿಣ ತುರಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗ್ಮಾ ವಿರುದ್ಧ ಬಿಜೆಪಿಯು ತನ್ನ ರಾಜ್ಯ ಘಟಕದ ಉಪಾಧ್ಯಕ್ಷ ಮತ್ತು ಮಾಜಿ ಉಗ್ರಗಾಮಿ ನಾಯಕ ಬರ್ನಾರ್ಡ್ ಎನ್ ಮರಕ್ ಅವರನ್ನು ತನ್ನ ಅಧಿಕೃತ ಅಭ್ಯರ್ಥಿಯನ್ನಾಗಿ ಘೋಷಿಸಿದೆ.

2018ರ ಬಲಾಬಲ

ಕಾಂಗ್ರೆಸ್ – 21, ಎನ್‌ಪಿಪಿ 19, ಯುನೈಟೈಡ್ ಡೆಮಾಕ್ರಟಿಕ್ ಪಾರ್ಟಿ 06, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ 04 ಮತ್ತು ಬಿಜೆಪಿ 02 ಕಡೆಗಳಲ್ಲಿ ಜಯ ಗಳಿಸಿತ್ತು.

ಈ ಮೂರು ರಾಜ್ಯಗಳ ಚುನಾವಣಾ ಫಲಿತಾಂಶವು ಮಾರ್ಚ್ 02 ರಂದು ಪ್ರಕಟವಾಗಲಿದೆ.

ಇದನ್ನೂ ಓದಿ: ಮೇಘಾಲಯ: ಸಿಎಂ ವಿರುದ್ಧ ಮಾಜಿ ಉಗ್ರಗಾಮಿ ನಾಯಕನಿಗೆ ಟಿಕೆಟ್ ಘೋಷಿಸಿದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...