Homeಮುಖಪುಟತ್ರಿಪುರಾ: ಮಹಿಳಾ ಪತ್ರಕರ್ತೆಯರ ವಿರುದ್ಧದ ಎಫ್‌ಐಆರ್‌‌ಗೆ ಸುಪ್ರೀಂನಿಂದ ತಡೆ

ತ್ರಿಪುರಾ: ಮಹಿಳಾ ಪತ್ರಕರ್ತೆಯರ ವಿರುದ್ಧದ ಎಫ್‌ಐಆರ್‌‌ಗೆ ಸುಪ್ರೀಂನಿಂದ ತಡೆ

ಇತ್ತೀಚೆಗೆ ನಡೆದಿದ್ದ ಕೋಮುಗಲಭೆಯ ಬಗ್ಗೆ ವರದಿ ಮಾಡಲು ರಾಜ್ಯಕ್ಕೆ ತೆರಳಿದ್ದಾಗ ಅವರನ್ನು ಪೊಲೀಸರು ಬಂಧಿಸಿದ್ದರು

- Advertisement -
- Advertisement -

ತ್ರಿಪುರಾ ರಾಜ್ಯದಲ್ಲಿ ಇತ್ತೀಚೆಗೆ ನಡೆದಿದ್ದ ಕೋಮುಗಲಭೆಯ ಬಗ್ಗೆ ವರದಿ ಮಾಡಿದ್ದಕ್ಕಾಗಿ ಪೊಲೀಸರು HW ನ್ಯೂಸ್ ನೆಟ್‌ವರ್ಕ್ ಮತ್ತು ಅದರ ಇಬ್ಬರು ಮಹಿಳಾ ಪತ್ರಕರ್ತರ ವಿರುದ್ಧ ದಾಖಲಿಸಿದ ಎರಡು ಎಫ್‌ಐಆರ್‌ಗಳ ಮೇಲಿನ ಎಲ್ಲಾ ಕ್ರಿಮಿನಲ್ ಪ್ರಕ್ರಿಯೆಗಳಿಗೆ ಸುಪ್ರೀಂ ಕೋರ್ಟ್ ಬುಧವಾರ ತಡೆ ನೀಡಿದೆ.

ನ್ಯಾಯಮೂರ್ತಿ ಚಂದ್ರಚೂಡ್, ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ವಿಕ್ರಮ್ ನಾಥ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಸಮೃದ್ಧಿ ಸಕುನಿಯಾ ಮತ್ತು ಸ್ವರ್ಣಾ ಝಾ ಅವರು ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಸಲ್ಲಿಸಿದ ಮನವಿಗೆ ತ್ರಿಪುರಾ ಸರ್ಕಾರದ ಪ್ರತಿಕ್ರಿಯೆಯನ್ನು ಕೋರಿದೆ.

ನಾಲ್ಕು ವಾರಗಳಲ್ಲಿ ಪ್ರತಿ-ಅಫಿಡವಿಟ್ ಸಲ್ಲಿಸುವಂತೆ ಅರ್ಜಿದಾರರಿಗೆ ಪೀಠವು ಸೂಚಿಸಿದೆ.

ಇದನ್ನೂ ಓದಿ: ತ್ರಿಪುರಾ ಹಿಂಸಾಚಾರ ವರದಿ ಮಾಡಿದ ಪತ್ರಕರ್ತೆಯರನ್ನು ಬಂಧಿಸಿದ ಅಸ್ಸಾಂ ಪೊಲೀಸರು

ವರದಿಗಳ ಪ್ರಕಾರ, ರಾಜ್ಯಗಳಲ್ಲಿ ಇತ್ತೀಚಿನ ನಡೆದ ಕೋಮು ಘಟನೆಗಳ ಕುರಿತು ಬರೆಯಲು ತ್ರಿಪುರಾಕ್ಕೆ ಬಂದ ಮಹಿಳಾ ಪತ್ರಕರ್ತರನ್ನು ಅಸ್ಸಾಂ ಪೊಲೀಸರು ಅಸ್ಸಾಂ-ತ್ರಿಪುರಾ ಗಡಿಗೆ ಸಮೀಪವಿರುವ ಕರೀಂಗಂಜ್‌ನ ನೀಲಂ ಬಜಾರ್‌ನಲ್ಲಿ ಬಂಧಿಸಿದ್ದಾರೆ.

ತಮ್ಮ ವರದಿಯ ಮೂಲಕ ತ್ರಿಪುರಾ ಸರ್ಕಾರದ ಇಮೇಜ್‌ಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಪತ್ರಕರ್ತರು ಮತ್ತು ಸುದ್ದಿ ವಾಹಿನಿಯ ವಿರುದ್ಧ ಬಿಜೆಪಿ ಬೆಂಬಲಿತ ಬಲಪಂಥೀಯ ಸಂಘಟನೆ ವಿಎಚ್‌ಪಿಯ ಬೆಂಬಲಿಗರು ತ್ರಿಪುರಾದ ಫಾತಿಕ್ರೊಯ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಿದ್ದರು.

ಹಿಂಸಾಚಾರದ ಸಂತ್ರಸ್ತರು ನೀಡಿದ ಹೇಳಿಕೆಗಳ ಆಧಾರದ ಮೇಲೆ ನಾವು ಸತ್ಯಗಳನ್ನು ಗ್ರೌಂಡ್ ರಿಪೋರ್ಟಿಂಗ್ ಮೂಲಕ ಪ್ರಕಟಿಸುತ್ತಿದ್ದೇವೆ ಎಂದು ಹೇಳುವ ಮೂಲಕ ಪತ್ರಕರ್ತರು ಪೊಲೀಸ್ ಕ್ರಮವನ್ನು ಪ್ರಶ್ನಿಸಿದ್ದರು. ಜೊತೆಗೆ ತಮ್ಮ ಮೇಲೆ ಎಫ್‌ಐಆರ್‌ ದಾಖಲಿಸಿ “ಪತ್ರಿಕಾ ಸ್ವಾತಂತ್ಯ್ರಕ್ಕೆ ಕಿರುಕುಳ” ನೀಡಲಾಗುತ್ತಿದೆ ಎಂದು ಪ್ರತಿಪಾದಿಸಿದ್ದರು.

ಇದನ್ನೂ ಓದಿ: ತ್ರಿಪುರಾ ಹಿಂಸಾಚಾರ ವರದಿ ಮಾಡಿದ ಪತ್ರಕರ್ತೆಯರ ಬಂಧನ: ರಾಹುಲ್ ಗಾಂಧಿ, ಮಾಧ್ಯಮ ಸಂಸ್ಥೆಗಳಿಂದ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...