Homeಮುಖಪುಟತ್ರಿಪುರ: ಟಿಎಂಸಿಯ ಹಲವು ನಾಯಕರ ಬಂಧನ

ತ್ರಿಪುರ: ಟಿಎಂಸಿಯ ಹಲವು ನಾಯಕರ ಬಂಧನ

- Advertisement -
- Advertisement -

ತ್ರಿಪುರಾದಲ್ಲಿ ಕೊರೊನಾ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ತೃಣಮೂಲ ಪಕ್ಷದ 12 ನಾಯಕರು ಮತ್ತು ಕಾರ್ಯಕರ್ತರನ್ನು ಭಾನುವಾರ ಬಂಧಿಸಲಾಗಿದೆ. ಬಂಧಿತರಲ್ಲಿ ಶನಿವಾರ ತ್ರಿಪುರಾದ ಖೊವಾಯಿ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರು ನಡೆಸಿದ ದಾಳಿಯಲ್ಲಿ ಗಾಯಗೊಂಡ ಪಕ್ಷದ ಸದಸ್ಯರೂ ಇದ್ದಾರೆ. ಅವರನ್ನು ಬಿಗಿ ಭದ್ರತೆಯೊಂದಿಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ಬಂಧಿತರನ್ನು ಭೇಟಿ ಮಾಡಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಸೋದರಳಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಸೇರಿದಂತೆ ಟಿಎಂಸಿಯ ಉನ್ನತ ನಾಯಕರು ಅಗರ್ತಲಾಗೆ ತೆರಳಿದ್ದಾರೆ.

ಇದನ್ನೂ ಓದಿ: ಪೆಗಾಸಸ್ ಪ್ರತಿ ಹರಿದು ಪ್ರತಿಭಟನೆ: ರಾಜ್ಯಸಭೆಯಿಂದ ಟಿಎಂಸಿ ಸಂಸದ ಶಾಂತನು ಸೇನ್ ಅಮಾನತು

ರಾತ್ರಿ 7 ಗಂಟೆಯಿಂದ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ. ಈ ವೇಳೆ ಅವರು ಕೊರೊನಾ ನಿರ್ಬಂಧಗಳನ್ನು ಉಲ್ಲಂಘಿಸಿ ಪ್ರಯಾಣ ಮಾಡಿದ್ದಾರೆ. ಹೀಗಾಗಿ 12 ಟಿಎಂಸಿ ಸದಸ್ಯರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೇಬಾಂಗ್ಶು ಭಟ್ಟಾಚಾರ್ಯ, ತಾನಿಯಾ ಪೊದ್ದಾರ್, ಸುದೀಪ್ ರಹಾ ಮತ್ತು ಜಯ ದತ್ತಾ ಸೇರಿದಂತೆ ಪಕ್ಷದ ನಾಯಕರನ್ನು ಬಂಧಿಸಲಾಗಿದೆ ಎಂದು ತ್ರಿಪುರಾ ಟಿಎಂಸಿ ವಕ್ತಾರ ಆಶಿಶ್ ಲಾಲ್ ಸಿಂಗ್ ಅವರು ಹೇಳಿದ್ದಾರೆ.

ಶನಿವಾರ ದಲೈ ಜಿಲ್ಲೆಯ ಅಂಬಾಸಾದಲ್ಲಿ ಬಿಜೆಪಿ ಕಾರ್ಯಕರ್ತರು ತಮ್ಮ ವಾಹನದ ಮೇಲೆ ದಾಳಿ ಮಾಡಿದಾಗ ರಾಹಾ ಮತ್ತು ದತ್ತಾ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪೆಗಾಸಸ್ ಹಗರಣ: ಒಕ್ಕೂಟ ಸರ್ಕಾರದ ವಿರುದ್ಧ ಟಿಎಂಸಿ, ಶಿವಸೇನೆ ವಾಗ್ದಾಳಿ

“ದಾಳಿಯ ನಂತರ, ನಾವು ರಾಷ್ಟ್ರೀಯ ಹೆದ್ದಾರಿ 8 ರ ಮೂಲಕ ಅಗರ್ತಲಾಕ್ಕೆ ಹಿಂತಿರುಗುತ್ತಿದ್ದೆವು. ಈ ವೇಳೆ ಪೊಲೀಸರು ನಮ್ಮ ವಾಹನಗಳನ್ನು ಖೋವಾಯಿಯಲ್ಲಿ ತಡೆದರು. ‘ದುಷ್ಕರ್ಮಿಗಳಿಂದ’ ನಮ್ಮ ಮೇಲೆ ಮತ್ತೆ ದಾಳಿಗಳು ನಡೆಯಬಹುದು ಎಂದು ಹೇಳಿ ನಮ್ಮನ್ನು ವಶಕ್ಕೆ ತೆಗೆದುಕೊಂಡರು. ನಿಜವಾಗಿ, NH 8 ರಲ್ಲಿ ನಮ್ಮ ಮೇಲೆ ದಾಳಿ ಮಾಡಲು ಬಿಜೆಪಿ ಕಾರ್ಯಕರ್ತರು ಹಲವಾರು ಸ್ಥಳಗಳಲ್ಲಿ ಜಮಾಯಿಸಿದ್ದರು” ಎಂದು ಆಶಿಶ್‌ ಲಾಲ್‌ ಹೇಳಿದ್ದಾರೆ.

ಆದಾಗ್ಯೂ, ಟಿಎಂಸಿ ಸದಸ್ಯರನ್ನು ಕೋವಿಡ್ ನಿರ್ಬಂಧಗಳನ್ನು ಉಲ್ಲಂಘಿಸಿದ್ದಕ್ಕಾಗಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಬಿಜೆಪಿಗರು ತಮ್ಮ ಪಕ್ಷದ ಮೇಲೆ ನಡೆಸಿರುವ ದಾಳಿಯನ್ನು ಟಿಎಂಸಿ ನಾಯಕರು ತೀವ್ರವಾಗಿ ಟೀಕಿಸಿದ್ದಾರೆ. ಈ ಘಟನೆಯು ತ್ರಿಪುರಾದಲ್ಲಿ “ಗೂಂಡಾ ರಾಜ್ಯ” ಇದೆ ಎಂದು ಸಾಬೀತುಪಡಿಸಿದೆ. ಇದರ ಪರಿಣಾಮವನ್ನು 2023 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಮೂಲಕ ಎದುರಿಸಲಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಫೋನ್ ಹ್ಯಾಕ್ ಮಾಡಿಯೂ ಬಿಜೆಪಿಗೆ ಚುನಾವಣೆ ಗೆಲ್ಲಲು ಸಾಧ್ಯವಾಗಲಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...