Homeಮುಖಪುಟತ್ರಿಪುರಾ ಹಿಂಸಾಚಾರ ವರದಿ ಮಾಡಿ ಬಂಧನಕ್ಕೆ ಒಳಗಾಗಿದ್ದ ಇಬ್ಬರು ಪತ್ರಕರ್ತೆಯರಿಗೆ ಜಾಮೀನು

ತ್ರಿಪುರಾ ಹಿಂಸಾಚಾರ ವರದಿ ಮಾಡಿ ಬಂಧನಕ್ಕೆ ಒಳಗಾಗಿದ್ದ ಇಬ್ಬರು ಪತ್ರಕರ್ತೆಯರಿಗೆ ಜಾಮೀನು

ಕೋಮು ಘರ್ಷಣೆಗಳ ಕುರಿತು ಗ್ರೌಂಡ್ ರಿಪೋರ್ಟ್ ಮಾಡಲು ಇಬ್ಬರು ತ್ರಿಪುರಾಕ್ಕೆ ತೆರಳಿದ್ದರು.

- Advertisement -
- Advertisement -

ಕ್ರಿಮಿನಲ್ ಪಿತೂರಿ ಸೇರಿದಂತೆ ವಿವಿಧ ಆರೋಪಗಳ ಮೇಲೆ ತ್ರಿಪುರಾದಲ್ಲಿ ಬಂಧಿಸಲಾಗಿದ್ದ ದೆಹಲಿ ಮೂಲದ ಇಬ್ಬರು ಪತ್ರಕರ್ತೆಯರಿಗೆ ಸ್ಥಳೀಯ ನ್ಯಾಯಾಲಯವು ಸೋಮವಾರ ಜಾಮೀನು ನೀಡಿದೆ.

ಸಮೃದ್ಧಿ ಕೆ ಸಕುನಿಯಾ ಮತ್ತು ಸ್ವರ್ಣ ಝಾ ಅವರಿಗೆ ತ್ರಿಪುರಾದ ಗೋಮತಿ ಜಿಲ್ಲೆಯ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಸಿಜೆಎಂ) ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ತ್ರಿಪುರಾ ರಾಜ್ಯದಲ್ಲಿ ನಡೆದ ಕೋಮು ಹಿಂಸಾಚಾರದ ಕುರಿತು ಗ್ರೌಂಡ್ ರಿಪೋರ್ಟ್ ಮಾಡಲು ತೆರಳಿದ್ದ ಸುದ್ದಿ ವೆಬ್‌ಸೈಟ್ ಎಚ್‌ಡಬ್ಲೂ ನ್ಯೂಸ್‌ನ ಇಬ್ಬರು ಪತ್ರಕರ್ತೆಯರನ್ನು ಅಸ್ಸಾಂ ಪೊಲೀಸರು ಬಂಧಿಸಿ, ತ್ರಿಪುರಾ ಪೊಲೀಸರಿಗೆ ಒಪ್ಪಿಸಿದ್ದರು.

ಜಾಮೀನು ನೀಡಿದ ನ್ಯಾಯಾಲಯವು ಪತ್ರಕರ್ತೆಯರಿಗೆ ಮಂಗಳವಾರ ಸ್ಥಳೀಯ ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚಿಸಿದೆ.

ಇದನ್ನೂ ಓದಿ: ತ್ರಿಪುರಾ ಹಿಂಸಾಚಾರ ವರದಿ ಮಾಡಿದ ಪತ್ರಕರ್ತೆಯರನ್ನು ಬಂಧಿಸಿದ ಅಸ್ಸಾಂ ಪೊಲೀಸರು

ಪತ್ರಕರ್ತೆಯರನ್ನು ಬಂಧಿಸಿದ್ದ ಪೊಲೀಸರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ’ಬಿಜೆಪಿ ವ್ಯವಸ್ಥೆಯು ಪತ್ರಿಕೋದ್ಯಮವನ್ನು ಕೊಲ್ಲುವುದರಲ್ಲಿ ನಿರತವಾಗಿದೆ. ಆದರೆ ಸುಳ್ಳಿನ ಮುಂದೆ ಸತ್ಯ ಯಾವಾಗ ಸುಮ್ಮನೆ ನಿಂತಿದೆ..?” ಎಂದು ಪ್ರಶ್ನಿಸುವ ಮೂಲಕ ಸತ್ಯ ಒಂದಲ್ಲ ಒಂದು ದಿನ ಹೊರ ಬರುತ್ತದೆ ಎಂದಿದ್ದರು.

ಮಾಧ್ಯಮ ಸಂಸ್ಥೆ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಮತ್ತು Indian Women’s Press Corps ಪತ್ರಕರ್ತೆಯರ ಬಂಧನ ಖಂಡಿಸಿ, ಅವರನ್ನು ತಕ್ಷಣ ಬಿಡುಗಡೆ ಮಾಡಲು ಒತ್ತಾಯಿಸಿದ್ದವು.

ತ್ರಿಪುರಾದಲ್ಲಿ ಅಕ್ಟೋಬರ್‌ನಲ್ಲಿ ನಡೆದ ಕೋಮು ಘರ್ಷಣೆಗಳ ಕುರಿತು ಗ್ರೌಂಡ್ ರಿಪೋರ್ಟ್ ಮಾಡಲು ತ್ರಿಪುರಾಕ್ಕೆ ಬಂದಿದ್ದ ಸುದ್ದಿ ವೆಬ್‌ಸೈಟ್ ಎಚ್‌ಡಬ್ಲೂ ನ್ಯೂಸ್‌ನ (@hwnewsnetwork) ಇಬ್ಬರು ಮಹಿಳಾ ಪತ್ರಕರ್ತರನ್ನು ಅಸ್ಸಾಂ ಪೊಲೀಸರು ಭಾನುವಾರ ಅಸ್ಸಾಂ-ತ್ರಿಪುರಾ ಗಡಿಗೆ ಸಮೀಪವಿರುವ ಕರೀಂಗಂಜ್‌ನ ನೀಲಂ ಬಜಾರ್‌ನಲ್ಲಿ ಬಂಧಿಸಿದ್ದರು.

ಇದಕ್ಕೂ ಮೊದಲು ವಿಶ್ವ ಹಿಂದೂ ಪರಿಷತ್ತಿನ ದೂರಿನ ಮೇಲೆ ಶನಿವಾರ ಉನಕೋಟಿ ಜಿಲ್ಲೆಯ ಫಾಟಿಕ್ರೋಯ್ ಪೊಲೀಸ್ ಠಾಣೆಯಲ್ಲಿ 21 ವರ್ಷದ ಸಮೃದ್ಧಿ ಸಕುನಿಯಾ ಮತ್ತು 25 ವರ್ಷದ ಸ್ವರ್ಣ ಝಾ ವಿರುದ್ಧ ಭಾರತೀಯ ದಂಡ ಸಂಹಿತೆಯ 120B (ಕ್ರಿಮಿನಲ್ ಪಿತೂರಿ), 153 (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ) ಮತ್ತು 504 ಸೆಕ್ಷನ್ ಅಡಿಗಳಲ್ಲಿ ಪ್ರಕರಣ ದಾಖಲಾಗಿತ್ತು.

ನವೆಂಬರ್ 13 ರಂದು ಫಾಟಿಕ್ರೋಯ್‌ನಲ್ಲಿರುವ ಮುಸ್ಲಿಂ ಮನೆಗಳಿಗೆ ಭೇಟಿ ನೀಡಿದಾಗ ಇಬ್ಬರು ಪತ್ರಕರ್ತರು “ಹಿಂದೂಗಳು ಮತ್ತು ತ್ರಿಪುರಾ ಸರ್ಕಾರದ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ” ಎಂದು ಆರೋಪಿಸಿ ಕಾಂಚನ್ ದಾಸ್ ಎಂಬವರು ದೂರು ದಾಖಲಿಸಿದ್ದಾರೆ.

ಪತ್ರಕರ್ತೆ ಸಕುನಿಯಾ, ಅಕ್ಟೋಬರ್ 24 ರಂದು ಉನಕೋಟಿಯ ಪೌಲ್ ಬಜಾರ್‌ನಲ್ಲಿ ಮಸೀದಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಎಚ್‌ಪಿ ಮತ್ತು ಬಜರಂಗದಳ ಸಂಘಟನೆ ಹೆಸರನ್ನು ಸೇರಿಸಿದ್ದಾರೆ. ಇದು ತ್ರಿಪುರಾದಲ್ಲಿ ಕೋಮು ಸೌಹಾರ್ದವನ್ನು ಹಾಳು ಮಾಡುವ “ಅಪರಾಧದ ಪಿತೂರಿ”ಯ ಭಾಗವಾಗಿದೆ ಎಂದು ಕಾಂಚನ್ ದಾಸ್ ಆರೋಪಿಸಿದ್ದಾರೆ.


ಇದನ್ನೂ ಓದಿ: ತ್ರಿಪುರಾ ಹಿಂಸಾಚಾರ ವರದಿ ಮಾಡಿದ ಪತ್ರಕರ್ತೆಯರ ಬಂಧನ: ರಾಹುಲ್ ಗಾಂಧಿ, ಮಾಧ್ಯಮ ಸಂಸ್ಥೆಗಳಿಂದ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...