Homeಮುಖಪುಟತ್ರಿಪುರಾ ಹಿಂಸಾಚಾರ ವರದಿ ಮಾಡಿ ಬಂಧನಕ್ಕೆ ಒಳಗಾಗಿದ್ದ ಇಬ್ಬರು ಪತ್ರಕರ್ತೆಯರಿಗೆ ಜಾಮೀನು

ತ್ರಿಪುರಾ ಹಿಂಸಾಚಾರ ವರದಿ ಮಾಡಿ ಬಂಧನಕ್ಕೆ ಒಳಗಾಗಿದ್ದ ಇಬ್ಬರು ಪತ್ರಕರ್ತೆಯರಿಗೆ ಜಾಮೀನು

ಕೋಮು ಘರ್ಷಣೆಗಳ ಕುರಿತು ಗ್ರೌಂಡ್ ರಿಪೋರ್ಟ್ ಮಾಡಲು ಇಬ್ಬರು ತ್ರಿಪುರಾಕ್ಕೆ ತೆರಳಿದ್ದರು.

- Advertisement -
- Advertisement -

ಕ್ರಿಮಿನಲ್ ಪಿತೂರಿ ಸೇರಿದಂತೆ ವಿವಿಧ ಆರೋಪಗಳ ಮೇಲೆ ತ್ರಿಪುರಾದಲ್ಲಿ ಬಂಧಿಸಲಾಗಿದ್ದ ದೆಹಲಿ ಮೂಲದ ಇಬ್ಬರು ಪತ್ರಕರ್ತೆಯರಿಗೆ ಸ್ಥಳೀಯ ನ್ಯಾಯಾಲಯವು ಸೋಮವಾರ ಜಾಮೀನು ನೀಡಿದೆ.

ಸಮೃದ್ಧಿ ಕೆ ಸಕುನಿಯಾ ಮತ್ತು ಸ್ವರ್ಣ ಝಾ ಅವರಿಗೆ ತ್ರಿಪುರಾದ ಗೋಮತಿ ಜಿಲ್ಲೆಯ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಸಿಜೆಎಂ) ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ತ್ರಿಪುರಾ ರಾಜ್ಯದಲ್ಲಿ ನಡೆದ ಕೋಮು ಹಿಂಸಾಚಾರದ ಕುರಿತು ಗ್ರೌಂಡ್ ರಿಪೋರ್ಟ್ ಮಾಡಲು ತೆರಳಿದ್ದ ಸುದ್ದಿ ವೆಬ್‌ಸೈಟ್ ಎಚ್‌ಡಬ್ಲೂ ನ್ಯೂಸ್‌ನ ಇಬ್ಬರು ಪತ್ರಕರ್ತೆಯರನ್ನು ಅಸ್ಸಾಂ ಪೊಲೀಸರು ಬಂಧಿಸಿ, ತ್ರಿಪುರಾ ಪೊಲೀಸರಿಗೆ ಒಪ್ಪಿಸಿದ್ದರು.

ಜಾಮೀನು ನೀಡಿದ ನ್ಯಾಯಾಲಯವು ಪತ್ರಕರ್ತೆಯರಿಗೆ ಮಂಗಳವಾರ ಸ್ಥಳೀಯ ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚಿಸಿದೆ.

ಇದನ್ನೂ ಓದಿ: ತ್ರಿಪುರಾ ಹಿಂಸಾಚಾರ ವರದಿ ಮಾಡಿದ ಪತ್ರಕರ್ತೆಯರನ್ನು ಬಂಧಿಸಿದ ಅಸ್ಸಾಂ ಪೊಲೀಸರು

ಪತ್ರಕರ್ತೆಯರನ್ನು ಬಂಧಿಸಿದ್ದ ಪೊಲೀಸರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ’ಬಿಜೆಪಿ ವ್ಯವಸ್ಥೆಯು ಪತ್ರಿಕೋದ್ಯಮವನ್ನು ಕೊಲ್ಲುವುದರಲ್ಲಿ ನಿರತವಾಗಿದೆ. ಆದರೆ ಸುಳ್ಳಿನ ಮುಂದೆ ಸತ್ಯ ಯಾವಾಗ ಸುಮ್ಮನೆ ನಿಂತಿದೆ..?” ಎಂದು ಪ್ರಶ್ನಿಸುವ ಮೂಲಕ ಸತ್ಯ ಒಂದಲ್ಲ ಒಂದು ದಿನ ಹೊರ ಬರುತ್ತದೆ ಎಂದಿದ್ದರು.

ಮಾಧ್ಯಮ ಸಂಸ್ಥೆ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಮತ್ತು Indian Women’s Press Corps ಪತ್ರಕರ್ತೆಯರ ಬಂಧನ ಖಂಡಿಸಿ, ಅವರನ್ನು ತಕ್ಷಣ ಬಿಡುಗಡೆ ಮಾಡಲು ಒತ್ತಾಯಿಸಿದ್ದವು.

ತ್ರಿಪುರಾದಲ್ಲಿ ಅಕ್ಟೋಬರ್‌ನಲ್ಲಿ ನಡೆದ ಕೋಮು ಘರ್ಷಣೆಗಳ ಕುರಿತು ಗ್ರೌಂಡ್ ರಿಪೋರ್ಟ್ ಮಾಡಲು ತ್ರಿಪುರಾಕ್ಕೆ ಬಂದಿದ್ದ ಸುದ್ದಿ ವೆಬ್‌ಸೈಟ್ ಎಚ್‌ಡಬ್ಲೂ ನ್ಯೂಸ್‌ನ (@hwnewsnetwork) ಇಬ್ಬರು ಮಹಿಳಾ ಪತ್ರಕರ್ತರನ್ನು ಅಸ್ಸಾಂ ಪೊಲೀಸರು ಭಾನುವಾರ ಅಸ್ಸಾಂ-ತ್ರಿಪುರಾ ಗಡಿಗೆ ಸಮೀಪವಿರುವ ಕರೀಂಗಂಜ್‌ನ ನೀಲಂ ಬಜಾರ್‌ನಲ್ಲಿ ಬಂಧಿಸಿದ್ದರು.

ಇದಕ್ಕೂ ಮೊದಲು ವಿಶ್ವ ಹಿಂದೂ ಪರಿಷತ್ತಿನ ದೂರಿನ ಮೇಲೆ ಶನಿವಾರ ಉನಕೋಟಿ ಜಿಲ್ಲೆಯ ಫಾಟಿಕ್ರೋಯ್ ಪೊಲೀಸ್ ಠಾಣೆಯಲ್ಲಿ 21 ವರ್ಷದ ಸಮೃದ್ಧಿ ಸಕುನಿಯಾ ಮತ್ತು 25 ವರ್ಷದ ಸ್ವರ್ಣ ಝಾ ವಿರುದ್ಧ ಭಾರತೀಯ ದಂಡ ಸಂಹಿತೆಯ 120B (ಕ್ರಿಮಿನಲ್ ಪಿತೂರಿ), 153 (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ) ಮತ್ತು 504 ಸೆಕ್ಷನ್ ಅಡಿಗಳಲ್ಲಿ ಪ್ರಕರಣ ದಾಖಲಾಗಿತ್ತು.

ನವೆಂಬರ್ 13 ರಂದು ಫಾಟಿಕ್ರೋಯ್‌ನಲ್ಲಿರುವ ಮುಸ್ಲಿಂ ಮನೆಗಳಿಗೆ ಭೇಟಿ ನೀಡಿದಾಗ ಇಬ್ಬರು ಪತ್ರಕರ್ತರು “ಹಿಂದೂಗಳು ಮತ್ತು ತ್ರಿಪುರಾ ಸರ್ಕಾರದ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ” ಎಂದು ಆರೋಪಿಸಿ ಕಾಂಚನ್ ದಾಸ್ ಎಂಬವರು ದೂರು ದಾಖಲಿಸಿದ್ದಾರೆ.

ಪತ್ರಕರ್ತೆ ಸಕುನಿಯಾ, ಅಕ್ಟೋಬರ್ 24 ರಂದು ಉನಕೋಟಿಯ ಪೌಲ್ ಬಜಾರ್‌ನಲ್ಲಿ ಮಸೀದಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಎಚ್‌ಪಿ ಮತ್ತು ಬಜರಂಗದಳ ಸಂಘಟನೆ ಹೆಸರನ್ನು ಸೇರಿಸಿದ್ದಾರೆ. ಇದು ತ್ರಿಪುರಾದಲ್ಲಿ ಕೋಮು ಸೌಹಾರ್ದವನ್ನು ಹಾಳು ಮಾಡುವ “ಅಪರಾಧದ ಪಿತೂರಿ”ಯ ಭಾಗವಾಗಿದೆ ಎಂದು ಕಾಂಚನ್ ದಾಸ್ ಆರೋಪಿಸಿದ್ದಾರೆ.


ಇದನ್ನೂ ಓದಿ: ತ್ರಿಪುರಾ ಹಿಂಸಾಚಾರ ವರದಿ ಮಾಡಿದ ಪತ್ರಕರ್ತೆಯರ ಬಂಧನ: ರಾಹುಲ್ ಗಾಂಧಿ, ಮಾಧ್ಯಮ ಸಂಸ್ಥೆಗಳಿಂದ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...