Homeಚಳವಳಿತ್ರಿಪುರಾ ಹಿಂಸಾಚಾರ ವರದಿ ಮಾಡಿದ ಪತ್ರಕರ್ತೆಯರ ಮೇಲೆ ದೂರು ದಾಖಲು

ತ್ರಿಪುರಾ ಹಿಂಸಾಚಾರ ವರದಿ ಮಾಡಿದ ಪತ್ರಕರ್ತೆಯರ ಮೇಲೆ ದೂರು ದಾಖಲು

- Advertisement -
- Advertisement -

ತ್ರಿಪುರಾ ಪೊಲೀಸರು ರಾಜ್ಯದಲ್ಲಿ ನಡೆದ ಕೋಮು ಹಿಂಸಾಚಾರದ ಕುರಿತು ವರದಿ ಮಾಡಿದ ಇಬ್ಬರು ಪತ್ರಕರ್ತೆಯರ ವಿರುದ್ಧ ವಿಶ್ವ ಹಿಂದೂ ಪರಿಷತ್ತಿನ ದೂರಿನ ಮೇಲೆ ಶನಿವಾರ ಎಫ್ಐಆರ್ ದಾಖಲಿಸಿದ್ದಾರೆ. ಉನಕೋಟಿ ಜಿಲ್ಲೆಯ ಫಾಟಿಕ್ರೋಯ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಸ್ವತಂತ್ರ ಸುದ್ದಿ ವೆಬ್‌ಸೈಟ್ @hwnewsnetwork ದೆಹಲಿ ಮೂಲದ ವರದಿಗಾರರಾದ 21 ವರ್ಷದ ಸಮೃದ್ಧಿ ಸಕುನಿಯಾ ಮತ್ತು 25 ವರ್ಷದ ಸ್ವರ್ಣ ಝಾ ವಿರುದ್ಧ ಭಾರತೀಯ ದಂಡ ಸಂಹಿತೆಯ 120B (ಕ್ರಿಮಿನಲ್ ಪಿತೂರಿ), 153 (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ) ಮತ್ತು 504 ಸೆಕ್ಷನ್ ಅಡಿಗಳಲ್ಲಿ ಪ್ರಕರಣ ದಾಖಲಾಗಿದೆ.

ನವೆಂಬರ್ 13 ರಂದು ಫಾಟಿಕ್ರೋಯ್‌ನಲ್ಲಿರುವ ಮುಸ್ಲಿಂ ಮನೆಗಳಿಗೆ ಭೇಟಿ ನೀಡಿದಾಗ ಇಬ್ಬರು ಪತ್ರಕರ್ತರು “ಹಿಂದೂಗಳು ಮತ್ತು ತ್ರಿಪುರಾ ಸರ್ಕಾರದ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ” ಎಂದು ಆರೋಪಿಸಿ ಕಾಂಚನ್ ದಾಸ್ ಎಂಬವರು ದೂರು ದಾಖಲಿಸಿದ್ದಾರೆ.

ಪತ್ರಕರ್ತೆ ಸಕುನಿಯಾ, ಅಕ್ಟೋಬರ್ 24 ರಂದು ಉನಕೋಟಿಯ ಪೌಲ್ ಬಜಾರ್‌ನಲ್ಲಿ ಮಸೀದಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಎಚ್‌ಪಿ ಮತ್ತು ಬಜರಂಗದಳ ಸಂಘಟನೆ ಹೆಸರನ್ನು ಸೇರಿಸಿದ್ದಾರೆ. ಇದು ತ್ರಿಪುರಾದಲ್ಲಿ ಕೋಮು ಸೌಹಾರ್ದವನ್ನು ಹಾಳು ಮಾಡುವ “ಅಪರಾಧದ ಪಿತೂರಿ”ಯ ಭಾಗವಾಗಿದೆ ಎಂದು ದಾಸ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಮಣಿಪುರ: ಉಗ್ರರ ದಾಳಿಯಲ್ಲಿ ಸೇನಾ ಕರ್ನಲ್, ಪತ್ನಿ, ಮಗು ಸೇರಿ 7 ಮಂದಿ ಸಾವು

ಈ ಬಗ್ಗೆ ಪತ್ರಕರ್ತೆಯರಿಬ್ಬರೂ ತಮ್ಮ ಟ್ವಿಟರ್‌ ಖಾತೆಗಳಲ್ಲಿ ಎಫ್‌ಐಆರ್ ಪ್ರತಿಗಳನ್ನು ಫೋಸ್ಟ್‌ ಮಾಡಿ, ನಮ್ಮ ಮೇಲೆ ಎಫ್‌ಐಆರ್‌ ದಾಖಲಾಗಿದೆ. ನಮ್ಮನ್ನು ಹೋಟೆಲ್‌ನಿಂದ ಹೊರ ಹೋಗಲು ಪೊಲೀಸರು ಬಿಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

15 ಪೊಲೀಸ್ ಅಧಿಕಾರಿಗಳು ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಸಿಬ್ಬಂದಿ ಹೋಟೆಲ್ ಸುತ್ತುವರೆದಿದ್ದಾರೆ, ಅದರಲ್ಲಿ ಮೂವರು ಮಹಿಳಾ ಪೊಲೀಸರು ಇದ್ದಾರೆ ಎಂದು ಸಕುನಿಯಾ ಹೇಳಿದ್ದಾರೆ.

ಆದರೆ, ದೂರು ದಾಖಲಾದ ನಂತರ ಪೊಲೀಸರ ತಂಡ ಅವರನ್ನು ಪ್ರಶ್ನಿಸಲು ಹೋಗಿತ್ತು. ಪತ್ರಕರ್ತರಿಗೆ ಕೇವಲ ನೋಟಿಸ್ ನೀಡಲಾಗಿದೆ. ನವೆಂಬರ್ 21 ರಂದು ತಮ್ಮ ವಕೀಲರೊಂದಿಗೆ ಫಾಟಿಕ್ರೋಯ್ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ನವೆಂಬರ್ 12 ರಂದು, ಸಕುನಿಯಾ ಮತ್ತು ಝಾ ಅವರು ತ್ರಿಪುರಾದ ಗೋಮತಿ ಜಿಲ್ಲೆಯಲ್ಲಿ ಬೆಂಕಿಗೆ ಆಹುತಿಯಾಗಿರುವ ಮಸೀದಿಯ ಬಗ್ಗೆ ವರದಿ ಮಾಡಿದ್ದರು. ಶನಿವಾರ ಇಬ್ಬರು ವರದಿಗಾರರು ಇಲ್ಲಿ ಇನ್ನೊಂದು ಮಸೀದಿ ಮತ್ತು ಮುಸ್ಲಿಮರ ಮನೆಗಳಿಗೆ ಹಾನಿಯಾಗಿರುವದನ್ನು ವರದಿ ಮಾಡಲು ಧರ್ಮನಗರಕ್ಕೆ ಬಂದಿದ್ದರು. ತ್ರಿಪುರಾದಲ್ಲಿ ಅಕ್ಟೋಬರ್ 26 ರಂದು ನಡೆದ ವಿಎಚ್‌ಪಿ ರ್‍ಯಾಲಿ ಬಳಿಕ ಹಿಂಸಾಚಾರ ಆರಂಭವಾಗಿದೆ.

ಆದರೆ, ಬಿಜೆಪಿ ಆಡಳಿತವಿರುವ ತ್ರಿಪುರಾದಲ್ಲಿ ಮಸೀದಿಯನ್ನು ಧ್ವಂಸ ಮಾಡಿರುವ ವರದಿಗಳನ್ನು ಗೃಹ ಸಚಿವಾಲಯ ತಳ್ಳಿಹಾಕಿದೆ. “ತ್ರಿಪುರಾದ ಗೋಮತಿ ಜಿಲ್ಲೆಯ ಕಕ್ರಾಬನ್ ಪ್ರದೇಶದಲ್ಲಿ ಮಸೀದಿಯನ್ನು ಹಾನಿಗೊಳಿಸಲಾಗಿದೆ ಮತ್ತು ಧ್ವಂಸಗೊಳಿಸಲಾಗಿದೆ ಎಂದು ವರದಿ ಪ್ರಸಾರವಾಗಿವೆ. ಈ ಸುದ್ದಿಗಳು ನಕಲಿ ಮತ್ತು ಸಂಪೂರ್ಣ ಸುಳ್ಳು” ಎಂದಿದೆ.

ತ್ರಿಪುರಾ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕಳೆದ ವಾರ, ಫೇಸ್‌ಬುಕ್, ಟ್ವಿಟರ್ ಮತ್ತು ಯೂಟ್ಯೂಬ್‌ನಲ್ಲಿ ನಕಲಿ ಮತ್ತು ಪ್ರಚೋದನಕಾರಿ ಪೋಸ್ಟ್‌ಗಳನ್ನು ಮಾಡಿದ ಆರೋಪದಲ್ಲಿ ನೂರಕ್ಕೂ ಹೆಚ್ಚು ಖಾತೆಗಳ ವಿವರಗಳನ್ನು ನೀಡುವಂತೆ ಪೊಲೀಸರು ಜಾಲತಾಣಗಳಿಗೆ ನೋಟಿಸ್ ನೀಡಿದ್ದಾರೆ.

ಇತ್ತೀಚೆಗೆ, ಸುಪ್ರೀಂ ಕೋರ್ಟ್ ವಕೀಲರು, ಕಾರ್ಯಕರ್ತರು ಮತ್ತು ಪತ್ರಕರ್ತರು ಸೇರಿದಂತೆ 70 ಜನರ ವಿರುದ್ಧ ಹತ್ತಕ್ಕೂ ಹೆಚ್ಚು ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಲಾಗಿದೆ.


ಇದನ್ನೂ ಓದಿ: ನನ್ನ ಹೇಳಿಕೆ ತಪ್ಪೆಂದು ಸಾಬೀತುಪಡಿಸಿದರೆ ಪದ್ಮಶ್ರೀ ವಾಪಸ್ ಮಾಡುತ್ತೇನೆ: ಕಂಗನಾ ರಣಾವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...