Homeಚಳವಳಿತ್ರಿಪುರಾ ಹಿಂಸಾಚಾರ ವರದಿ ಮಾಡಿದ ಪತ್ರಕರ್ತೆಯರ ಮೇಲೆ ದೂರು ದಾಖಲು

ತ್ರಿಪುರಾ ಹಿಂಸಾಚಾರ ವರದಿ ಮಾಡಿದ ಪತ್ರಕರ್ತೆಯರ ಮೇಲೆ ದೂರು ದಾಖಲು

- Advertisement -
- Advertisement -

ತ್ರಿಪುರಾ ಪೊಲೀಸರು ರಾಜ್ಯದಲ್ಲಿ ನಡೆದ ಕೋಮು ಹಿಂಸಾಚಾರದ ಕುರಿತು ವರದಿ ಮಾಡಿದ ಇಬ್ಬರು ಪತ್ರಕರ್ತೆಯರ ವಿರುದ್ಧ ವಿಶ್ವ ಹಿಂದೂ ಪರಿಷತ್ತಿನ ದೂರಿನ ಮೇಲೆ ಶನಿವಾರ ಎಫ್ಐಆರ್ ದಾಖಲಿಸಿದ್ದಾರೆ. ಉನಕೋಟಿ ಜಿಲ್ಲೆಯ ಫಾಟಿಕ್ರೋಯ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಸ್ವತಂತ್ರ ಸುದ್ದಿ ವೆಬ್‌ಸೈಟ್ @hwnewsnetwork ದೆಹಲಿ ಮೂಲದ ವರದಿಗಾರರಾದ 21 ವರ್ಷದ ಸಮೃದ್ಧಿ ಸಕುನಿಯಾ ಮತ್ತು 25 ವರ್ಷದ ಸ್ವರ್ಣ ಝಾ ವಿರುದ್ಧ ಭಾರತೀಯ ದಂಡ ಸಂಹಿತೆಯ 120B (ಕ್ರಿಮಿನಲ್ ಪಿತೂರಿ), 153 (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ) ಮತ್ತು 504 ಸೆಕ್ಷನ್ ಅಡಿಗಳಲ್ಲಿ ಪ್ರಕರಣ ದಾಖಲಾಗಿದೆ.

ನವೆಂಬರ್ 13 ರಂದು ಫಾಟಿಕ್ರೋಯ್‌ನಲ್ಲಿರುವ ಮುಸ್ಲಿಂ ಮನೆಗಳಿಗೆ ಭೇಟಿ ನೀಡಿದಾಗ ಇಬ್ಬರು ಪತ್ರಕರ್ತರು “ಹಿಂದೂಗಳು ಮತ್ತು ತ್ರಿಪುರಾ ಸರ್ಕಾರದ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ” ಎಂದು ಆರೋಪಿಸಿ ಕಾಂಚನ್ ದಾಸ್ ಎಂಬವರು ದೂರು ದಾಖಲಿಸಿದ್ದಾರೆ.

ಪತ್ರಕರ್ತೆ ಸಕುನಿಯಾ, ಅಕ್ಟೋಬರ್ 24 ರಂದು ಉನಕೋಟಿಯ ಪೌಲ್ ಬಜಾರ್‌ನಲ್ಲಿ ಮಸೀದಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಎಚ್‌ಪಿ ಮತ್ತು ಬಜರಂಗದಳ ಸಂಘಟನೆ ಹೆಸರನ್ನು ಸೇರಿಸಿದ್ದಾರೆ. ಇದು ತ್ರಿಪುರಾದಲ್ಲಿ ಕೋಮು ಸೌಹಾರ್ದವನ್ನು ಹಾಳು ಮಾಡುವ “ಅಪರಾಧದ ಪಿತೂರಿ”ಯ ಭಾಗವಾಗಿದೆ ಎಂದು ದಾಸ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಮಣಿಪುರ: ಉಗ್ರರ ದಾಳಿಯಲ್ಲಿ ಸೇನಾ ಕರ್ನಲ್, ಪತ್ನಿ, ಮಗು ಸೇರಿ 7 ಮಂದಿ ಸಾವು

ಈ ಬಗ್ಗೆ ಪತ್ರಕರ್ತೆಯರಿಬ್ಬರೂ ತಮ್ಮ ಟ್ವಿಟರ್‌ ಖಾತೆಗಳಲ್ಲಿ ಎಫ್‌ಐಆರ್ ಪ್ರತಿಗಳನ್ನು ಫೋಸ್ಟ್‌ ಮಾಡಿ, ನಮ್ಮ ಮೇಲೆ ಎಫ್‌ಐಆರ್‌ ದಾಖಲಾಗಿದೆ. ನಮ್ಮನ್ನು ಹೋಟೆಲ್‌ನಿಂದ ಹೊರ ಹೋಗಲು ಪೊಲೀಸರು ಬಿಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

15 ಪೊಲೀಸ್ ಅಧಿಕಾರಿಗಳು ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಸಿಬ್ಬಂದಿ ಹೋಟೆಲ್ ಸುತ್ತುವರೆದಿದ್ದಾರೆ, ಅದರಲ್ಲಿ ಮೂವರು ಮಹಿಳಾ ಪೊಲೀಸರು ಇದ್ದಾರೆ ಎಂದು ಸಕುನಿಯಾ ಹೇಳಿದ್ದಾರೆ.

ಆದರೆ, ದೂರು ದಾಖಲಾದ ನಂತರ ಪೊಲೀಸರ ತಂಡ ಅವರನ್ನು ಪ್ರಶ್ನಿಸಲು ಹೋಗಿತ್ತು. ಪತ್ರಕರ್ತರಿಗೆ ಕೇವಲ ನೋಟಿಸ್ ನೀಡಲಾಗಿದೆ. ನವೆಂಬರ್ 21 ರಂದು ತಮ್ಮ ವಕೀಲರೊಂದಿಗೆ ಫಾಟಿಕ್ರೋಯ್ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ನವೆಂಬರ್ 12 ರಂದು, ಸಕುನಿಯಾ ಮತ್ತು ಝಾ ಅವರು ತ್ರಿಪುರಾದ ಗೋಮತಿ ಜಿಲ್ಲೆಯಲ್ಲಿ ಬೆಂಕಿಗೆ ಆಹುತಿಯಾಗಿರುವ ಮಸೀದಿಯ ಬಗ್ಗೆ ವರದಿ ಮಾಡಿದ್ದರು. ಶನಿವಾರ ಇಬ್ಬರು ವರದಿಗಾರರು ಇಲ್ಲಿ ಇನ್ನೊಂದು ಮಸೀದಿ ಮತ್ತು ಮುಸ್ಲಿಮರ ಮನೆಗಳಿಗೆ ಹಾನಿಯಾಗಿರುವದನ್ನು ವರದಿ ಮಾಡಲು ಧರ್ಮನಗರಕ್ಕೆ ಬಂದಿದ್ದರು. ತ್ರಿಪುರಾದಲ್ಲಿ ಅಕ್ಟೋಬರ್ 26 ರಂದು ನಡೆದ ವಿಎಚ್‌ಪಿ ರ್‍ಯಾಲಿ ಬಳಿಕ ಹಿಂಸಾಚಾರ ಆರಂಭವಾಗಿದೆ.

ಆದರೆ, ಬಿಜೆಪಿ ಆಡಳಿತವಿರುವ ತ್ರಿಪುರಾದಲ್ಲಿ ಮಸೀದಿಯನ್ನು ಧ್ವಂಸ ಮಾಡಿರುವ ವರದಿಗಳನ್ನು ಗೃಹ ಸಚಿವಾಲಯ ತಳ್ಳಿಹಾಕಿದೆ. “ತ್ರಿಪುರಾದ ಗೋಮತಿ ಜಿಲ್ಲೆಯ ಕಕ್ರಾಬನ್ ಪ್ರದೇಶದಲ್ಲಿ ಮಸೀದಿಯನ್ನು ಹಾನಿಗೊಳಿಸಲಾಗಿದೆ ಮತ್ತು ಧ್ವಂಸಗೊಳಿಸಲಾಗಿದೆ ಎಂದು ವರದಿ ಪ್ರಸಾರವಾಗಿವೆ. ಈ ಸುದ್ದಿಗಳು ನಕಲಿ ಮತ್ತು ಸಂಪೂರ್ಣ ಸುಳ್ಳು” ಎಂದಿದೆ.

ತ್ರಿಪುರಾ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕಳೆದ ವಾರ, ಫೇಸ್‌ಬುಕ್, ಟ್ವಿಟರ್ ಮತ್ತು ಯೂಟ್ಯೂಬ್‌ನಲ್ಲಿ ನಕಲಿ ಮತ್ತು ಪ್ರಚೋದನಕಾರಿ ಪೋಸ್ಟ್‌ಗಳನ್ನು ಮಾಡಿದ ಆರೋಪದಲ್ಲಿ ನೂರಕ್ಕೂ ಹೆಚ್ಚು ಖಾತೆಗಳ ವಿವರಗಳನ್ನು ನೀಡುವಂತೆ ಪೊಲೀಸರು ಜಾಲತಾಣಗಳಿಗೆ ನೋಟಿಸ್ ನೀಡಿದ್ದಾರೆ.

ಇತ್ತೀಚೆಗೆ, ಸುಪ್ರೀಂ ಕೋರ್ಟ್ ವಕೀಲರು, ಕಾರ್ಯಕರ್ತರು ಮತ್ತು ಪತ್ರಕರ್ತರು ಸೇರಿದಂತೆ 70 ಜನರ ವಿರುದ್ಧ ಹತ್ತಕ್ಕೂ ಹೆಚ್ಚು ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಲಾಗಿದೆ.


ಇದನ್ನೂ ಓದಿ: ನನ್ನ ಹೇಳಿಕೆ ತಪ್ಪೆಂದು ಸಾಬೀತುಪಡಿಸಿದರೆ ಪದ್ಮಶ್ರೀ ವಾಪಸ್ ಮಾಡುತ್ತೇನೆ: ಕಂಗನಾ ರಣಾವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...