Homeಮುಖಪುಟತ್ರಿಪುರಾ ಹಿಂಸಾಚಾರ ವರದಿ ಮಾಡಿದ ಪತ್ರಕರ್ತೆಯರನ್ನು ಬಂಧಿಸಿದ ಅಸ್ಸಾಂ ಪೊಲೀಸರು

ತ್ರಿಪುರಾ ಹಿಂಸಾಚಾರ ವರದಿ ಮಾಡಿದ ಪತ್ರಕರ್ತೆಯರನ್ನು ಬಂಧಿಸಿದ ಅಸ್ಸಾಂ ಪೊಲೀಸರು

- Advertisement -
- Advertisement -

ತ್ರಿಪುರಾ ರಾಜ್ಯದಲ್ಲಿ ನಡೆದ ಕೋಮು ಹಿಂಸಾಚಾರದ ಕುರಿತು ಗ್ರೌಂಡ್ ರಿಪೋರ್ಟ್ ಮಾಡಲು ತೆರಳಿದ್ದ ಸುದ್ದಿ ವೆಬ್‌ಸೈಟ್ ಎಚ್‌ಡಬ್ಲೂ ನ್ಯೂಸ್‌ನ (@hwnewsnetwork) ಇಬ್ಬರು ಪತ್ರಕರ್ತೆಯರನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ.

ಇಬ್ಬರು ಪತ್ರಕರ್ತೆಯರ ವಿರುದ್ಧ ವಿಶ್ವ ಹಿಂದೂ ಪರಿಷತ್ತಿನ ದೂರಿನ ಮೇಲೆ ಶನಿವಾರ ಉನಕೋಟಿ ಜಿಲ್ಲೆಯ ಫಾಟಿಕ್ರೋಯ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಸಿಲ್ಚಾರ್‌ಗೆ ತೆರಳುತ್ತಿದ್ದ ವೇಳೆ ಅಸ್ಸಾಂ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಅಸ್ಸಾಂನಲ್ಲಿ ಇವರ ಮೇಲೆ ಯಾವುದೇ ದೂರು ದಾಖಲಾಗದಿದ್ದರೂ ಗೋಮತಿ ಜಿಲ್ಲಾ ಎಸ್‌ಪಿ ಆದೇಶದಂತೆ ಬಂಧಿಸಲಾಗಿದೆ.

“ನಮ್ಮನ್ನು ಅಸ್ಸಾಂನ ಕರೀಂಗಂಜ್‌ನ ನಿಲಂಬಜಾರ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದೆ. ಗೋಮತಿ ಜಿಲ್ಲಾ ಎಸ್‌ಪಿಯವರು ನಮ್ಮ ಬಂಧನಕ್ಕೆ ಆದೇಶ ನೀಡಿದ್ದಾರೆ ಎಂದು ನಿಲಂಬಜಾರ್ ಪೊಲೀಸ್ ಠಾಣೆಯ ಪ್ರಭಾರಿ ಅಧಿಕಾರಿಯಿಂದ ನಮಗೆ ತಿಳಿಯಿತು” ಎಂದು ಪತ್ರಕರ್ತೆ ಸಮೃದ್ಧಿ ಸಕುನಿಯಾ ಟ್ವೀಟ್ ಮಾಡಿದ್ದಾರೆ. ಜೊತೆಗೆ ತಮ್ಮ ಸುದ್ದಿ ಸಂಸ್ಥೆಯ ಅಧಿಕೃತ ಹೇಳಿಕೆಯನ್ನು ಲಗತ್ತಿಸಿದ್ದಾರೆ.

ಇದನ್ನೂ ಓದಿ: ತ್ರಿಪುರಾ ಹಿಂಸಾಚಾರ ವರದಿ ಮಾಡಿದ ಪತ್ರಕರ್ತೆಯರ ಮೇಲೆ ದೂರು ದಾಖಲು

 ದೆಹಲಿ ಮೂಲದ ವರದಿಗಾರರಾದ 21 ವರ್ಷದ ಸಮೃದ್ಧಿ ಸಕುನಿಯಾ ಮತ್ತು 25 ವರ್ಷದ ಸ್ವರ್ಣ ಝಾ ವಿರುದ್ಧ ಭಾರತೀಯ ದಂಡ ಸಂಹಿತೆಯ 120B (ಕ್ರಿಮಿನಲ್ ಪಿತೂರಿ), 153 (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ) ಮತ್ತು 504 ಸೆಕ್ಷನ್ ಅಡಿಗಳಲ್ಲಿ ಫಾಟಿಕ್ರೋಯ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ನವೆಂಬರ್ 13 ರಂದು ಫಾಟಿಕ್ರೋಯ್‌ನಲ್ಲಿರುವ ಮುಸ್ಲಿಂ ಮನೆಗಳಿಗೆ ಭೇಟಿ ನೀಡಿದಾಗ ಇಬ್ಬರು ಪತ್ರಕರ್ತರು “ಹಿಂದೂಗಳು ಮತ್ತು ತ್ರಿಪುರಾ ಸರ್ಕಾರದ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ” ಎಂದು ಆರೋಪಿಸಿ ಕಾಂಚನ್ ದಾಸ್ ಎಂಬವರು ದೂರು ದಾಖಲಿಸಿದ್ದಾರೆ.

ಪತ್ರಕರ್ತೆ ಸಕುನಿಯಾ, ಅಕ್ಟೋಬರ್ 24 ರಂದು ಉನಕೋಟಿಯ ಪೌಲ್ ಬಜಾರ್‌ನಲ್ಲಿ ಮಸೀದಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಎಚ್‌ಪಿ ಮತ್ತು ಬಜರಂಗದಳ ಸಂಘಟನೆ ಹೆಸರನ್ನು ಸೇರಿಸಿದ್ದಾರೆ. ಇದು ತ್ರಿಪುರಾದಲ್ಲಿ ಕೋಮು ಸೌಹಾರ್ದವನ್ನು ಹಾಳು ಮಾಡುವ “ಅಪರಾಧದ ಪಿತೂರಿ”ಯ ಭಾಗವಾಗಿದೆ ಎಂದು ದಾಸ್ ಆರೋಪಿಸಿದ್ದಾರೆ.

ನವೆಂಬರ್ 12 ರಂದು, ಸಮೃದ್ಧಿ ಸಕುನಿಯಾ ಮತ್ತು ಸ್ವರ್ಣ ಝಾ ಅವರು ತ್ರಿಪುರಾದ ಗೋಮತಿ ಜಿಲ್ಲೆಯಲ್ಲಿ ಬೆಂಕಿಗೆ ಆಹುತಿಯಾಗಿರುವ ಮಸೀದಿಯ ಬಗ್ಗೆ ವರದಿ ಮಾಡಿದ್ದರು. ಶನಿವಾರ ಇಬ್ಬರು ವರದಿಗಾರರು ಇಲ್ಲಿ ಇನ್ನೊಂದು ಮಸೀದಿ ಮತ್ತು ಮುಸ್ಲಿಮರ ಮನೆಗಳಿಗೆ ಹಾನಿಯಾಗಿರುವದನ್ನು ವರದಿ ಮಾಡಲು ಧರ್ಮನಗರಕ್ಕೆ ಬಂದಿದ್ದರು. ತ್ರಿಪುರಾದಲ್ಲಿ ಅಕ್ಟೋಬರ್ 26 ರಂದು ನಡೆದ ವಿಎಚ್‌ಪಿ ರ್‍ಯಾಲಿ ಬಳಿಕ ಹಿಂಸಾಚಾರ ಆರಂಭವಾಗಿದೆ.

ಆದರೆ, ಬಿಜೆಪಿ ಆಡಳಿತವಿರುವ ತ್ರಿಪುರಾದಲ್ಲಿ ಮಸೀದಿಯನ್ನು ಧ್ವಂಸ ಮಾಡಿರುವ ವರದಿಗಳನ್ನು ಗೃಹ ಸಚಿವಾಲಯ ತಳ್ಳಿಹಾಕಿದೆ. “ತ್ರಿಪುರಾದ ಗೋಮತಿ ಜಿಲ್ಲೆಯ ಕಕ್ರಾಬನ್ ಪ್ರದೇಶದಲ್ಲಿ ಮಸೀದಿಯನ್ನು ಹಾನಿಗೊಳಿಸಲಾಗಿದೆ ಮತ್ತು ಧ್ವಂಸಗೊಳಿಸಲಾಗಿದೆ ಎಂದು ವರದಿ ಪ್ರಸಾರವಾಗಿವೆ. ಈ ಸುದ್ದಿಗಳು ನಕಲಿ ಮತ್ತು ಸಂಪೂರ್ಣ ಸುಳ್ಳು” ಎಂದಿದೆ.


ಇದನ್ನೂ ಓದಿ: ’ಯುಎಪಿಎಯಿಂದ ಸತ್ಯವನ್ನು ಮೌನವಾಗಿಸಲಾಗದು’: ತ್ರಿಪುರಾ ಹಿಂಸಾಚಾರಕ್ಕೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಬಂದನ ಕಂಡನಾರ್ಹ. ಈ ಇಬ್ಬರು ಪತ್ರಕರ್ತೆಯರನ್ನು ಈ ಕೂಡಲೇ ಬಿಡುಗಡೆ ಮಾಡಬೇಕು.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...