Homeಎಕಾನಮಿ#BoycottJio ಜಿಯೊ ತೊಲಗಿಸಿ ಟ್ರೆಂಡಿಂಗ್‌. ಏಕೆ ಗೊತ್ತಾ?

#BoycottJio ಜಿಯೊ ತೊಲಗಿಸಿ ಟ್ರೆಂಡಿಂಗ್‌. ಏಕೆ ಗೊತ್ತಾ?

- Advertisement -
- Advertisement -

ಜೀವನ ಪೂರ್ತಿ ಉಚಿತ ಕರೆಗಳು ಎಂದು ಘೋಷಿಸಿದ್ದ ಜಿಯೋ ರಿಲೆಯನ್ಸ್‌ ಈಗ ಇದ್ದಕ್ಕಿದ್ದಂತೆಯೇ ಇತರ ನೆಟ್‌ವರ್ಕ್‌ಗೆ ಒಂದು ನಿಮಿಷಕ್ಕೆ 6ಪೈಸೆ ದರ ನಿಗದಿ ಮಾಡಿದೆ. ಇದು ಜಿಯೋ ಬಳಕೆದಾರರದಲ್ಲಿ ತೀವ್ರ ಆಕ್ರೋಶ ಹುಟ್ಟಿಸಿದ್ದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಿಯೋ ತನ್ನ ಹೊಸ ಪ್ಲಾನ್‌ ಅನ್ನು ಘೋಸಿಸುತ್ತಿದ್ದಂತೆಯೇ #BoycottJio ಜಿಯೊ ತೊಲಗಿಸಿ ಟ್ರೆಂಡಿಂಗ್‌ ಆಗಿದೆ. ಇದೇ ಸಂದರ್ಭದಲ್ಲಿ BSNL ಕೂಡ ಟ್ರೆಂಡಿಂಗ್‌ ಆಗಿದ್ದು ಜಿಯೋ ತ್ಯಜಿಸಿ ಬಿಎಸ್‌ಎನ್‌ಎಲ್‌ ಉಳಿಸಿ ಎಂದು ನೆಟ್ಟಿಗರು ಆಗ್ರಹಿಸಿದ್ದಾರೆ.

ವಿಪರ್ಯಾಸವೆಂದರೆ ಬಹಳಷ್ಟು ಜನರು ಜಿಯೋ ನೆಟ್‌ವರ್ಕ್ ಬಳಸಿಯೇ #BoycottJio ಟ್ರೆಂಡಿಂಗ್ ಮಾಡುತ್ತಿರುವುದು ಮಜವಾಗಿದೆ ಎಂದು ಕೆಲವರು ಕಿಚಾಯಿಸಿದ್ದಾರೆ.

ಇದೆಲ್ಲವೂ ಪೂರ್ವಯೋಜಿತವಾಗಿದೆ…

ಉಚಿತ ಡೇಟಾವನ್ನು ನೀಡಿ
ಬಳಕೆದಾರರ ಸಂಖ್ಯೆಯನ್ನು ಹೆಚ್ಚಿಸಿ
ಅವರನ್ನು ಇಂಟರ್ನೆಟ್‌ಗೆ ವ್ಯಸನಿಯನ್ನಾಗಿ ಮಾಡಿ
ಉಚಿತ ಡೇಟಾವನ್ನು ವಿಸ್ತರಿಸಿ
1 ಕುಟುಂಬಕ್ಕೆ 1 ಫೋನ್‌ನಿಂದ 1 ವ್ಯಕ್ತಿಗೆ 1 ಫೋನ್‌ ಬಂದು
ಪೋರ್ಟಬಿಲಿಟಿಯನ್ನು ಪ್ರೋತ್ಸಾಹಿಸಿ
ಸಣ್ಣ ಮೊತ್ತವನ್ನು ವಿಧಿಸಿ
ಏಕಸ್ವಾಮ್ಯವನ್ನು ರಚಿಸಿ
ಶುಲ್ಕವನ್ನು ಹೆಚ್ಚಿಸಿ
ಎಲ್ಲಾ ಸೇವೆಗೂ ಶುಲ್ಕ ವಿಧಿಸಿ
ನಂತರ ಉಚಿತ ಬಳಕೆ ಇಲ್ಲ ಎಂದು ಘೋಷಿಸುವುದು ಪೂರ್ವಯೋಜಿತವಲ್ಲವೇ ಎಂದು ಡಿಗಿ ಚಂದ್ರುರವರು ಟ್ವಿಟ್ಟರ್‌ನಲ್ಲಿ ಕಿಡಿಕಾರಿದ್ದಾರೆ.

ಮೊದಲು ಅವರು ಅದನ್ನು ಉಚಿತ/ಅಗ್ಗವಾಗಿ ನೀಡುತ್ತಾರೆ.
ಜನರು ಕುರಿಗಳಂತೆ ಸೇರುತ್ತಾರೆ.
ಇತರ ಕಂಪನಿಗಳು ಭಾರಿ ನಷ್ಟವನ್ನು ಅನುಭವಿಸುತ್ತಾರೆ ಮತ್ತು ಕಾರ್ಯಾಚರಣೆಯನ್ನು ಮುಚ್ಚಬೇಕಾಗುತ್ತದೆ.
ಏಕಸ್ವಾಮ್ಯದ ಹತ್ತಿರ ತಲುಪಿದೆ.
ನಂತರ, ನಿಮಗೆ ಯಾವುದೇ ವಿಶ್ವಾಸಾರ್ಹ ಆಯ್ಕೆ ಇಲ್ಲದಿದ್ದಾಗ ನೀವು ಅವರ ನಿಜವಾದ ಬಣ್ಣಗಳನ್ನು ನೋಡುತ್ತೀರಿ ಎಂದು ಕೌ ಮಾಮ್‌ರವರು ಟ್ವೀಟ್‌ ಮಾಡಿದ್ದಾರೆ.

ದಯವಿಟ್ಟು ಹುಡುಗರೇ …. ಬಿಎಸ್ಎನ್ಎಲ್‌ಗೆ ಬದಲಿಸಿ ಮತ್ತು ಈ ಅನಾರೋಗ್ಯದ ಉದ್ಯಮವನ್ನು ಪುನರುಜ್ಜೀವನಗೊಳಿಸಲು ಸಹಾಯ ಮಾಡಿ.

ಇದರಿಂದ ನೀವು ಆರ್ಥಿಕತೆಗೆ ಸಹಾಯ ಮಾಡುತ್ತೀರಿ ಮತ್ತು ಚಿಂತೆಗೀಡಾದ ಲಕ್ಷಾಂತರ ಬಿಎಸ್‌ಎನ್‌ಎಲ್ ಸಿಬ್ಬಂದಿ ನಿಮಗೆ ಆಶೀರ್ವಾದ ನೀಡುತ್ತಾರೆ.? ಎಂದು ಮತ್ತೊಬ್ಬರು ಕಿಚಾಯಿಸಿದ್ದಾರೆ..

ಈ ನಡುವೆ ಏರ್‌ಟೆಲ್ ಕಂಪನಿಯ ಸಂಭ್ರಮಚರಣೆ ಈ ರೀತಿ ಇರುತ್ತದೆ..

ಇನ್ನು ಜಿಯೋ ಮತ್ತು ಮುಖೇಶ್ ಅಂಬಾನಿ ವಿರುದ್ಧ ಕ್ಷಣಾರ್ಧದಲ್ಲಿ ಸಾವಿರಾರು ಮೀಮ್ಸ್‌ಗಳು ತಯಾರಾಗಿದ್ದು ಭಾರೀ ಟ್ರೋಲ್‌ಗಳು ಆರಂಭವಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...