Homeಮುಖಪುಟಸಿಜೆಐ ಚಂದ್ರಚೂಡ್‌ ವಿರುದ್ಧ ಮುಗಿಬಿದ್ದ ಟ್ರೋಲ್‌ ಪಡೆ; ಕ್ರಮಕ್ಕೆ ಆಗ್ರಹಿಸಿ ಪ್ರತಿಪಕ್ಷಗಳಿಂದ ರಾಷ್ಟ್ರಪತಿಗೆ ಪತ್ರ

ಸಿಜೆಐ ಚಂದ್ರಚೂಡ್‌ ವಿರುದ್ಧ ಮುಗಿಬಿದ್ದ ಟ್ರೋಲ್‌ ಪಡೆ; ಕ್ರಮಕ್ಕೆ ಆಗ್ರಹಿಸಿ ಪ್ರತಿಪಕ್ಷಗಳಿಂದ ರಾಷ್ಟ್ರಪತಿಗೆ ಪತ್ರ

- Advertisement -
- Advertisement -

“ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ.ಚಂದ್ರಚೂಡ್‌ ಅವರ ವಿರುದ್ಧ ಆನ್‌ಲೈನ್‌ ಟ್ರೋಲಿಂಗ್‌ ನಡೆಯುತ್ತಿದ್ದು, ತಕ್ಷಣ ಕ್ರಮ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿ 13 ವಿರೋಧ ಪಕ್ಷಗಳ ನಾಯಕರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ.

“ಮಹಾರಾಷ್ಟ್ರದಲ್ಲಿ ಆಗಿರುವ ಸರ್ಕಾರ ರಚನೆ ಮತ್ತು ರಾಜ್ಯಪಾಲರ ಪಾತ್ರದ ವಿಷಯದಲ್ಲಿನ ಮಹತ್ವದ ಸಾಂವಿಧಾನಿಕ ಪ್ರಶ್ನೆಗಳು ಸುಪ್ರೀಂಕೋರ್ಟ್‌ನ ಮುಂದಿವೆ. ಭಾರತದ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠವು ವಿಚಾರಣೆ ನಡೆಸುತ್ತಿದೆ ಎಂದು ನಮಗೆಲ್ಲರಿಗೂ ತಿಳಿದಿದೆ. ಈ ವಿಷಯ ನ್ಯಾಯಸಮ್ಮತವಾದದ್ದು. ಆದರೆ ಮಹಾರಾಷ್ಟ್ರದ ಆಡಳಿತ ಪಕ್ಷದ ಹಿತಾಸಕ್ತಿಗಳಿಗೆ ಸಹಾನುಭೂತಿ ಹೊಂದಿರುವ ಟ್ರೋಲ್ ಪಡೆಯು ಸಿಜೆಐ ವಿರುದ್ಧ ಆಕ್ರಮಣವನ್ನು ಪ್ರಾರಂಭಿಸಿದೆ” ಎಂದು ಪತ್ರದಲ್ಲಿ ಪ್ರಸ್ತಾಪಿಸಲಾಗಿದೆ.

“ಇಲ್ಲಿ ಬಳಸಲಾಗುತ್ತಿರುವ ಪದಗಳು ಮತ್ತು ವಿಷಯಗಳು ಅಶ್ಲೀಲವೂ ಶೋಚನೀಯವೂ ಆಗಿವೆ. ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಇಂತಹ ಟ್ರೋಲ್‌ಗಳನ್ನು ಲಕ್ಷಾಂತರ ಜನರು ವೀಕ್ಷಿಸುತ್ತಿದ್ದಾರೆ” ಎಂದು ಮಾರ್ಚ್ 16ರಂದು ಬರೆದಿರುವ ಪತ್ರದಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ.

ಪತ್ರವನ್ನು ಕಾಂಗ್ರೆಸ್ ಸಂಸದ ವಿವೇಕ್ ಟಂಖಾ ಬರೆದಿದ್ದಾರೆ. ಕಾಂಗ್ರೆಸ್‌ ಸಂಸದರಾದ ದಿಗ್ವಿಜಯ ಸಿಂಗ್, ಶಕ್ತಿಸಿನ್ಹ್ ಗೋಹಿಲ್, ಪ್ರಮೋದ್ ತಿವಾರಿ, ಅಮೀ ಯಾಗ್ನಿಕ್, ರಂಜಿತ್‌ ರಂಜನ್, ಇಮ್ರಾನ್ ಪ್ರತಾಪ್‌ಗರ್ಹಿ, ಆಮ್ ಆದ್ಮಿ ಪಕ್ಷದ ರಾಘವ್ ಚಡ್ಡಾ, ಶಿವಸೇನಾ (ಯುಬಿಟಿ) ಸದಸ್ಯ ಪ್ರಿಯಾಂಕಾ ಚತುರ್ವೇದಿ ಮತ್ತು ಸಮಾಜವಾದಿ ಪಕ್ಷದ ಜಯಾ ಬಚ್ಚನ್, ರಾಮ್ ಗೋಪಾಲ್ ಯಾದವ್ ಈ ಪತ್ರವವನ್ನು ಬೆಂಬಲಿಸಿದ್ದಾರೆ. ಇದೇ ವಿಚಾರವಾಗಿ ಟಂಖಾ ಅವರು ಭಾರತದ ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಅವರಿಗೆ ಪ್ರತ್ಯೇಕವಾಗಿ ಪತ್ರ ಬರೆದಿದ್ದಾರೆ.

ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ಉರುಳಲು ಕಾರಣವಾದ ವಿದ್ಯಮಾನಕ್ಕೆ ಸಂಬಂಧಿಸಿದಂತೆ, ಬಹುಮತ ಸಾಬೀತಿಗೆ ಆಹ್ವಾನ ನೀಡಿದ ಮಾಜಿ ಗವರ್ನರ್ ಭಗತ್ ಸಿಂಗ್ ಕೊಶ್ಯಾರಿ ಅವರ ಕ್ರಮದ ಸಿಂಧುತ್ವವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಪ್ರಕರಣದ ವಿಚಾರಣೆ ಆರಂಭವಾದ ನಂತರ ಸಿಜೆಐ ಮತ್ತು ನ್ಯಾಯಾಂಗದ ಮೇಲೆ ಆನ್‌ಲೈನ್ ಟ್ರೋಲ್‌ಗಳು ನಡೆಯುತ್ತಿವೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ.

ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರವನ್ನು ಉರುಳಿಸಿ ಏಕನಾಥ್‌ ಶಿಂಧೆಯವರು ಮುಖ್ಯಮಂತ್ರಿಯಾದ ಬಳಿಕ ಮಹಾರಾಷ್ಟ್ರದ ಆಡಳಿತ ಪಕ್ಷವಾದ ಶಿವಸೇನೆ ಎರಡು ಬಣಗಳಾಯಿತು. ಒಂದು ಶಿಂಧೆ ಬಣವಾದರೆ, ಮತ್ತೊಂದು ಉದ್ಧವ್ ಬಣವಾಗಿದೆ.

ಇದನ್ನೂ ಓದಿರಿ: ಉರೀಗೌಡ ನಂಜೇಗೌಡ ಸಿನಿಮಾ ಶೀರ್ಷಿಕೆ ನೋಂದಣಿಗೆ ಮುಂದಾದ ಬಿಜೆಪಿ: ಹೆಚ್.ಡಿ ಕುಮಾರಸ್ವಾಮಿ ಕಿಡಿ

ನವೆಂಬರ್ 26, 2021ರಂದು ಸಂವಿಧಾನ ದಿನದಂದು ಮಾತನಾಡಿದ್ದ ಮಾಜಿ ಸಿಜೆಐ ಎನ್.ವಿ.ರಮಣ ಅವರು “ಮಾಧ್ಯಮಗಳಲ್ಲಿ, ವಿಶೇಷವಾಗಿ ಸಾಮಾಜಿಕ ಮಾಧ್ಯಮದಲ್ಲಿ ನ್ಯಾಯಾಂಗದ ಮೇಲೆ ದಾಳಿಗಳು ಹೆಚ್ಚಿವೆ” ಎಂದು ಕಳವಳ ವ್ಯಕ್ತಪಡಿಸಿದ್ದರು.

ಈ ದಾಳಿಗಳು ಪ್ರಯೋಜಿತವಾಗಿವೆ ಎಂದು ತೋರುತ್ತಿದೆ. ಕೇಂದ್ರೀಯ ಏಜೆನ್ಸಿಗಳು ಪರಿಣಾಮಕಾರಿಯಾಗಿ ಅವುಗಳನ್ನು ನಿಭಾಯಿಸಬೇಕು ಎಂದು ಅವರು ಆಶಿಸಿದ್ದರು.

ಸಾಮಾಜಿಕ ಮಾಧ್ಯಮಗಳಲ್ಲಿ ನ್ಯಾಯಾಧೀಶರ ಮೇಲೆ ಮಾಡುವ ಟೀಕೆಗಳಿಗೆ ಕಡಿವಾಣ ಹಾಕಲು ಕಾನೂನು ರೂಪಿಸುವಂತೆ ಕೋರಿ ಸಿಜೆಐ ರಮಣ ಅವರು ಪತ್ರ ಬರೆದಿದ್ದಾರೆ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಹೇಳಿದ್ದರು. ಆದಾಗ್ಯೂ “ಕಾನೂನಿನ ಮೂಲಕ ನ್ಯಾಯಾಧೀಶರ ಮೇಲಿನ ಟೀಕೆಗಳನ್ನು ನಿರ್ಬಂಧಿಸುವುದು ಕಾರ್ಯಸಾಧ್ಯವಲ್ಲ” ಎಂದು ರಿಜಿಜು ಸ್ಪಷ್ಟಪಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...