Homeಮುಖಪುಟಸಿಜೆಐ ಚಂದ್ರಚೂಡ್‌ ವಿರುದ್ಧ ಮುಗಿಬಿದ್ದ ಟ್ರೋಲ್‌ ಪಡೆ; ಕ್ರಮಕ್ಕೆ ಆಗ್ರಹಿಸಿ ಪ್ರತಿಪಕ್ಷಗಳಿಂದ ರಾಷ್ಟ್ರಪತಿಗೆ ಪತ್ರ

ಸಿಜೆಐ ಚಂದ್ರಚೂಡ್‌ ವಿರುದ್ಧ ಮುಗಿಬಿದ್ದ ಟ್ರೋಲ್‌ ಪಡೆ; ಕ್ರಮಕ್ಕೆ ಆಗ್ರಹಿಸಿ ಪ್ರತಿಪಕ್ಷಗಳಿಂದ ರಾಷ್ಟ್ರಪತಿಗೆ ಪತ್ರ

- Advertisement -
- Advertisement -

“ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ.ಚಂದ್ರಚೂಡ್‌ ಅವರ ವಿರುದ್ಧ ಆನ್‌ಲೈನ್‌ ಟ್ರೋಲಿಂಗ್‌ ನಡೆಯುತ್ತಿದ್ದು, ತಕ್ಷಣ ಕ್ರಮ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿ 13 ವಿರೋಧ ಪಕ್ಷಗಳ ನಾಯಕರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ.

“ಮಹಾರಾಷ್ಟ್ರದಲ್ಲಿ ಆಗಿರುವ ಸರ್ಕಾರ ರಚನೆ ಮತ್ತು ರಾಜ್ಯಪಾಲರ ಪಾತ್ರದ ವಿಷಯದಲ್ಲಿನ ಮಹತ್ವದ ಸಾಂವಿಧಾನಿಕ ಪ್ರಶ್ನೆಗಳು ಸುಪ್ರೀಂಕೋರ್ಟ್‌ನ ಮುಂದಿವೆ. ಭಾರತದ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠವು ವಿಚಾರಣೆ ನಡೆಸುತ್ತಿದೆ ಎಂದು ನಮಗೆಲ್ಲರಿಗೂ ತಿಳಿದಿದೆ. ಈ ವಿಷಯ ನ್ಯಾಯಸಮ್ಮತವಾದದ್ದು. ಆದರೆ ಮಹಾರಾಷ್ಟ್ರದ ಆಡಳಿತ ಪಕ್ಷದ ಹಿತಾಸಕ್ತಿಗಳಿಗೆ ಸಹಾನುಭೂತಿ ಹೊಂದಿರುವ ಟ್ರೋಲ್ ಪಡೆಯು ಸಿಜೆಐ ವಿರುದ್ಧ ಆಕ್ರಮಣವನ್ನು ಪ್ರಾರಂಭಿಸಿದೆ” ಎಂದು ಪತ್ರದಲ್ಲಿ ಪ್ರಸ್ತಾಪಿಸಲಾಗಿದೆ.

“ಇಲ್ಲಿ ಬಳಸಲಾಗುತ್ತಿರುವ ಪದಗಳು ಮತ್ತು ವಿಷಯಗಳು ಅಶ್ಲೀಲವೂ ಶೋಚನೀಯವೂ ಆಗಿವೆ. ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಇಂತಹ ಟ್ರೋಲ್‌ಗಳನ್ನು ಲಕ್ಷಾಂತರ ಜನರು ವೀಕ್ಷಿಸುತ್ತಿದ್ದಾರೆ” ಎಂದು ಮಾರ್ಚ್ 16ರಂದು ಬರೆದಿರುವ ಪತ್ರದಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ.

ಪತ್ರವನ್ನು ಕಾಂಗ್ರೆಸ್ ಸಂಸದ ವಿವೇಕ್ ಟಂಖಾ ಬರೆದಿದ್ದಾರೆ. ಕಾಂಗ್ರೆಸ್‌ ಸಂಸದರಾದ ದಿಗ್ವಿಜಯ ಸಿಂಗ್, ಶಕ್ತಿಸಿನ್ಹ್ ಗೋಹಿಲ್, ಪ್ರಮೋದ್ ತಿವಾರಿ, ಅಮೀ ಯಾಗ್ನಿಕ್, ರಂಜಿತ್‌ ರಂಜನ್, ಇಮ್ರಾನ್ ಪ್ರತಾಪ್‌ಗರ್ಹಿ, ಆಮ್ ಆದ್ಮಿ ಪಕ್ಷದ ರಾಘವ್ ಚಡ್ಡಾ, ಶಿವಸೇನಾ (ಯುಬಿಟಿ) ಸದಸ್ಯ ಪ್ರಿಯಾಂಕಾ ಚತುರ್ವೇದಿ ಮತ್ತು ಸಮಾಜವಾದಿ ಪಕ್ಷದ ಜಯಾ ಬಚ್ಚನ್, ರಾಮ್ ಗೋಪಾಲ್ ಯಾದವ್ ಈ ಪತ್ರವವನ್ನು ಬೆಂಬಲಿಸಿದ್ದಾರೆ. ಇದೇ ವಿಚಾರವಾಗಿ ಟಂಖಾ ಅವರು ಭಾರತದ ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಅವರಿಗೆ ಪ್ರತ್ಯೇಕವಾಗಿ ಪತ್ರ ಬರೆದಿದ್ದಾರೆ.

ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ಉರುಳಲು ಕಾರಣವಾದ ವಿದ್ಯಮಾನಕ್ಕೆ ಸಂಬಂಧಿಸಿದಂತೆ, ಬಹುಮತ ಸಾಬೀತಿಗೆ ಆಹ್ವಾನ ನೀಡಿದ ಮಾಜಿ ಗವರ್ನರ್ ಭಗತ್ ಸಿಂಗ್ ಕೊಶ್ಯಾರಿ ಅವರ ಕ್ರಮದ ಸಿಂಧುತ್ವವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಪ್ರಕರಣದ ವಿಚಾರಣೆ ಆರಂಭವಾದ ನಂತರ ಸಿಜೆಐ ಮತ್ತು ನ್ಯಾಯಾಂಗದ ಮೇಲೆ ಆನ್‌ಲೈನ್ ಟ್ರೋಲ್‌ಗಳು ನಡೆಯುತ್ತಿವೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ.

ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರವನ್ನು ಉರುಳಿಸಿ ಏಕನಾಥ್‌ ಶಿಂಧೆಯವರು ಮುಖ್ಯಮಂತ್ರಿಯಾದ ಬಳಿಕ ಮಹಾರಾಷ್ಟ್ರದ ಆಡಳಿತ ಪಕ್ಷವಾದ ಶಿವಸೇನೆ ಎರಡು ಬಣಗಳಾಯಿತು. ಒಂದು ಶಿಂಧೆ ಬಣವಾದರೆ, ಮತ್ತೊಂದು ಉದ್ಧವ್ ಬಣವಾಗಿದೆ.

ಇದನ್ನೂ ಓದಿರಿ: ಉರೀಗೌಡ ನಂಜೇಗೌಡ ಸಿನಿಮಾ ಶೀರ್ಷಿಕೆ ನೋಂದಣಿಗೆ ಮುಂದಾದ ಬಿಜೆಪಿ: ಹೆಚ್.ಡಿ ಕುಮಾರಸ್ವಾಮಿ ಕಿಡಿ

ನವೆಂಬರ್ 26, 2021ರಂದು ಸಂವಿಧಾನ ದಿನದಂದು ಮಾತನಾಡಿದ್ದ ಮಾಜಿ ಸಿಜೆಐ ಎನ್.ವಿ.ರಮಣ ಅವರು “ಮಾಧ್ಯಮಗಳಲ್ಲಿ, ವಿಶೇಷವಾಗಿ ಸಾಮಾಜಿಕ ಮಾಧ್ಯಮದಲ್ಲಿ ನ್ಯಾಯಾಂಗದ ಮೇಲೆ ದಾಳಿಗಳು ಹೆಚ್ಚಿವೆ” ಎಂದು ಕಳವಳ ವ್ಯಕ್ತಪಡಿಸಿದ್ದರು.

ಈ ದಾಳಿಗಳು ಪ್ರಯೋಜಿತವಾಗಿವೆ ಎಂದು ತೋರುತ್ತಿದೆ. ಕೇಂದ್ರೀಯ ಏಜೆನ್ಸಿಗಳು ಪರಿಣಾಮಕಾರಿಯಾಗಿ ಅವುಗಳನ್ನು ನಿಭಾಯಿಸಬೇಕು ಎಂದು ಅವರು ಆಶಿಸಿದ್ದರು.

ಸಾಮಾಜಿಕ ಮಾಧ್ಯಮಗಳಲ್ಲಿ ನ್ಯಾಯಾಧೀಶರ ಮೇಲೆ ಮಾಡುವ ಟೀಕೆಗಳಿಗೆ ಕಡಿವಾಣ ಹಾಕಲು ಕಾನೂನು ರೂಪಿಸುವಂತೆ ಕೋರಿ ಸಿಜೆಐ ರಮಣ ಅವರು ಪತ್ರ ಬರೆದಿದ್ದಾರೆ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಹೇಳಿದ್ದರು. ಆದಾಗ್ಯೂ “ಕಾನೂನಿನ ಮೂಲಕ ನ್ಯಾಯಾಧೀಶರ ಮೇಲಿನ ಟೀಕೆಗಳನ್ನು ನಿರ್ಬಂಧಿಸುವುದು ಕಾರ್ಯಸಾಧ್ಯವಲ್ಲ” ಎಂದು ರಿಜಿಜು ಸ್ಪಷ್ಟಪಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...