Homeಮುಖಪುಟಸಿಜೆಐ ಚಂದ್ರಚೂಡ್‌ ವಿರುದ್ಧ ಮುಗಿಬಿದ್ದ ಟ್ರೋಲ್‌ ಪಡೆ; ಕ್ರಮಕ್ಕೆ ಆಗ್ರಹಿಸಿ ಪ್ರತಿಪಕ್ಷಗಳಿಂದ ರಾಷ್ಟ್ರಪತಿಗೆ ಪತ್ರ

ಸಿಜೆಐ ಚಂದ್ರಚೂಡ್‌ ವಿರುದ್ಧ ಮುಗಿಬಿದ್ದ ಟ್ರೋಲ್‌ ಪಡೆ; ಕ್ರಮಕ್ಕೆ ಆಗ್ರಹಿಸಿ ಪ್ರತಿಪಕ್ಷಗಳಿಂದ ರಾಷ್ಟ್ರಪತಿಗೆ ಪತ್ರ

- Advertisement -
- Advertisement -

“ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ.ಚಂದ್ರಚೂಡ್‌ ಅವರ ವಿರುದ್ಧ ಆನ್‌ಲೈನ್‌ ಟ್ರೋಲಿಂಗ್‌ ನಡೆಯುತ್ತಿದ್ದು, ತಕ್ಷಣ ಕ್ರಮ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿ 13 ವಿರೋಧ ಪಕ್ಷಗಳ ನಾಯಕರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ.

“ಮಹಾರಾಷ್ಟ್ರದಲ್ಲಿ ಆಗಿರುವ ಸರ್ಕಾರ ರಚನೆ ಮತ್ತು ರಾಜ್ಯಪಾಲರ ಪಾತ್ರದ ವಿಷಯದಲ್ಲಿನ ಮಹತ್ವದ ಸಾಂವಿಧಾನಿಕ ಪ್ರಶ್ನೆಗಳು ಸುಪ್ರೀಂಕೋರ್ಟ್‌ನ ಮುಂದಿವೆ. ಭಾರತದ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠವು ವಿಚಾರಣೆ ನಡೆಸುತ್ತಿದೆ ಎಂದು ನಮಗೆಲ್ಲರಿಗೂ ತಿಳಿದಿದೆ. ಈ ವಿಷಯ ನ್ಯಾಯಸಮ್ಮತವಾದದ್ದು. ಆದರೆ ಮಹಾರಾಷ್ಟ್ರದ ಆಡಳಿತ ಪಕ್ಷದ ಹಿತಾಸಕ್ತಿಗಳಿಗೆ ಸಹಾನುಭೂತಿ ಹೊಂದಿರುವ ಟ್ರೋಲ್ ಪಡೆಯು ಸಿಜೆಐ ವಿರುದ್ಧ ಆಕ್ರಮಣವನ್ನು ಪ್ರಾರಂಭಿಸಿದೆ” ಎಂದು ಪತ್ರದಲ್ಲಿ ಪ್ರಸ್ತಾಪಿಸಲಾಗಿದೆ.

“ಇಲ್ಲಿ ಬಳಸಲಾಗುತ್ತಿರುವ ಪದಗಳು ಮತ್ತು ವಿಷಯಗಳು ಅಶ್ಲೀಲವೂ ಶೋಚನೀಯವೂ ಆಗಿವೆ. ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಇಂತಹ ಟ್ರೋಲ್‌ಗಳನ್ನು ಲಕ್ಷಾಂತರ ಜನರು ವೀಕ್ಷಿಸುತ್ತಿದ್ದಾರೆ” ಎಂದು ಮಾರ್ಚ್ 16ರಂದು ಬರೆದಿರುವ ಪತ್ರದಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ.

ಪತ್ರವನ್ನು ಕಾಂಗ್ರೆಸ್ ಸಂಸದ ವಿವೇಕ್ ಟಂಖಾ ಬರೆದಿದ್ದಾರೆ. ಕಾಂಗ್ರೆಸ್‌ ಸಂಸದರಾದ ದಿಗ್ವಿಜಯ ಸಿಂಗ್, ಶಕ್ತಿಸಿನ್ಹ್ ಗೋಹಿಲ್, ಪ್ರಮೋದ್ ತಿವಾರಿ, ಅಮೀ ಯಾಗ್ನಿಕ್, ರಂಜಿತ್‌ ರಂಜನ್, ಇಮ್ರಾನ್ ಪ್ರತಾಪ್‌ಗರ್ಹಿ, ಆಮ್ ಆದ್ಮಿ ಪಕ್ಷದ ರಾಘವ್ ಚಡ್ಡಾ, ಶಿವಸೇನಾ (ಯುಬಿಟಿ) ಸದಸ್ಯ ಪ್ರಿಯಾಂಕಾ ಚತುರ್ವೇದಿ ಮತ್ತು ಸಮಾಜವಾದಿ ಪಕ್ಷದ ಜಯಾ ಬಚ್ಚನ್, ರಾಮ್ ಗೋಪಾಲ್ ಯಾದವ್ ಈ ಪತ್ರವವನ್ನು ಬೆಂಬಲಿಸಿದ್ದಾರೆ. ಇದೇ ವಿಚಾರವಾಗಿ ಟಂಖಾ ಅವರು ಭಾರತದ ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಅವರಿಗೆ ಪ್ರತ್ಯೇಕವಾಗಿ ಪತ್ರ ಬರೆದಿದ್ದಾರೆ.

ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ಉರುಳಲು ಕಾರಣವಾದ ವಿದ್ಯಮಾನಕ್ಕೆ ಸಂಬಂಧಿಸಿದಂತೆ, ಬಹುಮತ ಸಾಬೀತಿಗೆ ಆಹ್ವಾನ ನೀಡಿದ ಮಾಜಿ ಗವರ್ನರ್ ಭಗತ್ ಸಿಂಗ್ ಕೊಶ್ಯಾರಿ ಅವರ ಕ್ರಮದ ಸಿಂಧುತ್ವವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಪ್ರಕರಣದ ವಿಚಾರಣೆ ಆರಂಭವಾದ ನಂತರ ಸಿಜೆಐ ಮತ್ತು ನ್ಯಾಯಾಂಗದ ಮೇಲೆ ಆನ್‌ಲೈನ್ ಟ್ರೋಲ್‌ಗಳು ನಡೆಯುತ್ತಿವೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ.

ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರವನ್ನು ಉರುಳಿಸಿ ಏಕನಾಥ್‌ ಶಿಂಧೆಯವರು ಮುಖ್ಯಮಂತ್ರಿಯಾದ ಬಳಿಕ ಮಹಾರಾಷ್ಟ್ರದ ಆಡಳಿತ ಪಕ್ಷವಾದ ಶಿವಸೇನೆ ಎರಡು ಬಣಗಳಾಯಿತು. ಒಂದು ಶಿಂಧೆ ಬಣವಾದರೆ, ಮತ್ತೊಂದು ಉದ್ಧವ್ ಬಣವಾಗಿದೆ.

ಇದನ್ನೂ ಓದಿರಿ: ಉರೀಗೌಡ ನಂಜೇಗೌಡ ಸಿನಿಮಾ ಶೀರ್ಷಿಕೆ ನೋಂದಣಿಗೆ ಮುಂದಾದ ಬಿಜೆಪಿ: ಹೆಚ್.ಡಿ ಕುಮಾರಸ್ವಾಮಿ ಕಿಡಿ

ನವೆಂಬರ್ 26, 2021ರಂದು ಸಂವಿಧಾನ ದಿನದಂದು ಮಾತನಾಡಿದ್ದ ಮಾಜಿ ಸಿಜೆಐ ಎನ್.ವಿ.ರಮಣ ಅವರು “ಮಾಧ್ಯಮಗಳಲ್ಲಿ, ವಿಶೇಷವಾಗಿ ಸಾಮಾಜಿಕ ಮಾಧ್ಯಮದಲ್ಲಿ ನ್ಯಾಯಾಂಗದ ಮೇಲೆ ದಾಳಿಗಳು ಹೆಚ್ಚಿವೆ” ಎಂದು ಕಳವಳ ವ್ಯಕ್ತಪಡಿಸಿದ್ದರು.

ಈ ದಾಳಿಗಳು ಪ್ರಯೋಜಿತವಾಗಿವೆ ಎಂದು ತೋರುತ್ತಿದೆ. ಕೇಂದ್ರೀಯ ಏಜೆನ್ಸಿಗಳು ಪರಿಣಾಮಕಾರಿಯಾಗಿ ಅವುಗಳನ್ನು ನಿಭಾಯಿಸಬೇಕು ಎಂದು ಅವರು ಆಶಿಸಿದ್ದರು.

ಸಾಮಾಜಿಕ ಮಾಧ್ಯಮಗಳಲ್ಲಿ ನ್ಯಾಯಾಧೀಶರ ಮೇಲೆ ಮಾಡುವ ಟೀಕೆಗಳಿಗೆ ಕಡಿವಾಣ ಹಾಕಲು ಕಾನೂನು ರೂಪಿಸುವಂತೆ ಕೋರಿ ಸಿಜೆಐ ರಮಣ ಅವರು ಪತ್ರ ಬರೆದಿದ್ದಾರೆ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಹೇಳಿದ್ದರು. ಆದಾಗ್ಯೂ “ಕಾನೂನಿನ ಮೂಲಕ ನ್ಯಾಯಾಧೀಶರ ಮೇಲಿನ ಟೀಕೆಗಳನ್ನು ನಿರ್ಬಂಧಿಸುವುದು ಕಾರ್ಯಸಾಧ್ಯವಲ್ಲ” ಎಂದು ರಿಜಿಜು ಸ್ಪಷ್ಟಪಡಿಸಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...