Homeಮುಖಪುಟಟ್ರೋಲ್ ಆಗುತ್ತಿರುವ ಅಜಿತ್ ಹನುಮಕ್ಕನವರ್: "ಏಜೆಂಟ್ ಅಜಿತ್" ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್

ಟ್ರೋಲ್ ಆಗುತ್ತಿರುವ ಅಜಿತ್ ಹನುಮಕ್ಕನವರ್: “ಏಜೆಂಟ್ ಅಜಿತ್” ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್

ಈ ವರದಿ ಬರೆಯುವ ವೇಳೆಗೆ #Agent_Ajith ಎಂಬ ಹ್ಯಾಶ್‌ಟ್ಯಾಗ್ ಬಳಸಿ ಸುಮಾರು 11,500 ಟ್ವಿಟ್ಟರ್ ಬಳಕೆದಾರರು ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಸುವರ್ಣ ಸುದ್ಧಿ ವಾಹಿನಿಯ ಮುಖ್ಯಸ್ಥರಾದ ಅಜಿತ್ ಹನುಮಕ್ಕವನರ್ ಟ್ವಿಟ್ಟರ್‌ನಲ್ಲಿ ಭಾರೀ ಟ್ರೋಲ್‌ ಆಗುತ್ತಿದ್ದು, ಏಜೆಂಟ್ ಅಜಿತ್ ಎಂದು ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್ ಆಗುತ್ತಿದೆ.

ಈ ವರದಿ ಬರೆಯುವ ವೇಳೆಗೆ #Agent_Ajith ಎಂಬ ಹ್ಯಾಶ್‌ಟ್ಯಾಗ್ ಬಳಸಿ ಸುಮಾರು 11,500 ಟ್ವಿಟ್ಟರ್ ಬಳಕೆದಾರರು ಟ್ವೀಟ್ ಮಾಡಿದ್ದಾರೆ.

ಡಾ.ಭರತಶ್ರೀ ಎಂಬುವವರು ಚಿತ್ರವೊಂದನ್ನು ಟ್ವೀಟ್ ಮಾಡಿ, “ಇಂದಿನ ಮಾಧ್ಯಮಗಳ ಮುಖ” ಎಂದು ಬರೆದುಕೊಂಡಿದ್ದಾರೆ. ಈ ಚಿತ್ರವು ರಿಪಬ್ಲಿಕ್ ಟಿ.ವಿಯ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿಯನ್ನು ಹೋಲುತ್ತಿದ್ದು, ಅವರು ಖಾಕಿ ಚಡ್ಡಿ ಹಾಕಿಕೊಂಡು ಕುಳಿತಿರುವಂತೆ ಎಡಿಟ್ ಮಾಡಲಾಗಿದೆ.

ಇದನ್ನೂ ಓದಿ :ಮೋದಿ ಸರ್ಕಾರ ಭಾರತವನ್ನು ಪ್ರಪಾತಕ್ಕೆ ತಳ್ಳಿದೆ, ಮಾಧ್ಯಮಗಳು ’ಸಬ್‌ ಚಂಗಾಸಿ’ ಎನ್ನುತ್ತಿವೆ: ರಾಹುಲ್

ಅನಿಲ್‌ ಕುಮಾರ್ ಎಂಬುವವರು ಟ್ವೀಟ್ ಮಾಡಿದ್ದು, “ನಿರುದ್ಯೋಗದ ಬಗ್ಗೆ ಚರ್ಚಿಸದ ಅಜಿತ್‌ಗೆ ನಾಚಿಕೆಯಾಗಬೇಕು. ಬಿಜೆಪಿಯ ಚಮಚಾಗಿರಿ” ಎಂದು ಬರೆದುಕೊಂಡಿದ್ದು, ಸುವರ್ಣ ಸುದ್ಧಿ ವಾಹಿನಿಯಲ್ಲಿ ಅಜಿತ್ ಹನುಮಕ್ಕನವರ್ ಚರ್ಚಿಸಲಾದ ಮತ್ತು ಪ್ರಸಾರವಾದ ಕಾರ್ಯಕ್ರಮಗಳ ಬಗ್ಗೆ ಒಂದು ಗ್ರಾಫ್‌ ಅನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ, ನಿರುದ್ಯೋಗ ಸಮಸ್ಯೆ, ರೈತರ ಆತ್ಮಹತ್ಯೆ, ಆರ್ಥಿಕ ಕುಸಿತ, ಚೀನಾ ಸಮಸ್ಯೆ, ಕೊರೊನಾ ನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯ, ಭಾರತದ ಗಡಿ ಆಕ್ರಮಣ ಮಾಡಿರುವ ಚೀನಾ ಸೇರಿದಂತೆ ಮುಂತಾದ ಸಮಸ್ಯೆಗಳ ಬಗ್ಗೆ ಚರ್ಚಿಸಿಯೇ ಇಲ್ಲ ಎಂದು ತೋರಿಸಲಾಗಿದೆ. ಇನ್ನು ಇವರು ಚರ್ಚಿಸಿರುವ ವಿಷಯಗಳು, ಲಾಕ್‌ಡೌನ್ ಮುಂದೂಡಿಕೆ, ಸ್ಯಾಂಡಲ್‌ವುಡ್ ಡ್ರಗ್ ಮಾಫಿಯಾ, ತಬ್ಲಿಘಿಗಳು, ವಿರೋಧ ಪಕ್ಷಗಳ ಕುರಿತು, ಜಿಮ್, ವಿದ್ಯಾರ್ಥಿಗಳು, 20 ಲಕ್ಷ ಕೋಟಿ ಪ್ಯಾಕೇಜ್, ಧರ್ಮ ಮತ್ತು ಧಾರ್ಮಿಕತೆ, ರಾಮಮಂದಿರದ ಬಗ್ಗೆ ಎಂದು ಗ್ರಾಫ್ ಹೇಳುತ್ತದೆ.

ಇದನ್ನೂ ಓದಿ :ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಮಾಧ್ಯಮಗಳು ಸುಳ್ಳು ಹೇಳುತ್ತಿವೆ: ಸಿಬಿಐ

ಇನ್ನೂ ಸಾವಿರಾರು ಜನರು ಏಜೆಂಟ್ ಅಜಿತ್ ಎಂದು ಟ್ವೀಟ್ ಮಾಡಿದ್ದು, ರಿಪಬ್ಲಿಕ್ ಟಿವಿಯ ಅರ್ನಾಬ್‌ ಗೋಸ್ವಾಮಿಗೆ ಹೋಲಿಸಿದ್ದಾರೆ. ಇನ್ನೂ ಕೆಲವರು ಅಜಿತ್, ಬಿಜೆಪಿ ನಾಯಕರೊಂದಿಗೆ ಹೊಟೆಲ್ ಒಂದರಲ್ಲಿ ತೆಗೆದುಕೊಂಡಿರುವ ಚಿತ್ರಗಳನ್ನು ಹಾಕಿ, ಬಿಜೆಪಿಯ ಏಜೆಂಟ್ ಎಂದು ಟ್ವೀಟ್ ಮಾಡಿದ್ದಾರೆ. ಇನ್ನೂ ಕೆಲವರು ಇವರನ್ನು ಪೇಯ್ಡ್‌ ಮೆನ್ ಎಂದು ಕರೆದಿದ್ದಾರೆ.


ಇದನ್ನೂ ಓದಿ :ಕೊರೊನಾ, ನಿರುದ್ಯೋಗದ ಕುರಿತು ಎಚ್ಚರಿಸಿದ್ದೆ, ಮಾಧ್ಯಮಗಳು ಅಣಕಿಸಿದ್ದವು: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...