Homeಮುಖಪುಟದೇಶವನ್ನುದ್ದೇಶಿಸಿ ಮೋದಿ ಭಾಷಣಕ್ಕೆ ಟ್ರೋಲ್: ನೆಟ್ಟಿಗರ ಪ್ರತಿಕ್ರಿಯೆ ಹೀಗಿದೆ!

ದೇಶವನ್ನುದ್ದೇಶಿಸಿ ಮೋದಿ ಭಾಷಣಕ್ಕೆ ಟ್ರೋಲ್: ನೆಟ್ಟಿಗರ ಪ್ರತಿಕ್ರಿಯೆ ಹೀಗಿದೆ!

ಗಡ್ಡ ಬೆಳೆಸುವುದು ಹೇಗೆ? ಎಂಬ ಟಿಪ್ಸ್‌ಗಳಿಗಾಗಿ ಇಂದು ಸಂಜೆ 6 ಗಂಟೆಗೆ ಮೋದಿ ಭಾಷಣ ಕೇಳಿ ಎಂದು ಟ್ವಿಟ್ಟರ್‌ ಬಳಕೆದಾರರೊಬ್ಬರು ವ್ಯಂಗ್ಯವಾಡಿದ್ದಾರೆ.

- Advertisement -
- Advertisement -

ಇಂದು ಸಂಜೆ 6 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಘೋಷಿಸಿದ್ದೆ ತಡ ನೆಟ್ಟಿಗರು ಥರೇಹವಾರಿ ಪ್ರತಿಕ್ರಿಯೆ ನೀಡುತ್ತಿದ್ದಾರೆ.

ಪ್ರಧಾನಿ ಟ್ವೀಟ್‌ಗೆ ಕೂಡಲೇ ಪ್ರತಿಕ್ರಿಯಿಸಿದ ಸಾಮಾಜಿಕ ಕಾರ್ಯಕರ್ತೆ ಮತ್ತು ಬರಹಗಾರ್ತಿ ಮೀನಾ ಕಂದಸ್ವಾಮಿ “ಶತಕೋಟಿ ಜನರನ್ನು ಪ್ಯಾನಿಕ್ ಅಟ್ಯಾಕ್‌ಗೊಳಪಡಿಸುವುದು ಹೇಗೆ?” ಎಂದು ವ್ಯಂಗ್ಯವಾಡಿದ್ದಾರೆ.

2016ರ ನವೆಂಬರ್ 8 ರಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿ ಮಾತನಾಡಿದ್ದ ಪ್ರಧಾನಿ ಮೋದಿಯವರು 500 ಮತ್ತು 1000 ರೂ ಮುಖಬೆಲೆಯ ನೋಟು ರದ್ಧತಿ ಘೋಷಿಸಿದ್ದರು. ಅದು ಕೋಟ್ಯಾಂತರ ಜನರ ಜೀವನದ ಮೇಲೆ ನಕರಾತ್ಮಕ ಪರಿಣಾಮ ಬೀರಿತು ಎಂಬ ಆರೋಪವಿದೆ.

ಅದೇ ರೀತಿಯಲ್ಲಿ ಈ ವರ್ಷದ ಮಾರ್ಚ್ 24 ರಂದು ಅದೇ 8 ಗಂಟೆ ಸಮಯಕ್ಕೆ ಮೋದಿಯವರು ದೇಶವನ್ನುದ್ದೇಶಿಸಿ ಮಾತನಾಡಿ “ರಾತ್ರಿ 12 ಗಂಟೆಯಿಂದ ಜಾರಿಗೆ ಬರುವಂತೆ 21 ದಿನಗಳ ಕಾಲ ದೇಶಾದ್ಯಂತ ಲಾಕ್‌ಡೌನ್” ಘೋಷಿಸಿದ್ದರು. ಇದು ಕೋಟ್ಯಾಂತರ ಜನರನ್ನು ಆತಂಕಕ್ಕೆ ದೂಡಿತು ಮಾತ್ರವಲ್ಲ, ಲಾಕ್‌ಡೌನ್ ಅವಧಿಯಲ್ಲಿ ಸಾರಿಗೆ ವ್ಯವಸ್ಥೆ ಇಲ್ಲದೇ ನಡೆದುಕೊಂಡು ಸ್ವಂತ ಊರಿಗೆ ಹೊರಟ ಹಲವಾರು ಜನ ರಸ್ತೆ ಮಧ್ಯದಲ್ಲಿಯೇ ಪ್ರಾಣ ಬಿಟ್ಟಿದ್ದರು. ಯೋಜನೆಯಿಲ್ಲದ ಲಾಕ್‌ಡೌನ್‌ನಿಂದಾಗಿ ಆರ್ಥಿಕತೆ ಕೆಟ್ಟ ಸ್ಥಿತಿ ತಲುಪಿತು ಎಂಬ ಆರೋಪ ಮೋದಿಯವರ ಮೇಲಿದೆ.

ಈ ಹಿನ್ನೆಲೆಯಲ್ಲಿ ಬಹಳಷ್ಟು ಮಂದಿ ಮೋದಿಯವರು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂಬ ವಾಕ್ಯಗಳನ್ನು ಕೇಳಿದರೆ ಭಯ ಬೀಳುತ್ತಾರೆ. ಅಲ್ಲದೇ ಒಂದಷ್ಟು ಜನ ಅದನ್ನೇ ಬಳಸಿ ವ್ಯಂಗ್ಯವಾಡುತ್ತಾರೆ. ಅಂತಹ ಕೆಲವೊಂದು ಹೇಳಿಕೆಗಳು ಕೆಳಗಿನಂತಿವೆ.

ಇಂದಿನ ದಿನಾಂಕ 20, 10, 20 = 50

+ ಸಂಜೆ 6 ಗಂಟೆಗೆ
50+6 + 56
ಎಂಥಾ ಮಾಸ್ಟರ್‌ ಸ್ಟ್ರೋಕ್! ವಾವ್ ಮೋದಿಜಿ! ಎಂದು ತುಷಾರ್‌ ರವರು ತಮಾಷೆ ಮಾಡಿದ್ದಾರೆ.

ಗಡ್ಡ ಬೆಳೆಸುವುದು ಹೇಗೆ? ಎಂಬ ಟಿಪ್ಸ್‌ಗಳಿಗಾಗಿ ಇಂದು ಸಂಜೆ 6 ಗಂಟೆಗೆ ಮೋದಿ ಭಾಷಣ ಕೇಳಿ ಎಂದು ಮತ್ತೊಬ್ಬರು ವ್ಯಂಗ್ಯವಾಡಿದ್ದಾರೆ.

ಭಾಷಣವಲ್ಲದೆ, ಮತ್ತೇನನ್ನೂ ಮೋದಿಯವರು ನೀಡಿದ್ದಾರೆ ಎಂಬುದನ್ನು ತಿಳಿದವರು ಹೇಳಬೇಕು ಎಂದಿರುವ ಸಮರ್ಥ್ ಸೂರಜ್, ಮೋದಿ ಭಾಷಣವನ್ನು ಬಹಷ್ಕರಿಸಿ ಎಂದು ಕರೆ ನೀಡಿದ್ದಾರೆ.


ಇದನ್ನೂ ಓದಿ: ಇಂದು ಸಂಜೆ 6 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...