Homeಮುಖಪುಟಗೌತಮ್ ಅದಾನಿಗೆ ಮತ್ತೆ ಸಂಕಷ್ಟ: ಕೃತಕವಾಗಿ ಶೇರುಗಳ ಬೆಲೆ ಹೆಚ್ಚಿಸಿದ ಅದಾನಿ ಗ್ರೂಪ್- ಒಸಿಸಿಆರ್‌ಪಿ ಆರೋಪ

ಗೌತಮ್ ಅದಾನಿಗೆ ಮತ್ತೆ ಸಂಕಷ್ಟ: ಕೃತಕವಾಗಿ ಶೇರುಗಳ ಬೆಲೆ ಹೆಚ್ಚಿಸಿದ ಅದಾನಿ ಗ್ರೂಪ್- ಒಸಿಸಿಆರ್‌ಪಿ ಆರೋಪ

- Advertisement -
- Advertisement -

ಇತ್ತಿಚೆಗೆ ಉದ್ಯಮಿ ಗೌತಮ್ ಅದಾನಿಯವರು ಹಿಂಡನ್‌ಬರ್ಗ್ ವರದಿಯಿಂದಾಗಿ ಭಾರೀ ಹೊಡೆತ ತಿಂದಿದ್ದರು. ಇದೀಗ ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅದಾನಿ ಗ್ರೂಪ್ ಕೃತಕವಾಗಿ ತನ್ನ ಕಂಪನಿಗಳ ಶೇರುಗಳ ಬೆಲೆಗಳನ್ನು ಹೆಚ್ಚಿಸಿದೆ ಎಂದು ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ಯೋಜನೆ (ಒಸಿಸಿಆರ್‌ಪಿ)ಯು ಗುರುವಾರ ಆರೋಪಿಸಿದೆ.

ಭಾರತೀಯ ಶೇರು ಮಾರುಕಟ್ಟೆಗಳಲ್ಲಿ ಭಾರೀ ಕೋಲಾಹಲ ಸೃಷ್ಟಿಯಾಗಿದೆ. ಅದಾನಿ ಕುಟುಂಬವು ಅಪಾರದರ್ಶಕ ಮಾರಿಷಸ್ ನಿಧಿಗಳ ಮೂಲಕ ತನ್ನದೇ ಕಂಪನಿಗಳಲ್ಲಿ ಕೋಟ್ಯಂತರ ಡಾಲರ್‌ಗಳನ್ನು ಹೂಡಿಕೆ ಮಾಡಿದೆ ಎಂದು ಒಸಿಸಿಆರ್‌ಪಿ ಆರೋಪ ಮಾಡಿದೆ.

ಅದಾನಿ ಗ್ರೂಪ್ ಕಂಪನಿಗಳಲ್ಲಿ ಮಾರಿಷಸ್ ನಿಧಿಗಳ ಮೂಲಕ ರಹಸ್ಯ ಹೂಡಿಕೆ ಮಾಡಲಾಗಿದೆ. ಇದರಲ್ಲಿ ಗೌತಮ ಅದಾನಿಯವರ ಹಿರಿಯ ಸೋದರ ವಿನೋದ್ ಅದಾನಿ ಅವರ ಪಾತ್ರವೂ ಇದೆ ಎಂದು ಒಸಿಸಿಆರ್‌ಪಿ ವರದಿಯು ಎತ್ತಿ ತೋರಿಸಿದೆ.

ಈ ವರ್ಷದ ಜನವರಿಯಲ್ಲಿ ಅಮೆರಿಕದ ಹೂಡಿಕೆ ಸಂಸ್ಥೆ ಹಿಂಡನ್‌ಬರ್ಗ್ ರೀಸರ್ಚ್ ಅದಾನಿ ಗ್ರೂಪ್ ವಿರುದ್ಧ ಕೃತಕವಾಗಿ ಶೇರುಗಳ ಬೆಲೆಗಳನ್ನು ಹೆಚ್ಚಿಸಿದ್ದ ಇಂತಹುದೇ ಆರೋಪ ಮಾಡಿತ್ತು.

ಒಸಿಸಿಆರ್‌ಪಿ ಒದಗಿಸಿರುವ ಹೊಸ ದಾಖಲೆಗಳು ಅದಾನಿ ಗ್ರೂಪ್‌ನೊಂದಿಗೆ ನಿಕಟ ನಂಟು ಹೊಂದಿರುವ ಚಾಂಗ್ ಚುಂಗ್-ಲಿಂಗ್ ಮತ್ತು ನಾಸೀರ್ ಅಲಿ ಶಬಾನ್ ಅಹ್ಲಿ ಅವರು ಪ್ರಮುಖ ಹೂಡಿಕೆದಾರರಾಗಿದ್ದಾರೆ ಎಂದು ಬಹಿರಂಗಗೊಳಿಸಿವೆ.

ಕಡಲಾಚೆಯ ಹೂಡಿಕೆಗಳ ಕುರಿತು ಒಸಿಸಿಆರ್‌ಪಿ ವರದಿಯು ಅದಾನಿ ಕಂಪನಿಗಳ ಶೇರುಗಳಿಗೆ ಭಾರೀ ಹಿನ್ನಡೆಯನ್ನುಂಟು ಮಾಡಿದೆ. ಗುರುವಾರ ಬೆಳಿಗ್ಗೆ ಮಾರುಕಟ್ಟೆ ಆರಂಭಗೊಂಡ ಬೆನ್ನಿಗೇ ಎಲ್ಲ ಅದಾನಿ ಗ್ರೂಪ್ ಶೇರುಗಳು ತೀವ್ರವಾಗಿ ಕುಸಿದಿದ್ದವು.

ಮಧ್ಯಾಹ್ನ 2:30ಕ್ಕೆ ಇದ್ದಂತೆ ಅದಾನಿ ಎಂಟರ್‌ಪ್ರೈಸಸ್ ಶೇ.3.15, ಅದಾನಿ ಗ್ರೀನ್ ಶೇ.3.40,ಅದಾನಿ ಪವರ್ ಶೇ.2.10, ಅದಾನಿ ಟೋಟಲ್ ಗ್ಯಾಸ್ ಶೇ.2.63, ಅದಾನಿ ವಿಲ್ಮರ್ ಶೇ.2.22, ಅಂಬುಜಾ ಸಿಮೆಂಟ್ಸ್ ಶೇ.4.10, ಅದಾನಿ ಟ್ರಾನ್ಸ್‌ಮಿಷನ್ 2.70, ಎನ್‌ಡಿಟಿವಿ ಶೇ.1.96, ಎಸಿಸಿ ಶೇ.1.65 ಮತ್ತು ಅದಾನಿ ಪೋರ್ಟ್ಸ್ ಶೇ.3.36ರಷ್ಟು ನಷ್ಟದಲ್ಲಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...