Homeಮುಖಪುಟಗೌತಮ್ ಅದಾನಿಗೆ ಮತ್ತೆ ಸಂಕಷ್ಟ: ಕೃತಕವಾಗಿ ಶೇರುಗಳ ಬೆಲೆ ಹೆಚ್ಚಿಸಿದ ಅದಾನಿ ಗ್ರೂಪ್- ಒಸಿಸಿಆರ್‌ಪಿ ಆರೋಪ

ಗೌತಮ್ ಅದಾನಿಗೆ ಮತ್ತೆ ಸಂಕಷ್ಟ: ಕೃತಕವಾಗಿ ಶೇರುಗಳ ಬೆಲೆ ಹೆಚ್ಚಿಸಿದ ಅದಾನಿ ಗ್ರೂಪ್- ಒಸಿಸಿಆರ್‌ಪಿ ಆರೋಪ

- Advertisement -
- Advertisement -

ಇತ್ತಿಚೆಗೆ ಉದ್ಯಮಿ ಗೌತಮ್ ಅದಾನಿಯವರು ಹಿಂಡನ್‌ಬರ್ಗ್ ವರದಿಯಿಂದಾಗಿ ಭಾರೀ ಹೊಡೆತ ತಿಂದಿದ್ದರು. ಇದೀಗ ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅದಾನಿ ಗ್ರೂಪ್ ಕೃತಕವಾಗಿ ತನ್ನ ಕಂಪನಿಗಳ ಶೇರುಗಳ ಬೆಲೆಗಳನ್ನು ಹೆಚ್ಚಿಸಿದೆ ಎಂದು ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ಯೋಜನೆ (ಒಸಿಸಿಆರ್‌ಪಿ)ಯು ಗುರುವಾರ ಆರೋಪಿಸಿದೆ.

ಭಾರತೀಯ ಶೇರು ಮಾರುಕಟ್ಟೆಗಳಲ್ಲಿ ಭಾರೀ ಕೋಲಾಹಲ ಸೃಷ್ಟಿಯಾಗಿದೆ. ಅದಾನಿ ಕುಟುಂಬವು ಅಪಾರದರ್ಶಕ ಮಾರಿಷಸ್ ನಿಧಿಗಳ ಮೂಲಕ ತನ್ನದೇ ಕಂಪನಿಗಳಲ್ಲಿ ಕೋಟ್ಯಂತರ ಡಾಲರ್‌ಗಳನ್ನು ಹೂಡಿಕೆ ಮಾಡಿದೆ ಎಂದು ಒಸಿಸಿಆರ್‌ಪಿ ಆರೋಪ ಮಾಡಿದೆ.

ಅದಾನಿ ಗ್ರೂಪ್ ಕಂಪನಿಗಳಲ್ಲಿ ಮಾರಿಷಸ್ ನಿಧಿಗಳ ಮೂಲಕ ರಹಸ್ಯ ಹೂಡಿಕೆ ಮಾಡಲಾಗಿದೆ. ಇದರಲ್ಲಿ ಗೌತಮ ಅದಾನಿಯವರ ಹಿರಿಯ ಸೋದರ ವಿನೋದ್ ಅದಾನಿ ಅವರ ಪಾತ್ರವೂ ಇದೆ ಎಂದು ಒಸಿಸಿಆರ್‌ಪಿ ವರದಿಯು ಎತ್ತಿ ತೋರಿಸಿದೆ.

ಈ ವರ್ಷದ ಜನವರಿಯಲ್ಲಿ ಅಮೆರಿಕದ ಹೂಡಿಕೆ ಸಂಸ್ಥೆ ಹಿಂಡನ್‌ಬರ್ಗ್ ರೀಸರ್ಚ್ ಅದಾನಿ ಗ್ರೂಪ್ ವಿರುದ್ಧ ಕೃತಕವಾಗಿ ಶೇರುಗಳ ಬೆಲೆಗಳನ್ನು ಹೆಚ್ಚಿಸಿದ್ದ ಇಂತಹುದೇ ಆರೋಪ ಮಾಡಿತ್ತು.

ಒಸಿಸಿಆರ್‌ಪಿ ಒದಗಿಸಿರುವ ಹೊಸ ದಾಖಲೆಗಳು ಅದಾನಿ ಗ್ರೂಪ್‌ನೊಂದಿಗೆ ನಿಕಟ ನಂಟು ಹೊಂದಿರುವ ಚಾಂಗ್ ಚುಂಗ್-ಲಿಂಗ್ ಮತ್ತು ನಾಸೀರ್ ಅಲಿ ಶಬಾನ್ ಅಹ್ಲಿ ಅವರು ಪ್ರಮುಖ ಹೂಡಿಕೆದಾರರಾಗಿದ್ದಾರೆ ಎಂದು ಬಹಿರಂಗಗೊಳಿಸಿವೆ.

ಕಡಲಾಚೆಯ ಹೂಡಿಕೆಗಳ ಕುರಿತು ಒಸಿಸಿಆರ್‌ಪಿ ವರದಿಯು ಅದಾನಿ ಕಂಪನಿಗಳ ಶೇರುಗಳಿಗೆ ಭಾರೀ ಹಿನ್ನಡೆಯನ್ನುಂಟು ಮಾಡಿದೆ. ಗುರುವಾರ ಬೆಳಿಗ್ಗೆ ಮಾರುಕಟ್ಟೆ ಆರಂಭಗೊಂಡ ಬೆನ್ನಿಗೇ ಎಲ್ಲ ಅದಾನಿ ಗ್ರೂಪ್ ಶೇರುಗಳು ತೀವ್ರವಾಗಿ ಕುಸಿದಿದ್ದವು.

ಮಧ್ಯಾಹ್ನ 2:30ಕ್ಕೆ ಇದ್ದಂತೆ ಅದಾನಿ ಎಂಟರ್‌ಪ್ರೈಸಸ್ ಶೇ.3.15, ಅದಾನಿ ಗ್ರೀನ್ ಶೇ.3.40,ಅದಾನಿ ಪವರ್ ಶೇ.2.10, ಅದಾನಿ ಟೋಟಲ್ ಗ್ಯಾಸ್ ಶೇ.2.63, ಅದಾನಿ ವಿಲ್ಮರ್ ಶೇ.2.22, ಅಂಬುಜಾ ಸಿಮೆಂಟ್ಸ್ ಶೇ.4.10, ಅದಾನಿ ಟ್ರಾನ್ಸ್‌ಮಿಷನ್ 2.70, ಎನ್‌ಡಿಟಿವಿ ಶೇ.1.96, ಎಸಿಸಿ ಶೇ.1.65 ಮತ್ತು ಅದಾನಿ ಪೋರ್ಟ್ಸ್ ಶೇ.3.36ರಷ್ಟು ನಷ್ಟದಲ್ಲಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...